Homeಮುಖಪುಟಯುಪಿ ಪೊಲೀಸರ ವರ್ತನೆ 'ಪ್ರಜಾಪ್ರಭುತ್ವದ ಮೇಲಿನ ಸಾಮೂಹಿಕ ಅತ್ಯಾಚಾರ': ಸಂಜಯ್ ರಾವತ್

ಯುಪಿ ಪೊಲೀಸರ ವರ್ತನೆ ‘ಪ್ರಜಾಪ್ರಭುತ್ವದ ಮೇಲಿನ ಸಾಮೂಹಿಕ ಅತ್ಯಾಚಾರ’: ಸಂಜಯ್ ರಾವತ್

"ಕಂಗನಾ ರಣಾವತ್ ಅವರ ಕಛೇರಿಯನ್ನು ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಭಾಗಶಃ ಉರುಳಿಸಿದ್ದಕ್ಕೆ, ಸ್ವರ್ಗವೇ ಕುಸಿದುಬಿದ್ದಂತೆ ವರ್ತಿಸುತ್ತಿದ್ದವರು ಈಗ ಎಲ್ಲಿ ಹೊಗಿದ್ದಾರೆ" ಎಂದು ಪರೋಕ್ಷವಾಗಿ ಬಿಜೆಪಿಗರ ಕಾಲೆಳೆದಿದ್ದಾರೆ.

- Advertisement -
- Advertisement -

ಹತ್ರಾಸ್ ಪ್ರಕರಣದಲ್ಲಿನ ಕುಟುಂಬಸ್ಥರನ್ನು ಭೇಟಿಯಾಗಲು ಹೋಗುತ್ತಿದ್ದ ರಾಹುಲ್ ಗಾಂಧಿಯವರೊಂದಿಗೆ ಅನುಚಿತವಾಗಿ ನಡೆದುಕೊಂಡ ಪೊಲೀಸರ ವರ್ತನೆಯನ್ನು, “ಪ್ರಜಾಪ್ರಪ್ರಭುತ್ವದ ಮೇಲಿನ ಸಾಮೂಹಿಕ ಅತ್ಯಾಚಾರ” ಎಂದು ಶಿವಸೇನೆಯ ಮುಖಂಡ ಸಂಜಯ್ ರಾವತ್ ಬಣ್ಣಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ರಾವತ್, “ರಾಹುಲ್ ಗಾಂಧಿ ಪ್ರಮುಖ ರಾಜಕೀಯ ಪಕ್ಷದ ನಾಯರಾಗಿದ್ದು, ಅಂತಹವರನ್ನು ಪೊಲೀಸರು ನಡೆಸಿಕೊಂಡ ರೀತಿಯನ್ನು ಯಾರೂ ಬೆಂಬಲಿಸುವುದಿಲ್ಲ. ನಮಗೆ ಕಾಂಗ್ರೆಸ್ ಪಕ್ಷದೊಂದಿಗೆ ಭಿನ್ನಾಭಿಪ್ರಾಯಗಳು ಇರಬಹುದು. ಆದರೆ ರಾಹುಲ್ ಗಾಂಧಿಯ ಕೊರಳುಪಟ್ಟಿಯನ್ನು ಹಿಡಿದು ನೆಲಕ್ಕೆ ತಳ್ಳಿದ ರೀತಿ ಅತ್ಯಂತ ಖಂಡನೀಯ” ಎಂದು ಹೇಳಿದ್ದಾರೆ.

“ಇದು ಪ್ರಜಾಪ್ರಭುತ್ವದ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ. ಈ ಘಟನೆಯನ್ನು ತನಿಖೆ ಮಾಡಬೇಕು. ಯಾರೂ ಪ್ರಶ್ನೆಗಳನ್ನು ಕೇಳಬಾರದು ಎಂದು, ಪ್ರತಿಪಕ್ಷದ ನಾಯಕರನ್ನು ನಡೆಸಿಕೊಳ್ಳುವ ರೀತಿ ಇದೇ ಏನು? ವಾಡಿಕೆಯಂತೆ ನೀವು ಅವರನ್ನು ಅಪಹಾಸ್ಯ ಮಾಡಬಹುದು. ಆದರೆ ಪೊಲೀಸರು ಅವರೊಂದಿಗೆ ವರ್ತಿಸಿದ ರೀತಿಯನ್ನು ಯಾರೂ ಬೆಂಬಲಿಸುವುದಿಲ್ಲ” ಎಂದೂ ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಯುಪಿ ಪೊಲೀಸರ ಅಟ್ಟಹಾಸ: ಮಹಿಳಾ ಸಂಸದೆಯನ್ನು ದೂಡಿ, ಡೆರೆಕ್ ಒಬ್ರಿಯೆನ್‌ರನ್ನು ನೆಲಕ್ಕೆ ಬೀಳಿಸಿದ ಪುರುಷ…

