Homeಮುಖಪುಟಯುಪಿ ಪೊಲೀಸರ ವರ್ತನೆ 'ಪ್ರಜಾಪ್ರಭುತ್ವದ ಮೇಲಿನ ಸಾಮೂಹಿಕ ಅತ್ಯಾಚಾರ': ಸಂಜಯ್ ರಾವತ್

ಯುಪಿ ಪೊಲೀಸರ ವರ್ತನೆ ‘ಪ್ರಜಾಪ್ರಭುತ್ವದ ಮೇಲಿನ ಸಾಮೂಹಿಕ ಅತ್ಯಾಚಾರ’: ಸಂಜಯ್ ರಾವತ್

"ಕಂಗನಾ ರಣಾವತ್ ಅವರ ಕಛೇರಿಯನ್ನು ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಭಾಗಶಃ ಉರುಳಿಸಿದ್ದಕ್ಕೆ, ಸ್ವರ್ಗವೇ ಕುಸಿದುಬಿದ್ದಂತೆ ವರ್ತಿಸುತ್ತಿದ್ದವರು ಈಗ ಎಲ್ಲಿ ಹೊಗಿದ್ದಾರೆ" ಎಂದು ಪರೋಕ್ಷವಾಗಿ ಬಿಜೆಪಿಗರ ಕಾಲೆಳೆದಿದ್ದಾರೆ.

- Advertisement -
- Advertisement -

ಹತ್ರಾಸ್ ಪ್ರಕರಣದಲ್ಲಿನ ಕುಟುಂಬಸ್ಥರನ್ನು ಭೇಟಿಯಾಗಲು ಹೋಗುತ್ತಿದ್ದ ರಾಹುಲ್ ಗಾಂಧಿಯವರೊಂದಿಗೆ ಅನುಚಿತವಾಗಿ ನಡೆದುಕೊಂಡ ಪೊಲೀಸರ ವರ್ತನೆಯನ್ನು, “ಪ್ರಜಾಪ್ರಪ್ರಭುತ್ವದ ಮೇಲಿನ ಸಾಮೂಹಿಕ ಅತ್ಯಾಚಾರ” ಎಂದು ಶಿವಸೇನೆಯ ಮುಖಂಡ ಸಂಜಯ್ ರಾವತ್ ಬಣ್ಣಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ರಾವತ್, “ರಾಹುಲ್ ಗಾಂಧಿ ಪ್ರಮುಖ ರಾಜಕೀಯ ಪಕ್ಷದ ನಾಯರಾಗಿದ್ದು, ಅಂತಹವರನ್ನು ಪೊಲೀಸರು ನಡೆಸಿಕೊಂಡ ರೀತಿಯನ್ನು ಯಾರೂ ಬೆಂಬಲಿಸುವುದಿಲ್ಲ. ನಮಗೆ ಕಾಂಗ್ರೆಸ್ ಪಕ್ಷದೊಂದಿಗೆ ಭಿನ್ನಾಭಿಪ್ರಾಯಗಳು ಇರಬಹುದು. ಆದರೆ ರಾಹುಲ್ ಗಾಂಧಿಯ ಕೊರಳುಪಟ್ಟಿಯನ್ನು ಹಿಡಿದು ನೆಲಕ್ಕೆ ತಳ್ಳಿದ ರೀತಿ ಅತ್ಯಂತ ಖಂಡನೀಯ” ಎಂದು ಹೇಳಿದ್ದಾರೆ.

“ಇದು ಪ್ರಜಾಪ್ರಭುತ್ವದ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ. ಈ ಘಟನೆಯನ್ನು ತನಿಖೆ ಮಾಡಬೇಕು. ಯಾರೂ ಪ್ರಶ್ನೆಗಳನ್ನು ಕೇಳಬಾರದು ಎಂದು, ಪ್ರತಿಪಕ್ಷದ ನಾಯಕರನ್ನು ನಡೆಸಿಕೊಳ್ಳುವ ರೀತಿ ಇದೇ ಏನು? ವಾಡಿಕೆಯಂತೆ ನೀವು ಅವರನ್ನು ಅಪಹಾಸ್ಯ ಮಾಡಬಹುದು. ಆದರೆ ಪೊಲೀಸರು ಅವರೊಂದಿಗೆ ವರ್ತಿಸಿದ ರೀತಿಯನ್ನು ಯಾರೂ ಬೆಂಬಲಿಸುವುದಿಲ್ಲ” ಎಂದೂ ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಯುಪಿ ಪೊಲೀಸರ ಅಟ್ಟಹಾಸ: ಮಹಿಳಾ ಸಂಸದೆಯನ್ನು ದೂಡಿ, ಡೆರೆಕ್ ಒಬ್ರಿಯೆನ್‌ರನ್ನು ನೆಲಕ್ಕೆ ಬೀಳಿಸಿದ ಪುರುಷ…

