Homeಮುಖಪುಟಯುಪಿ ಎಲೆಕ್ಷನ್-2022: ‘ಎಸ್‌ಪಿ ಜೊತೆ ಮೈತ್ರಿ’ ಎಂಬ ವರದಿ ನಿರಾಕರಿಸಿದ AIMIM

ಯುಪಿ ಎಲೆಕ್ಷನ್-2022: ‘ಎಸ್‌ಪಿ ಜೊತೆ ಮೈತ್ರಿ’ ಎಂಬ ವರದಿ ನಿರಾಕರಿಸಿದ AIMIM

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಪಕ್ಷ ಸಿದ್ಧವಾಗಿದೆ ಎಂಬ ವರದಿಗಳನ್ನು ಆಲ್‌ ಇಂಡಿಯಾ ಮಜ್ಲಿಸ್-ಎ-ಇತ್ತಿಹಾದುಲ್ ಮುಸ್ಲೀಮೀನ್ (AIMIM) ನಿರಾಕರಿಸಿದೆ. ಉತ್ತರ ಪ್ರದೇಶದಲ್ಲಿ ಮುಸ್ಲಿಮರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿದರೆ ಎಸ್‌ಪಿ ಜೊತೆ ಕೈಜೋಡಿಸಲು ತಮ್ಮ ಪಕ್ಷ ಸಿದ್ಧವಾಗಿದೆ ಎಂದು AIMIM ಅಧ್ಯಕ್ಷ ಅಸದುದ್ದೀನ್ ಒವೈಸಿ ಹೇಳಿದ್ದಾರೆ ಎಂದು ಅನೇಕ ಮಾಧ್ಯಮಗಳು ಶನಿವಾರ ವರದಿ ಮಾಡಿದ್ದವು.

ಉತ್ತರ ಪ್ರದೇಶದ 2022 ರ ವಿಧಾನಸಭಾ ಚುನಾವಣೆಗೆ ತನ್ನ ಮೈತ್ರಿಕೂಟವಾದ ಭಾಗಿದರಿ ಸಂಕಲ್ಪ ಮೋರ್ಚಾವು ಸಮಾಜವಾದಿ ಪಕ್ಷದ ಜೊತೆಗೆ ಮೈತ್ರಿಗೆ ನಿರ್ಧರಿಸಿದರೆ ತನಗೆ ಯಾವುದೆ ಆಕ್ಷೇಪವಿಲ್ಲ ಎಂದು AIMIM ಹೇಳಿದೆ ಎಂದು ಈ ವರದಿಗಳು ಉಲ್ಲೇಖಿಸಿದ್ದವು.

ಇದನ್ನೂ ಓದಿ: ಕೊರೊನಾ ಕಾರಣ ಸದನದಲ್ಲಿ ಪ್ರಶ್ನೋತ್ತರ ವೇಳೆ ಇಲ್ಲ, ಆದರೆ ವಿದ್ಯಾರ್ಥಿಗಳಿಗೆ ಮಾತ್ರ ಜೆಇಇ, ನೀಟ್ ಪರೀಕ್ಷೆ: ಒವೈಸಿ

ಸುಹೆಲ್ದೇವ್ ಭಾರತೀಯ ಸಮಾಜ ಪಕ್ಷದ (ಎಸ್‌ಬಿಎಸ್‌ಪಿ) ಅಧ್ಯಕ್ಷ ಓಂ ಪ್ರಕಾಶ್ ರಾಜ್‌ಭರ್ ನೇತೃತ್ವದಲ್ಲಿ ಒಟ್ಟು ಹತ್ತು ಪಕ್ಷಗಳು ಮೈತ್ರಿ ಮಾಡಿಕೊಂಡಿದೆ. ಮೈತ್ರಿಗೆ ಭಾಗಿದರಿ ಸಂಕಲ್ಪ ಮೋರ್ಚಾ (ಬಿಎಸ್‌ಎಂ) ಎಂದು ಕರೆಯಲಾಗಿದ್ದು, AIMIM ಪಕ್ಷ ಕೂಡ ಈ ಮೈತ್ರಿಕೂಟದ ಭಾಗವಾಗಿದೆ.

ಈ ತಿಂಗಳ ಆರಂಭದಲ್ಲಿ, AIMIM ನಾಯಕ ಅಸಿಮ್ ವಾಕರ್ ಅವರು ರಾಜ್ಯದ ಉಪ ಮುಖ್ಯಮಂತ್ರಿ ಹುದ್ದೆಯನ್ನು ಮುಸ್ಲಿಮರಿಗಾಗಿ ಮೀಸಲಿಡಬೇಕು ಎಂದು ಹೇಳಿದ್ದರು. ಈ ವಿಷಯದ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಗೊಳಿಸುವಂತೆ ಕಾಂಗ್ರೆಸ್, ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಮತ್ತು ಸಮಾಜವಾದಿ ಪಕ್ಷ (ಎಸ್ಪಿ) ಗೆ ಸೂಚಿಸಿದ್ದರು.

