Homeನಿಜವೋ ಸುಳ್ಳೋಲಾಕ್‌ಡೌನ್‌ನಲ್ಲಿ ‘ಕೊರೋನಾ ಜಿಹಾದಿ’ಗಳನ್ನು ಬಂಧಿಸಿದ ಯುಪಿ ಪೊಲೀಸರು: ಇದು ಸತ್ಯವಲ್ಲ, ಅಣಕು ಪ್ರದರ್ಶನವಷ್ಟೆ!

ಲಾಕ್‌ಡೌನ್‌ನಲ್ಲಿ ‘ಕೊರೋನಾ ಜಿಹಾದಿ’ಗಳನ್ನು ಬಂಧಿಸಿದ ಯುಪಿ ಪೊಲೀಸರು: ಇದು ಸತ್ಯವಲ್ಲ, ಅಣಕು ಪ್ರದರ್ಶನವಷ್ಟೆ!

- Advertisement -
- Advertisement -

ಲಾಕ್‌ಡೌನ್‌ ದಿಗ್ಬಂಧನವನ್ನು ದಾಟಿ ನುಗ್ಗುತ್ತಿರುವ ಯುವಕರ ಮೇಲೆ ಪೊಲೀಸರ ಗುಂಪೊಂದು ಗುಂಡು ಹಾರಿಸುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿದೆ. ಆ ವಿಡಿಯೋದಲ್ಲಿ ಕಾರಿನಲ್ಲಿ ನುಗ್ಗಿಬಂದವರ ಮೇಲೆ ಪೊಲೀಸರು ಗುಂಡು ಹಾರಿಸುತ್ತಾರೆ. ನಂತರ ಅವರನ್ನು ಬಂಧಿಸುವ ವೀಡಿಯೊ ಉತ್ತರ ಪ್ರದೇಶದ ಅಯೋಧ್ಯೆ ನಗರದಿಂದ ಬಂದಿದೆ ಎಂದು ಹೇಳಲಾಗಿದೆ.

ಏಪ್ರಿಲ್ 4 ರಂದು ಫೇಸ್‌ಬುಕ್ ಬಳಕೆದಾರ ಶಿವಂಶು ಶುಕ್ಲಾ ಈ ವಿಡಿಯೋವನ್ನು ಪೋಸ್ಟ್ ಮಾಡಿ, “ಈ ಘಟನೆ ಚೋರ್ ಬಜಾರ್‌ನಿಂದ ಬಂದಿದೆ. ಜೈ ಯೋಗಿ ರಾಜ್. ಯುಪಿ ಅಯೋಧ್ಯೆ ಶ್ರೀ ರಾಮನ ಭೂಮಿ ಎಂದು ‘ಜಿಹಾದಿಗಳು’ ನಿಮಗೆ ತಿಳಿದಿರಲಿಲ್ಲ. ಯುಪಿ ಪೊಲೀಸರು ಒಳ್ಳೆಯ ಕೆಲಸ ಮಾಡಿದ್ದಾರೆ” ಎಂಬ ಟೈಟಲ್‌ ನೀಡಿರುವ ಈ ವೀಡಿಯೊವನ್ನು ಇದುವರೆಗೆ 500 ಕ್ಕೂ ಹೆಚ್ಚು ಬಾರಿ ಹಂಚಿಕೊಳ್ಳಲಾಗಿದೆ.

चौरे बाजार की घटना जय योगी राज?? जेहादियों क्या तुम्हें नही पता था कि ये UP का अयोध्या मर्यादा पुरुषोत्तम श्री राम की धरातल है God job UP police

Posted by Shivanshu Shukla on Saturday, April 4, 2020

 

ಈ ಪುರುಷರು ‘ಕರೋನಾ ಜಿಹಾದಿಗಳು’ ಎಂದು ಹೇಳಿ ಇದೇ ರೀತಿಯ ಹೇಳಿಕೆಯೊಂದಿಗೆ ವಿಡಿಯೋ ಫೇಸ್‌ಬುಕ್‌ನಲ್ಲಿ ಸಾಕಷ್ಟು ವೈರಲ್ ಆಗಿದೆ.

ದೆಹಲಿಯ ನಿಜಾಮುದ್ದೀನ್‌ನಲ್ಲಿ ನಡೆದ ಧಾರ್ಮಿಕ ಸಭೆಯೊಂದನ್ನು ಕೊರೋನವೈರಸ್ ಹಾಟ್‌ಸ್ಪಾಟ್ ಎಂದು ಗುರುತಿಸಿದ ನಂತರ, ಮುಸ್ಲಿಂ ಸಮುದಾಯದ ಮೇಲೆ ಎಲ್ಲಾ ಆಪಾದನೆಯನ್ನು ಹೊರಿಸುವ ಪ್ರಯತ್ನ ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನದ ರೀತಿಯಲ್ಲಿ ನಡೆಯುತ್ತಿದೆ. ಮುಸ್ಲಿಂ ಸಮುದಾಯವು ಉದ್ದೇಶಪೂರ್ವಕವಾಗಿ ಸೋಂಕನ್ನು ಹರಡಲು ಪ್ರಯತ್ನಿಸುತ್ತಿದೆ ಎಂಬ ಸುಳ್ಳು ನಿರೂಪಣೆಯನ್ನು ಪ್ರಚಾರ ಮಾಡಲು ‘ಕರೋನಾ ಜಿಹಾದ್’ ಮತ್ತು ‘ಕರೋನಾ ಜಿಹಾದಿ’ ಎಂಬ ನುಡಿಗಟ್ಟುಗಳನ್ನು ಸಾಮಾಜಿಕ ಮಾಧ್ಯಮ ಮತ್ತು ಮುಖ್ಯವಾಹಿನಿಯ ಮಾಧ್ಯಮಗಳು ಅವಹೇಳನಕಾರಿ ರೀತಿಯಲ್ಲಿ ಬಳಸಿಕೊಂಡಿವೆ.

