Homeಚಳವಳಿಹಿಂಸಾತ್ಮಕ ಗಲಭೆಯಿಂದ ಪೊಲೀಸ್‌ನನ್ನು ರಕ್ಷಿಸಿದ ಮುಸ್ಲಿಂ ವ್ಯಕ್ತಿಗೆ ಪ್ರಶಂಸೆಯ ಸುರಿಮಳೆ...

ಹಿಂಸಾತ್ಮಕ ಗಲಭೆಯಿಂದ ಪೊಲೀಸ್‌ನನ್ನು ರಕ್ಷಿಸಿದ ಮುಸ್ಲಿಂ ವ್ಯಕ್ತಿಗೆ ಪ್ರಶಂಸೆಯ ಸುರಿಮಳೆ…

- Advertisement -
- Advertisement -

ಎಲ್ಲೆಲ್ಲೂ ಸಿಎಎ ಎನ್‌ಆರ್‌ಸಿ ವಿರೋಧಿ ಹೋರಾಟಗಳು ಭುಗಿಲೆದ್ದಿವೆ. ಜನ ದಿನನಿತ್ಯ ಬೀದಿಯಲ್ಲಿ ಪ್ರತಿಭಟಿಸುತ್ತಿದ್ದಾರೆ. ಆದರೆ ಅವರ ಮೇಲೆ ನೂರಾರು ಆರೋಪಗಳು ಕೇಳಿಬರುತ್ತಿವೆ. ಅವರು ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ, ಸಾರ್ವಜನಿಕ ಆಸ್ತಿಪಾಸ್ತಿ ಹಾನಿಮಾಡುತ್ತಿದ್ದಾರೆ ಹಾಗಾಗಿ ಅವರನ್ನು ಜೈಲಿಗೆ ಹಾಕಬೇಕು, ಅವರನ್ನು ಥಳಿಸಬೇಕು, ಅವರ ಮೇಲೆ ಗುಂಡು ಹೊಡೆಯಬೇಕು, ಅವರ ಆಸ್ತಿಪಾಸ್ತಿಗಳನ್ನು ವಶಪಡಿಸಿಕೊಳ್ಳಬೇಕು ಎಂದು ಕೆಲವರು ಬೊಬ್ಬೆ ಹೊಡೆಯುತ್ತಿದ್ದಾರೆ.

ಆದರೆ ಉತ್ತರ ಪ್ರದೇಶದ ಪೊಲೀಸ್‌ ಅಜಯ್ ಕುಮಾರ್ ಎಂಬುವವರು ಮಾತ್ರ ಪ್ರತಿಭಟನಾನಿರತ ಈ ಮುಸ್ಲಿಂ ವ್ಯಕ್ತಿಯು ನನಗೆ ದೇವದೂತನಂತೆ ಕಂಡರು. ಹಿಂಸಾತ್ಮಕ ಗಲಭೆಯಲ್ಲಿ ಸಿಕ್ಕಿಕೊಂಡಿದ್ದ ನನ್ನನ್ನು ಅದರಿಂದ ಪಾರು ಮಾಡಿ ಬದುಕಿಸಿದರು. ಅವರಿಲ್ಲದಿದ್ದರೆ ನಾನು ಕೊಲ್ಲಲ್ಪಡುತ್ತಿದ್ದೆ ಎಂದು ಹೇಳಿಕೊಂಡಿದ್ದಾರೆ.

ಇದು ನಡೆದಿದ್ದು ಹೀಗೆ: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಡಿಸೆಂಬರ್ 20 ರಂದು ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು ಕೊನೆಗೆ ಹಿಂಸೆಗೆ ತಿರುಗಿತು. ಪೊಲೀಸರು ಲಾಠಿ ಚಾರ್ಜ್‌ ಮಾಡುತ್ತಿದ್ದಂತೆ ಉದ್ರಿಕ್ತರು ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದರು.

