Homeಮುಖಪುಟಯುಪಿ: ‘ಲವ್‌ ಜಿಹಾದ್‌’ ಸುಗ್ರೀವಾಜ್ಞೆ ಅಡಿ ದಾಖಲಾದ ಮೊದಲ ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಯುಪಿ: ‘ಲವ್‌ ಜಿಹಾದ್‌’ ಸುಗ್ರೀವಾಜ್ಞೆ ಅಡಿ ದಾಖಲಾದ ಮೊದಲ ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ನ್ಯಾಯಾಲಯ

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರವು ನವೆಂಬರ್ 2020ರಲ್ಲಿ ಅಂಗೀಕರಿಸಲ್ಪಟ್ಟ ಕಾನೂನುಬಾಹಿರ ಧರ್ಮ ಪರಿವರ್ತನೆಯ ನಿಷೇಧದ ಸುಗ್ರೀವಾಜ್ಞೆಯ ಅಡಿಯಲ್ಲಿ ದಾಖಲಾಗಿದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್‌ 19ರಂದು ಕೋರ್ಟ್ ಶಿಕ್ಷೆ ವಿಧಿಸಲಾಗಿದೆ. ಅಮ್ರೋಹಾ ಜಿಲ್ಲಾ ನ್ಯಾಯಾಲಯವು 25 ವರ್ಷದ ಮೊಹಮ್ಮದ್ ಅಫ್ಜಲ್‌ಗೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ್ದು, 40,000 ರೂ. ದಂಡವನ್ನು ಪಾವತಿಸುವಂತೆ ಸೂಚಿಸಿದೆ.

ಅಫ್ಜಲ್ ತನ್ನ ಧರ್ಮದ ಬಗ್ಗೆ ಸುಳ್ಳು ಹೇಳಿ 16 ವರ್ಷದ ಹಿಂದೂ ಹುಡುಗಿಯನ್ನು ದೆಹಲಿಗೆ ಕರೆದುಕೊಂಡು ಹೋಗಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ ಆರೋಪದ ಮೇಲೆ ಕಾನೂನು ಕ್ರಮ ಜರುಗಿಸಲಾಯಿತು. ಸಂಭಾಲ್ ಜಿಲ್ಲೆಯ ಹಯಾತ್‌ನಗರ್ ಗ್ರಾಮದಲ್ಲಿ ವಾಸಿಸುವ 25 ವರ್ಷದ ಅಫ್ಜಲ್‌, ತಮ್ಮ ಜೀವನೋಪಾಯಕ್ಕಾಗಿ ಸಸಿಗಳನ್ನು ಮಾರಾಟ ಮಾಡುತ್ತಿದ್ದನು. ಮರಗೆಲಸದ ಕೆಲಸ ನಡೆಸುತ್ತಿದ್ದನು. ಈಗ ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಪಹರಣ, ಮಹಿಳೆಯ ನಮ್ರತೆಯನ್ನು ಆಕ್ರೋಶಗೊಳಿಸುವೆ ಮತ್ತು ಕ್ರಿಮಿನಲ್ ಬೆದರಿಕೆ ಅಡಿಯಲ್ಲಿ ಅಮ್ರೋಹಾ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಲೈಂಗಿಕ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಿದ್ದಕ್ಕಾಗಿ ಆತನ ವಿರುದ್ಧ ಪೋಕ್ಸೋ ಅಡಿಯಲ್ಲೂ ಶಿಕ್ಷೆಗೆ ಗುರಿ ಮಾಡಲಾಗಿದೆ.

ಅಫ್ಜಲ್‌ ಪರ ವಾದ ಮಂಡಿಸಿದ ವಕೀಲ ಅಶೋಕ್ ಕುಮಾರ್, “ಶಿಕ್ಷೆಯನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ಗೆ ಹೋಗುತ್ತೇವೆ. ತಪ್ಪು ತೀರ್ಪು ಬಂದಿದೆ. ಮತಾಂತರ ಮಾಡಲು ಯತ್ನಿಸಿದ್ದಾರೆಂಬ ಆರೋಪ ಸುಳ್ಳಿನಿಂದ ಕೂಡಿದೆ. ಅಫ್ಜಲ್‌ ಅಪ್ರಾಪ್ತ ವಯಸ್ಕಳನ್ನು ಬಲವಂತವಾಗಿ ಮತಾಂತರಿಸಲು ಪ್ರಯತ್ನಿಸಿದ್ದಾನೆಂದು ಸಾಬೀತುಪಡಿಸಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ” ಎಂದಿದ್ದಾರೆ.