ಮಾಧ್ಯಮಗಳ ವರದಿಯ ಹಿನ್ನಲೆಯಲ್ಲಿ AIMIM ಉತ್ತರ ಪ್ರದೇಶದ ಅಧ್ಯಕ್ಷ ಶೌಕತ್ ಅಲಿ ಸ್ಪಷ್ಟೀಕರಣ ನೀಡಿದ್ದು ವರದಿಗಳನ್ನು ನಿರಾಕರಿಸಿದ್ದಾರೆ. “ಉತ್ತರಪ್ರದೇಶದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ, ಮುಸ್ಲಿಂ ನಾಯಕನನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವುದಾದರೆ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ AIMIM ಎಂದೂ ಹೇಳಿಲ್ಲ” ಎಂದು ಅವರು ತಿಳಿಸಿದ್ದಾರೆ.

ಪಕ್ಷದ ಯುಪಿ ಅಧ್ಯಕನಾದ ತಾನಾಗಲಿ ಅಥವಾ AIMIM ಮುಖ್ಯಸ್ಥ ಅಸದುದ್ದೀನ್ ಒವೈಸಿ ಆಗಲೀ ಈ ರೀತಿಯ ಹೇಳಿಕೆಗಳನ್ನು ನೀಡಿಲ್ಲ ಎಂದು ಮಾಧ್ಯಮಗಳ ವರದಿಗಳನ್ನು ಅವರು ನಿರಾಕರಿಸಿದ್ದಾರೆ.

ಇದನ್ನೂ ಓದಿ: ಯುಪಿ ವಿಧಾನಸಭೆ ಚುನಾವಣೆ-2022: 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಎಐಎಂಐಎಂ

“ಹಿಂದಿನ ಚುನಾವಣೆಗಳಲ್ಲಿ 20% ರಷ್ಟು ಮುಸ್ಲಿಂ ಮತಗಳನ್ನು ಗಳಿಸಿ ಅಧಿಕಾರಕ್ಕೆ ಬಂದರೂ, ಎಸ್‌ಪಿ ಅವರು ಯಾವುದೇ ಮುಸ್ಲಿಮರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿಲ್ಲ” ಎಂದಷ್ಟೇ ಪಕ್ಷವು ಹೇಳಿದೆ ಎಂದು ಶೌಕತ್‌‌ ಅಲಿ ಹೇಳಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಎಐಎಂಐಎಂ 100 ಸ್ಥಾನಗಳಿಗೆ ಸ್ಪರ್ಧಿಸುವುದಾಗಿ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಒವೈಸಿ ಈ ಹಿಂದೆ ಘೋಷಿಸಿದ್ದರು.

ಪಕ್ಷದ ಅಧ್ಯಕ್ಷ ಒವೈಸಿ ಈ ಹಿಂದೆ ಲಕ್ನೋಗೆ ಭೇಟಿ ನೀಡಿ, ಸಣ್ಣ ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಸಂಸತ್ತಿನ ಮಾನ್ಸೂನ್ ಅಧಿವೇಶನ ಮುಗಿದ ನಂತರ ಅವರು ಪ್ರಯಾಗರಾಜ್, ಕೌಶಂಭಿ ಮತ್ತು ಫತೇಪುರಕ್ಕೆ ಭೇಟಿ ನೀಡಲಿದ್ದಾರೆ.

2017 ರ ವಿಧಾನಸಭಾ ಚುನಾವಣೆಯಲ್ಲಿ, AIMIM ತನ್ನ ಅಭ್ಯರ್ಥಿಗಳನ್ನು 38 ಸ್ಥಾನಗಳಲ್ಲಿ ಕಣಕ್ಕಿಳಿಸಿತ್ತು. ಆದರೆ ಒಂದು ಕ್ಷೇತ್ರವನ್ನು ಸಹ ಗೆಲ್ಲಲು ಸಾಧ್ಯವಾಗಲಿಲ್ಲ. ನಂತರ 2019 ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿತ್ತು. ಅಲ್ಲದೆ ಪಕ್ಷವು ಬಿಜೆಪಿ ವಿರುದ್ಧ ಚುನಾವಣಾ ಪ್ರಚಾರ ನಡೆಸಿತ್ತು.

2017 ರಲ್ಲಿ ಬಿಜೆಪಿ 312 ವಿಧಾನಸಭಾ ಸ್ಥಾನಗಳನ್ನು ಗೆದ್ದಿದೆ. 403 ಸದಸ್ಯ ಬಲವಿರುವ ವಿಧಾನಸಭೆಯಲ್ಲಿ ಪಕ್ಷವು 39.67% ರಷ್ಟು ಮತಗಳನ್ನು ಗಳಿಸಿದೆ. ಸಮಾಜವಾದಿ ಪಕ್ಷ (ಎಸ್‌ಪಿ) 47 ಸ್ಥಾನಗಳನ್ನು, ಬಿಎಸ್‌ಪಿ 19 ಸ್ಥಾನಗಳನ್ನು ಹಾಗೂ ಕಾಂಗ್ರೆಸ್ ಕೇವಲ ಏಳು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿತ್ತು.

ಇದನ್ನೂ ಓದಿ: ಒವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...