Homeಮುಖಪುಟಯುಪಿ: ‘ಲವ್‌ ಜಿಹಾದ್‌’ ಸುಗ್ರೀವಾಜ್ಞೆ ಅಡಿ ದಾಖಲಾದ ಮೊದಲ ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಯುಪಿ: ‘ಲವ್‌ ಜಿಹಾದ್‌’ ಸುಗ್ರೀವಾಜ್ಞೆ ಅಡಿ ದಾಖಲಾದ ಮೊದಲ ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ನ್ಯಾಯಾಲಯ

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರವು ನವೆಂಬರ್ 2020ರಲ್ಲಿ ಅಂಗೀಕರಿಸಲ್ಪಟ್ಟ ಕಾನೂನುಬಾಹಿರ ಧರ್ಮ ಪರಿವರ್ತನೆಯ ನಿಷೇಧದ ಸುಗ್ರೀವಾಜ್ಞೆಯ ಅಡಿಯಲ್ಲಿ ದಾಖಲಾಗಿದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್‌ 19ರಂದು ಕೋರ್ಟ್ ಶಿಕ್ಷೆ ವಿಧಿಸಲಾಗಿದೆ. ಅಮ್ರೋಹಾ ಜಿಲ್ಲಾ ನ್ಯಾಯಾಲಯವು 25 ವರ್ಷದ ಮೊಹಮ್ಮದ್ ಅಫ್ಜಲ್‌ಗೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ್ದು, 40,000 ರೂ. ದಂಡವನ್ನು ಪಾವತಿಸುವಂತೆ ಸೂಚಿಸಿದೆ.

ಅಫ್ಜಲ್ ತನ್ನ ಧರ್ಮದ ಬಗ್ಗೆ ಸುಳ್ಳು ಹೇಳಿ 16 ವರ್ಷದ ಹಿಂದೂ ಹುಡುಗಿಯನ್ನು ದೆಹಲಿಗೆ ಕರೆದುಕೊಂಡು ಹೋಗಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ ಆರೋಪದ ಮೇಲೆ ಕಾನೂನು ಕ್ರಮ ಜರುಗಿಸಲಾಯಿತು. ಸಂಭಾಲ್ ಜಿಲ್ಲೆಯ ಹಯಾತ್‌ನಗರ್ ಗ್ರಾಮದಲ್ಲಿ ವಾಸಿಸುವ 25 ವರ್ಷದ ಅಫ್ಜಲ್‌, ತಮ್ಮ ಜೀವನೋಪಾಯಕ್ಕಾಗಿ ಸಸಿಗಳನ್ನು ಮಾರಾಟ ಮಾಡುತ್ತಿದ್ದನು. ಮರಗೆಲಸದ ಕೆಲಸ ನಡೆಸುತ್ತಿದ್ದನು. ಈಗ ಸದ್ಯ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಪಹರಣ, ಮಹಿಳೆಯ ನಮ್ರತೆಯನ್ನು ಆಕ್ರೋಶಗೊಳಿಸುವೆ ಮತ್ತು ಕ್ರಿಮಿನಲ್ ಬೆದರಿಕೆ ಅಡಿಯಲ್ಲಿ ಅಮ್ರೋಹಾ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಲೈಂಗಿಕ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಿದ್ದಕ್ಕಾಗಿ ಆತನ ವಿರುದ್ಧ ಪೋಕ್ಸೋ ಅಡಿಯಲ್ಲೂ ಶಿಕ್ಷೆಗೆ ಗುರಿ ಮಾಡಲಾಗಿದೆ.

ಅಫ್ಜಲ್‌ ಪರ ವಾದ ಮಂಡಿಸಿದ ವಕೀಲ ಅಶೋಕ್ ಕುಮಾರ್, “ಶಿಕ್ಷೆಯನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ಗೆ ಹೋಗುತ್ತೇವೆ. ತಪ್ಪು ತೀರ್ಪು ಬಂದಿದೆ. ಮತಾಂತರ ಮಾಡಲು ಯತ್ನಿಸಿದ್ದಾರೆಂಬ ಆರೋಪ ಸುಳ್ಳಿನಿಂದ ಕೂಡಿದೆ. ಅಫ್ಜಲ್‌ ಅಪ್ರಾಪ್ತ ವಯಸ್ಕಳನ್ನು ಬಲವಂತವಾಗಿ ಮತಾಂತರಿಸಲು ಪ್ರಯತ್ನಿಸಿದ್ದಾನೆಂದು ಸಾಬೀತುಪಡಿಸಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ” ಎಂದಿದ್ದಾರೆ.

