Homeಮುಖಪುಟಯುಪಿ: ‘ಲವ್‌ ಜಿಹಾದ್‌’ ಸುಗ್ರೀವಾಜ್ಞೆ ಅಡಿ ದಾಖಲಾದ ಮೊದಲ ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಯುಪಿ: ‘ಲವ್‌ ಜಿಹಾದ್‌’ ಸುಗ್ರೀವಾಜ್ಞೆ ಅಡಿ ದಾಖಲಾದ ಮೊದಲ ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ನ್ಯಾಯಾಲಯ

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರವು ನವೆಂಬರ್ 2020ರಲ್ಲಿ ಅಂಗೀಕರಿಸಲ್ಪಟ್ಟ ಕಾನೂನುಬಾಹಿರ ಧರ್ಮ ಪರಿವರ್ತನೆಯ ನಿಷೇಧದ ಸುಗ್ರೀವಾಜ್ಞೆಯ ಅಡಿಯಲ್ಲಿ ದಾಖಲಾಗಿದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್‌ 19ರಂದು ಕೋರ್ಟ್ ಶಿಕ್ಷೆ ವಿಧಿಸಲಾಗಿದೆ. ಅಮ್ರೋಹಾ ಜಿಲ್ಲಾ ನ್ಯಾಯಾಲಯವು 25 ವರ್ಷದ ಮೊಹಮ್ಮದ್ ಅಫ್ಜಲ್‌ಗೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ್ದು, 40,000 ರೂ. ದಂಡವನ್ನು ಪಾವತಿಸುವಂತೆ ಸೂಚಿಸಿದೆ.

ಅಫ್ಜಲ್ ತನ್ನ ಧರ್ಮದ ಬಗ್ಗೆ ಸುಳ್ಳು ಹೇಳಿ 16 ವರ್ಷದ ಹಿಂದೂ ಹುಡುಗಿಯನ್ನು ದೆಹಲಿಗೆ ಕರೆದುಕೊಂಡು ಹೋಗಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ ಆರೋಪದ ಮೇಲೆ ಕಾನೂನು ಕ್ರಮ ಜರುಗಿಸಲಾಯಿತು. ಸಂಭಾಲ್ ಜಿಲ್ಲೆಯ ಹಯಾತ್‌ನಗರ್ ಗ್ರಾಮದಲ್ಲಿ ವಾಸಿಸುವ 25 ವರ್ಷದ ಅಫ್ಜಲ್‌, ತಮ್ಮ ಜೀವನೋಪಾಯಕ್ಕಾಗಿ ಸಸಿಗಳನ್ನು ಮಾರಾಟ ಮಾಡುತ್ತಿದ್ದನು. ಮರಗೆಲಸದ ಕೆಲಸ ನಡೆಸುತ್ತಿದ್ದನು. ಈಗ ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಪಹರಣ, ಮಹಿಳೆಯ ನಮ್ರತೆಯನ್ನು ಆಕ್ರೋಶಗೊಳಿಸುವೆ ಮತ್ತು ಕ್ರಿಮಿನಲ್ ಬೆದರಿಕೆ ಅಡಿಯಲ್ಲಿ ಅಮ್ರೋಹಾ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಲೈಂಗಿಕ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಿದ್ದಕ್ಕಾಗಿ ಆತನ ವಿರುದ್ಧ ಪೋಕ್ಸೋ ಅಡಿಯಲ್ಲೂ ಶಿಕ್ಷೆಗೆ ಗುರಿ ಮಾಡಲಾಗಿದೆ.

ಅಫ್ಜಲ್‌ ಪರ ವಾದ ಮಂಡಿಸಿದ ವಕೀಲ ಅಶೋಕ್ ಕುಮಾರ್, “ಶಿಕ್ಷೆಯನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ಗೆ ಹೋಗುತ್ತೇವೆ. ತಪ್ಪು ತೀರ್ಪು ಬಂದಿದೆ. ಮತಾಂತರ ಮಾಡಲು ಯತ್ನಿಸಿದ್ದಾರೆಂಬ ಆರೋಪ ಸುಳ್ಳಿನಿಂದ ಕೂಡಿದೆ. ಅಫ್ಜಲ್‌ ಅಪ್ರಾಪ್ತ ವಯಸ್ಕಳನ್ನು ಬಲವಂತವಾಗಿ ಮತಾಂತರಿಸಲು ಪ್ರಯತ್ನಿಸಿದ್ದಾನೆಂದು ಸಾಬೀತುಪಡಿಸಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ” ಎಂದಿದ್ದಾರೆ.

