Homeಮುಖಪುಟಯುಪಿ ಎಲೆಕ್ಷನ್-2022: ‘ಎಸ್‌ಪಿ ಜೊತೆ ಮೈತ್ರಿ’ ಎಂಬ ವರದಿ ನಿರಾಕರಿಸಿದ AIMIM

ಯುಪಿ ಎಲೆಕ್ಷನ್-2022: ‘ಎಸ್‌ಪಿ ಜೊತೆ ಮೈತ್ರಿ’ ಎಂಬ ವರದಿ ನಿರಾಕರಿಸಿದ AIMIM

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಪಕ್ಷ ಸಿದ್ಧವಾಗಿದೆ ಎಂಬ ವರದಿಗಳನ್ನು ಆಲ್‌ ಇಂಡಿಯಾ ಮಜ್ಲಿಸ್-ಎ-ಇತ್ತಿಹಾದುಲ್ ಮುಸ್ಲೀಮೀನ್ (AIMIM) ನಿರಾಕರಿಸಿದೆ. ಉತ್ತರ ಪ್ರದೇಶದಲ್ಲಿ ಮುಸ್ಲಿಮರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿದರೆ ಎಸ್‌ಪಿ ಜೊತೆ ಕೈಜೋಡಿಸಲು ತಮ್ಮ ಪಕ್ಷ ಸಿದ್ಧವಾಗಿದೆ ಎಂದು AIMIM ಅಧ್ಯಕ್ಷ ಅಸದುದ್ದೀನ್ ಒವೈಸಿ ಹೇಳಿದ್ದಾರೆ ಎಂದು ಅನೇಕ ಮಾಧ್ಯಮಗಳು ಶನಿವಾರ ವರದಿ ಮಾಡಿದ್ದವು.

ಉತ್ತರ ಪ್ರದೇಶದ 2022 ರ ವಿಧಾನಸಭಾ ಚುನಾವಣೆಗೆ ತನ್ನ ಮೈತ್ರಿಕೂಟವಾದ ಭಾಗಿದರಿ ಸಂಕಲ್ಪ ಮೋರ್ಚಾವು ಸಮಾಜವಾದಿ ಪಕ್ಷದ ಜೊತೆಗೆ ಮೈತ್ರಿಗೆ ನಿರ್ಧರಿಸಿದರೆ ತನಗೆ ಯಾವುದೆ ಆಕ್ಷೇಪವಿಲ್ಲ ಎಂದು AIMIM ಹೇಳಿದೆ ಎಂದು ಈ ವರದಿಗಳು ಉಲ್ಲೇಖಿಸಿದ್ದವು.

ಇದನ್ನೂ ಓದಿ: ಕೊರೊನಾ ಕಾರಣ ಸದನದಲ್ಲಿ ಪ್ರಶ್ನೋತ್ತರ ವೇಳೆ ಇಲ್ಲ, ಆದರೆ ವಿದ್ಯಾರ್ಥಿಗಳಿಗೆ ಮಾತ್ರ ಜೆಇಇ, ನೀಟ್ ಪರೀಕ್ಷೆ: ಒವೈಸಿ

ಸುಹೆಲ್ದೇವ್ ಭಾರತೀಯ ಸಮಾಜ ಪಕ್ಷದ (ಎಸ್‌ಬಿಎಸ್‌ಪಿ) ಅಧ್ಯಕ್ಷ ಓಂ ಪ್ರಕಾಶ್ ರಾಜ್‌ಭರ್ ನೇತೃತ್ವದಲ್ಲಿ ಒಟ್ಟು ಹತ್ತು ಪಕ್ಷಗಳು ಮೈತ್ರಿ ಮಾಡಿಕೊಂಡಿದೆ. ಮೈತ್ರಿಗೆ ಭಾಗಿದರಿ ಸಂಕಲ್ಪ ಮೋರ್ಚಾ (ಬಿಎಸ್‌ಎಂ) ಎಂದು ಕರೆಯಲಾಗಿದ್ದು, AIMIM ಪಕ್ಷ ಕೂಡ ಈ ಮೈತ್ರಿಕೂಟದ ಭಾಗವಾಗಿದೆ.

ಈ ತಿಂಗಳ ಆರಂಭದಲ್ಲಿ, AIMIM ನಾಯಕ ಅಸಿಮ್ ವಾಕರ್ ಅವರು ರಾಜ್ಯದ ಉಪ ಮುಖ್ಯಮಂತ್ರಿ ಹುದ್ದೆಯನ್ನು ಮುಸ್ಲಿಮರಿಗಾಗಿ ಮೀಸಲಿಡಬೇಕು ಎಂದು ಹೇಳಿದ್ದರು. ಈ ವಿಷಯದ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಗೊಳಿಸುವಂತೆ ಕಾಂಗ್ರೆಸ್, ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಮತ್ತು ಸಮಾಜವಾದಿ ಪಕ್ಷ (ಎಸ್ಪಿ) ಗೆ ಸೂಚಿಸಿದ್ದರು.