“ಅಫ್ಜಲ್ ಮತ್ತು ಹುಡುಗಿ ಸ್ನೇಹಿತರಾಗಿದ್ದರು. ಆಕೆಯ ತಂದೆಯೊಂದಿಗಿನ ಭಿನ್ನಾಭಿಪ್ರಾಯದಿಂದ ಅಫ್ಜಲ್‌ ವಿರುದ್ಧ ಪ್ರಕರಣ ದಾಖಲಿಸಲಾಯಿತು” ಎಂದು ದೂರಿದ್ದಾರೆ.

2020ರ ಸುಗ್ರೀವಾಜ್ಞೆಯನ್ನು ಜನಪ್ರಿಯವಾಗಿ “ಲವ್ ಜಿಹಾದ್ ಕಾನೂನು” ಎಂದು ಕರೆಯಲಾಗುತ್ತಿದೆ. “ಲವ್ ಜಿಹಾದ್” ಎಂಬುದು ಹಿಂದುತ್ವವಾದಿಗಳು ಪ್ರಸಾರ ಮಾಡಿದ ಪಿತೂರಿ ಸಿದ್ಧಾಂತವಾಗಿದ್ದು, ಮುಸ್ಲಿಂ ಪುರುಷರು ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರಿಸಲು ಮದುವೆಯಾಗುತ್ತಾರೆಂದು ಬಿಂಬಿಸಲಾಗಿದೆ.

ಇಂತಹ ಕಾನೂನನ್ನು ಜಾರಿಗೆ ತಂದ ಮೊದಲ ರಾಜ್ಯ ಉತ್ತರ ಪ್ರದೇಶ. ಬಲ, ವಂಚನೆ ಅಥವಾ ಮದುವೆಯ ಮೂಲಕ ಧಾರ್ಮಿಕ ಮತಾಂತರ ಮಾಡಿದರೆ ಅಪರಾಧ ಎಂದು ಈ ಕಾನೂನು ಪರಿಗಣಿಸುತ್ತದೆ. ಮದುವೆಯನ್ನು “ಧಾರ್ಮಿಕ ಮತಾಂತರದ ಏಕೈಕ ಉದ್ದೇಶಕ್ಕಾಗಿ” ನಡೆಸಿದರೆ ಅಥವಾ ಧಾರ್ಮಿಕ ಪರಿವರ್ತನೆಯು ಸುಗ್ರೀವಾಜ್ಞೆಯಲ್ಲಿ ನಿಗದಿಪಡಿಸಿದ ವಿಧಾನವನ್ನು ಅನುಸರಿಸದಿದ್ದರೆ ಅದನ್ನು ಅನೂರ್ಜಿತ ಎಂದು ಘೋಷಿಸಬಹುದು. ಅಪರಾಧಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು. ಉತ್ತರ ಪ್ರದೇಶದ ನಂತರ ಹತ್ತು ರಾಜ್ಯಗಳು ಇದೇ ರೀತಿಯ ಕಾನೂನುಗಳನ್ನು ಜಾರಿಗೆ ತಂದಿವೆ.

ಅಫ್ಜಲ್ ವಿರುದ್ಧದ ಆರೋಪಗಳು ಮಾರ್ಚ್ 2021ರ ವೇಳೆಯಲ್ಲಿ ಕೇಳಿಬಂದವು. ನ್ಯಾಯಾಲಯದ 21 ಪುಟಗಳ ಆದೇಶದ ಪ್ರಕಾರ, “ಅಫ್ಜಲ್ ಕೆಲವು ಸಸಿಗಳನ್ನು ತೆಗೆದುಕೊಳ್ಳಲು ಹುಡುಗಿಯ ತಂದೆ ನಡೆಸುತ್ತಿದ್ದ ನರ್ಸರಿಗೆ ಹೋಗಿದ್ದನು. ಒಂದು ತಿಂಗಳ ನಂತರ ಏಪ್ರಿಲ್ 2ರಂದು ಬೆಳಿಗ್ಗೆ ಹುಡುಗಿ ನಾಪತ್ತೆಯಾಗಿದ್ದಳು.”

ಆಕೆಯನ್ನು ಪತ್ತೆಹಚ್ಚಲು ವಿಫಲವಾದ ನಂತರ, ಕುಟುಂಬವು ಏಪ್ರಿಲ್ 2 ರಂದು ಎಫ್‌ಐಆರ್‌ ದಾಖಲಿಸಿದೆ. ಏಪ್ರಿಲ್ 4 ರಂದು ದೆಹಲಿಯ ಉಸ್ಮಾನ್‌ಪುರದಲ್ಲಿ ಇವರನ್ನು ಪತ್ತೆ ಹಚ್ಚಲಾಗಿತ್ತು.

ಬಾಲಕಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದಾಗ, “ಅಫ್ಜಲ್ ತನ್ನ ಹೆಸರನ್ನು ಅರ್ಮಾನ್ ಕೊಹ್ಲಿ ಎಂದು ಹೇಳಿದ್ದಾನೆ. ಮಾರ್ಚ್‌ನಲ್ಲಿ ನರ್ಸರಿಗೆ ಮೊದಲ ಬಾರಿಗೆ ಭೇಟಿ ನೀಡಿದಾಗ ತನ್ನನ್ನು ಶಿವನ ಭಕ್ತ ಎಂದು ಪರಿಚಯಿಸಿಕೊಂಡಿದ್ದ. ನನ್ನೊಂದಿಗೆ ನಿಯಮಿತವಾಗಿ ಫೋನ್‌ನಲ್ಲಿ ಚಾಟ್ ಮಾಡಲು ಪ್ರಾರಂಭಿಸಿದನು” ಎಂದು ಹೇಳಿದ್ದಳು.

“ಆತನೊಂದಿಗೆ ದೆಹಲಿಗೆ ಹೋದ ನಂತರವಷ್ಟೇ ಆತ ಮುಸ್ಲಿಂ ಎಂದು ತಿಳಿಯಿತು. ಮದುವೆ ಮತ್ತು ಮತಾಂತರಕ್ಕೆ ವಿರೋಧ ವ್ಯಕ್ತಪಡಿಸಿದಾಗ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ” ಎಂದು ಬಾಲಕಿ ಆರೋಪಿಸಿರುವುದಾಗಿ ನ್ಯಾಯಾಲಯದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಬಲವಂತದ ಮತಾಂತರಕ್ಕೆ ತೋರಿಸಲು ‘ಸಾಕ್ಷ್ಯವಿಲ್ಲ’

ಅಫ್ಜಲ್ ಬಾಲಕಿಯನ್ನು ಮತಾಂತರಗೊಳಿಸಲು ಯತ್ನಿಸಿದ್ದನ್ನು ಸಾಬೀತುಪಡಿಸಲು ತನಿಖೆ ಅಥವಾ ವಿಚಾರಣೆಯ ಸಮಯದಲ್ಲಿ ಯಾವುದೇ ಸಾಕ್ಷ್ಯವನ್ನು ನೀಡಲಾಗಿಲ್ಲ ಎಂದು ವಕೀಲರು ಪುನರುಚ್ಚರಿಸಿದ್ದಾರೆ. “ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಸಲ್ಲಿಸಿದ ಯಾವುದೇ ಪೇಪರ್‌ಗಳು ಅಥವಾ ಅಫಿಡವಿಟ್ ಮತಾಂತರವನ್ನು ದೃಢೀಕರಿಸುವುದಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಉತ್ತರ ಪ್ರದೇಶ: ಟ್ರ್ಯಾಕ್ಟರ್-ಟ್ರಾಲಿ ಉರುಳಿ 26 ಮಂದಿ ದುರ್ಮರಣ

ಅಫ್ಜಲ್ ಕುಟುಂಬ ಮಾಧ್ಯಮಗಳೊಂದಿಗೆ ಮಾತನಾಡಿಲ್ಲ. ಆದರೆ, ವೈಯಕ್ತಿಕ ದ್ವೇಷದಿಂದ ಪ್ರಕರಣ ನಡೆದಿದೆ ಎಂದು ವಕೀಲರು ಪ್ರತಿಪಾದಿಸಿದ್ದಾರೆ.

“ಅಫ್ಜಲ್ ಸಂತ್ರಸ್ತೆಯ ತಂದೆಯ ಒಡೆತನದ ನರ್ಸರಿಯಿಂದ ಕೆಲವು ಸಸಿಗಳನ್ನು ತೆಗೆದುಕೊಂಡಿದ್ದನು, ಅದಕ್ಕಾಗಿ ಅವನು ಹಣ ನೀಡಬೇಕಾಗಿತ್ತು. ಇದು ಅವರ ನಡುವೆ ಸಮಸ್ಯೆಗಳಿಗೆ ಕಾರಣವಾಯಿತು. ವಾಸ್ತವವಾಗಿ, ಸಂತ್ರಸ್ತೆ ಹಾಗೂ ಅಫ್ಜಲ್‌ ಸ್ನೇಹಿತರಾಗಿದ್ದರು” ಎಂದು ವಿವರಿಸಿದ್ದಾರೆ.

ನ್ಯಾಯಾಲಯದ ತನ್ನ ಆದೇಶದಲ್ಲಿ, “ಸಂತ್ರಸ್ತರ ಹೇಳಿಕೆಯು ಸಹಜ ಮತ್ತು ವಿಶ್ವಾಸಾರ್ಹವಾಗಿದೆ” ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...