Homeಮುಖಪುಟಯುಪಿ: ‘ಲವ್‌ ಜಿಹಾದ್‌’ ಸುಗ್ರೀವಾಜ್ಞೆ ಅಡಿ ದಾಖಲಾದ ಮೊದಲ ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಯುಪಿ: ‘ಲವ್‌ ಜಿಹಾದ್‌’ ಸುಗ್ರೀವಾಜ್ಞೆ ಅಡಿ ದಾಖಲಾದ ಮೊದಲ ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ನ್ಯಾಯಾಲಯ

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರವು ನವೆಂಬರ್ 2020ರಲ್ಲಿ ಅಂಗೀಕರಿಸಲ್ಪಟ್ಟ ಕಾನೂನುಬಾಹಿರ ಧರ್ಮ ಪರಿವರ್ತನೆಯ ನಿಷೇಧದ ಸುಗ್ರೀವಾಜ್ಞೆಯ ಅಡಿಯಲ್ಲಿ ದಾಖಲಾಗಿದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್‌ 19ರಂದು ಕೋರ್ಟ್ ಶಿಕ್ಷೆ ವಿಧಿಸಲಾಗಿದೆ. ಅಮ್ರೋಹಾ ಜಿಲ್ಲಾ ನ್ಯಾಯಾಲಯವು 25 ವರ್ಷದ ಮೊಹಮ್ಮದ್ ಅಫ್ಜಲ್‌ಗೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ್ದು, 40,000 ರೂ. ದಂಡವನ್ನು ಪಾವತಿಸುವಂತೆ ಸೂಚಿಸಿದೆ.

ಅಫ್ಜಲ್ ತನ್ನ ಧರ್ಮದ ಬಗ್ಗೆ ಸುಳ್ಳು ಹೇಳಿ 16 ವರ್ಷದ ಹಿಂದೂ ಹುಡುಗಿಯನ್ನು ದೆಹಲಿಗೆ ಕರೆದುಕೊಂಡು ಹೋಗಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ ಆರೋಪದ ಮೇಲೆ ಕಾನೂನು ಕ್ರಮ ಜರುಗಿಸಲಾಯಿತು. ಸಂಭಾಲ್ ಜಿಲ್ಲೆಯ ಹಯಾತ್‌ನಗರ್ ಗ್ರಾಮದಲ್ಲಿ ವಾಸಿಸುವ 25 ವರ್ಷದ ಅಫ್ಜಲ್‌, ತಮ್ಮ ಜೀವನೋಪಾಯಕ್ಕಾಗಿ ಸಸಿಗಳನ್ನು ಮಾರಾಟ ಮಾಡುತ್ತಿದ್ದನು. ಮರಗೆಲಸದ ಕೆಲಸ ನಡೆಸುತ್ತಿದ್ದನು. ಈಗ ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಪಹರಣ, ಮಹಿಳೆಯ ನಮ್ರತೆಯನ್ನು ಆಕ್ರೋಶಗೊಳಿಸುವೆ ಮತ್ತು ಕ್ರಿಮಿನಲ್ ಬೆದರಿಕೆ ಅಡಿಯಲ್ಲಿ ಅಮ್ರೋಹಾ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಲೈಂಗಿಕ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಿದ್ದಕ್ಕಾಗಿ ಆತನ ವಿರುದ್ಧ ಪೋಕ್ಸೋ ಅಡಿಯಲ್ಲೂ ಶಿಕ್ಷೆಗೆ ಗುರಿ ಮಾಡಲಾಗಿದೆ.

ಅಫ್ಜಲ್‌ ಪರ ವಾದ ಮಂಡಿಸಿದ ವಕೀಲ ಅಶೋಕ್ ಕುಮಾರ್, “ಶಿಕ್ಷೆಯನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ಗೆ ಹೋಗುತ್ತೇವೆ. ತಪ್ಪು ತೀರ್ಪು ಬಂದಿದೆ. ಮತಾಂತರ ಮಾಡಲು ಯತ್ನಿಸಿದ್ದಾರೆಂಬ ಆರೋಪ ಸುಳ್ಳಿನಿಂದ ಕೂಡಿದೆ. ಅಫ್ಜಲ್‌ ಅಪ್ರಾಪ್ತ ವಯಸ್ಕಳನ್ನು ಬಲವಂತವಾಗಿ ಮತಾಂತರಿಸಲು ಪ್ರಯತ್ನಿಸಿದ್ದಾನೆಂದು ಸಾಬೀತುಪಡಿಸಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ” ಎಂದಿದ್ದಾರೆ.