ಮಾಧ್ಯಮಗಳ ವರದಿಯ ಹಿನ್ನಲೆಯಲ್ಲಿ AIMIM ಉತ್ತರ ಪ್ರದೇಶದ ಅಧ್ಯಕ್ಷ ಶೌಕತ್ ಅಲಿ ಸ್ಪಷ್ಟೀಕರಣ ನೀಡಿದ್ದು ವರದಿಗಳನ್ನು ನಿರಾಕರಿಸಿದ್ದಾರೆ. “ಉತ್ತರಪ್ರದೇಶದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ, ಮುಸ್ಲಿಂ ನಾಯಕನನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವುದಾದರೆ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ AIMIM ಎಂದೂ ಹೇಳಿಲ್ಲ” ಎಂದು ಅವರು ತಿಳಿಸಿದ್ದಾರೆ.

ಪಕ್ಷದ ಯುಪಿ ಅಧ್ಯಕನಾದ ತಾನಾಗಲಿ ಅಥವಾ AIMIM ಮುಖ್ಯಸ್ಥ ಅಸದುದ್ದೀನ್ ಒವೈಸಿ ಆಗಲೀ ಈ ರೀತಿಯ ಹೇಳಿಕೆಗಳನ್ನು ನೀಡಿಲ್ಲ ಎಂದು ಮಾಧ್ಯಮಗಳ ವರದಿಗಳನ್ನು ಅವರು ನಿರಾಕರಿಸಿದ್ದಾರೆ.

ಇದನ್ನೂ ಓದಿ: ಯುಪಿ ವಿಧಾನಸಭೆ ಚುನಾವಣೆ-2022: 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಎಐಎಂಐಎಂ

“ಹಿಂದಿನ ಚುನಾವಣೆಗಳಲ್ಲಿ 20% ರಷ್ಟು ಮುಸ್ಲಿಂ ಮತಗಳನ್ನು ಗಳಿಸಿ ಅಧಿಕಾರಕ್ಕೆ ಬಂದರೂ, ಎಸ್‌ಪಿ ಅವರು ಯಾವುದೇ ಮುಸ್ಲಿಮರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿಲ್ಲ” ಎಂದಷ್ಟೇ ಪಕ್ಷವು ಹೇಳಿದೆ ಎಂದು ಶೌಕತ್‌‌ ಅಲಿ ಹೇಳಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಎಐಎಂಐಎಂ 100 ಸ್ಥಾನಗಳಿಗೆ ಸ್ಪರ್ಧಿಸುವುದಾಗಿ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಒವೈಸಿ ಈ ಹಿಂದೆ ಘೋಷಿಸಿದ್ದರು.

ಪಕ್ಷದ ಅಧ್ಯಕ್ಷ ಒವೈಸಿ ಈ ಹಿಂದೆ ಲಕ್ನೋಗೆ ಭೇಟಿ ನೀಡಿ, ಸಣ್ಣ ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಸಂಸತ್ತಿನ ಮಾನ್ಸೂನ್ ಅಧಿವೇಶನ ಮುಗಿದ ನಂತರ ಅವರು ಪ್ರಯಾಗರಾಜ್, ಕೌಶಂಭಿ ಮತ್ತು ಫತೇಪುರಕ್ಕೆ ಭೇಟಿ ನೀಡಲಿದ್ದಾರೆ.

2017 ರ ವಿಧಾನಸಭಾ ಚುನಾವಣೆಯಲ್ಲಿ, AIMIM ತನ್ನ ಅಭ್ಯರ್ಥಿಗಳನ್ನು 38 ಸ್ಥಾನಗಳಲ್ಲಿ ಕಣಕ್ಕಿಳಿಸಿತ್ತು. ಆದರೆ ಒಂದು ಕ್ಷೇತ್ರವನ್ನು ಸಹ ಗೆಲ್ಲಲು ಸಾಧ್ಯವಾಗಲಿಲ್ಲ. ನಂತರ 2019 ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿತ್ತು. ಅಲ್ಲದೆ ಪಕ್ಷವು ಬಿಜೆಪಿ ವಿರುದ್ಧ ಚುನಾವಣಾ ಪ್ರಚಾರ ನಡೆಸಿತ್ತು.

2017 ರಲ್ಲಿ ಬಿಜೆಪಿ 312 ವಿಧಾನಸಭಾ ಸ್ಥಾನಗಳನ್ನು ಗೆದ್ದಿದೆ. 403 ಸದಸ್ಯ ಬಲವಿರುವ ವಿಧಾನಸಭೆಯಲ್ಲಿ ಪಕ್ಷವು 39.67% ರಷ್ಟು ಮತಗಳನ್ನು ಗಳಿಸಿದೆ. ಸಮಾಜವಾದಿ ಪಕ್ಷ (ಎಸ್‌ಪಿ) 47 ಸ್ಥಾನಗಳನ್ನು, ಬಿಎಸ್‌ಪಿ 19 ಸ್ಥಾನಗಳನ್ನು ಹಾಗೂ ಕಾಂಗ್ರೆಸ್ ಕೇವಲ ಏಳು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿತ್ತು.

ಇದನ್ನೂ ಓದಿ: ಒವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...