Homeಮುಖಪುಟಯುಪಿ ಪೊಲೀಸರ ವರ್ತನೆ 'ಪ್ರಜಾಪ್ರಭುತ್ವದ ಮೇಲಿನ ಸಾಮೂಹಿಕ ಅತ್ಯಾಚಾರ': ಸಂಜಯ್ ರಾವತ್

ಯುಪಿ ಪೊಲೀಸರ ವರ್ತನೆ ‘ಪ್ರಜಾಪ್ರಭುತ್ವದ ಮೇಲಿನ ಸಾಮೂಹಿಕ ಅತ್ಯಾಚಾರ’: ಸಂಜಯ್ ರಾವತ್

"ಕಂಗನಾ ರಣಾವತ್ ಅವರ ಕಛೇರಿಯನ್ನು ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಭಾಗಶಃ ಉರುಳಿಸಿದ್ದಕ್ಕೆ, ಸ್ವರ್ಗವೇ ಕುಸಿದುಬಿದ್ದಂತೆ ವರ್ತಿಸುತ್ತಿದ್ದವರು ಈಗ ಎಲ್ಲಿ ಹೊಗಿದ್ದಾರೆ" ಎಂದು ಪರೋಕ್ಷವಾಗಿ ಬಿಜೆಪಿಗರ ಕಾಲೆಳೆದಿದ್ದಾರೆ.

- Advertisement -
- Advertisement -

ಹತ್ರಾಸ್ ಪ್ರಕರಣದಲ್ಲಿನ ಕುಟುಂಬಸ್ಥರನ್ನು ಭೇಟಿಯಾಗಲು ಹೋಗುತ್ತಿದ್ದ ರಾಹುಲ್ ಗಾಂಧಿಯವರೊಂದಿಗೆ ಅನುಚಿತವಾಗಿ ನಡೆದುಕೊಂಡ ಪೊಲೀಸರ ವರ್ತನೆಯನ್ನು, “ಪ್ರಜಾಪ್ರಪ್ರಭುತ್ವದ ಮೇಲಿನ ಸಾಮೂಹಿಕ ಅತ್ಯಾಚಾರ” ಎಂದು ಶಿವಸೇನೆಯ ಮುಖಂಡ ಸಂಜಯ್ ರಾವತ್ ಬಣ್ಣಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ರಾವತ್, “ರಾಹುಲ್ ಗಾಂಧಿ ಪ್ರಮುಖ ರಾಜಕೀಯ ಪಕ್ಷದ ನಾಯರಾಗಿದ್ದು, ಅಂತಹವರನ್ನು ಪೊಲೀಸರು ನಡೆಸಿಕೊಂಡ ರೀತಿಯನ್ನು ಯಾರೂ ಬೆಂಬಲಿಸುವುದಿಲ್ಲ. ನಮಗೆ ಕಾಂಗ್ರೆಸ್ ಪಕ್ಷದೊಂದಿಗೆ ಭಿನ್ನಾಭಿಪ್ರಾಯಗಳು ಇರಬಹುದು. ಆದರೆ ರಾಹುಲ್ ಗಾಂಧಿಯ ಕೊರಳುಪಟ್ಟಿಯನ್ನು ಹಿಡಿದು ನೆಲಕ್ಕೆ ತಳ್ಳಿದ ರೀತಿ ಅತ್ಯಂತ ಖಂಡನೀಯ” ಎಂದು ಹೇಳಿದ್ದಾರೆ.

“ಇದು ಪ್ರಜಾಪ್ರಭುತ್ವದ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ. ಈ ಘಟನೆಯನ್ನು ತನಿಖೆ ಮಾಡಬೇಕು. ಯಾರೂ ಪ್ರಶ್ನೆಗಳನ್ನು ಕೇಳಬಾರದು ಎಂದು, ಪ್ರತಿಪಕ್ಷದ ನಾಯಕರನ್ನು ನಡೆಸಿಕೊಳ್ಳುವ ರೀತಿ ಇದೇ ಏನು? ವಾಡಿಕೆಯಂತೆ ನೀವು ಅವರನ್ನು ಅಪಹಾಸ್ಯ ಮಾಡಬಹುದು. ಆದರೆ ಪೊಲೀಸರು ಅವರೊಂದಿಗೆ ವರ್ತಿಸಿದ ರೀತಿಯನ್ನು ಯಾರೂ ಬೆಂಬಲಿಸುವುದಿಲ್ಲ” ಎಂದೂ ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಯುಪಿ ಪೊಲೀಸರ ಅಟ್ಟಹಾಸ: ಮಹಿಳಾ ಸಂಸದೆಯನ್ನು ದೂಡಿ, ಡೆರೆಕ್ ಒಬ್ರಿಯೆನ್‌ರನ್ನು ನೆಲಕ್ಕೆ ಬೀಳಿಸಿದ ಪುರುಷ…