“ಕಂಗನಾ ರಣಾವತ್ ಅವರ ಕಛೇರಿಯನ್ನು ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಭಾಗಶಃ ಉರುಳಿಸಿದ್ದಕ್ಕೆ, ಸ್ವರ್ಗವೇ ಕುಸಿದುಬಿದ್ದಂತೆ ವರ್ತಿಸುತ್ತಿದ್ದವರು ಈಗ ಎಲ್ಲಿ ಹೊಗಿದ್ದಾರೆ” ಎಂದು ಪರೋಕ್ಷವಾಗಿ ಬಿಜೆಪಿಗರ ಕಾಲೆಳೆದಿದ್ದಾರೆ.

“ಯುವತಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಯುಪಿ ಪೊಲೀಸರು ಹೇಳಿದ್ದಾರೆ. ಹಾಗಾದರೆ ಯುವತಿ ಸಾಯುವ ಮುನ್ನ ಸುಳ್ಳು ಹೇಳಿದ್ದಾಳೆಯೇ?” ಎಂದು ಪ್ರಶ್ನಿಸಿದರು.

ಹತ್ರಾಸ್ ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿಯಬೇಕು ಎಂದು ಹೇಳಿದರು. ಇದರ ನಡುವೆ, ಶಿವಸೇನೆ ಕಾರ್ಯಕರ್ತರು ದಕ್ಷಿಣ ಮುಂಬೈನ ಚರ್ಚ್‌ಗೇಟ್ ರೈಲ್ವೆ ನಿಲ್ದಾಣದ ಹೊರಗೆ ಹತ್ರಾಸ್ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು ಎಂದು ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿದೆ.

ಇದನ್ನೂ ಓದಿ: ಹತ್ರಾಸ್ ಗ್ಯಾಂಗ್ ರೇಪ್: ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ವಕೀಲರ ಒತ್ತಾಯ

ಹತ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮೃತಪಟ್ಟಿದ್ದ ದಲಿತ ಯುವತಿ ಕುಟುಂಬದ ಸದಸ್ಯರನ್ನು ಭೇಟಿ ಮಾಡಲು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಹಲವು ಕಾಂಗ್ರೆಸ್ ಮುಖಂಡರು ಹೊರಟಿದ್ದರು. ಹತ್ರಾಸ್‌ಗೆ ಭೇಟಿ ನೀಡಲು ಹೊರಟ ಸುದ್ದಿ ಬರುತ್ತಿದ್ದಂತೆ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು.

ನಿಷೇದಾಜ್ಞೆ ನಡುವೆಯೂ ಹೊರಟ ಕಾಂಗ್ರೆಸ್ ನಾಯಕರ ಕಾರುಗಳನ್ನು ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ತಡೆಯಲಾಗಿತ್ತು. ಆದರೆ ತಾವು ಹತ್ರಾಸ್‌ಗೆ ಭೇಟಿ ನೀಡಿಯೇ ನೀಡುತ್ತೇವೆ ಎಂದು ಪಾದಯಾತ್ರೆ ಹೊರಟ್ಟಿದ್ದ ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದರು. ಆ ವೇಳೆ ನೂಕುನುಗ್ಗಲು, ತಳ್ಳಾಟ ಉಂಟಾಗಿ ರಾಹುಲ್ ಗಾಂಧಿ ನೆಲಕ್ಕೆ ಬಿದ್ದಿದ್ದರು. ದೆಹಲಿಯ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಬಟ್ಟೆ ಹರಿದುಹೋಗಿತ್ತು. ಈ ಘಟನೆಗೆ ರಾಷ್ಟ್ರಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.


ಇದನ್ನೂ ಓದಿ: ಮೋದಿಯವರ ಮೌನ – ನಮ್ಮ ಹೆಣ್ಣುಮಕ್ಕಳಿಗೆ ಅಪಾಯ: ಚಂದ್ರಶೇಖರ್ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...