Homeಮುಖಪುಟಬಿಜೆಪಿ ಶಾಸಕನ ಪುತ್ರಿಯ ಆರೋಪ ಅಲ್ಲಗಳೆದ ಯುಪಿ ಪೊಲೀಸರು

ಬಿಜೆಪಿ ಶಾಸಕನ ಪುತ್ರಿಯ ಆರೋಪ ಅಲ್ಲಗಳೆದ ಯುಪಿ ಪೊಲೀಸರು

- Advertisement -
- Advertisement -

ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಬಿದುನಾ ವಿನಯ್ ಶಾಕ್ಯಾ ಅವರ ಪುತ್ರಿ ರಿಯಾ ಶಕ್ಯಾ ಅವರು, “ನಮ್ಮ ತಂದೆಯನ್ನು ಬಲವಂತವಾಗಿ ಲಕ್ನೋಗೆ ಕರೆದೊಯ್ದಿದ್ದಾರೆ” ಎಂದು ಆರೋಪಿಸಿದ್ದಾರೆ. ಆದರೆ ಇದು ನಿರಾಧಾರ ಎಂದು ಉತ್ತರ ಪ್ರದೇಶ ಪೊಲೀಸರು ಮಂಗಳವಾರ ಹೇಳಿದ್ದಾರೆ.

ರಿಯಾ ಅವರ ವೀಡಿಯೊ ವೈರಲ್ ಆಗಿದೆ. ಆ ಬಳಿಕ , ಔರೈಯಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಭಿಷೇಕ್ ವರ್ಮಾ ಪ್ರತಿಕ್ರಿಯೆ ನೀಡಿದ್ದು, “ವಿನಯ್ ಶಾಕ್ಯಾ ಪ್ರಸ್ತುತ ತಮ್ಮ ಇಟಾವಾ ನಿವಾಸದಲ್ಲಿ ನೆಲೆಸಿದ್ದಾರೆ. ಪೊಲೀಸ್ ಸಿಬ್ಬಂದಿ ಕೂಡ ಸ್ಥಳದಲ್ಲಿದ್ದಾರೆ” ಎಂದು ತಿಳಿಸಿದ್ದಾರೆ.

“ನಾನು ಶಾಸಕ ವಿನಯ್ ಶಾಕ್ಯಾ ಅವರೊಂದಿಗೆ ವೀಡಿಯೊ ಕರೆಯಲ್ಲಿ ಮಾತನಾಡಿದ್ದೇನೆ. ವಿನಯ್‌ ಅವರು ಪ್ರಸ್ತುತ ಅವರ ಇಟಾವಾ ನಿವಾಸದಲ್ಲಿ ಉಳಿದುಕೊಂಡಿದ್ದಾರೆ ಎಂದು ತಿಳಿಯಿತು. ಪೊಲೀಸ್ ಭದ್ರತಾ ಸಿಬ್ಬಂದಿ ಕೂಡ ಸ್ಥಳದಲ್ಲಿದ್ದಾರೆ. ಶಾಸಕ ವಿನಯ್ ಶಾಕ್ಯಾ ಅವರ ಪುತ್ರಿ ರಿಯಾ ಶಕ್ಯಾ ಅವರ ವೈರಲ್ ವೀಡಿಯೊ ಆಧಾರರಹಿತವಾಗಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಒಬಿಸಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ರಾಜ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮೂವರು ಶಾಸಕರು ಪಕ್ಷವನ್ನು ತೊರೆಯುತ್ತಿರುವುದಾಗಿ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಚುನಾವಣಾ ಕಣಕ್ಕಿಳಿದಿರುವ ಬಿಜೆಪಿಗೆ ಇದು ಆಘಾತ ನೀಡಿದೆ. ತಿಂಡವಾರಿ ಶಾಸಕ ಬ್ರಜೇಶ್ ಪ್ರಜಾಪತಿ, ತಿಲ್ಹಾರ್‌ನ ರೋಷನ್ ಲಾಲ್ ವರ್ಮಾ ಮತ್ತು ಬಿಲ್ಹೌರ್‌ನ ಭಗವತಿ ಸಾಗರ್ ಅವರು ಪಕ್ಷವನ್ನು ತೊರೆಯುವುದನ್ನು ಖಚಿತಪಡಿಸಿದ ನಂತರ, ವಿನಯ್ ಶಾಕ್ಯಾ ಬಿಜೆಪಿಯನ್ನು ತೊರೆದಿದ್ದಾರೆ ಎಂಬ ವರದಿಗಳೂ ಆಗಿವೆ.

