Homeಚಳವಳಿಹಿಂಸಾತ್ಮಕ ಗಲಭೆಯಿಂದ ಪೊಲೀಸ್‌ನನ್ನು ರಕ್ಷಿಸಿದ ಮುಸ್ಲಿಂ ವ್ಯಕ್ತಿಗೆ ಪ್ರಶಂಸೆಯ ಸುರಿಮಳೆ...

ಹಿಂಸಾತ್ಮಕ ಗಲಭೆಯಿಂದ ಪೊಲೀಸ್‌ನನ್ನು ರಕ್ಷಿಸಿದ ಮುಸ್ಲಿಂ ವ್ಯಕ್ತಿಗೆ ಪ್ರಶಂಸೆಯ ಸುರಿಮಳೆ…

- Advertisement -
- Advertisement -

ಎಲ್ಲೆಲ್ಲೂ ಸಿಎಎ ಎನ್‌ಆರ್‌ಸಿ ವಿರೋಧಿ ಹೋರಾಟಗಳು ಭುಗಿಲೆದ್ದಿವೆ. ಜನ ದಿನನಿತ್ಯ ಬೀದಿಯಲ್ಲಿ ಪ್ರತಿಭಟಿಸುತ್ತಿದ್ದಾರೆ. ಆದರೆ ಅವರ ಮೇಲೆ ನೂರಾರು ಆರೋಪಗಳು ಕೇಳಿಬರುತ್ತಿವೆ. ಅವರು ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ, ಸಾರ್ವಜನಿಕ ಆಸ್ತಿಪಾಸ್ತಿ ಹಾನಿಮಾಡುತ್ತಿದ್ದಾರೆ ಹಾಗಾಗಿ ಅವರನ್ನು ಜೈಲಿಗೆ ಹಾಕಬೇಕು, ಅವರನ್ನು ಥಳಿಸಬೇಕು, ಅವರ ಮೇಲೆ ಗುಂಡು ಹೊಡೆಯಬೇಕು, ಅವರ ಆಸ್ತಿಪಾಸ್ತಿಗಳನ್ನು ವಶಪಡಿಸಿಕೊಳ್ಳಬೇಕು ಎಂದು ಕೆಲವರು ಬೊಬ್ಬೆ ಹೊಡೆಯುತ್ತಿದ್ದಾರೆ.

ಆದರೆ ಉತ್ತರ ಪ್ರದೇಶದ ಪೊಲೀಸ್‌ ಅಜಯ್ ಕುಮಾರ್ ಎಂಬುವವರು ಮಾತ್ರ ಪ್ರತಿಭಟನಾನಿರತ ಈ ಮುಸ್ಲಿಂ ವ್ಯಕ್ತಿಯು ನನಗೆ ದೇವದೂತನಂತೆ ಕಂಡರು. ಹಿಂಸಾತ್ಮಕ ಗಲಭೆಯಲ್ಲಿ ಸಿಕ್ಕಿಕೊಂಡಿದ್ದ ನನ್ನನ್ನು ಅದರಿಂದ ಪಾರು ಮಾಡಿ ಬದುಕಿಸಿದರು. ಅವರಿಲ್ಲದಿದ್ದರೆ ನಾನು ಕೊಲ್ಲಲ್ಪಡುತ್ತಿದ್ದೆ ಎಂದು ಹೇಳಿಕೊಂಡಿದ್ದಾರೆ.

ಇದು ನಡೆದಿದ್ದು ಹೀಗೆ: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಡಿಸೆಂಬರ್ 20 ರಂದು ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು ಕೊನೆಗೆ ಹಿಂಸೆಗೆ ತಿರುಗಿತು. ಪೊಲೀಸರು ಲಾಠಿ ಚಾರ್ಜ್‌ ಮಾಡುತ್ತಿದ್ದಂತೆ ಉದ್ರಿಕ್ತರು ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದರು.

