Homeಮುಖಪುಟಯುಪಿ: ‘ಲವ್‌ ಜಿಹಾದ್‌’ ಸುಗ್ರೀವಾಜ್ಞೆ ಅಡಿ ದಾಖಲಾದ ಮೊದಲ ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಯುಪಿ: ‘ಲವ್‌ ಜಿಹಾದ್‌’ ಸುಗ್ರೀವಾಜ್ಞೆ ಅಡಿ ದಾಖಲಾದ ಮೊದಲ ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ನ್ಯಾಯಾಲಯ

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರವು ನವೆಂಬರ್ 2020ರಲ್ಲಿ ಅಂಗೀಕರಿಸಲ್ಪಟ್ಟ ಕಾನೂನುಬಾಹಿರ ಧರ್ಮ ಪರಿವರ್ತನೆಯ ನಿಷೇಧದ ಸುಗ್ರೀವಾಜ್ಞೆಯ ಅಡಿಯಲ್ಲಿ ದಾಖಲಾಗಿದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್‌ 19ರಂದು ಕೋರ್ಟ್ ಶಿಕ್ಷೆ ವಿಧಿಸಲಾಗಿದೆ. ಅಮ್ರೋಹಾ ಜಿಲ್ಲಾ ನ್ಯಾಯಾಲಯವು 25 ವರ್ಷದ ಮೊಹಮ್ಮದ್ ಅಫ್ಜಲ್‌ಗೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ್ದು, 40,000 ರೂ. ದಂಡವನ್ನು ಪಾವತಿಸುವಂತೆ ಸೂಚಿಸಿದೆ.

ಅಫ್ಜಲ್ ತನ್ನ ಧರ್ಮದ ಬಗ್ಗೆ ಸುಳ್ಳು ಹೇಳಿ 16 ವರ್ಷದ ಹಿಂದೂ ಹುಡುಗಿಯನ್ನು ದೆಹಲಿಗೆ ಕರೆದುಕೊಂಡು ಹೋಗಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ ಆರೋಪದ ಮೇಲೆ ಕಾನೂನು ಕ್ರಮ ಜರುಗಿಸಲಾಯಿತು. ಸಂಭಾಲ್ ಜಿಲ್ಲೆಯ ಹಯಾತ್‌ನಗರ್ ಗ್ರಾಮದಲ್ಲಿ ವಾಸಿಸುವ 25 ವರ್ಷದ ಅಫ್ಜಲ್‌, ತಮ್ಮ ಜೀವನೋಪಾಯಕ್ಕಾಗಿ ಸಸಿಗಳನ್ನು ಮಾರಾಟ ಮಾಡುತ್ತಿದ್ದನು. ಮರಗೆಲಸದ ಕೆಲಸ ನಡೆಸುತ್ತಿದ್ದನು. ಈಗ ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಪಹರಣ, ಮಹಿಳೆಯ ನಮ್ರತೆಯನ್ನು ಆಕ್ರೋಶಗೊಳಿಸುವೆ ಮತ್ತು ಕ್ರಿಮಿನಲ್ ಬೆದರಿಕೆ ಅಡಿಯಲ್ಲಿ ಅಮ್ರೋಹಾ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಲೈಂಗಿಕ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಿದ್ದಕ್ಕಾಗಿ ಆತನ ವಿರುದ್ಧ ಪೋಕ್ಸೋ ಅಡಿಯಲ್ಲೂ ಶಿಕ್ಷೆಗೆ ಗುರಿ ಮಾಡಲಾಗಿದೆ.

ಅಫ್ಜಲ್‌ ಪರ ವಾದ ಮಂಡಿಸಿದ ವಕೀಲ ಅಶೋಕ್ ಕುಮಾರ್, “ಶಿಕ್ಷೆಯನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ಗೆ ಹೋಗುತ್ತೇವೆ. ತಪ್ಪು ತೀರ್ಪು ಬಂದಿದೆ. ಮತಾಂತರ ಮಾಡಲು ಯತ್ನಿಸಿದ್ದಾರೆಂಬ ಆರೋಪ ಸುಳ್ಳಿನಿಂದ ಕೂಡಿದೆ. ಅಫ್ಜಲ್‌ ಅಪ್ರಾಪ್ತ ವಯಸ್ಕಳನ್ನು ಬಲವಂತವಾಗಿ ಮತಾಂತರಿಸಲು ಪ್ರಯತ್ನಿಸಿದ್ದಾನೆಂದು ಸಾಬೀತುಪಡಿಸಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ” ಎಂದಿದ್ದಾರೆ.