“ಅಫ್ಜಲ್ ಮತ್ತು ಹುಡುಗಿ ಸ್ನೇಹಿತರಾಗಿದ್ದರು. ಆಕೆಯ ತಂದೆಯೊಂದಿಗಿನ ಭಿನ್ನಾಭಿಪ್ರಾಯದಿಂದ ಅಫ್ಜಲ್‌ ವಿರುದ್ಧ ಪ್ರಕರಣ ದಾಖಲಿಸಲಾಯಿತು” ಎಂದು ದೂರಿದ್ದಾರೆ.

2020ರ ಸುಗ್ರೀವಾಜ್ಞೆಯನ್ನು ಜನಪ್ರಿಯವಾಗಿ “ಲವ್ ಜಿಹಾದ್ ಕಾನೂನು” ಎಂದು ಕರೆಯಲಾಗುತ್ತಿದೆ. “ಲವ್ ಜಿಹಾದ್” ಎಂಬುದು ಹಿಂದುತ್ವವಾದಿಗಳು ಪ್ರಸಾರ ಮಾಡಿದ ಪಿತೂರಿ ಸಿದ್ಧಾಂತವಾಗಿದ್ದು, ಮುಸ್ಲಿಂ ಪುರುಷರು ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರಿಸಲು ಮದುವೆಯಾಗುತ್ತಾರೆಂದು ಬಿಂಬಿಸಲಾಗಿದೆ.

ಇಂತಹ ಕಾನೂನನ್ನು ಜಾರಿಗೆ ತಂದ ಮೊದಲ ರಾಜ್ಯ ಉತ್ತರ ಪ್ರದೇಶ. ಬಲ, ವಂಚನೆ ಅಥವಾ ಮದುವೆಯ ಮೂಲಕ ಧಾರ್ಮಿಕ ಮತಾಂತರ ಮಾಡಿದರೆ ಅಪರಾಧ ಎಂದು ಈ ಕಾನೂನು ಪರಿಗಣಿಸುತ್ತದೆ. ಮದುವೆಯನ್ನು “ಧಾರ್ಮಿಕ ಮತಾಂತರದ ಏಕೈಕ ಉದ್ದೇಶಕ್ಕಾಗಿ” ನಡೆಸಿದರೆ ಅಥವಾ ಧಾರ್ಮಿಕ ಪರಿವರ್ತನೆಯು ಸುಗ್ರೀವಾಜ್ಞೆಯಲ್ಲಿ ನಿಗದಿಪಡಿಸಿದ ವಿಧಾನವನ್ನು ಅನುಸರಿಸದಿದ್ದರೆ ಅದನ್ನು ಅನೂರ್ಜಿತ ಎಂದು ಘೋಷಿಸಬಹುದು. ಅಪರಾಧಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು. ಉತ್ತರ ಪ್ರದೇಶದ ನಂತರ ಹತ್ತು ರಾಜ್ಯಗಳು ಇದೇ ರೀತಿಯ ಕಾನೂನುಗಳನ್ನು ಜಾರಿಗೆ ತಂದಿವೆ.

ಅಫ್ಜಲ್ ವಿರುದ್ಧದ ಆರೋಪಗಳು ಮಾರ್ಚ್ 2021ರ ವೇಳೆಯಲ್ಲಿ ಕೇಳಿಬಂದವು. ನ್ಯಾಯಾಲಯದ 21 ಪುಟಗಳ ಆದೇಶದ ಪ್ರಕಾರ, “ಅಫ್ಜಲ್ ಕೆಲವು ಸಸಿಗಳನ್ನು ತೆಗೆದುಕೊಳ್ಳಲು ಹುಡುಗಿಯ ತಂದೆ ನಡೆಸುತ್ತಿದ್ದ ನರ್ಸರಿಗೆ ಹೋಗಿದ್ದನು. ಒಂದು ತಿಂಗಳ ನಂತರ ಏಪ್ರಿಲ್ 2ರಂದು ಬೆಳಿಗ್ಗೆ ಹುಡುಗಿ ನಾಪತ್ತೆಯಾಗಿದ್ದಳು.”

ಆಕೆಯನ್ನು ಪತ್ತೆಹಚ್ಚಲು ವಿಫಲವಾದ ನಂತರ, ಕುಟುಂಬವು ಏಪ್ರಿಲ್ 2 ರಂದು ಎಫ್‌ಐಆರ್‌ ದಾಖಲಿಸಿದೆ. ಏಪ್ರಿಲ್ 4 ರಂದು ದೆಹಲಿಯ ಉಸ್ಮಾನ್‌ಪುರದಲ್ಲಿ ಇವರನ್ನು ಪತ್ತೆ ಹಚ್ಚಲಾಗಿತ್ತು.

ಬಾಲಕಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದಾಗ, “ಅಫ್ಜಲ್ ತನ್ನ ಹೆಸರನ್ನು ಅರ್ಮಾನ್ ಕೊಹ್ಲಿ ಎಂದು ಹೇಳಿದ್ದಾನೆ. ಮಾರ್ಚ್‌ನಲ್ಲಿ ನರ್ಸರಿಗೆ ಮೊದಲ ಬಾರಿಗೆ ಭೇಟಿ ನೀಡಿದಾಗ ತನ್ನನ್ನು ಶಿವನ ಭಕ್ತ ಎಂದು ಪರಿಚಯಿಸಿಕೊಂಡಿದ್ದ. ನನ್ನೊಂದಿಗೆ ನಿಯಮಿತವಾಗಿ ಫೋನ್‌ನಲ್ಲಿ ಚಾಟ್ ಮಾಡಲು ಪ್ರಾರಂಭಿಸಿದನು” ಎಂದು ಹೇಳಿದ್ದಳು.

“ಆತನೊಂದಿಗೆ ದೆಹಲಿಗೆ ಹೋದ ನಂತರವಷ್ಟೇ ಆತ ಮುಸ್ಲಿಂ ಎಂದು ತಿಳಿಯಿತು. ಮದುವೆ ಮತ್ತು ಮತಾಂತರಕ್ಕೆ ವಿರೋಧ ವ್ಯಕ್ತಪಡಿಸಿದಾಗ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ” ಎಂದು ಬಾಲಕಿ ಆರೋಪಿಸಿರುವುದಾಗಿ ನ್ಯಾಯಾಲಯದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಬಲವಂತದ ಮತಾಂತರಕ್ಕೆ ತೋರಿಸಲು ‘ಸಾಕ್ಷ್ಯವಿಲ್ಲ’

ಅಫ್ಜಲ್ ಬಾಲಕಿಯನ್ನು ಮತಾಂತರಗೊಳಿಸಲು ಯತ್ನಿಸಿದ್ದನ್ನು ಸಾಬೀತುಪಡಿಸಲು ತನಿಖೆ ಅಥವಾ ವಿಚಾರಣೆಯ ಸಮಯದಲ್ಲಿ ಯಾವುದೇ ಸಾಕ್ಷ್ಯವನ್ನು ನೀಡಲಾಗಿಲ್ಲ ಎಂದು ವಕೀಲರು ಪುನರುಚ್ಚರಿಸಿದ್ದಾರೆ. “ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಸಲ್ಲಿಸಿದ ಯಾವುದೇ ಪೇಪರ್‌ಗಳು ಅಥವಾ ಅಫಿಡವಿಟ್ ಮತಾಂತರವನ್ನು ದೃಢೀಕರಿಸುವುದಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಉತ್ತರ ಪ್ರದೇಶ: ಟ್ರ್ಯಾಕ್ಟರ್-ಟ್ರಾಲಿ ಉರುಳಿ 26 ಮಂದಿ ದುರ್ಮರಣ

ಅಫ್ಜಲ್ ಕುಟುಂಬ ಮಾಧ್ಯಮಗಳೊಂದಿಗೆ ಮಾತನಾಡಿಲ್ಲ. ಆದರೆ, ವೈಯಕ್ತಿಕ ದ್ವೇಷದಿಂದ ಪ್ರಕರಣ ನಡೆದಿದೆ ಎಂದು ವಕೀಲರು ಪ್ರತಿಪಾದಿಸಿದ್ದಾರೆ.

“ಅಫ್ಜಲ್ ಸಂತ್ರಸ್ತೆಯ ತಂದೆಯ ಒಡೆತನದ ನರ್ಸರಿಯಿಂದ ಕೆಲವು ಸಸಿಗಳನ್ನು ತೆಗೆದುಕೊಂಡಿದ್ದನು, ಅದಕ್ಕಾಗಿ ಅವನು ಹಣ ನೀಡಬೇಕಾಗಿತ್ತು. ಇದು ಅವರ ನಡುವೆ ಸಮಸ್ಯೆಗಳಿಗೆ ಕಾರಣವಾಯಿತು. ವಾಸ್ತವವಾಗಿ, ಸಂತ್ರಸ್ತೆ ಹಾಗೂ ಅಫ್ಜಲ್‌ ಸ್ನೇಹಿತರಾಗಿದ್ದರು” ಎಂದು ವಿವರಿಸಿದ್ದಾರೆ.

ನ್ಯಾಯಾಲಯದ ತನ್ನ ಆದೇಶದಲ್ಲಿ, “ಸಂತ್ರಸ್ತರ ಹೇಳಿಕೆಯು ಸಹಜ ಮತ್ತು ವಿಶ್ವಾಸಾರ್ಹವಾಗಿದೆ” ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...