Homeನಿಜವೋ ಸುಳ್ಳೋಲಾಕ್‌ಡೌನ್‌ನಲ್ಲಿ ‘ಕೊರೋನಾ ಜಿಹಾದಿ’ಗಳನ್ನು ಬಂಧಿಸಿದ ಯುಪಿ ಪೊಲೀಸರು: ಇದು ಸತ್ಯವಲ್ಲ, ಅಣಕು ಪ್ರದರ್ಶನವಷ್ಟೆ!

ಲಾಕ್‌ಡೌನ್‌ನಲ್ಲಿ ‘ಕೊರೋನಾ ಜಿಹಾದಿ’ಗಳನ್ನು ಬಂಧಿಸಿದ ಯುಪಿ ಪೊಲೀಸರು: ಇದು ಸತ್ಯವಲ್ಲ, ಅಣಕು ಪ್ರದರ್ಶನವಷ್ಟೆ!

- Advertisement -
- Advertisement -

ಲಾಕ್‌ಡೌನ್‌ ದಿಗ್ಬಂಧನವನ್ನು ದಾಟಿ ನುಗ್ಗುತ್ತಿರುವ ಯುವಕರ ಮೇಲೆ ಪೊಲೀಸರ ಗುಂಪೊಂದು ಗುಂಡು ಹಾರಿಸುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿದೆ. ಆ ವಿಡಿಯೋದಲ್ಲಿ ಕಾರಿನಲ್ಲಿ ನುಗ್ಗಿಬಂದವರ ಮೇಲೆ ಪೊಲೀಸರು ಗುಂಡು ಹಾರಿಸುತ್ತಾರೆ. ನಂತರ ಅವರನ್ನು ಬಂಧಿಸುವ ವೀಡಿಯೊ ಉತ್ತರ ಪ್ರದೇಶದ ಅಯೋಧ್ಯೆ ನಗರದಿಂದ ಬಂದಿದೆ ಎಂದು ಹೇಳಲಾಗಿದೆ.

ಏಪ್ರಿಲ್ 4 ರಂದು ಫೇಸ್‌ಬುಕ್ ಬಳಕೆದಾರ ಶಿವಂಶು ಶುಕ್ಲಾ ಈ ವಿಡಿಯೋವನ್ನು ಪೋಸ್ಟ್ ಮಾಡಿ, “ಈ ಘಟನೆ ಚೋರ್ ಬಜಾರ್‌ನಿಂದ ಬಂದಿದೆ. ಜೈ ಯೋಗಿ ರಾಜ್. ಯುಪಿ ಅಯೋಧ್ಯೆ ಶ್ರೀ ರಾಮನ ಭೂಮಿ ಎಂದು ‘ಜಿಹಾದಿಗಳು’ ನಿಮಗೆ ತಿಳಿದಿರಲಿಲ್ಲ. ಯುಪಿ ಪೊಲೀಸರು ಒಳ್ಳೆಯ ಕೆಲಸ ಮಾಡಿದ್ದಾರೆ” ಎಂಬ ಟೈಟಲ್‌ ನೀಡಿರುವ ಈ ವೀಡಿಯೊವನ್ನು ಇದುವರೆಗೆ 500 ಕ್ಕೂ ಹೆಚ್ಚು ಬಾರಿ ಹಂಚಿಕೊಳ್ಳಲಾಗಿದೆ.

चौरे बाजार की घटना जय योगी राज?? जेहादियों क्या तुम्हें नही पता था कि ये UP का अयोध्या मर्यादा पुरुषोत्तम श्री राम की धरातल है God job UP police

Posted by Shivanshu Shukla on Saturday, April 4, 2020

 

ಈ ಪುರುಷರು ‘ಕರೋನಾ ಜಿಹಾದಿಗಳು’ ಎಂದು ಹೇಳಿ ಇದೇ ರೀತಿಯ ಹೇಳಿಕೆಯೊಂದಿಗೆ ವಿಡಿಯೋ ಫೇಸ್‌ಬುಕ್‌ನಲ್ಲಿ ಸಾಕಷ್ಟು ವೈರಲ್ ಆಗಿದೆ.

ದೆಹಲಿಯ ನಿಜಾಮುದ್ದೀನ್‌ನಲ್ಲಿ ನಡೆದ ಧಾರ್ಮಿಕ ಸಭೆಯೊಂದನ್ನು ಕೊರೋನವೈರಸ್ ಹಾಟ್‌ಸ್ಪಾಟ್ ಎಂದು ಗುರುತಿಸಿದ ನಂತರ, ಮುಸ್ಲಿಂ ಸಮುದಾಯದ ಮೇಲೆ ಎಲ್ಲಾ ಆಪಾದನೆಯನ್ನು ಹೊರಿಸುವ ಪ್ರಯತ್ನ ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನದ ರೀತಿಯಲ್ಲಿ ನಡೆಯುತ್ತಿದೆ. ಮುಸ್ಲಿಂ ಸಮುದಾಯವು ಉದ್ದೇಶಪೂರ್ವಕವಾಗಿ ಸೋಂಕನ್ನು ಹರಡಲು ಪ್ರಯತ್ನಿಸುತ್ತಿದೆ ಎಂಬ ಸುಳ್ಳು ನಿರೂಪಣೆಯನ್ನು ಪ್ರಚಾರ ಮಾಡಲು ‘ಕರೋನಾ ಜಿಹಾದ್’ ಮತ್ತು ‘ಕರೋನಾ ಜಿಹಾದಿ’ ಎಂಬ ನುಡಿಗಟ್ಟುಗಳನ್ನು ಸಾಮಾಜಿಕ ಮಾಧ್ಯಮ ಮತ್ತು ಮುಖ್ಯವಾಹಿನಿಯ ಮಾಧ್ಯಮಗಳು ಅವಹೇಳನಕಾರಿ ರೀತಿಯಲ್ಲಿ ಬಳಸಿಕೊಂಡಿವೆ.