ಬಿಧುನಾ ಶಾಸಕ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ವರದಿಗಳನ್ನು ನಿರಾಕರಿಸಿದ ರಿಯಾ ಶಕ್ಯಾ, “ಪಾರ್ಶ್ವವಾಯು ಪೀಡಿತ ನನ್ನ ತಂದೆಯನ್ನು ನನ್ನ ಚಿಕ್ಕಪ್ಪ ದೇವೇಶ್ ಶಾಕ್ಯಾ ಅವರು ವೈಯಕ್ತಿಕ ರಾಜಕೀಯಕ್ಕಾಗಿ ಲಕ್ನೋಗೆ ಬಲವಂತವಾಗಿ ಕರೆದೊಯ್ದಿದ್ದಾರೆ” ಎಂದು ದೂರಿದ್ದರು.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ರಿಯಾ, “ನನ್ನ ತಂದೆಗೆ ಕೆಲವು ವರ್ಷಗಳ ಹಿಂದೆ ಪಾರ್ಶ್ವವಾಯು ಆಗಿದೆ. ಅವರಿಗೆ ನಡೆದಾಡಲೂ ಸಾಧ್ಯವಾಗುತ್ತಿಲ್ಲ ಎಂಬುದು ನಿಮಗೆಲ್ಲರಿಗೂ ತಿಳಿದಿದೆ. ನನ್ನ ತಂದೆಯ ಅನಾರೋಗ್ಯದ ಲಾಭವನ್ನು ಪಡೆದುಕೊಂಡು ವೈಯಕ್ತಿಕ ರಾಜಕೀಯ ಮಾಡಿಕೊಳ್ಳಲು ನನ್ನ ಚಿಕ್ಕಪ್ಪ ದೇವೇಶ್ ಶಾಕ್ಯಾ ಆರಂಭಿಸಿದ್ದಾರೆ” ಎಂದು ಹೇಳಿದ್ದರು.

“ಇಂದು, ಅವರು (ದೇವೇಶ್‌‌ ಶಾಕ್ಯಾ) ಎಲ್ಲಾ ಮಿತಿಗಳನ್ನು ದಾಟಿದ್ದು ನಮ್ಮ ಮನೆಯಿಂದ ನನ್ನ ತಂದೆಯನ್ನು ಬಲವಂತವಾಗಿ ಕರೆದೊಯ್ದು ಎಸ್ಪಿಗೆ ಸೇರಿಸಲು ಲಕ್ನೋಗೆ ಹೋಗಿದ್ದಾರೆ” ಎಂದು ವಿಡಿಯೊ ಮೂಲಕ ತಿಳಿಸಿದ್ದರು.

“ನಾವು ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದೇವೆ. ಬಿಜೆಪಿಯೊಂದಿಗೇ ಯಾವಾಗಲೂ ದೃಢವಾಗಿ ನಿಲ್ಲುತ್ತೇವೆ” ಎಂದು ಹೇಳುವ ಮೂಲಕ ರಿಯಾ ತನ್ನ ತಂದೆ ಇರುವ ಸ್ಥಳವನ್ನು ಕಂಡುಹಿಡಿಯಲು ಸಹಾಯ ಮಾಡಬೇಕೆಂದು ರಾಜ್ಯ ಸರ್ಕಾರವನ್ನು ವಿನಂತಿಸಿದ್ದರು. ಆದರೆ ಪೊಲೀಸರು ರಿಯಾ ಆರೋಪಗಳನ್ನು ಅಲ್ಲಗಳೆದಿದ್ದಾರೆ.

ಏಳು ಹಂತಗಳಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಫೆ.10ರಂದು ಆರಂಭವಾಗಲಿದೆ. ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.


ಇದನ್ನೂ ಓದಿರಿ: ಯುಪಿ ಬಿಜೆಪಿಗೆ ಬಿಗ್‌ ಶಾಕ್‌: ಸಚಿವರ ನಂತರ ಮತ್ತೆ ಮೂವರು ಶಾಸಕರ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...