Homeಚಳವಳಿಹಿಂಸಾತ್ಮಕ ಗಲಭೆಯಿಂದ ಪೊಲೀಸ್‌ನನ್ನು ರಕ್ಷಿಸಿದ ಮುಸ್ಲಿಂ ವ್ಯಕ್ತಿಗೆ ಪ್ರಶಂಸೆಯ ಸುರಿಮಳೆ...

ಹಿಂಸಾತ್ಮಕ ಗಲಭೆಯಿಂದ ಪೊಲೀಸ್‌ನನ್ನು ರಕ್ಷಿಸಿದ ಮುಸ್ಲಿಂ ವ್ಯಕ್ತಿಗೆ ಪ್ರಶಂಸೆಯ ಸುರಿಮಳೆ…

- Advertisement -
- Advertisement -

ಎಲ್ಲೆಲ್ಲೂ ಸಿಎಎ ಎನ್‌ಆರ್‌ಸಿ ವಿರೋಧಿ ಹೋರಾಟಗಳು ಭುಗಿಲೆದ್ದಿವೆ. ಜನ ದಿನನಿತ್ಯ ಬೀದಿಯಲ್ಲಿ ಪ್ರತಿಭಟಿಸುತ್ತಿದ್ದಾರೆ. ಆದರೆ ಅವರ ಮೇಲೆ ನೂರಾರು ಆರೋಪಗಳು ಕೇಳಿಬರುತ್ತಿವೆ. ಅವರು ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ, ಸಾರ್ವಜನಿಕ ಆಸ್ತಿಪಾಸ್ತಿ ಹಾನಿಮಾಡುತ್ತಿದ್ದಾರೆ ಹಾಗಾಗಿ ಅವರನ್ನು ಜೈಲಿಗೆ ಹಾಕಬೇಕು, ಅವರನ್ನು ಥಳಿಸಬೇಕು, ಅವರ ಮೇಲೆ ಗುಂಡು ಹೊಡೆಯಬೇಕು, ಅವರ ಆಸ್ತಿಪಾಸ್ತಿಗಳನ್ನು ವಶಪಡಿಸಿಕೊಳ್ಳಬೇಕು ಎಂದು ಕೆಲವರು ಬೊಬ್ಬೆ ಹೊಡೆಯುತ್ತಿದ್ದಾರೆ.

ಆದರೆ ಉತ್ತರ ಪ್ರದೇಶದ ಪೊಲೀಸ್‌ ಅಜಯ್ ಕುಮಾರ್ ಎಂಬುವವರು ಮಾತ್ರ ಪ್ರತಿಭಟನಾನಿರತ ಈ ಮುಸ್ಲಿಂ ವ್ಯಕ್ತಿಯು ನನಗೆ ದೇವದೂತನಂತೆ ಕಂಡರು. ಹಿಂಸಾತ್ಮಕ ಗಲಭೆಯಲ್ಲಿ ಸಿಕ್ಕಿಕೊಂಡಿದ್ದ ನನ್ನನ್ನು ಅದರಿಂದ ಪಾರು ಮಾಡಿ ಬದುಕಿಸಿದರು. ಅವರಿಲ್ಲದಿದ್ದರೆ ನಾನು ಕೊಲ್ಲಲ್ಪಡುತ್ತಿದ್ದೆ ಎಂದು ಹೇಳಿಕೊಂಡಿದ್ದಾರೆ.

ಇದು ನಡೆದಿದ್ದು ಹೀಗೆ: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಡಿಸೆಂಬರ್ 20 ರಂದು ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು ಕೊನೆಗೆ ಹಿಂಸೆಗೆ ತಿರುಗಿತು. ಪೊಲೀಸರು ಲಾಠಿ ಚಾರ್ಜ್‌ ಮಾಡುತ್ತಿದ್ದಂತೆ ಉದ್ರಿಕ್ತರು ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದರು.