ಈ ಸಂದರ್ಭದಲ್ಲಿ ಅಜಯ್ ಕುಮಾರ್ ಎಂಬ ಪೊಲೀಸ್ ಹಿಂಸಾತ್ಮಕ ಜನಸಮೂಹದಲ್ಲಿ ಸಿಲುಕಿದ್ದರು. ಅವರ ಮೇಲೆ ಕೆಲವರು ಹಲ್ಲೆ ಮಾಡುತ್ತಿದ್ದರು. ಇದನ್ನು ಗಮನಿಸಿದ ಹಜ್ಜಿ ಖಾದಿರ್ ಎಂಬ ಮುಸ್ಲಿಂ ವ್ಯಕ್ತಿ ಅವರ ರಕ್ಷಣೆಗೆ ಬಂದರು. ಅವರನ್ನು ಜನಸಮೂಹದಿಂದ ಬೇರ್ಪಡಿಸಿ, ಅವರ ಮನೆಗೆ ಕರೆದೊಯ್ದರು. ಪರಿಸ್ಥಿತಿ ನಿಯಂತ್ರಣಕ್ಕೆ ತಂದ ನಂತರ ಅವರನ್ನು ಪೊಲೀಸ್ ಠಾಣೆಗೆ ಕಳಿಸಿದರು.

“ನಾನು ಉದ್ರಿಕ್ತರ ನಡುವೆ ಸಿಲುಕೊಂಡಿದ್ದೆ. ಹಲ್ಲೆಯಿಂದ ನನ್ನ ತಲೆ ಮತ್ತು ಕೈಬೆರಳಿಗೆ ಗಾಯವಾಗಿತ್ತು. ಆಗ ಹಜ್ಜಿ ಖಾದಿರ್ ಸಾಹೆಬ್ ನನ್ನನ್ನು ಅಲ್ಲಿಂದ ಬಿಡಿಸಿಕೊಂಡು ಅವರ ಮನೆಗೆ ಕರೆದೊಯ್ದರು. ಅವರು ನನಗೆ ಕುಡಿಯಲು ನೀರು ಕೊಟ್ಟು ಬೇರೆ ಬಟ್ಟೆಗಳನ್ನು ನೀಡಿದರು. ನೀವು ಸುರಕ್ಷಿತವಾಗಿದ್ದೀರಿ ಚಿಂತಿಸಬೇಡಿ ಎಂದು ಭರವಸೆ ನೀಡಿದರು. ನಂತರ ನನ್ನನ್ನು ಪೊಲೀಸ್ ಠಾಣೆಗೆ ಕರೆದೊಯ್ದರು” ಎಂದು ಉತ್ತರ ಪ್ರದೇಶದ ಪೊಲೀಸ್‌ ಅಜಯ್‌ ಕುಮಾರ್ ಹೇಳುತ್ತಾರೆ.

“ಅವರು ನನ್ನ ಜೀವನದಲ್ಲಿ ದೇವದೂತನಂತೆ ಬಂದರು. ಅಂದು ಅವರಿಲ್ಲದಿದ್ದರೆ, ನಾನು ಕೊಲ್ಲಲ್ಪಡುತ್ತಿದ್ದೆ” ಎಂದು ಅವರು ಭಾವೋದ್ವೇಗದಿಂದ ಹೇಳಿದ್ದಾರೆ.

ಈ ಘಟನೆಯನ್ನು ನೆನಪಿಸಿಕೊಂಡ ಹಜ್ಜಿ ಖಾದಿರ್, “ಪೋಲಿಸ್ ಒಬ್ಬನನ್ನು ಜನಸಮೂಹವು ಸುತ್ತುವರೆದಿದೆ ಎಂದು ತಿಳಿದಾಗ ತಾನು ನಮಾಜ್ ಮುಗಿಸಿ ಬರುತ್ತಿದ್ದೆ. ಅವರು ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ನಾನು ಓಡಿಹೋಗಿ ಅವರನ್ನು ಬಿಡಿಸಿದೆ. ನಾನು ಅವರನ್ನು ಉಳಿಸುತ್ತೇನೆ ಎಂದು ಭರವಸೆ ನೀಡಿದ್ದೆ. ಆ ಸಮಯದಲ್ಲಿ ಅವರ ಹೆಸರು ಸಹ ನನಗೆ ತಿಳಿದಿರಲಿಲ್ಲ. ನಾನು ಮಾಡಿದ್ದು ಮಾನವೀಯತೆಗಾಗಿ” ಎನ್ನುತ್ತಾರೆ.

ಹಜ್ಜಿ ಖಾದಿರ್‌ರವರ ಆ ಸಹಾಯಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ನಮ್ಮ ದೇಶ ಇರುವುದೆ ಹೀಗೆ ಬಹುತ್ವದ ಆಳವಾದ ಬೇರುಗಳಿಂದ ಎಂದು ಹಲವರು ಅಭಿನಂದನೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...