Homeಮುಖಪುಟಬಿಜೆಪಿ ಶಾಸಕನ ಪುತ್ರಿಯ ಆರೋಪ ಅಲ್ಲಗಳೆದ ಯುಪಿ ಪೊಲೀಸರು

ಬಿಜೆಪಿ ಶಾಸಕನ ಪುತ್ರಿಯ ಆರೋಪ ಅಲ್ಲಗಳೆದ ಯುಪಿ ಪೊಲೀಸರು

- Advertisement -
- Advertisement -

ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಬಿದುನಾ ವಿನಯ್ ಶಾಕ್ಯಾ ಅವರ ಪುತ್ರಿ ರಿಯಾ ಶಕ್ಯಾ ಅವರು, “ನಮ್ಮ ತಂದೆಯನ್ನು ಬಲವಂತವಾಗಿ ಲಕ್ನೋಗೆ ಕರೆದೊಯ್ದಿದ್ದಾರೆ” ಎಂದು ಆರೋಪಿಸಿದ್ದಾರೆ. ಆದರೆ ಇದು ನಿರಾಧಾರ ಎಂದು ಉತ್ತರ ಪ್ರದೇಶ ಪೊಲೀಸರು ಮಂಗಳವಾರ ಹೇಳಿದ್ದಾರೆ.

ರಿಯಾ ಅವರ ವೀಡಿಯೊ ವೈರಲ್ ಆಗಿದೆ. ಆ ಬಳಿಕ , ಔರೈಯಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಭಿಷೇಕ್ ವರ್ಮಾ ಪ್ರತಿಕ್ರಿಯೆ ನೀಡಿದ್ದು, “ವಿನಯ್ ಶಾಕ್ಯಾ ಪ್ರಸ್ತುತ ತಮ್ಮ ಇಟಾವಾ ನಿವಾಸದಲ್ಲಿ ನೆಲೆಸಿದ್ದಾರೆ. ಪೊಲೀಸ್ ಸಿಬ್ಬಂದಿ ಕೂಡ ಸ್ಥಳದಲ್ಲಿದ್ದಾರೆ” ಎಂದು ತಿಳಿಸಿದ್ದಾರೆ.

“ನಾನು ಶಾಸಕ ವಿನಯ್ ಶಾಕ್ಯಾ ಅವರೊಂದಿಗೆ ವೀಡಿಯೊ ಕರೆಯಲ್ಲಿ ಮಾತನಾಡಿದ್ದೇನೆ. ವಿನಯ್‌ ಅವರು ಪ್ರಸ್ತುತ ಅವರ ಇಟಾವಾ ನಿವಾಸದಲ್ಲಿ ಉಳಿದುಕೊಂಡಿದ್ದಾರೆ ಎಂದು ತಿಳಿಯಿತು. ಪೊಲೀಸ್ ಭದ್ರತಾ ಸಿಬ್ಬಂದಿ ಕೂಡ ಸ್ಥಳದಲ್ಲಿದ್ದಾರೆ. ಶಾಸಕ ವಿನಯ್ ಶಾಕ್ಯಾ ಅವರ ಪುತ್ರಿ ರಿಯಾ ಶಕ್ಯಾ ಅವರ ವೈರಲ್ ವೀಡಿಯೊ ಆಧಾರರಹಿತವಾಗಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಒಬಿಸಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ರಾಜ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮೂವರು ಶಾಸಕರು ಪಕ್ಷವನ್ನು ತೊರೆಯುತ್ತಿರುವುದಾಗಿ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಚುನಾವಣಾ ಕಣಕ್ಕಿಳಿದಿರುವ ಬಿಜೆಪಿಗೆ ಇದು ಆಘಾತ ನೀಡಿದೆ. ತಿಂಡವಾರಿ ಶಾಸಕ ಬ್ರಜೇಶ್ ಪ್ರಜಾಪತಿ, ತಿಲ್ಹಾರ್‌ನ ರೋಷನ್ ಲಾಲ್ ವರ್ಮಾ ಮತ್ತು ಬಿಲ್ಹೌರ್‌ನ ಭಗವತಿ ಸಾಗರ್ ಅವರು ಪಕ್ಷವನ್ನು ತೊರೆಯುವುದನ್ನು ಖಚಿತಪಡಿಸಿದ ನಂತರ, ವಿನಯ್ ಶಾಕ್ಯಾ ಬಿಜೆಪಿಯನ್ನು ತೊರೆದಿದ್ದಾರೆ ಎಂಬ ವರದಿಗಳೂ ಆಗಿವೆ.

