Homeನಿಜವೋ ಸುಳ್ಳೋಲಾಕ್‌ಡೌನ್‌ನಲ್ಲಿ ‘ಕೊರೋನಾ ಜಿಹಾದಿ’ಗಳನ್ನು ಬಂಧಿಸಿದ ಯುಪಿ ಪೊಲೀಸರು: ಇದು ಸತ್ಯವಲ್ಲ, ಅಣಕು ಪ್ರದರ್ಶನವಷ್ಟೆ!

ಲಾಕ್‌ಡೌನ್‌ನಲ್ಲಿ ‘ಕೊರೋನಾ ಜಿಹಾದಿ’ಗಳನ್ನು ಬಂಧಿಸಿದ ಯುಪಿ ಪೊಲೀಸರು: ಇದು ಸತ್ಯವಲ್ಲ, ಅಣಕು ಪ್ರದರ್ಶನವಷ್ಟೆ!

- Advertisement -
- Advertisement -

ಲಾಕ್‌ಡೌನ್‌ ದಿಗ್ಬಂಧನವನ್ನು ದಾಟಿ ನುಗ್ಗುತ್ತಿರುವ ಯುವಕರ ಮೇಲೆ ಪೊಲೀಸರ ಗುಂಪೊಂದು ಗುಂಡು ಹಾರಿಸುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿದೆ. ಆ ವಿಡಿಯೋದಲ್ಲಿ ಕಾರಿನಲ್ಲಿ ನುಗ್ಗಿಬಂದವರ ಮೇಲೆ ಪೊಲೀಸರು ಗುಂಡು ಹಾರಿಸುತ್ತಾರೆ. ನಂತರ ಅವರನ್ನು ಬಂಧಿಸುವ ವೀಡಿಯೊ ಉತ್ತರ ಪ್ರದೇಶದ ಅಯೋಧ್ಯೆ ನಗರದಿಂದ ಬಂದಿದೆ ಎಂದು ಹೇಳಲಾಗಿದೆ.

ಏಪ್ರಿಲ್ 4 ರಂದು ಫೇಸ್‌ಬುಕ್ ಬಳಕೆದಾರ ಶಿವಂಶು ಶುಕ್ಲಾ ಈ ವಿಡಿಯೋವನ್ನು ಪೋಸ್ಟ್ ಮಾಡಿ, “ಈ ಘಟನೆ ಚೋರ್ ಬಜಾರ್‌ನಿಂದ ಬಂದಿದೆ. ಜೈ ಯೋಗಿ ರಾಜ್. ಯುಪಿ ಅಯೋಧ್ಯೆ ಶ್ರೀ ರಾಮನ ಭೂಮಿ ಎಂದು ‘ಜಿಹಾದಿಗಳು’ ನಿಮಗೆ ತಿಳಿದಿರಲಿಲ್ಲ. ಯುಪಿ ಪೊಲೀಸರು ಒಳ್ಳೆಯ ಕೆಲಸ ಮಾಡಿದ್ದಾರೆ” ಎಂಬ ಟೈಟಲ್‌ ನೀಡಿರುವ ಈ ವೀಡಿಯೊವನ್ನು ಇದುವರೆಗೆ 500 ಕ್ಕೂ ಹೆಚ್ಚು ಬಾರಿ ಹಂಚಿಕೊಳ್ಳಲಾಗಿದೆ.

चौरे बाजार की घटना जय योगी राज?? जेहादियों क्या तुम्हें नही पता था कि ये UP का अयोध्या मर्यादा पुरुषोत्तम श्री राम की धरातल है God job UP police

Posted by Shivanshu Shukla on Saturday, April 4, 2020

 

ಈ ಪುರುಷರು ‘ಕರೋನಾ ಜಿಹಾದಿಗಳು’ ಎಂದು ಹೇಳಿ ಇದೇ ರೀತಿಯ ಹೇಳಿಕೆಯೊಂದಿಗೆ ವಿಡಿಯೋ ಫೇಸ್‌ಬುಕ್‌ನಲ್ಲಿ ಸಾಕಷ್ಟು ವೈರಲ್ ಆಗಿದೆ.

ದೆಹಲಿಯ ನಿಜಾಮುದ್ದೀನ್‌ನಲ್ಲಿ ನಡೆದ ಧಾರ್ಮಿಕ ಸಭೆಯೊಂದನ್ನು ಕೊರೋನವೈರಸ್ ಹಾಟ್‌ಸ್ಪಾಟ್ ಎಂದು ಗುರುತಿಸಿದ ನಂತರ, ಮುಸ್ಲಿಂ ಸಮುದಾಯದ ಮೇಲೆ ಎಲ್ಲಾ ಆಪಾದನೆಯನ್ನು ಹೊರಿಸುವ ಪ್ರಯತ್ನ ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನದ ರೀತಿಯಲ್ಲಿ ನಡೆಯುತ್ತಿದೆ. ಮುಸ್ಲಿಂ ಸಮುದಾಯವು ಉದ್ದೇಶಪೂರ್ವಕವಾಗಿ ಸೋಂಕನ್ನು ಹರಡಲು ಪ್ರಯತ್ನಿಸುತ್ತಿದೆ ಎಂಬ ಸುಳ್ಳು ನಿರೂಪಣೆಯನ್ನು ಪ್ರಚಾರ ಮಾಡಲು ‘ಕರೋನಾ ಜಿಹಾದ್’ ಮತ್ತು ‘ಕರೋನಾ ಜಿಹಾದಿ’ ಎಂಬ ನುಡಿಗಟ್ಟುಗಳನ್ನು ಸಾಮಾಜಿಕ ಮಾಧ್ಯಮ ಮತ್ತು ಮುಖ್ಯವಾಹಿನಿಯ ಮಾಧ್ಯಮಗಳು ಅವಹೇಳನಕಾರಿ ರೀತಿಯಲ್ಲಿ ಬಳಸಿಕೊಂಡಿವೆ.

