Homeಮುಖಪುಟಯುಪಿ: ‘ಲವ್‌ ಜಿಹಾದ್‌’ ಸುಗ್ರೀವಾಜ್ಞೆ ಅಡಿ ದಾಖಲಾದ ಮೊದಲ ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಯುಪಿ: ‘ಲವ್‌ ಜಿಹಾದ್‌’ ಸುಗ್ರೀವಾಜ್ಞೆ ಅಡಿ ದಾಖಲಾದ ಮೊದಲ ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ನ್ಯಾಯಾಲಯ

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರವು ನವೆಂಬರ್ 2020ರಲ್ಲಿ ಅಂಗೀಕರಿಸಲ್ಪಟ್ಟ ಕಾನೂನುಬಾಹಿರ ಧರ್ಮ ಪರಿವರ್ತನೆಯ ನಿಷೇಧದ ಸುಗ್ರೀವಾಜ್ಞೆಯ ಅಡಿಯಲ್ಲಿ ದಾಖಲಾಗಿದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್‌ 19ರಂದು ಕೋರ್ಟ್ ಶಿಕ್ಷೆ ವಿಧಿಸಲಾಗಿದೆ. ಅಮ್ರೋಹಾ ಜಿಲ್ಲಾ ನ್ಯಾಯಾಲಯವು 25 ವರ್ಷದ ಮೊಹಮ್ಮದ್ ಅಫ್ಜಲ್‌ಗೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ್ದು, 40,000 ರೂ. ದಂಡವನ್ನು ಪಾವತಿಸುವಂತೆ ಸೂಚಿಸಿದೆ.

ಅಫ್ಜಲ್ ತನ್ನ ಧರ್ಮದ ಬಗ್ಗೆ ಸುಳ್ಳು ಹೇಳಿ 16 ವರ್ಷದ ಹಿಂದೂ ಹುಡುಗಿಯನ್ನು ದೆಹಲಿಗೆ ಕರೆದುಕೊಂಡು ಹೋಗಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ ಆರೋಪದ ಮೇಲೆ ಕಾನೂನು ಕ್ರಮ ಜರುಗಿಸಲಾಯಿತು. ಸಂಭಾಲ್ ಜಿಲ್ಲೆಯ ಹಯಾತ್‌ನಗರ್ ಗ್ರಾಮದಲ್ಲಿ ವಾಸಿಸುವ 25 ವರ್ಷದ ಅಫ್ಜಲ್‌, ತಮ್ಮ ಜೀವನೋಪಾಯಕ್ಕಾಗಿ ಸಸಿಗಳನ್ನು ಮಾರಾಟ ಮಾಡುತ್ತಿದ್ದನು. ಮರಗೆಲಸದ ಕೆಲಸ ನಡೆಸುತ್ತಿದ್ದನು. ಈಗ ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಪಹರಣ, ಮಹಿಳೆಯ ನಮ್ರತೆಯನ್ನು ಆಕ್ರೋಶಗೊಳಿಸುವೆ ಮತ್ತು ಕ್ರಿಮಿನಲ್ ಬೆದರಿಕೆ ಅಡಿಯಲ್ಲಿ ಅಮ್ರೋಹಾ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಲೈಂಗಿಕ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಿದ್ದಕ್ಕಾಗಿ ಆತನ ವಿರುದ್ಧ ಪೋಕ್ಸೋ ಅಡಿಯಲ್ಲೂ ಶಿಕ್ಷೆಗೆ ಗುರಿ ಮಾಡಲಾಗಿದೆ.

ಅಫ್ಜಲ್‌ ಪರ ವಾದ ಮಂಡಿಸಿದ ವಕೀಲ ಅಶೋಕ್ ಕುಮಾರ್, “ಶಿಕ್ಷೆಯನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ಗೆ ಹೋಗುತ್ತೇವೆ. ತಪ್ಪು ತೀರ್ಪು ಬಂದಿದೆ. ಮತಾಂತರ ಮಾಡಲು ಯತ್ನಿಸಿದ್ದಾರೆಂಬ ಆರೋಪ ಸುಳ್ಳಿನಿಂದ ಕೂಡಿದೆ. ಅಫ್ಜಲ್‌ ಅಪ್ರಾಪ್ತ ವಯಸ್ಕಳನ್ನು ಬಲವಂತವಾಗಿ ಮತಾಂತರಿಸಲು ಪ್ರಯತ್ನಿಸಿದ್ದಾನೆಂದು ಸಾಬೀತುಪಡಿಸಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ” ಎಂದಿದ್ದಾರೆ.

