Homeಮುಖಪುಟಬಿಜೆಪಿ ಶಾಸಕನ ಪುತ್ರಿಯ ಆರೋಪ ಅಲ್ಲಗಳೆದ ಯುಪಿ ಪೊಲೀಸರು

ಬಿಜೆಪಿ ಶಾಸಕನ ಪುತ್ರಿಯ ಆರೋಪ ಅಲ್ಲಗಳೆದ ಯುಪಿ ಪೊಲೀಸರು

- Advertisement -
- Advertisement -

ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಬಿದುನಾ ವಿನಯ್ ಶಾಕ್ಯಾ ಅವರ ಪುತ್ರಿ ರಿಯಾ ಶಕ್ಯಾ ಅವರು, “ನಮ್ಮ ತಂದೆಯನ್ನು ಬಲವಂತವಾಗಿ ಲಕ್ನೋಗೆ ಕರೆದೊಯ್ದಿದ್ದಾರೆ” ಎಂದು ಆರೋಪಿಸಿದ್ದಾರೆ. ಆದರೆ ಇದು ನಿರಾಧಾರ ಎಂದು ಉತ್ತರ ಪ್ರದೇಶ ಪೊಲೀಸರು ಮಂಗಳವಾರ ಹೇಳಿದ್ದಾರೆ.

ರಿಯಾ ಅವರ ವೀಡಿಯೊ ವೈರಲ್ ಆಗಿದೆ. ಆ ಬಳಿಕ , ಔರೈಯಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಭಿಷೇಕ್ ವರ್ಮಾ ಪ್ರತಿಕ್ರಿಯೆ ನೀಡಿದ್ದು, “ವಿನಯ್ ಶಾಕ್ಯಾ ಪ್ರಸ್ತುತ ತಮ್ಮ ಇಟಾವಾ ನಿವಾಸದಲ್ಲಿ ನೆಲೆಸಿದ್ದಾರೆ. ಪೊಲೀಸ್ ಸಿಬ್ಬಂದಿ ಕೂಡ ಸ್ಥಳದಲ್ಲಿದ್ದಾರೆ” ಎಂದು ತಿಳಿಸಿದ್ದಾರೆ.

“ನಾನು ಶಾಸಕ ವಿನಯ್ ಶಾಕ್ಯಾ ಅವರೊಂದಿಗೆ ವೀಡಿಯೊ ಕರೆಯಲ್ಲಿ ಮಾತನಾಡಿದ್ದೇನೆ. ವಿನಯ್‌ ಅವರು ಪ್ರಸ್ತುತ ಅವರ ಇಟಾವಾ ನಿವಾಸದಲ್ಲಿ ಉಳಿದುಕೊಂಡಿದ್ದಾರೆ ಎಂದು ತಿಳಿಯಿತು. ಪೊಲೀಸ್ ಭದ್ರತಾ ಸಿಬ್ಬಂದಿ ಕೂಡ ಸ್ಥಳದಲ್ಲಿದ್ದಾರೆ. ಶಾಸಕ ವಿನಯ್ ಶಾಕ್ಯಾ ಅವರ ಪುತ್ರಿ ರಿಯಾ ಶಕ್ಯಾ ಅವರ ವೈರಲ್ ವೀಡಿಯೊ ಆಧಾರರಹಿತವಾಗಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಒಬಿಸಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ರಾಜ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮೂವರು ಶಾಸಕರು ಪಕ್ಷವನ್ನು ತೊರೆಯುತ್ತಿರುವುದಾಗಿ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಚುನಾವಣಾ ಕಣಕ್ಕಿಳಿದಿರುವ ಬಿಜೆಪಿಗೆ ಇದು ಆಘಾತ ನೀಡಿದೆ. ತಿಂಡವಾರಿ ಶಾಸಕ ಬ್ರಜೇಶ್ ಪ್ರಜಾಪತಿ, ತಿಲ್ಹಾರ್‌ನ ರೋಷನ್ ಲಾಲ್ ವರ್ಮಾ ಮತ್ತು ಬಿಲ್ಹೌರ್‌ನ ಭಗವತಿ ಸಾಗರ್ ಅವರು ಪಕ್ಷವನ್ನು ತೊರೆಯುವುದನ್ನು ಖಚಿತಪಡಿಸಿದ ನಂತರ, ವಿನಯ್ ಶಾಕ್ಯಾ ಬಿಜೆಪಿಯನ್ನು ತೊರೆದಿದ್ದಾರೆ ಎಂಬ ವರದಿಗಳೂ ಆಗಿವೆ.