“ಅಫ್ಜಲ್ ಮತ್ತು ಹುಡುಗಿ ಸ್ನೇಹಿತರಾಗಿದ್ದರು. ಆಕೆಯ ತಂದೆಯೊಂದಿಗಿನ ಭಿನ್ನಾಭಿಪ್ರಾಯದಿಂದ ಅಫ್ಜಲ್‌ ವಿರುದ್ಧ ಪ್ರಕರಣ ದಾಖಲಿಸಲಾಯಿತು” ಎಂದು ದೂರಿದ್ದಾರೆ.

2020ರ ಸುಗ್ರೀವಾಜ್ಞೆಯನ್ನು ಜನಪ್ರಿಯವಾಗಿ “ಲವ್ ಜಿಹಾದ್ ಕಾನೂನು” ಎಂದು ಕರೆಯಲಾಗುತ್ತಿದೆ. “ಲವ್ ಜಿಹಾದ್” ಎಂಬುದು ಹಿಂದುತ್ವವಾದಿಗಳು ಪ್ರಸಾರ ಮಾಡಿದ ಪಿತೂರಿ ಸಿದ್ಧಾಂತವಾಗಿದ್ದು, ಮುಸ್ಲಿಂ ಪುರುಷರು ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರಿಸಲು ಮದುವೆಯಾಗುತ್ತಾರೆಂದು ಬಿಂಬಿಸಲಾಗಿದೆ.

ಇಂತಹ ಕಾನೂನನ್ನು ಜಾರಿಗೆ ತಂದ ಮೊದಲ ರಾಜ್ಯ ಉತ್ತರ ಪ್ರದೇಶ. ಬಲ, ವಂಚನೆ ಅಥವಾ ಮದುವೆಯ ಮೂಲಕ ಧಾರ್ಮಿಕ ಮತಾಂತರ ಮಾಡಿದರೆ ಅಪರಾಧ ಎಂದು ಈ ಕಾನೂನು ಪರಿಗಣಿಸುತ್ತದೆ. ಮದುವೆಯನ್ನು “ಧಾರ್ಮಿಕ ಮತಾಂತರದ ಏಕೈಕ ಉದ್ದೇಶಕ್ಕಾಗಿ” ನಡೆಸಿದರೆ ಅಥವಾ ಧಾರ್ಮಿಕ ಪರಿವರ್ತನೆಯು ಸುಗ್ರೀವಾಜ್ಞೆಯಲ್ಲಿ ನಿಗದಿಪಡಿಸಿದ ವಿಧಾನವನ್ನು ಅನುಸರಿಸದಿದ್ದರೆ ಅದನ್ನು ಅನೂರ್ಜಿತ ಎಂದು ಘೋಷಿಸಬಹುದು. ಅಪರಾಧಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು. ಉತ್ತರ ಪ್ರದೇಶದ ನಂತರ ಹತ್ತು ರಾಜ್ಯಗಳು ಇದೇ ರೀತಿಯ ಕಾನೂನುಗಳನ್ನು ಜಾರಿಗೆ ತಂದಿವೆ.

ಅಫ್ಜಲ್ ವಿರುದ್ಧದ ಆರೋಪಗಳು ಮಾರ್ಚ್ 2021ರ ವೇಳೆಯಲ್ಲಿ ಕೇಳಿಬಂದವು. ನ್ಯಾಯಾಲಯದ 21 ಪುಟಗಳ ಆದೇಶದ ಪ್ರಕಾರ, “ಅಫ್ಜಲ್ ಕೆಲವು ಸಸಿಗಳನ್ನು ತೆಗೆದುಕೊಳ್ಳಲು ಹುಡುಗಿಯ ತಂದೆ ನಡೆಸುತ್ತಿದ್ದ ನರ್ಸರಿಗೆ ಹೋಗಿದ್ದನು. ಒಂದು ತಿಂಗಳ ನಂತರ ಏಪ್ರಿಲ್ 2ರಂದು ಬೆಳಿಗ್ಗೆ ಹುಡುಗಿ ನಾಪತ್ತೆಯಾಗಿದ್ದಳು.”

ಆಕೆಯನ್ನು ಪತ್ತೆಹಚ್ಚಲು ವಿಫಲವಾದ ನಂತರ, ಕುಟುಂಬವು ಏಪ್ರಿಲ್ 2 ರಂದು ಎಫ್‌ಐಆರ್‌ ದಾಖಲಿಸಿದೆ. ಏಪ್ರಿಲ್ 4 ರಂದು ದೆಹಲಿಯ ಉಸ್ಮಾನ್‌ಪುರದಲ್ಲಿ ಇವರನ್ನು ಪತ್ತೆ ಹಚ್ಚಲಾಗಿತ್ತು.

ಬಾಲಕಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದಾಗ, “ಅಫ್ಜಲ್ ತನ್ನ ಹೆಸರನ್ನು ಅರ್ಮಾನ್ ಕೊಹ್ಲಿ ಎಂದು ಹೇಳಿದ್ದಾನೆ. ಮಾರ್ಚ್‌ನಲ್ಲಿ ನರ್ಸರಿಗೆ ಮೊದಲ ಬಾರಿಗೆ ಭೇಟಿ ನೀಡಿದಾಗ ತನ್ನನ್ನು ಶಿವನ ಭಕ್ತ ಎಂದು ಪರಿಚಯಿಸಿಕೊಂಡಿದ್ದ. ನನ್ನೊಂದಿಗೆ ನಿಯಮಿತವಾಗಿ ಫೋನ್‌ನಲ್ಲಿ ಚಾಟ್ ಮಾಡಲು ಪ್ರಾರಂಭಿಸಿದನು” ಎಂದು ಹೇಳಿದ್ದಳು.

“ಆತನೊಂದಿಗೆ ದೆಹಲಿಗೆ ಹೋದ ನಂತರವಷ್ಟೇ ಆತ ಮುಸ್ಲಿಂ ಎಂದು ತಿಳಿಯಿತು. ಮದುವೆ ಮತ್ತು ಮತಾಂತರಕ್ಕೆ ವಿರೋಧ ವ್ಯಕ್ತಪಡಿಸಿದಾಗ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ” ಎಂದು ಬಾಲಕಿ ಆರೋಪಿಸಿರುವುದಾಗಿ ನ್ಯಾಯಾಲಯದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಬಲವಂತದ ಮತಾಂತರಕ್ಕೆ ತೋರಿಸಲು ‘ಸಾಕ್ಷ್ಯವಿಲ್ಲ’

ಅಫ್ಜಲ್ ಬಾಲಕಿಯನ್ನು ಮತಾಂತರಗೊಳಿಸಲು ಯತ್ನಿಸಿದ್ದನ್ನು ಸಾಬೀತುಪಡಿಸಲು ತನಿಖೆ ಅಥವಾ ವಿಚಾರಣೆಯ ಸಮಯದಲ್ಲಿ ಯಾವುದೇ ಸಾಕ್ಷ್ಯವನ್ನು ನೀಡಲಾಗಿಲ್ಲ ಎಂದು ವಕೀಲರು ಪುನರುಚ್ಚರಿಸಿದ್ದಾರೆ. “ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಸಲ್ಲಿಸಿದ ಯಾವುದೇ ಪೇಪರ್‌ಗಳು ಅಥವಾ ಅಫಿಡವಿಟ್ ಮತಾಂತರವನ್ನು ದೃಢೀಕರಿಸುವುದಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಉತ್ತರ ಪ್ರದೇಶ: ಟ್ರ್ಯಾಕ್ಟರ್-ಟ್ರಾಲಿ ಉರುಳಿ 26 ಮಂದಿ ದುರ್ಮರಣ

ಅಫ್ಜಲ್ ಕುಟುಂಬ ಮಾಧ್ಯಮಗಳೊಂದಿಗೆ ಮಾತನಾಡಿಲ್ಲ. ಆದರೆ, ವೈಯಕ್ತಿಕ ದ್ವೇಷದಿಂದ ಪ್ರಕರಣ ನಡೆದಿದೆ ಎಂದು ವಕೀಲರು ಪ್ರತಿಪಾದಿಸಿದ್ದಾರೆ.

“ಅಫ್ಜಲ್ ಸಂತ್ರಸ್ತೆಯ ತಂದೆಯ ಒಡೆತನದ ನರ್ಸರಿಯಿಂದ ಕೆಲವು ಸಸಿಗಳನ್ನು ತೆಗೆದುಕೊಂಡಿದ್ದನು, ಅದಕ್ಕಾಗಿ ಅವನು ಹಣ ನೀಡಬೇಕಾಗಿತ್ತು. ಇದು ಅವರ ನಡುವೆ ಸಮಸ್ಯೆಗಳಿಗೆ ಕಾರಣವಾಯಿತು. ವಾಸ್ತವವಾಗಿ, ಸಂತ್ರಸ್ತೆ ಹಾಗೂ ಅಫ್ಜಲ್‌ ಸ್ನೇಹಿತರಾಗಿದ್ದರು” ಎಂದು ವಿವರಿಸಿದ್ದಾರೆ.

ನ್ಯಾಯಾಲಯದ ತನ್ನ ಆದೇಶದಲ್ಲಿ, “ಸಂತ್ರಸ್ತರ ಹೇಳಿಕೆಯು ಸಹಜ ಮತ್ತು ವಿಶ್ವಾಸಾರ್ಹವಾಗಿದೆ” ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...