“ಅಫ್ಜಲ್ ಮತ್ತು ಹುಡುಗಿ ಸ್ನೇಹಿತರಾಗಿದ್ದರು. ಆಕೆಯ ತಂದೆಯೊಂದಿಗಿನ ಭಿನ್ನಾಭಿಪ್ರಾಯದಿಂದ ಅಫ್ಜಲ್‌ ವಿರುದ್ಧ ಪ್ರಕರಣ ದಾಖಲಿಸಲಾಯಿತು” ಎಂದು ದೂರಿದ್ದಾರೆ.

2020ರ ಸುಗ್ರೀವಾಜ್ಞೆಯನ್ನು ಜನಪ್ರಿಯವಾಗಿ “ಲವ್ ಜಿಹಾದ್ ಕಾನೂನು” ಎಂದು ಕರೆಯಲಾಗುತ್ತಿದೆ. “ಲವ್ ಜಿಹಾದ್” ಎಂಬುದು ಹಿಂದುತ್ವವಾದಿಗಳು ಪ್ರಸಾರ ಮಾಡಿದ ಪಿತೂರಿ ಸಿದ್ಧಾಂತವಾಗಿದ್ದು, ಮುಸ್ಲಿಂ ಪುರುಷರು ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರಿಸಲು ಮದುವೆಯಾಗುತ್ತಾರೆಂದು ಬಿಂಬಿಸಲಾಗಿದೆ.

ಇಂತಹ ಕಾನೂನನ್ನು ಜಾರಿಗೆ ತಂದ ಮೊದಲ ರಾಜ್ಯ ಉತ್ತರ ಪ್ರದೇಶ. ಬಲ, ವಂಚನೆ ಅಥವಾ ಮದುವೆಯ ಮೂಲಕ ಧಾರ್ಮಿಕ ಮತಾಂತರ ಮಾಡಿದರೆ ಅಪರಾಧ ಎಂದು ಈ ಕಾನೂನು ಪರಿಗಣಿಸುತ್ತದೆ. ಮದುವೆಯನ್ನು “ಧಾರ್ಮಿಕ ಮತಾಂತರದ ಏಕೈಕ ಉದ್ದೇಶಕ್ಕಾಗಿ” ನಡೆಸಿದರೆ ಅಥವಾ ಧಾರ್ಮಿಕ ಪರಿವರ್ತನೆಯು ಸುಗ್ರೀವಾಜ್ಞೆಯಲ್ಲಿ ನಿಗದಿಪಡಿಸಿದ ವಿಧಾನವನ್ನು ಅನುಸರಿಸದಿದ್ದರೆ ಅದನ್ನು ಅನೂರ್ಜಿತ ಎಂದು ಘೋಷಿಸಬಹುದು. ಅಪರಾಧಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು. ಉತ್ತರ ಪ್ರದೇಶದ ನಂತರ ಹತ್ತು ರಾಜ್ಯಗಳು ಇದೇ ರೀತಿಯ ಕಾನೂನುಗಳನ್ನು ಜಾರಿಗೆ ತಂದಿವೆ.

ಅಫ್ಜಲ್ ವಿರುದ್ಧದ ಆರೋಪಗಳು ಮಾರ್ಚ್ 2021ರ ವೇಳೆಯಲ್ಲಿ ಕೇಳಿಬಂದವು. ನ್ಯಾಯಾಲಯದ 21 ಪುಟಗಳ ಆದೇಶದ ಪ್ರಕಾರ, “ಅಫ್ಜಲ್ ಕೆಲವು ಸಸಿಗಳನ್ನು ತೆಗೆದುಕೊಳ್ಳಲು ಹುಡುಗಿಯ ತಂದೆ ನಡೆಸುತ್ತಿದ್ದ ನರ್ಸರಿಗೆ ಹೋಗಿದ್ದನು. ಒಂದು ತಿಂಗಳ ನಂತರ ಏಪ್ರಿಲ್ 2ರಂದು ಬೆಳಿಗ್ಗೆ ಹುಡುಗಿ ನಾಪತ್ತೆಯಾಗಿದ್ದಳು.”

ಆಕೆಯನ್ನು ಪತ್ತೆಹಚ್ಚಲು ವಿಫಲವಾದ ನಂತರ, ಕುಟುಂಬವು ಏಪ್ರಿಲ್ 2 ರಂದು ಎಫ್‌ಐಆರ್‌ ದಾಖಲಿಸಿದೆ. ಏಪ್ರಿಲ್ 4 ರಂದು ದೆಹಲಿಯ ಉಸ್ಮಾನ್‌ಪುರದಲ್ಲಿ ಇವರನ್ನು ಪತ್ತೆ ಹಚ್ಚಲಾಗಿತ್ತು.

ಬಾಲಕಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದಾಗ, “ಅಫ್ಜಲ್ ತನ್ನ ಹೆಸರನ್ನು ಅರ್ಮಾನ್ ಕೊಹ್ಲಿ ಎಂದು ಹೇಳಿದ್ದಾನೆ. ಮಾರ್ಚ್‌ನಲ್ಲಿ ನರ್ಸರಿಗೆ ಮೊದಲ ಬಾರಿಗೆ ಭೇಟಿ ನೀಡಿದಾಗ ತನ್ನನ್ನು ಶಿವನ ಭಕ್ತ ಎಂದು ಪರಿಚಯಿಸಿಕೊಂಡಿದ್ದ. ನನ್ನೊಂದಿಗೆ ನಿಯಮಿತವಾಗಿ ಫೋನ್‌ನಲ್ಲಿ ಚಾಟ್ ಮಾಡಲು ಪ್ರಾರಂಭಿಸಿದನು” ಎಂದು ಹೇಳಿದ್ದಳು.

“ಆತನೊಂದಿಗೆ ದೆಹಲಿಗೆ ಹೋದ ನಂತರವಷ್ಟೇ ಆತ ಮುಸ್ಲಿಂ ಎಂದು ತಿಳಿಯಿತು. ಮದುವೆ ಮತ್ತು ಮತಾಂತರಕ್ಕೆ ವಿರೋಧ ವ್ಯಕ್ತಪಡಿಸಿದಾಗ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ” ಎಂದು ಬಾಲಕಿ ಆರೋಪಿಸಿರುವುದಾಗಿ ನ್ಯಾಯಾಲಯದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಬಲವಂತದ ಮತಾಂತರಕ್ಕೆ ತೋರಿಸಲು ‘ಸಾಕ್ಷ್ಯವಿಲ್ಲ’

ಅಫ್ಜಲ್ ಬಾಲಕಿಯನ್ನು ಮತಾಂತರಗೊಳಿಸಲು ಯತ್ನಿಸಿದ್ದನ್ನು ಸಾಬೀತುಪಡಿಸಲು ತನಿಖೆ ಅಥವಾ ವಿಚಾರಣೆಯ ಸಮಯದಲ್ಲಿ ಯಾವುದೇ ಸಾಕ್ಷ್ಯವನ್ನು ನೀಡಲಾಗಿಲ್ಲ ಎಂದು ವಕೀಲರು ಪುನರುಚ್ಚರಿಸಿದ್ದಾರೆ. “ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಸಲ್ಲಿಸಿದ ಯಾವುದೇ ಪೇಪರ್‌ಗಳು ಅಥವಾ ಅಫಿಡವಿಟ್ ಮತಾಂತರವನ್ನು ದೃಢೀಕರಿಸುವುದಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಉತ್ತರ ಪ್ರದೇಶ: ಟ್ರ್ಯಾಕ್ಟರ್-ಟ್ರಾಲಿ ಉರುಳಿ 26 ಮಂದಿ ದುರ್ಮರಣ

ಅಫ್ಜಲ್ ಕುಟುಂಬ ಮಾಧ್ಯಮಗಳೊಂದಿಗೆ ಮಾತನಾಡಿಲ್ಲ. ಆದರೆ, ವೈಯಕ್ತಿಕ ದ್ವೇಷದಿಂದ ಪ್ರಕರಣ ನಡೆದಿದೆ ಎಂದು ವಕೀಲರು ಪ್ರತಿಪಾದಿಸಿದ್ದಾರೆ.

“ಅಫ್ಜಲ್ ಸಂತ್ರಸ್ತೆಯ ತಂದೆಯ ಒಡೆತನದ ನರ್ಸರಿಯಿಂದ ಕೆಲವು ಸಸಿಗಳನ್ನು ತೆಗೆದುಕೊಂಡಿದ್ದನು, ಅದಕ್ಕಾಗಿ ಅವನು ಹಣ ನೀಡಬೇಕಾಗಿತ್ತು. ಇದು ಅವರ ನಡುವೆ ಸಮಸ್ಯೆಗಳಿಗೆ ಕಾರಣವಾಯಿತು. ವಾಸ್ತವವಾಗಿ, ಸಂತ್ರಸ್ತೆ ಹಾಗೂ ಅಫ್ಜಲ್‌ ಸ್ನೇಹಿತರಾಗಿದ್ದರು” ಎಂದು ವಿವರಿಸಿದ್ದಾರೆ.

ನ್ಯಾಯಾಲಯದ ತನ್ನ ಆದೇಶದಲ್ಲಿ, “ಸಂತ್ರಸ್ತರ ಹೇಳಿಕೆಯು ಸಹಜ ಮತ್ತು ವಿಶ್ವಾಸಾರ್ಹವಾಗಿದೆ” ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....