“ಅಫ್ಜಲ್ ಮತ್ತು ಹುಡುಗಿ ಸ್ನೇಹಿತರಾಗಿದ್ದರು. ಆಕೆಯ ತಂದೆಯೊಂದಿಗಿನ ಭಿನ್ನಾಭಿಪ್ರಾಯದಿಂದ ಅಫ್ಜಲ್‌ ವಿರುದ್ಧ ಪ್ರಕರಣ ದಾಖಲಿಸಲಾಯಿತು” ಎಂದು ದೂರಿದ್ದಾರೆ.

2020ರ ಸುಗ್ರೀವಾಜ್ಞೆಯನ್ನು ಜನಪ್ರಿಯವಾಗಿ “ಲವ್ ಜಿಹಾದ್ ಕಾನೂನು” ಎಂದು ಕರೆಯಲಾಗುತ್ತಿದೆ. “ಲವ್ ಜಿಹಾದ್” ಎಂಬುದು ಹಿಂದುತ್ವವಾದಿಗಳು ಪ್ರಸಾರ ಮಾಡಿದ ಪಿತೂರಿ ಸಿದ್ಧಾಂತವಾಗಿದ್ದು, ಮುಸ್ಲಿಂ ಪುರುಷರು ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರಿಸಲು ಮದುವೆಯಾಗುತ್ತಾರೆಂದು ಬಿಂಬಿಸಲಾಗಿದೆ.

ಇಂತಹ ಕಾನೂನನ್ನು ಜಾರಿಗೆ ತಂದ ಮೊದಲ ರಾಜ್ಯ ಉತ್ತರ ಪ್ರದೇಶ. ಬಲ, ವಂಚನೆ ಅಥವಾ ಮದುವೆಯ ಮೂಲಕ ಧಾರ್ಮಿಕ ಮತಾಂತರ ಮಾಡಿದರೆ ಅಪರಾಧ ಎಂದು ಈ ಕಾನೂನು ಪರಿಗಣಿಸುತ್ತದೆ. ಮದುವೆಯನ್ನು “ಧಾರ್ಮಿಕ ಮತಾಂತರದ ಏಕೈಕ ಉದ್ದೇಶಕ್ಕಾಗಿ” ನಡೆಸಿದರೆ ಅಥವಾ ಧಾರ್ಮಿಕ ಪರಿವರ್ತನೆಯು ಸುಗ್ರೀವಾಜ್ಞೆಯಲ್ಲಿ ನಿಗದಿಪಡಿಸಿದ ವಿಧಾನವನ್ನು ಅನುಸರಿಸದಿದ್ದರೆ ಅದನ್ನು ಅನೂರ್ಜಿತ ಎಂದು ಘೋಷಿಸಬಹುದು. ಅಪರಾಧಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು. ಉತ್ತರ ಪ್ರದೇಶದ ನಂತರ ಹತ್ತು ರಾಜ್ಯಗಳು ಇದೇ ರೀತಿಯ ಕಾನೂನುಗಳನ್ನು ಜಾರಿಗೆ ತಂದಿವೆ.

ಅಫ್ಜಲ್ ವಿರುದ್ಧದ ಆರೋಪಗಳು ಮಾರ್ಚ್ 2021ರ ವೇಳೆಯಲ್ಲಿ ಕೇಳಿಬಂದವು. ನ್ಯಾಯಾಲಯದ 21 ಪುಟಗಳ ಆದೇಶದ ಪ್ರಕಾರ, “ಅಫ್ಜಲ್ ಕೆಲವು ಸಸಿಗಳನ್ನು ತೆಗೆದುಕೊಳ್ಳಲು ಹುಡುಗಿಯ ತಂದೆ ನಡೆಸುತ್ತಿದ್ದ ನರ್ಸರಿಗೆ ಹೋಗಿದ್ದನು. ಒಂದು ತಿಂಗಳ ನಂತರ ಏಪ್ರಿಲ್ 2ರಂದು ಬೆಳಿಗ್ಗೆ ಹುಡುಗಿ ನಾಪತ್ತೆಯಾಗಿದ್ದಳು.”

ಆಕೆಯನ್ನು ಪತ್ತೆಹಚ್ಚಲು ವಿಫಲವಾದ ನಂತರ, ಕುಟುಂಬವು ಏಪ್ರಿಲ್ 2 ರಂದು ಎಫ್‌ಐಆರ್‌ ದಾಖಲಿಸಿದೆ. ಏಪ್ರಿಲ್ 4 ರಂದು ದೆಹಲಿಯ ಉಸ್ಮಾನ್‌ಪುರದಲ್ಲಿ ಇವರನ್ನು ಪತ್ತೆ ಹಚ್ಚಲಾಗಿತ್ತು.

ಬಾಲಕಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದಾಗ, “ಅಫ್ಜಲ್ ತನ್ನ ಹೆಸರನ್ನು ಅರ್ಮಾನ್ ಕೊಹ್ಲಿ ಎಂದು ಹೇಳಿದ್ದಾನೆ. ಮಾರ್ಚ್‌ನಲ್ಲಿ ನರ್ಸರಿಗೆ ಮೊದಲ ಬಾರಿಗೆ ಭೇಟಿ ನೀಡಿದಾಗ ತನ್ನನ್ನು ಶಿವನ ಭಕ್ತ ಎಂದು ಪರಿಚಯಿಸಿಕೊಂಡಿದ್ದ. ನನ್ನೊಂದಿಗೆ ನಿಯಮಿತವಾಗಿ ಫೋನ್‌ನಲ್ಲಿ ಚಾಟ್ ಮಾಡಲು ಪ್ರಾರಂಭಿಸಿದನು” ಎಂದು ಹೇಳಿದ್ದಳು.

“ಆತನೊಂದಿಗೆ ದೆಹಲಿಗೆ ಹೋದ ನಂತರವಷ್ಟೇ ಆತ ಮುಸ್ಲಿಂ ಎಂದು ತಿಳಿಯಿತು. ಮದುವೆ ಮತ್ತು ಮತಾಂತರಕ್ಕೆ ವಿರೋಧ ವ್ಯಕ್ತಪಡಿಸಿದಾಗ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ” ಎಂದು ಬಾಲಕಿ ಆರೋಪಿಸಿರುವುದಾಗಿ ನ್ಯಾಯಾಲಯದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಬಲವಂತದ ಮತಾಂತರಕ್ಕೆ ತೋರಿಸಲು ‘ಸಾಕ್ಷ್ಯವಿಲ್ಲ’

ಅಫ್ಜಲ್ ಬಾಲಕಿಯನ್ನು ಮತಾಂತರಗೊಳಿಸಲು ಯತ್ನಿಸಿದ್ದನ್ನು ಸಾಬೀತುಪಡಿಸಲು ತನಿಖೆ ಅಥವಾ ವಿಚಾರಣೆಯ ಸಮಯದಲ್ಲಿ ಯಾವುದೇ ಸಾಕ್ಷ್ಯವನ್ನು ನೀಡಲಾಗಿಲ್ಲ ಎಂದು ವಕೀಲರು ಪುನರುಚ್ಚರಿಸಿದ್ದಾರೆ. “ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಸಲ್ಲಿಸಿದ ಯಾವುದೇ ಪೇಪರ್‌ಗಳು ಅಥವಾ ಅಫಿಡವಿಟ್ ಮತಾಂತರವನ್ನು ದೃಢೀಕರಿಸುವುದಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಉತ್ತರ ಪ್ರದೇಶ: ಟ್ರ್ಯಾಕ್ಟರ್-ಟ್ರಾಲಿ ಉರುಳಿ 26 ಮಂದಿ ದುರ್ಮರಣ

ಅಫ್ಜಲ್ ಕುಟುಂಬ ಮಾಧ್ಯಮಗಳೊಂದಿಗೆ ಮಾತನಾಡಿಲ್ಲ. ಆದರೆ, ವೈಯಕ್ತಿಕ ದ್ವೇಷದಿಂದ ಪ್ರಕರಣ ನಡೆದಿದೆ ಎಂದು ವಕೀಲರು ಪ್ರತಿಪಾದಿಸಿದ್ದಾರೆ.

“ಅಫ್ಜಲ್ ಸಂತ್ರಸ್ತೆಯ ತಂದೆಯ ಒಡೆತನದ ನರ್ಸರಿಯಿಂದ ಕೆಲವು ಸಸಿಗಳನ್ನು ತೆಗೆದುಕೊಂಡಿದ್ದನು, ಅದಕ್ಕಾಗಿ ಅವನು ಹಣ ನೀಡಬೇಕಾಗಿತ್ತು. ಇದು ಅವರ ನಡುವೆ ಸಮಸ್ಯೆಗಳಿಗೆ ಕಾರಣವಾಯಿತು. ವಾಸ್ತವವಾಗಿ, ಸಂತ್ರಸ್ತೆ ಹಾಗೂ ಅಫ್ಜಲ್‌ ಸ್ನೇಹಿತರಾಗಿದ್ದರು” ಎಂದು ವಿವರಿಸಿದ್ದಾರೆ.

ನ್ಯಾಯಾಲಯದ ತನ್ನ ಆದೇಶದಲ್ಲಿ, “ಸಂತ್ರಸ್ತರ ಹೇಳಿಕೆಯು ಸಹಜ ಮತ್ತು ವಿಶ್ವಾಸಾರ್ಹವಾಗಿದೆ” ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...