ಫ್ಯಾಕ್ಟ್-ಚೆಕ್

ಫೇಸ್‌ಬುಕ್ ಬಳಕೆದಾರರಲ್ಲಿ ಕೆಲವು ಬಳಕೆದಾರರು ಈ ವೀಡಿಯೊವನ್ನು ಅಣಕು ಪ್ರದರ್ಶನ ಎಂದು ಹಂಚಿಕೊಂಡಿದ್ದಾರೆ. ಸಂಬಂಧಿತ ಕೀವರ್ಡ್‌ಗಳೊಂದಿಗೆ ಯೂಟ್ಯೂಬ್ ಹುಡುಕಾಟದೊಂದಿಗೆ, ಏಪ್ರಿಲ್ 4, 2020 ರಂದು ವಿಕೆ ನ್ಯೂಸ್ ಚಾನೆಲ್ ಪೋಸ್ಟ್ ಮಾಡಿದ ಅದೇ ಘಟನೆಯ ಮತ್ತೊಂದು ವೀಡಿಯೊವನ್ನು ನಾವು ಕಂಡುಕೊಂಡಿದ್ದೇವೆ. ವೀಡಿಯೊ ಯುಪಿ ಸುಲ್ತಾನಪುರ ಗಡಿಯಿಂದ ಬಂದಿದೆ. ಇದು ಯುಪಿ ಪೊಲೀಸರು ನಡೆಸಿದ ಅಣಕು ಪ್ರದರ್ಶನವನ್ನು ತೋರಿಸುತ್ತದೆ.

ವೈರಲ್ ವೀಡಿಯೊದಿಂದ ಸ್ಕ್ರೀನ್‌ಗ್ರಾಬ್‌ನ ಹೋಲಿಕೆ ಮತ್ತು ಯೂಟ್ಯೂಬ್ ವೀಡಿಯೊದ ಫ್ರೇಮ್ ಎರಡೂ ಒಂದೇ ಅಣಕು ಡ್ರಿಲ್ ಅನ್ನು ಚಿತ್ರಿಸುತ್ತದೆ ಎಂದು ಖಚಿತಪಡಿಸುತ್ತದೆ.

ಆಲ್ಟ್ ನ್ಯೂಸ್ ಅಯೋಧ್ಯೆ ಸಿಟಿ ಎಸ್‌ಪಿಯನ್ನು ಸಂಪರ್ಕಿಸಿದಾಗ ಅವರು ಅದು ಕೇವಲ ಪ್ರದರ್ಶನದ ದೃಶ್ಯ ಎಂದು ಸ್ಪಷ್ಟಪಡಿಸಿದ್ದಾರೆ.

ಹೀಗಾಗಿ, ಯುಪಿ ಪೊಲೀಸರು ನಡೆಸಿದ ಅಣಕು ಪ್ರದರ್ಶನದ ವೀಡಿಯೊವನ್ನು ಕೊರೋನವೈರಸ್ ಹರಡುವ ಗುರಿಯನ್ನು ಹೊಂದಿರುವ ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಗಮನಿಸಿ: ಭಾರತದಲ್ಲಿ ಕೊರೋನವೈರಸ್ ಸಕಾರಾತ್ಮಕ ಪ್ರಕರಣಗಳ ಸಂಖ್ಯೆ 9,000 ಮೀರಿದೆ ಮತ್ತು 350 ಕ್ಕೂ ಹೆಚ್ಚು ಸಾವುಗಳು ಈವರೆಗೆ ವರದಿಯಾಗಿವೆ. ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಅಗತ್ಯ ಸೇವೆಗಳ ಹೊರತಾಗಿ ಚಲನೆಗೆ ಸರ್ಕಾರ ಸಂಪೂರ್ಣ ನಿರ್ಬಂಧ ಹೇರಿದೆ. ಜಾಗತಿಕವಾಗಿ, 18 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಮತ್ತು 1 ಲಕ್ಷಕ್ಕೂ ಹೆಚ್ಚು ಸಾವುಗಳು ವರದಿಯಾಗಿವೆ. ಹಾಗಾಗಿ ಈ ವಿಚಾರದಲ್ಲಿ ತಮಾಷೆಗಾಗಿ ಅಥವಾ ಇನ್ನೊಬ್ಬರನ್ನು ಹಳಿಯುವ ಸಲುವಾಗಿ ಯಾರೂ ಸುಳ್ಳು ಸುದ್ದಿಗಳನ್ನು ಹರಡಬೇಡಿ. ಪರಿಶೀಲಿಸಿದ ನಂತರವೇ ಫಾರ್ವಡ್‌ ಮಾಡಿ.


ಇದನ್ನೂ ಓದಿ :ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವುದು ಹೇಗೆ? ಇಷ್ಟು ಮಾಡಿದರೆ ಸಾಕು
 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...