ಬಿಧುನಾ ಶಾಸಕ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ವರದಿಗಳನ್ನು ನಿರಾಕರಿಸಿದ ರಿಯಾ ಶಕ್ಯಾ, “ಪಾರ್ಶ್ವವಾಯು ಪೀಡಿತ ನನ್ನ ತಂದೆಯನ್ನು ನನ್ನ ಚಿಕ್ಕಪ್ಪ ದೇವೇಶ್ ಶಾಕ್ಯಾ ಅವರು ವೈಯಕ್ತಿಕ ರಾಜಕೀಯಕ್ಕಾಗಿ ಲಕ್ನೋಗೆ ಬಲವಂತವಾಗಿ ಕರೆದೊಯ್ದಿದ್ದಾರೆ” ಎಂದು ದೂರಿದ್ದರು.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ರಿಯಾ, “ನನ್ನ ತಂದೆಗೆ ಕೆಲವು ವರ್ಷಗಳ ಹಿಂದೆ ಪಾರ್ಶ್ವವಾಯು ಆಗಿದೆ. ಅವರಿಗೆ ನಡೆದಾಡಲೂ ಸಾಧ್ಯವಾಗುತ್ತಿಲ್ಲ ಎಂಬುದು ನಿಮಗೆಲ್ಲರಿಗೂ ತಿಳಿದಿದೆ. ನನ್ನ ತಂದೆಯ ಅನಾರೋಗ್ಯದ ಲಾಭವನ್ನು ಪಡೆದುಕೊಂಡು ವೈಯಕ್ತಿಕ ರಾಜಕೀಯ ಮಾಡಿಕೊಳ್ಳಲು ನನ್ನ ಚಿಕ್ಕಪ್ಪ ದೇವೇಶ್ ಶಾಕ್ಯಾ ಆರಂಭಿಸಿದ್ದಾರೆ” ಎಂದು ಹೇಳಿದ್ದರು.

“ಇಂದು, ಅವರು (ದೇವೇಶ್‌‌ ಶಾಕ್ಯಾ) ಎಲ್ಲಾ ಮಿತಿಗಳನ್ನು ದಾಟಿದ್ದು ನಮ್ಮ ಮನೆಯಿಂದ ನನ್ನ ತಂದೆಯನ್ನು ಬಲವಂತವಾಗಿ ಕರೆದೊಯ್ದು ಎಸ್ಪಿಗೆ ಸೇರಿಸಲು ಲಕ್ನೋಗೆ ಹೋಗಿದ್ದಾರೆ” ಎಂದು ವಿಡಿಯೊ ಮೂಲಕ ತಿಳಿಸಿದ್ದರು.

“ನಾವು ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದೇವೆ. ಬಿಜೆಪಿಯೊಂದಿಗೇ ಯಾವಾಗಲೂ ದೃಢವಾಗಿ ನಿಲ್ಲುತ್ತೇವೆ” ಎಂದು ಹೇಳುವ ಮೂಲಕ ರಿಯಾ ತನ್ನ ತಂದೆ ಇರುವ ಸ್ಥಳವನ್ನು ಕಂಡುಹಿಡಿಯಲು ಸಹಾಯ ಮಾಡಬೇಕೆಂದು ರಾಜ್ಯ ಸರ್ಕಾರವನ್ನು ವಿನಂತಿಸಿದ್ದರು. ಆದರೆ ಪೊಲೀಸರು ರಿಯಾ ಆರೋಪಗಳನ್ನು ಅಲ್ಲಗಳೆದಿದ್ದಾರೆ.

ಏಳು ಹಂತಗಳಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಫೆ.10ರಂದು ಆರಂಭವಾಗಲಿದೆ. ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.


ಇದನ್ನೂ ಓದಿರಿ: ಯುಪಿ ಬಿಜೆಪಿಗೆ ಬಿಗ್‌ ಶಾಕ್‌: ಸಚಿವರ ನಂತರ ಮತ್ತೆ ಮೂವರು ಶಾಸಕರ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...