Homeಮುಖಪುಟಬಿಜೆಪಿ ಶಾಸಕನ ಪುತ್ರಿಯ ಆರೋಪ ಅಲ್ಲಗಳೆದ ಯುಪಿ ಪೊಲೀಸರು

ಬಿಜೆಪಿ ಶಾಸಕನ ಪುತ್ರಿಯ ಆರೋಪ ಅಲ್ಲಗಳೆದ ಯುಪಿ ಪೊಲೀಸರು

- Advertisement -
- Advertisement -

ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಬಿದುನಾ ವಿನಯ್ ಶಾಕ್ಯಾ ಅವರ ಪುತ್ರಿ ರಿಯಾ ಶಕ್ಯಾ ಅವರು, “ನಮ್ಮ ತಂದೆಯನ್ನು ಬಲವಂತವಾಗಿ ಲಕ್ನೋಗೆ ಕರೆದೊಯ್ದಿದ್ದಾರೆ” ಎಂದು ಆರೋಪಿಸಿದ್ದಾರೆ. ಆದರೆ ಇದು ನಿರಾಧಾರ ಎಂದು ಉತ್ತರ ಪ್ರದೇಶ ಪೊಲೀಸರು ಮಂಗಳವಾರ ಹೇಳಿದ್ದಾರೆ.

ರಿಯಾ ಅವರ ವೀಡಿಯೊ ವೈರಲ್ ಆಗಿದೆ. ಆ ಬಳಿಕ , ಔರೈಯಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಭಿಷೇಕ್ ವರ್ಮಾ ಪ್ರತಿಕ್ರಿಯೆ ನೀಡಿದ್ದು, “ವಿನಯ್ ಶಾಕ್ಯಾ ಪ್ರಸ್ತುತ ತಮ್ಮ ಇಟಾವಾ ನಿವಾಸದಲ್ಲಿ ನೆಲೆಸಿದ್ದಾರೆ. ಪೊಲೀಸ್ ಸಿಬ್ಬಂದಿ ಕೂಡ ಸ್ಥಳದಲ್ಲಿದ್ದಾರೆ” ಎಂದು ತಿಳಿಸಿದ್ದಾರೆ.

“ನಾನು ಶಾಸಕ ವಿನಯ್ ಶಾಕ್ಯಾ ಅವರೊಂದಿಗೆ ವೀಡಿಯೊ ಕರೆಯಲ್ಲಿ ಮಾತನಾಡಿದ್ದೇನೆ. ವಿನಯ್‌ ಅವರು ಪ್ರಸ್ತುತ ಅವರ ಇಟಾವಾ ನಿವಾಸದಲ್ಲಿ ಉಳಿದುಕೊಂಡಿದ್ದಾರೆ ಎಂದು ತಿಳಿಯಿತು. ಪೊಲೀಸ್ ಭದ್ರತಾ ಸಿಬ್ಬಂದಿ ಕೂಡ ಸ್ಥಳದಲ್ಲಿದ್ದಾರೆ. ಶಾಸಕ ವಿನಯ್ ಶಾಕ್ಯಾ ಅವರ ಪುತ್ರಿ ರಿಯಾ ಶಕ್ಯಾ ಅವರ ವೈರಲ್ ವೀಡಿಯೊ ಆಧಾರರಹಿತವಾಗಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಒಬಿಸಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ರಾಜ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮೂವರು ಶಾಸಕರು ಪಕ್ಷವನ್ನು ತೊರೆಯುತ್ತಿರುವುದಾಗಿ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಚುನಾವಣಾ ಕಣಕ್ಕಿಳಿದಿರುವ ಬಿಜೆಪಿಗೆ ಇದು ಆಘಾತ ನೀಡಿದೆ. ತಿಂಡವಾರಿ ಶಾಸಕ ಬ್ರಜೇಶ್ ಪ್ರಜಾಪತಿ, ತಿಲ್ಹಾರ್‌ನ ರೋಷನ್ ಲಾಲ್ ವರ್ಮಾ ಮತ್ತು ಬಿಲ್ಹೌರ್‌ನ ಭಗವತಿ ಸಾಗರ್ ಅವರು ಪಕ್ಷವನ್ನು ತೊರೆಯುವುದನ್ನು ಖಚಿತಪಡಿಸಿದ ನಂತರ, ವಿನಯ್ ಶಾಕ್ಯಾ ಬಿಜೆಪಿಯನ್ನು ತೊರೆದಿದ್ದಾರೆ ಎಂಬ ವರದಿಗಳೂ ಆಗಿವೆ.