“ಕಂಗನಾ ರಣಾವತ್ ಅವರ ಕಛೇರಿಯನ್ನು ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಭಾಗಶಃ ಉರುಳಿಸಿದ್ದಕ್ಕೆ, ಸ್ವರ್ಗವೇ ಕುಸಿದುಬಿದ್ದಂತೆ ವರ್ತಿಸುತ್ತಿದ್ದವರು ಈಗ ಎಲ್ಲಿ ಹೊಗಿದ್ದಾರೆ” ಎಂದು ಪರೋಕ್ಷವಾಗಿ ಬಿಜೆಪಿಗರ ಕಾಲೆಳೆದಿದ್ದಾರೆ.

“ಯುವತಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಯುಪಿ ಪೊಲೀಸರು ಹೇಳಿದ್ದಾರೆ. ಹಾಗಾದರೆ ಯುವತಿ ಸಾಯುವ ಮುನ್ನ ಸುಳ್ಳು ಹೇಳಿದ್ದಾಳೆಯೇ?” ಎಂದು ಪ್ರಶ್ನಿಸಿದರು.

ಹತ್ರಾಸ್ ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿಯಬೇಕು ಎಂದು ಹೇಳಿದರು. ಇದರ ನಡುವೆ, ಶಿವಸೇನೆ ಕಾರ್ಯಕರ್ತರು ದಕ್ಷಿಣ ಮುಂಬೈನ ಚರ್ಚ್‌ಗೇಟ್ ರೈಲ್ವೆ ನಿಲ್ದಾಣದ ಹೊರಗೆ ಹತ್ರಾಸ್ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು ಎಂದು ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿದೆ.

ಇದನ್ನೂ ಓದಿ: ಹತ್ರಾಸ್ ಗ್ಯಾಂಗ್ ರೇಪ್: ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ವಕೀಲರ ಒತ್ತಾಯ

ಹತ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮೃತಪಟ್ಟಿದ್ದ ದಲಿತ ಯುವತಿ ಕುಟುಂಬದ ಸದಸ್ಯರನ್ನು ಭೇಟಿ ಮಾಡಲು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಹಲವು ಕಾಂಗ್ರೆಸ್ ಮುಖಂಡರು ಹೊರಟಿದ್ದರು. ಹತ್ರಾಸ್‌ಗೆ ಭೇಟಿ ನೀಡಲು ಹೊರಟ ಸುದ್ದಿ ಬರುತ್ತಿದ್ದಂತೆ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು.

ನಿಷೇದಾಜ್ಞೆ ನಡುವೆಯೂ ಹೊರಟ ಕಾಂಗ್ರೆಸ್ ನಾಯಕರ ಕಾರುಗಳನ್ನು ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ತಡೆಯಲಾಗಿತ್ತು. ಆದರೆ ತಾವು ಹತ್ರಾಸ್‌ಗೆ ಭೇಟಿ ನೀಡಿಯೇ ನೀಡುತ್ತೇವೆ ಎಂದು ಪಾದಯಾತ್ರೆ ಹೊರಟ್ಟಿದ್ದ ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದರು. ಆ ವೇಳೆ ನೂಕುನುಗ್ಗಲು, ತಳ್ಳಾಟ ಉಂಟಾಗಿ ರಾಹುಲ್ ಗಾಂಧಿ ನೆಲಕ್ಕೆ ಬಿದ್ದಿದ್ದರು. ದೆಹಲಿಯ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಬಟ್ಟೆ ಹರಿದುಹೋಗಿತ್ತು. ಈ ಘಟನೆಗೆ ರಾಷ್ಟ್ರಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.


ಇದನ್ನೂ ಓದಿ: ಮೋದಿಯವರ ಮೌನ – ನಮ್ಮ ಹೆಣ್ಣುಮಕ್ಕಳಿಗೆ ಅಪಾಯ: ಚಂದ್ರಶೇಖರ್ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...