ಫ್ಯಾಕ್ಟ್-ಚೆಕ್

ಫೇಸ್‌ಬುಕ್ ಬಳಕೆದಾರರಲ್ಲಿ ಕೆಲವು ಬಳಕೆದಾರರು ಈ ವೀಡಿಯೊವನ್ನು ಅಣಕು ಪ್ರದರ್ಶನ ಎಂದು ಹಂಚಿಕೊಂಡಿದ್ದಾರೆ. ಸಂಬಂಧಿತ ಕೀವರ್ಡ್‌ಗಳೊಂದಿಗೆ ಯೂಟ್ಯೂಬ್ ಹುಡುಕಾಟದೊಂದಿಗೆ, ಏಪ್ರಿಲ್ 4, 2020 ರಂದು ವಿಕೆ ನ್ಯೂಸ್ ಚಾನೆಲ್ ಪೋಸ್ಟ್ ಮಾಡಿದ ಅದೇ ಘಟನೆಯ ಮತ್ತೊಂದು ವೀಡಿಯೊವನ್ನು ನಾವು ಕಂಡುಕೊಂಡಿದ್ದೇವೆ. ವೀಡಿಯೊ ಯುಪಿ ಸುಲ್ತಾನಪುರ ಗಡಿಯಿಂದ ಬಂದಿದೆ. ಇದು ಯುಪಿ ಪೊಲೀಸರು ನಡೆಸಿದ ಅಣಕು ಪ್ರದರ್ಶನವನ್ನು ತೋರಿಸುತ್ತದೆ.

ವೈರಲ್ ವೀಡಿಯೊದಿಂದ ಸ್ಕ್ರೀನ್‌ಗ್ರಾಬ್‌ನ ಹೋಲಿಕೆ ಮತ್ತು ಯೂಟ್ಯೂಬ್ ವೀಡಿಯೊದ ಫ್ರೇಮ್ ಎರಡೂ ಒಂದೇ ಅಣಕು ಡ್ರಿಲ್ ಅನ್ನು ಚಿತ್ರಿಸುತ್ತದೆ ಎಂದು ಖಚಿತಪಡಿಸುತ್ತದೆ.

ಆಲ್ಟ್ ನ್ಯೂಸ್ ಅಯೋಧ್ಯೆ ಸಿಟಿ ಎಸ್‌ಪಿಯನ್ನು ಸಂಪರ್ಕಿಸಿದಾಗ ಅವರು ಅದು ಕೇವಲ ಪ್ರದರ್ಶನದ ದೃಶ್ಯ ಎಂದು ಸ್ಪಷ್ಟಪಡಿಸಿದ್ದಾರೆ.

ಹೀಗಾಗಿ, ಯುಪಿ ಪೊಲೀಸರು ನಡೆಸಿದ ಅಣಕು ಪ್ರದರ್ಶನದ ವೀಡಿಯೊವನ್ನು ಕೊರೋನವೈರಸ್ ಹರಡುವ ಗುರಿಯನ್ನು ಹೊಂದಿರುವ ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಗಮನಿಸಿ: ಭಾರತದಲ್ಲಿ ಕೊರೋನವೈರಸ್ ಸಕಾರಾತ್ಮಕ ಪ್ರಕರಣಗಳ ಸಂಖ್ಯೆ 9,000 ಮೀರಿದೆ ಮತ್ತು 350 ಕ್ಕೂ ಹೆಚ್ಚು ಸಾವುಗಳು ಈವರೆಗೆ ವರದಿಯಾಗಿವೆ. ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಅಗತ್ಯ ಸೇವೆಗಳ ಹೊರತಾಗಿ ಚಲನೆಗೆ ಸರ್ಕಾರ ಸಂಪೂರ್ಣ ನಿರ್ಬಂಧ ಹೇರಿದೆ. ಜಾಗತಿಕವಾಗಿ, 18 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಮತ್ತು 1 ಲಕ್ಷಕ್ಕೂ ಹೆಚ್ಚು ಸಾವುಗಳು ವರದಿಯಾಗಿವೆ. ಹಾಗಾಗಿ ಈ ವಿಚಾರದಲ್ಲಿ ತಮಾಷೆಗಾಗಿ ಅಥವಾ ಇನ್ನೊಬ್ಬರನ್ನು ಹಳಿಯುವ ಸಲುವಾಗಿ ಯಾರೂ ಸುಳ್ಳು ಸುದ್ದಿಗಳನ್ನು ಹರಡಬೇಡಿ. ಪರಿಶೀಲಿಸಿದ ನಂತರವೇ ಫಾರ್ವಡ್‌ ಮಾಡಿ.


ಇದನ್ನೂ ಓದಿ :ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವುದು ಹೇಗೆ? ಇಷ್ಟು ಮಾಡಿದರೆ ಸಾಕು
 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...