ಈ ಸಂದರ್ಭದಲ್ಲಿ ಅಜಯ್ ಕುಮಾರ್ ಎಂಬ ಪೊಲೀಸ್ ಹಿಂಸಾತ್ಮಕ ಜನಸಮೂಹದಲ್ಲಿ ಸಿಲುಕಿದ್ದರು. ಅವರ ಮೇಲೆ ಕೆಲವರು ಹಲ್ಲೆ ಮಾಡುತ್ತಿದ್ದರು. ಇದನ್ನು ಗಮನಿಸಿದ ಹಜ್ಜಿ ಖಾದಿರ್ ಎಂಬ ಮುಸ್ಲಿಂ ವ್ಯಕ್ತಿ ಅವರ ರಕ್ಷಣೆಗೆ ಬಂದರು. ಅವರನ್ನು ಜನಸಮೂಹದಿಂದ ಬೇರ್ಪಡಿಸಿ, ಅವರ ಮನೆಗೆ ಕರೆದೊಯ್ದರು. ಪರಿಸ್ಥಿತಿ ನಿಯಂತ್ರಣಕ್ಕೆ ತಂದ ನಂತರ ಅವರನ್ನು ಪೊಲೀಸ್ ಠಾಣೆಗೆ ಕಳಿಸಿದರು.

“ನಾನು ಉದ್ರಿಕ್ತರ ನಡುವೆ ಸಿಲುಕೊಂಡಿದ್ದೆ. ಹಲ್ಲೆಯಿಂದ ನನ್ನ ತಲೆ ಮತ್ತು ಕೈಬೆರಳಿಗೆ ಗಾಯವಾಗಿತ್ತು. ಆಗ ಹಜ್ಜಿ ಖಾದಿರ್ ಸಾಹೆಬ್ ನನ್ನನ್ನು ಅಲ್ಲಿಂದ ಬಿಡಿಸಿಕೊಂಡು ಅವರ ಮನೆಗೆ ಕರೆದೊಯ್ದರು. ಅವರು ನನಗೆ ಕುಡಿಯಲು ನೀರು ಕೊಟ್ಟು ಬೇರೆ ಬಟ್ಟೆಗಳನ್ನು ನೀಡಿದರು. ನೀವು ಸುರಕ್ಷಿತವಾಗಿದ್ದೀರಿ ಚಿಂತಿಸಬೇಡಿ ಎಂದು ಭರವಸೆ ನೀಡಿದರು. ನಂತರ ನನ್ನನ್ನು ಪೊಲೀಸ್ ಠಾಣೆಗೆ ಕರೆದೊಯ್ದರು” ಎಂದು ಉತ್ತರ ಪ್ರದೇಶದ ಪೊಲೀಸ್‌ ಅಜಯ್‌ ಕುಮಾರ್ ಹೇಳುತ್ತಾರೆ.

“ಅವರು ನನ್ನ ಜೀವನದಲ್ಲಿ ದೇವದೂತನಂತೆ ಬಂದರು. ಅಂದು ಅವರಿಲ್ಲದಿದ್ದರೆ, ನಾನು ಕೊಲ್ಲಲ್ಪಡುತ್ತಿದ್ದೆ” ಎಂದು ಅವರು ಭಾವೋದ್ವೇಗದಿಂದ ಹೇಳಿದ್ದಾರೆ.

ಈ ಘಟನೆಯನ್ನು ನೆನಪಿಸಿಕೊಂಡ ಹಜ್ಜಿ ಖಾದಿರ್, “ಪೋಲಿಸ್ ಒಬ್ಬನನ್ನು ಜನಸಮೂಹವು ಸುತ್ತುವರೆದಿದೆ ಎಂದು ತಿಳಿದಾಗ ತಾನು ನಮಾಜ್ ಮುಗಿಸಿ ಬರುತ್ತಿದ್ದೆ. ಅವರು ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ನಾನು ಓಡಿಹೋಗಿ ಅವರನ್ನು ಬಿಡಿಸಿದೆ. ನಾನು ಅವರನ್ನು ಉಳಿಸುತ್ತೇನೆ ಎಂದು ಭರವಸೆ ನೀಡಿದ್ದೆ. ಆ ಸಮಯದಲ್ಲಿ ಅವರ ಹೆಸರು ಸಹ ನನಗೆ ತಿಳಿದಿರಲಿಲ್ಲ. ನಾನು ಮಾಡಿದ್ದು ಮಾನವೀಯತೆಗಾಗಿ” ಎನ್ನುತ್ತಾರೆ.

ಹಜ್ಜಿ ಖಾದಿರ್‌ರವರ ಆ ಸಹಾಯಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ನಮ್ಮ ದೇಶ ಇರುವುದೆ ಹೀಗೆ ಬಹುತ್ವದ ಆಳವಾದ ಬೇರುಗಳಿಂದ ಎಂದು ಹಲವರು ಅಭಿನಂದನೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...