“ಕಂಗನಾ ರಣಾವತ್ ಅವರ ಕಛೇರಿಯನ್ನು ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಭಾಗಶಃ ಉರುಳಿಸಿದ್ದಕ್ಕೆ, ಸ್ವರ್ಗವೇ ಕುಸಿದುಬಿದ್ದಂತೆ ವರ್ತಿಸುತ್ತಿದ್ದವರು ಈಗ ಎಲ್ಲಿ ಹೊಗಿದ್ದಾರೆ” ಎಂದು ಪರೋಕ್ಷವಾಗಿ ಬಿಜೆಪಿಗರ ಕಾಲೆಳೆದಿದ್ದಾರೆ.

“ಯುವತಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಯುಪಿ ಪೊಲೀಸರು ಹೇಳಿದ್ದಾರೆ. ಹಾಗಾದರೆ ಯುವತಿ ಸಾಯುವ ಮುನ್ನ ಸುಳ್ಳು ಹೇಳಿದ್ದಾಳೆಯೇ?” ಎಂದು ಪ್ರಶ್ನಿಸಿದರು.

ಹತ್ರಾಸ್ ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿಯಬೇಕು ಎಂದು ಹೇಳಿದರು. ಇದರ ನಡುವೆ, ಶಿವಸೇನೆ ಕಾರ್ಯಕರ್ತರು ದಕ್ಷಿಣ ಮುಂಬೈನ ಚರ್ಚ್‌ಗೇಟ್ ರೈಲ್ವೆ ನಿಲ್ದಾಣದ ಹೊರಗೆ ಹತ್ರಾಸ್ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು ಎಂದು ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿದೆ.

ಇದನ್ನೂ ಓದಿ: ಹತ್ರಾಸ್ ಗ್ಯಾಂಗ್ ರೇಪ್: ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ವಕೀಲರ ಒತ್ತಾಯ

ಹತ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮೃತಪಟ್ಟಿದ್ದ ದಲಿತ ಯುವತಿ ಕುಟುಂಬದ ಸದಸ್ಯರನ್ನು ಭೇಟಿ ಮಾಡಲು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಹಲವು ಕಾಂಗ್ರೆಸ್ ಮುಖಂಡರು ಹೊರಟಿದ್ದರು. ಹತ್ರಾಸ್‌ಗೆ ಭೇಟಿ ನೀಡಲು ಹೊರಟ ಸುದ್ದಿ ಬರುತ್ತಿದ್ದಂತೆ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು.

ನಿಷೇದಾಜ್ಞೆ ನಡುವೆಯೂ ಹೊರಟ ಕಾಂಗ್ರೆಸ್ ನಾಯಕರ ಕಾರುಗಳನ್ನು ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ತಡೆಯಲಾಗಿತ್ತು. ಆದರೆ ತಾವು ಹತ್ರಾಸ್‌ಗೆ ಭೇಟಿ ನೀಡಿಯೇ ನೀಡುತ್ತೇವೆ ಎಂದು ಪಾದಯಾತ್ರೆ ಹೊರಟ್ಟಿದ್ದ ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದರು. ಆ ವೇಳೆ ನೂಕುನುಗ್ಗಲು, ತಳ್ಳಾಟ ಉಂಟಾಗಿ ರಾಹುಲ್ ಗಾಂಧಿ ನೆಲಕ್ಕೆ ಬಿದ್ದಿದ್ದರು. ದೆಹಲಿಯ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಬಟ್ಟೆ ಹರಿದುಹೋಗಿತ್ತು. ಈ ಘಟನೆಗೆ ರಾಷ್ಟ್ರಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.


ಇದನ್ನೂ ಓದಿ: ಮೋದಿಯವರ ಮೌನ – ನಮ್ಮ ಹೆಣ್ಣುಮಕ್ಕಳಿಗೆ ಅಪಾಯ: ಚಂದ್ರಶೇಖರ್ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...