“ಅಫ್ಜಲ್ ಮತ್ತು ಹುಡುಗಿ ಸ್ನೇಹಿತರಾಗಿದ್ದರು. ಆಕೆಯ ತಂದೆಯೊಂದಿಗಿನ ಭಿನ್ನಾಭಿಪ್ರಾಯದಿಂದ ಅಫ್ಜಲ್‌ ವಿರುದ್ಧ ಪ್ರಕರಣ ದಾಖಲಿಸಲಾಯಿತು” ಎಂದು ದೂರಿದ್ದಾರೆ.

2020ರ ಸುಗ್ರೀವಾಜ್ಞೆಯನ್ನು ಜನಪ್ರಿಯವಾಗಿ “ಲವ್ ಜಿಹಾದ್ ಕಾನೂನು” ಎಂದು ಕರೆಯಲಾಗುತ್ತಿದೆ. “ಲವ್ ಜಿಹಾದ್” ಎಂಬುದು ಹಿಂದುತ್ವವಾದಿಗಳು ಪ್ರಸಾರ ಮಾಡಿದ ಪಿತೂರಿ ಸಿದ್ಧಾಂತವಾಗಿದ್ದು, ಮುಸ್ಲಿಂ ಪುರುಷರು ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರಿಸಲು ಮದುವೆಯಾಗುತ್ತಾರೆಂದು ಬಿಂಬಿಸಲಾಗಿದೆ.

ಇಂತಹ ಕಾನೂನನ್ನು ಜಾರಿಗೆ ತಂದ ಮೊದಲ ರಾಜ್ಯ ಉತ್ತರ ಪ್ರದೇಶ. ಬಲ, ವಂಚನೆ ಅಥವಾ ಮದುವೆಯ ಮೂಲಕ ಧಾರ್ಮಿಕ ಮತಾಂತರ ಮಾಡಿದರೆ ಅಪರಾಧ ಎಂದು ಈ ಕಾನೂನು ಪರಿಗಣಿಸುತ್ತದೆ. ಮದುವೆಯನ್ನು “ಧಾರ್ಮಿಕ ಮತಾಂತರದ ಏಕೈಕ ಉದ್ದೇಶಕ್ಕಾಗಿ” ನಡೆಸಿದರೆ ಅಥವಾ ಧಾರ್ಮಿಕ ಪರಿವರ್ತನೆಯು ಸುಗ್ರೀವಾಜ್ಞೆಯಲ್ಲಿ ನಿಗದಿಪಡಿಸಿದ ವಿಧಾನವನ್ನು ಅನುಸರಿಸದಿದ್ದರೆ ಅದನ್ನು ಅನೂರ್ಜಿತ ಎಂದು ಘೋಷಿಸಬಹುದು. ಅಪರಾಧಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು. ಉತ್ತರ ಪ್ರದೇಶದ ನಂತರ ಹತ್ತು ರಾಜ್ಯಗಳು ಇದೇ ರೀತಿಯ ಕಾನೂನುಗಳನ್ನು ಜಾರಿಗೆ ತಂದಿವೆ.

ಅಫ್ಜಲ್ ವಿರುದ್ಧದ ಆರೋಪಗಳು ಮಾರ್ಚ್ 2021ರ ವೇಳೆಯಲ್ಲಿ ಕೇಳಿಬಂದವು. ನ್ಯಾಯಾಲಯದ 21 ಪುಟಗಳ ಆದೇಶದ ಪ್ರಕಾರ, “ಅಫ್ಜಲ್ ಕೆಲವು ಸಸಿಗಳನ್ನು ತೆಗೆದುಕೊಳ್ಳಲು ಹುಡುಗಿಯ ತಂದೆ ನಡೆಸುತ್ತಿದ್ದ ನರ್ಸರಿಗೆ ಹೋಗಿದ್ದನು. ಒಂದು ತಿಂಗಳ ನಂತರ ಏಪ್ರಿಲ್ 2ರಂದು ಬೆಳಿಗ್ಗೆ ಹುಡುಗಿ ನಾಪತ್ತೆಯಾಗಿದ್ದಳು.”

ಆಕೆಯನ್ನು ಪತ್ತೆಹಚ್ಚಲು ವಿಫಲವಾದ ನಂತರ, ಕುಟುಂಬವು ಏಪ್ರಿಲ್ 2 ರಂದು ಎಫ್‌ಐಆರ್‌ ದಾಖಲಿಸಿದೆ. ಏಪ್ರಿಲ್ 4 ರಂದು ದೆಹಲಿಯ ಉಸ್ಮಾನ್‌ಪುರದಲ್ಲಿ ಇವರನ್ನು ಪತ್ತೆ ಹಚ್ಚಲಾಗಿತ್ತು.

ಬಾಲಕಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದಾಗ, “ಅಫ್ಜಲ್ ತನ್ನ ಹೆಸರನ್ನು ಅರ್ಮಾನ್ ಕೊಹ್ಲಿ ಎಂದು ಹೇಳಿದ್ದಾನೆ. ಮಾರ್ಚ್‌ನಲ್ಲಿ ನರ್ಸರಿಗೆ ಮೊದಲ ಬಾರಿಗೆ ಭೇಟಿ ನೀಡಿದಾಗ ತನ್ನನ್ನು ಶಿವನ ಭಕ್ತ ಎಂದು ಪರಿಚಯಿಸಿಕೊಂಡಿದ್ದ. ನನ್ನೊಂದಿಗೆ ನಿಯಮಿತವಾಗಿ ಫೋನ್‌ನಲ್ಲಿ ಚಾಟ್ ಮಾಡಲು ಪ್ರಾರಂಭಿಸಿದನು” ಎಂದು ಹೇಳಿದ್ದಳು.

“ಆತನೊಂದಿಗೆ ದೆಹಲಿಗೆ ಹೋದ ನಂತರವಷ್ಟೇ ಆತ ಮುಸ್ಲಿಂ ಎಂದು ತಿಳಿಯಿತು. ಮದುವೆ ಮತ್ತು ಮತಾಂತರಕ್ಕೆ ವಿರೋಧ ವ್ಯಕ್ತಪಡಿಸಿದಾಗ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ” ಎಂದು ಬಾಲಕಿ ಆರೋಪಿಸಿರುವುದಾಗಿ ನ್ಯಾಯಾಲಯದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಬಲವಂತದ ಮತಾಂತರಕ್ಕೆ ತೋರಿಸಲು ‘ಸಾಕ್ಷ್ಯವಿಲ್ಲ’

ಅಫ್ಜಲ್ ಬಾಲಕಿಯನ್ನು ಮತಾಂತರಗೊಳಿಸಲು ಯತ್ನಿಸಿದ್ದನ್ನು ಸಾಬೀತುಪಡಿಸಲು ತನಿಖೆ ಅಥವಾ ವಿಚಾರಣೆಯ ಸಮಯದಲ್ಲಿ ಯಾವುದೇ ಸಾಕ್ಷ್ಯವನ್ನು ನೀಡಲಾಗಿಲ್ಲ ಎಂದು ವಕೀಲರು ಪುನರುಚ್ಚರಿಸಿದ್ದಾರೆ. “ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಸಲ್ಲಿಸಿದ ಯಾವುದೇ ಪೇಪರ್‌ಗಳು ಅಥವಾ ಅಫಿಡವಿಟ್ ಮತಾಂತರವನ್ನು ದೃಢೀಕರಿಸುವುದಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಉತ್ತರ ಪ್ರದೇಶ: ಟ್ರ್ಯಾಕ್ಟರ್-ಟ್ರಾಲಿ ಉರುಳಿ 26 ಮಂದಿ ದುರ್ಮರಣ

ಅಫ್ಜಲ್ ಕುಟುಂಬ ಮಾಧ್ಯಮಗಳೊಂದಿಗೆ ಮಾತನಾಡಿಲ್ಲ. ಆದರೆ, ವೈಯಕ್ತಿಕ ದ್ವೇಷದಿಂದ ಪ್ರಕರಣ ನಡೆದಿದೆ ಎಂದು ವಕೀಲರು ಪ್ರತಿಪಾದಿಸಿದ್ದಾರೆ.

“ಅಫ್ಜಲ್ ಸಂತ್ರಸ್ತೆಯ ತಂದೆಯ ಒಡೆತನದ ನರ್ಸರಿಯಿಂದ ಕೆಲವು ಸಸಿಗಳನ್ನು ತೆಗೆದುಕೊಂಡಿದ್ದನು, ಅದಕ್ಕಾಗಿ ಅವನು ಹಣ ನೀಡಬೇಕಾಗಿತ್ತು. ಇದು ಅವರ ನಡುವೆ ಸಮಸ್ಯೆಗಳಿಗೆ ಕಾರಣವಾಯಿತು. ವಾಸ್ತವವಾಗಿ, ಸಂತ್ರಸ್ತೆ ಹಾಗೂ ಅಫ್ಜಲ್‌ ಸ್ನೇಹಿತರಾಗಿದ್ದರು” ಎಂದು ವಿವರಿಸಿದ್ದಾರೆ.

ನ್ಯಾಯಾಲಯದ ತನ್ನ ಆದೇಶದಲ್ಲಿ, “ಸಂತ್ರಸ್ತರ ಹೇಳಿಕೆಯು ಸಹಜ ಮತ್ತು ವಿಶ್ವಾಸಾರ್ಹವಾಗಿದೆ” ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...