Homeಮುಖಪುಟಬಿಜೆಪಿ ಶಾಸಕನ ಪುತ್ರಿಯ ಆರೋಪ ಅಲ್ಲಗಳೆದ ಯುಪಿ ಪೊಲೀಸರು

ಬಿಜೆಪಿ ಶಾಸಕನ ಪುತ್ರಿಯ ಆರೋಪ ಅಲ್ಲಗಳೆದ ಯುಪಿ ಪೊಲೀಸರು

- Advertisement -
- Advertisement -

ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಬಿದುನಾ ವಿನಯ್ ಶಾಕ್ಯಾ ಅವರ ಪುತ್ರಿ ರಿಯಾ ಶಕ್ಯಾ ಅವರು, “ನಮ್ಮ ತಂದೆಯನ್ನು ಬಲವಂತವಾಗಿ ಲಕ್ನೋಗೆ ಕರೆದೊಯ್ದಿದ್ದಾರೆ” ಎಂದು ಆರೋಪಿಸಿದ್ದಾರೆ. ಆದರೆ ಇದು ನಿರಾಧಾರ ಎಂದು ಉತ್ತರ ಪ್ರದೇಶ ಪೊಲೀಸರು ಮಂಗಳವಾರ ಹೇಳಿದ್ದಾರೆ.

ರಿಯಾ ಅವರ ವೀಡಿಯೊ ವೈರಲ್ ಆಗಿದೆ. ಆ ಬಳಿಕ , ಔರೈಯಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಭಿಷೇಕ್ ವರ್ಮಾ ಪ್ರತಿಕ್ರಿಯೆ ನೀಡಿದ್ದು, “ವಿನಯ್ ಶಾಕ್ಯಾ ಪ್ರಸ್ತುತ ತಮ್ಮ ಇಟಾವಾ ನಿವಾಸದಲ್ಲಿ ನೆಲೆಸಿದ್ದಾರೆ. ಪೊಲೀಸ್ ಸಿಬ್ಬಂದಿ ಕೂಡ ಸ್ಥಳದಲ್ಲಿದ್ದಾರೆ” ಎಂದು ತಿಳಿಸಿದ್ದಾರೆ.

“ನಾನು ಶಾಸಕ ವಿನಯ್ ಶಾಕ್ಯಾ ಅವರೊಂದಿಗೆ ವೀಡಿಯೊ ಕರೆಯಲ್ಲಿ ಮಾತನಾಡಿದ್ದೇನೆ. ವಿನಯ್‌ ಅವರು ಪ್ರಸ್ತುತ ಅವರ ಇಟಾವಾ ನಿವಾಸದಲ್ಲಿ ಉಳಿದುಕೊಂಡಿದ್ದಾರೆ ಎಂದು ತಿಳಿಯಿತು. ಪೊಲೀಸ್ ಭದ್ರತಾ ಸಿಬ್ಬಂದಿ ಕೂಡ ಸ್ಥಳದಲ್ಲಿದ್ದಾರೆ. ಶಾಸಕ ವಿನಯ್ ಶಾಕ್ಯಾ ಅವರ ಪುತ್ರಿ ರಿಯಾ ಶಕ್ಯಾ ಅವರ ವೈರಲ್ ವೀಡಿಯೊ ಆಧಾರರಹಿತವಾಗಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಒಬಿಸಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ರಾಜ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮೂವರು ಶಾಸಕರು ಪಕ್ಷವನ್ನು ತೊರೆಯುತ್ತಿರುವುದಾಗಿ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಚುನಾವಣಾ ಕಣಕ್ಕಿಳಿದಿರುವ ಬಿಜೆಪಿಗೆ ಇದು ಆಘಾತ ನೀಡಿದೆ. ತಿಂಡವಾರಿ ಶಾಸಕ ಬ್ರಜೇಶ್ ಪ್ರಜಾಪತಿ, ತಿಲ್ಹಾರ್‌ನ ರೋಷನ್ ಲಾಲ್ ವರ್ಮಾ ಮತ್ತು ಬಿಲ್ಹೌರ್‌ನ ಭಗವತಿ ಸಾಗರ್ ಅವರು ಪಕ್ಷವನ್ನು ತೊರೆಯುವುದನ್ನು ಖಚಿತಪಡಿಸಿದ ನಂತರ, ವಿನಯ್ ಶಾಕ್ಯಾ ಬಿಜೆಪಿಯನ್ನು ತೊರೆದಿದ್ದಾರೆ ಎಂಬ ವರದಿಗಳೂ ಆಗಿವೆ.