ಫ್ಯಾಕ್ಟ್-ಚೆಕ್

ಫೇಸ್‌ಬುಕ್ ಬಳಕೆದಾರರಲ್ಲಿ ಕೆಲವು ಬಳಕೆದಾರರು ಈ ವೀಡಿಯೊವನ್ನು ಅಣಕು ಪ್ರದರ್ಶನ ಎಂದು ಹಂಚಿಕೊಂಡಿದ್ದಾರೆ. ಸಂಬಂಧಿತ ಕೀವರ್ಡ್‌ಗಳೊಂದಿಗೆ ಯೂಟ್ಯೂಬ್ ಹುಡುಕಾಟದೊಂದಿಗೆ, ಏಪ್ರಿಲ್ 4, 2020 ರಂದು ವಿಕೆ ನ್ಯೂಸ್ ಚಾನೆಲ್ ಪೋಸ್ಟ್ ಮಾಡಿದ ಅದೇ ಘಟನೆಯ ಮತ್ತೊಂದು ವೀಡಿಯೊವನ್ನು ನಾವು ಕಂಡುಕೊಂಡಿದ್ದೇವೆ. ವೀಡಿಯೊ ಯುಪಿ ಸುಲ್ತಾನಪುರ ಗಡಿಯಿಂದ ಬಂದಿದೆ. ಇದು ಯುಪಿ ಪೊಲೀಸರು ನಡೆಸಿದ ಅಣಕು ಪ್ರದರ್ಶನವನ್ನು ತೋರಿಸುತ್ತದೆ.

ವೈರಲ್ ವೀಡಿಯೊದಿಂದ ಸ್ಕ್ರೀನ್‌ಗ್ರಾಬ್‌ನ ಹೋಲಿಕೆ ಮತ್ತು ಯೂಟ್ಯೂಬ್ ವೀಡಿಯೊದ ಫ್ರೇಮ್ ಎರಡೂ ಒಂದೇ ಅಣಕು ಡ್ರಿಲ್ ಅನ್ನು ಚಿತ್ರಿಸುತ್ತದೆ ಎಂದು ಖಚಿತಪಡಿಸುತ್ತದೆ.

ಆಲ್ಟ್ ನ್ಯೂಸ್ ಅಯೋಧ್ಯೆ ಸಿಟಿ ಎಸ್‌ಪಿಯನ್ನು ಸಂಪರ್ಕಿಸಿದಾಗ ಅವರು ಅದು ಕೇವಲ ಪ್ರದರ್ಶನದ ದೃಶ್ಯ ಎಂದು ಸ್ಪಷ್ಟಪಡಿಸಿದ್ದಾರೆ.

ಹೀಗಾಗಿ, ಯುಪಿ ಪೊಲೀಸರು ನಡೆಸಿದ ಅಣಕು ಪ್ರದರ್ಶನದ ವೀಡಿಯೊವನ್ನು ಕೊರೋನವೈರಸ್ ಹರಡುವ ಗುರಿಯನ್ನು ಹೊಂದಿರುವ ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಗಮನಿಸಿ: ಭಾರತದಲ್ಲಿ ಕೊರೋನವೈರಸ್ ಸಕಾರಾತ್ಮಕ ಪ್ರಕರಣಗಳ ಸಂಖ್ಯೆ 9,000 ಮೀರಿದೆ ಮತ್ತು 350 ಕ್ಕೂ ಹೆಚ್ಚು ಸಾವುಗಳು ಈವರೆಗೆ ವರದಿಯಾಗಿವೆ. ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಅಗತ್ಯ ಸೇವೆಗಳ ಹೊರತಾಗಿ ಚಲನೆಗೆ ಸರ್ಕಾರ ಸಂಪೂರ್ಣ ನಿರ್ಬಂಧ ಹೇರಿದೆ. ಜಾಗತಿಕವಾಗಿ, 18 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಮತ್ತು 1 ಲಕ್ಷಕ್ಕೂ ಹೆಚ್ಚು ಸಾವುಗಳು ವರದಿಯಾಗಿವೆ. ಹಾಗಾಗಿ ಈ ವಿಚಾರದಲ್ಲಿ ತಮಾಷೆಗಾಗಿ ಅಥವಾ ಇನ್ನೊಬ್ಬರನ್ನು ಹಳಿಯುವ ಸಲುವಾಗಿ ಯಾರೂ ಸುಳ್ಳು ಸುದ್ದಿಗಳನ್ನು ಹರಡಬೇಡಿ. ಪರಿಶೀಲಿಸಿದ ನಂತರವೇ ಫಾರ್ವಡ್‌ ಮಾಡಿ.


ಇದನ್ನೂ ಓದಿ :ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವುದು ಹೇಗೆ? ಇಷ್ಟು ಮಾಡಿದರೆ ಸಾಕು
 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...