ಈ ಸಂದರ್ಭದಲ್ಲಿ ಅಜಯ್ ಕುಮಾರ್ ಎಂಬ ಪೊಲೀಸ್ ಹಿಂಸಾತ್ಮಕ ಜನಸಮೂಹದಲ್ಲಿ ಸಿಲುಕಿದ್ದರು. ಅವರ ಮೇಲೆ ಕೆಲವರು ಹಲ್ಲೆ ಮಾಡುತ್ತಿದ್ದರು. ಇದನ್ನು ಗಮನಿಸಿದ ಹಜ್ಜಿ ಖಾದಿರ್ ಎಂಬ ಮುಸ್ಲಿಂ ವ್ಯಕ್ತಿ ಅವರ ರಕ್ಷಣೆಗೆ ಬಂದರು. ಅವರನ್ನು ಜನಸಮೂಹದಿಂದ ಬೇರ್ಪಡಿಸಿ, ಅವರ ಮನೆಗೆ ಕರೆದೊಯ್ದರು. ಪರಿಸ್ಥಿತಿ ನಿಯಂತ್ರಣಕ್ಕೆ ತಂದ ನಂತರ ಅವರನ್ನು ಪೊಲೀಸ್ ಠಾಣೆಗೆ ಕಳಿಸಿದರು.

“ನಾನು ಉದ್ರಿಕ್ತರ ನಡುವೆ ಸಿಲುಕೊಂಡಿದ್ದೆ. ಹಲ್ಲೆಯಿಂದ ನನ್ನ ತಲೆ ಮತ್ತು ಕೈಬೆರಳಿಗೆ ಗಾಯವಾಗಿತ್ತು. ಆಗ ಹಜ್ಜಿ ಖಾದಿರ್ ಸಾಹೆಬ್ ನನ್ನನ್ನು ಅಲ್ಲಿಂದ ಬಿಡಿಸಿಕೊಂಡು ಅವರ ಮನೆಗೆ ಕರೆದೊಯ್ದರು. ಅವರು ನನಗೆ ಕುಡಿಯಲು ನೀರು ಕೊಟ್ಟು ಬೇರೆ ಬಟ್ಟೆಗಳನ್ನು ನೀಡಿದರು. ನೀವು ಸುರಕ್ಷಿತವಾಗಿದ್ದೀರಿ ಚಿಂತಿಸಬೇಡಿ ಎಂದು ಭರವಸೆ ನೀಡಿದರು. ನಂತರ ನನ್ನನ್ನು ಪೊಲೀಸ್ ಠಾಣೆಗೆ ಕರೆದೊಯ್ದರು” ಎಂದು ಉತ್ತರ ಪ್ರದೇಶದ ಪೊಲೀಸ್‌ ಅಜಯ್‌ ಕುಮಾರ್ ಹೇಳುತ್ತಾರೆ.

“ಅವರು ನನ್ನ ಜೀವನದಲ್ಲಿ ದೇವದೂತನಂತೆ ಬಂದರು. ಅಂದು ಅವರಿಲ್ಲದಿದ್ದರೆ, ನಾನು ಕೊಲ್ಲಲ್ಪಡುತ್ತಿದ್ದೆ” ಎಂದು ಅವರು ಭಾವೋದ್ವೇಗದಿಂದ ಹೇಳಿದ್ದಾರೆ.

ಈ ಘಟನೆಯನ್ನು ನೆನಪಿಸಿಕೊಂಡ ಹಜ್ಜಿ ಖಾದಿರ್, “ಪೋಲಿಸ್ ಒಬ್ಬನನ್ನು ಜನಸಮೂಹವು ಸುತ್ತುವರೆದಿದೆ ಎಂದು ತಿಳಿದಾಗ ತಾನು ನಮಾಜ್ ಮುಗಿಸಿ ಬರುತ್ತಿದ್ದೆ. ಅವರು ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ನಾನು ಓಡಿಹೋಗಿ ಅವರನ್ನು ಬಿಡಿಸಿದೆ. ನಾನು ಅವರನ್ನು ಉಳಿಸುತ್ತೇನೆ ಎಂದು ಭರವಸೆ ನೀಡಿದ್ದೆ. ಆ ಸಮಯದಲ್ಲಿ ಅವರ ಹೆಸರು ಸಹ ನನಗೆ ತಿಳಿದಿರಲಿಲ್ಲ. ನಾನು ಮಾಡಿದ್ದು ಮಾನವೀಯತೆಗಾಗಿ” ಎನ್ನುತ್ತಾರೆ.

ಹಜ್ಜಿ ಖಾದಿರ್‌ರವರ ಆ ಸಹಾಯಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ನಮ್ಮ ದೇಶ ಇರುವುದೆ ಹೀಗೆ ಬಹುತ್ವದ ಆಳವಾದ ಬೇರುಗಳಿಂದ ಎಂದು ಹಲವರು ಅಭಿನಂದನೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...