ಬಿಧುನಾ ಶಾಸಕ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ವರದಿಗಳನ್ನು ನಿರಾಕರಿಸಿದ ರಿಯಾ ಶಕ್ಯಾ, “ಪಾರ್ಶ್ವವಾಯು ಪೀಡಿತ ನನ್ನ ತಂದೆಯನ್ನು ನನ್ನ ಚಿಕ್ಕಪ್ಪ ದೇವೇಶ್ ಶಾಕ್ಯಾ ಅವರು ವೈಯಕ್ತಿಕ ರಾಜಕೀಯಕ್ಕಾಗಿ ಲಕ್ನೋಗೆ ಬಲವಂತವಾಗಿ ಕರೆದೊಯ್ದಿದ್ದಾರೆ” ಎಂದು ದೂರಿದ್ದರು.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ರಿಯಾ, “ನನ್ನ ತಂದೆಗೆ ಕೆಲವು ವರ್ಷಗಳ ಹಿಂದೆ ಪಾರ್ಶ್ವವಾಯು ಆಗಿದೆ. ಅವರಿಗೆ ನಡೆದಾಡಲೂ ಸಾಧ್ಯವಾಗುತ್ತಿಲ್ಲ ಎಂಬುದು ನಿಮಗೆಲ್ಲರಿಗೂ ತಿಳಿದಿದೆ. ನನ್ನ ತಂದೆಯ ಅನಾರೋಗ್ಯದ ಲಾಭವನ್ನು ಪಡೆದುಕೊಂಡು ವೈಯಕ್ತಿಕ ರಾಜಕೀಯ ಮಾಡಿಕೊಳ್ಳಲು ನನ್ನ ಚಿಕ್ಕಪ್ಪ ದೇವೇಶ್ ಶಾಕ್ಯಾ ಆರಂಭಿಸಿದ್ದಾರೆ” ಎಂದು ಹೇಳಿದ್ದರು.

“ಇಂದು, ಅವರು (ದೇವೇಶ್‌‌ ಶಾಕ್ಯಾ) ಎಲ್ಲಾ ಮಿತಿಗಳನ್ನು ದಾಟಿದ್ದು ನಮ್ಮ ಮನೆಯಿಂದ ನನ್ನ ತಂದೆಯನ್ನು ಬಲವಂತವಾಗಿ ಕರೆದೊಯ್ದು ಎಸ್ಪಿಗೆ ಸೇರಿಸಲು ಲಕ್ನೋಗೆ ಹೋಗಿದ್ದಾರೆ” ಎಂದು ವಿಡಿಯೊ ಮೂಲಕ ತಿಳಿಸಿದ್ದರು.

“ನಾವು ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದೇವೆ. ಬಿಜೆಪಿಯೊಂದಿಗೇ ಯಾವಾಗಲೂ ದೃಢವಾಗಿ ನಿಲ್ಲುತ್ತೇವೆ” ಎಂದು ಹೇಳುವ ಮೂಲಕ ರಿಯಾ ತನ್ನ ತಂದೆ ಇರುವ ಸ್ಥಳವನ್ನು ಕಂಡುಹಿಡಿಯಲು ಸಹಾಯ ಮಾಡಬೇಕೆಂದು ರಾಜ್ಯ ಸರ್ಕಾರವನ್ನು ವಿನಂತಿಸಿದ್ದರು. ಆದರೆ ಪೊಲೀಸರು ರಿಯಾ ಆರೋಪಗಳನ್ನು ಅಲ್ಲಗಳೆದಿದ್ದಾರೆ.

ಏಳು ಹಂತಗಳಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಫೆ.10ರಂದು ಆರಂಭವಾಗಲಿದೆ. ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.


ಇದನ್ನೂ ಓದಿರಿ: ಯುಪಿ ಬಿಜೆಪಿಗೆ ಬಿಗ್‌ ಶಾಕ್‌: ಸಚಿವರ ನಂತರ ಮತ್ತೆ ಮೂವರು ಶಾಸಕರ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...