ಬಿಧುನಾ ಶಾಸಕ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ವರದಿಗಳನ್ನು ನಿರಾಕರಿಸಿದ ರಿಯಾ ಶಕ್ಯಾ, “ಪಾರ್ಶ್ವವಾಯು ಪೀಡಿತ ನನ್ನ ತಂದೆಯನ್ನು ನನ್ನ ಚಿಕ್ಕಪ್ಪ ದೇವೇಶ್ ಶಾಕ್ಯಾ ಅವರು ವೈಯಕ್ತಿಕ ರಾಜಕೀಯಕ್ಕಾಗಿ ಲಕ್ನೋಗೆ ಬಲವಂತವಾಗಿ ಕರೆದೊಯ್ದಿದ್ದಾರೆ” ಎಂದು ದೂರಿದ್ದರು.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ರಿಯಾ, “ನನ್ನ ತಂದೆಗೆ ಕೆಲವು ವರ್ಷಗಳ ಹಿಂದೆ ಪಾರ್ಶ್ವವಾಯು ಆಗಿದೆ. ಅವರಿಗೆ ನಡೆದಾಡಲೂ ಸಾಧ್ಯವಾಗುತ್ತಿಲ್ಲ ಎಂಬುದು ನಿಮಗೆಲ್ಲರಿಗೂ ತಿಳಿದಿದೆ. ನನ್ನ ತಂದೆಯ ಅನಾರೋಗ್ಯದ ಲಾಭವನ್ನು ಪಡೆದುಕೊಂಡು ವೈಯಕ್ತಿಕ ರಾಜಕೀಯ ಮಾಡಿಕೊಳ್ಳಲು ನನ್ನ ಚಿಕ್ಕಪ್ಪ ದೇವೇಶ್ ಶಾಕ್ಯಾ ಆರಂಭಿಸಿದ್ದಾರೆ” ಎಂದು ಹೇಳಿದ್ದರು.

“ಇಂದು, ಅವರು (ದೇವೇಶ್‌‌ ಶಾಕ್ಯಾ) ಎಲ್ಲಾ ಮಿತಿಗಳನ್ನು ದಾಟಿದ್ದು ನಮ್ಮ ಮನೆಯಿಂದ ನನ್ನ ತಂದೆಯನ್ನು ಬಲವಂತವಾಗಿ ಕರೆದೊಯ್ದು ಎಸ್ಪಿಗೆ ಸೇರಿಸಲು ಲಕ್ನೋಗೆ ಹೋಗಿದ್ದಾರೆ” ಎಂದು ವಿಡಿಯೊ ಮೂಲಕ ತಿಳಿಸಿದ್ದರು.

“ನಾವು ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದೇವೆ. ಬಿಜೆಪಿಯೊಂದಿಗೇ ಯಾವಾಗಲೂ ದೃಢವಾಗಿ ನಿಲ್ಲುತ್ತೇವೆ” ಎಂದು ಹೇಳುವ ಮೂಲಕ ರಿಯಾ ತನ್ನ ತಂದೆ ಇರುವ ಸ್ಥಳವನ್ನು ಕಂಡುಹಿಡಿಯಲು ಸಹಾಯ ಮಾಡಬೇಕೆಂದು ರಾಜ್ಯ ಸರ್ಕಾರವನ್ನು ವಿನಂತಿಸಿದ್ದರು. ಆದರೆ ಪೊಲೀಸರು ರಿಯಾ ಆರೋಪಗಳನ್ನು ಅಲ್ಲಗಳೆದಿದ್ದಾರೆ.

ಏಳು ಹಂತಗಳಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಫೆ.10ರಂದು ಆರಂಭವಾಗಲಿದೆ. ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.


ಇದನ್ನೂ ಓದಿರಿ: ಯುಪಿ ಬಿಜೆಪಿಗೆ ಬಿಗ್‌ ಶಾಕ್‌: ಸಚಿವರ ನಂತರ ಮತ್ತೆ ಮೂವರು ಶಾಸಕರ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....