ಬಿಧುನಾ ಶಾಸಕ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ವರದಿಗಳನ್ನು ನಿರಾಕರಿಸಿದ ರಿಯಾ ಶಕ್ಯಾ, “ಪಾರ್ಶ್ವವಾಯು ಪೀಡಿತ ನನ್ನ ತಂದೆಯನ್ನು ನನ್ನ ಚಿಕ್ಕಪ್ಪ ದೇವೇಶ್ ಶಾಕ್ಯಾ ಅವರು ವೈಯಕ್ತಿಕ ರಾಜಕೀಯಕ್ಕಾಗಿ ಲಕ್ನೋಗೆ ಬಲವಂತವಾಗಿ ಕರೆದೊಯ್ದಿದ್ದಾರೆ” ಎಂದು ದೂರಿದ್ದರು.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ರಿಯಾ, “ನನ್ನ ತಂದೆಗೆ ಕೆಲವು ವರ್ಷಗಳ ಹಿಂದೆ ಪಾರ್ಶ್ವವಾಯು ಆಗಿದೆ. ಅವರಿಗೆ ನಡೆದಾಡಲೂ ಸಾಧ್ಯವಾಗುತ್ತಿಲ್ಲ ಎಂಬುದು ನಿಮಗೆಲ್ಲರಿಗೂ ತಿಳಿದಿದೆ. ನನ್ನ ತಂದೆಯ ಅನಾರೋಗ್ಯದ ಲಾಭವನ್ನು ಪಡೆದುಕೊಂಡು ವೈಯಕ್ತಿಕ ರಾಜಕೀಯ ಮಾಡಿಕೊಳ್ಳಲು ನನ್ನ ಚಿಕ್ಕಪ್ಪ ದೇವೇಶ್ ಶಾಕ್ಯಾ ಆರಂಭಿಸಿದ್ದಾರೆ” ಎಂದು ಹೇಳಿದ್ದರು.

“ಇಂದು, ಅವರು (ದೇವೇಶ್‌‌ ಶಾಕ್ಯಾ) ಎಲ್ಲಾ ಮಿತಿಗಳನ್ನು ದಾಟಿದ್ದು ನಮ್ಮ ಮನೆಯಿಂದ ನನ್ನ ತಂದೆಯನ್ನು ಬಲವಂತವಾಗಿ ಕರೆದೊಯ್ದು ಎಸ್ಪಿಗೆ ಸೇರಿಸಲು ಲಕ್ನೋಗೆ ಹೋಗಿದ್ದಾರೆ” ಎಂದು ವಿಡಿಯೊ ಮೂಲಕ ತಿಳಿಸಿದ್ದರು.

“ನಾವು ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದೇವೆ. ಬಿಜೆಪಿಯೊಂದಿಗೇ ಯಾವಾಗಲೂ ದೃಢವಾಗಿ ನಿಲ್ಲುತ್ತೇವೆ” ಎಂದು ಹೇಳುವ ಮೂಲಕ ರಿಯಾ ತನ್ನ ತಂದೆ ಇರುವ ಸ್ಥಳವನ್ನು ಕಂಡುಹಿಡಿಯಲು ಸಹಾಯ ಮಾಡಬೇಕೆಂದು ರಾಜ್ಯ ಸರ್ಕಾರವನ್ನು ವಿನಂತಿಸಿದ್ದರು. ಆದರೆ ಪೊಲೀಸರು ರಿಯಾ ಆರೋಪಗಳನ್ನು ಅಲ್ಲಗಳೆದಿದ್ದಾರೆ.

ಏಳು ಹಂತಗಳಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಫೆ.10ರಂದು ಆರಂಭವಾಗಲಿದೆ. ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.


ಇದನ್ನೂ ಓದಿರಿ: ಯುಪಿ ಬಿಜೆಪಿಗೆ ಬಿಗ್‌ ಶಾಕ್‌: ಸಚಿವರ ನಂತರ ಮತ್ತೆ ಮೂವರು ಶಾಸಕರ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....