Homeಮುಖಪುಟಉತ್ತರ ಪ್ರದೇಶ: ಎಕ್ಸಾಂ ಬರೆಯಲು ಬಂದಿದ್ದ ದಲಿತ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ಉತ್ತರ ಪ್ರದೇಶ: ಎಕ್ಸಾಂ ಬರೆಯಲು ಬಂದಿದ್ದ ದಲಿತ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

- Advertisement -
- Advertisement -

ಬಿಜೆಪಿ ಆಡಳಿತದಲ್ಲಿರುವ ಉತ್ತರ ಪ್ರದೇಶದ ದೀನದಯಾಳ್ ಉಪಾಧ್ಯಾಯ ಗೋರಖ್‌ಪುರ್ ವಿಶ್ವವಿದ್ಯಾಲಯದ (DDU) ಸ್ಟೋರ್ ರೂಂನಲ್ಲಿ ದಲಿತ ವಿದ್ಯಾರ್ಥಿನಿಯೊಬ್ಬರ ಮೃತದೇಹ ನೇಣಿಗೆ ಶರಣಾಗಿರುವ ರೀತಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

20 ವರ್ಷದ ಪ್ರಿಯಾಂಕಾ ಅಂತಿಮ ವರ್ಷದ ಬಿಎಸ್ಸಿ ವಿದ್ಯಾರ್ಥಿಯಾಗಿದ್ದು, ವಿಶ್ವವಿದ್ಯಾಲಯದ ಗೃಹ ವಿಜ್ಞಾನ ವಿಭಾಗಕ್ಕೆ ದಾಖಲಾಗಿದ್ದರು. ಗುಲ್ರಿಹಾ ಪೊಲೀಸ್ ಠಾಣೆ ವ್ಯಾಪ್ತಿಯ ಶಿವಪುರ ಸಹಾಬಾಜ್‌ಗಂಜ್ ಪೋಖ್ರೋ ತೋಲಾ ನಿವಾಸಿಯಾದ ಪ್ರಿಯಾಂಕಾ ಶನಿವಾರ ದೀಕ್ಷಾ ಭವನದಲ್ಲಿ ಪರೀಕ್ಷೆಗೆ ಹಾಜರಾಗಲು ಗೋರಖ್‌ಪುರ್ ವಿಶ್ವವಿದ್ಯಾಲಯಕ್ಕೆ ಬಂದಿದ್ದರು.

ಬಳಿಕ ಅವರ ಮೃತದೇಹ ವಿಶ್ವವಿದ್ಯಾಲಯದ ಸ್ಟೋರ್ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.  ಬಿಎಸ್ಸಿ ಹೋಮ್ ಸೈನ್ಸ್ 3 ನೇ ವರ್ಷದ ಪ್ರಶ್ನೆ ಪತ್ರಿಕೆ, ಆಧಾರ್ ಕಾರ್ಡ್, ಮೊಬೈಲ್ ಇತ್ಯಾದಿಗಳನ್ನು ಒಳಗೊಂಡ ಬ್ಯಾಗ್ ನೋಡಿ ಅವರನ್ನು ಗುರುತಿಸಲಾಗಿದೆ. ನಂತರ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಮತ್ತು ಪೊಲೀಸರು ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ದಲಿತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಮತ್ತು ಬಲವಂತದ ಶವಸಂಸ್ಕಾರ: ಪೂಜಾರಿಯ ಬಂಧನ

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡು  ಸಾವನ್ನಪ್ಪಿದ್ದಾರೆ ಎಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ತಿಳಿಸಿದೆ. ಆದರೆ, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿಗೆ ಕಾರಣ ಸ್ಪಷ್ಟವಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಗೋರಖ್‌ಪುರ ವಿಶ್ವವಿದ್ಯಾಲಯವು ಕ್ಯಾಂಪಸ್‌ನಲ್ಲಿ ಜಾತಿ ಆಧಾರಿತ ತಾರತಮ್ಯಕ್ಕೆ ಕುಖ್ಯಾತವಾಗಿದ್ದು, ಈ ಹಿಂದೆಯೂ ಅನೇಕ ವಿದ್ಯಾರ್ಥಿಗಳು ಇದರ ಬಗ್ಗೆ ದೂರು ನೀಡಿದ್ದಾರೆ. ವಿಶ್ವವಿದ್ಯಾಲಯದ ಆಡಳಿತ, ಸರ್ಕಾರ ಮತ್ತು ಪೊಲೀಸರು ಎಲ್ಲರೂ ದಲಿತರ ವಿರುದ್ಧ ಒಟ್ಟಾಗಿ ನಿಲ್ಲುತ್ತಾರೆ ಎಂದು ಆರೋಪಿಸಲಾಗಿದೆ. ಈ ದಲಿತ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ದಲಿತ ಸಮುದಾಯದಲ್ಲಿ ಕೋಲಾಹಲವನ್ನು ಉಂಟುಮಾಡಿದ್ದು, ನ್ಯಾಯಯುತ ತನಿಖೆ ಮತ್ತು ವಿಚಾರಣೆಗೆ ಆಗ್ರಹ ಮಾಡಲಾಗುತ್ತಿದೆ.

2018 ರಲ್ಲಿ, ದಲಿತ ಸಂಶೋಧನಾ ವಿದ್ಯಾರ್ಥಿ ದೀಪಕ್ ಕ್ಯಾಂಪಸ್‌ನಲ್ಲಿ ಜಾತಿ ಆಧಾರಿತ ತಾರತಮ್ಯಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಸಿಕ್ಕ ವೈದ್ಯಕೀಯ ಸೌಲಭ್ಯಗಳಿಂದಾಗಿ ದೀಪಕ್ ಜೀವ ಉಳಿಸಲಾಗಿತ್ತು. ದೀಪಕ್ ಕುಮಾರ್ ಅವರ ವಿಷಯದಲ್ಲಿ, ಸರ್ಕಾರವು ವಿಶ್ವವಿದ್ಯಾಲಯದ ಆಡಳಿತದೊಂದಿಗೆ ಸೇರಿ ಇಡೀ ಘಟನೆಯನ್ನು ಮುಚ್ಚಿಹಾಕಿತು. ಪ್ರಿಯಾಂಕಾ ಪ್ರಕರಣದಲ್ಲಿ ಇದೇ ರೀತಿಯಾಗಿದೆ ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ: ದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Very sad to hear the shocking news..
    CM of up should take ultimate action without delay,as to order for highest and honest enquire committee available in Indian justice. And see the issues should not repeat as it was repeating since more than decades..All should be treated equally.
    I request the editor to forward or make good positive news about 370 abolition in Kashmir ..and life of origins before and now.
    Has strikes ,roits,terrorists, law of control etc..had come to high or normal or zero ..why wont you share it as good moment by Indian government.
    Thank you

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...