Homeಮುಖಪುಟಯುಪಿ ಚುನಾವಣೆ-2022 | ಏಕಾಂಗಿಯಾಗಿ ಸ್ಪರ್ಧಿಸಲಿರುವ ಕಾಂಗ್ರೆಸ್: ಪ್ರಿಯಾಂಕ ಗಾಂಧಿ ಘೋಷಣೆ

ಯುಪಿ ಚುನಾವಣೆ-2022 | ಏಕಾಂಗಿಯಾಗಿ ಸ್ಪರ್ಧಿಸಲಿರುವ ಕಾಂಗ್ರೆಸ್: ಪ್ರಿಯಾಂಕ ಗಾಂಧಿ ಘೋಷಣೆ

- Advertisement -
- Advertisement -

ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್‌ ತನ್ನ ಸ್ವಂತ ಬಲದ ಮೇಲೆ ಸ್ಪರ್ಧಿಸಲಿದೆ ಮತ್ತು ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾನುವಾರ ಯುಪಿಯ ಬುಲಂದ್‌ಶಹರ್‌ನಲ್ಲಿ ನಡೆದ ‘ಪ್ರತಿಜ್ಞಾ ಸಮ್ಮೇಳನ-ಲಕ್ಷ್ಯ 2022’ ರ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಸಮಾಜವಾದಿ ಪಕ್ಷ ಅಥವಾ ಅಖಿಲೇಶ್ ಯಾದವ್ ಜೊತೆಗಿನ ಮೈತ್ರಿಯ ಬಗ್ಗೆಗಿನ ವದಂತಿಗಳನ್ನು ತಳ್ಳಿಹಾಕಿದ ಅವರು, ಕಾಂಗ್ರೆಸ್ ಕಾರ್ಯಕರ್ತರಿಗೆ ಮಾತ್ರ ಟಿಕೆಟ್ ನೀಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಹಿಂಸಾಚಾರ: ಅಮರಾವತಿ, ಪುಣೆಯಲ್ಲಿ ಸೆಕ್ಷನ್ 144 ಜಾರಿ

ಬಿಜೆಪಿಯ ಹಣದುಬ್ಬರ ಮತ್ತು ಲೂಟಿ ನೀತಿಗಳ ವಿರುದ್ಧ ಕಾಂಗ್ರೆಸ್ ತನ್ನ ಸಂಘಟನೆಯ ಬಲದ ಮೇಲೆ 5 ವರ್ಷಗಳ ಕಾಲ ಹೋರಾಡಿದೆ. ಪಕ್ಷವು ಸಂಘಟನೆಯ ಬಲದ ಮೇಲೆ ದೃಢವಾಗಿ ಚುನಾವಣೆ ಎದುರಿಸಲಿದೆ ಎಂದೂ ಅವರು ಟ್ವೀಟ್ ಮಾಡಿದ್ದಾರೆ.ಶಯ

ಯುಪಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರವು ಇಲ್ಲಿಯವರೆಗೆ ಮಹಿಳೆಯರ ಮೇಲೆ ಹೆಚ್ಚಾಗಿ ಕೇಂದ್ರೀಕರಿಸಿ ನಡೆಯುತ್ತಿದೆ. ಅವರ ಹಿತಾಸಕ್ತಿಗಳನ್ನು ಪ್ರತಿನಿಧಿಸಲು ಕಾಂಗ್ರೆಸ್‌ಗೆ ಮತ ನೀಡುವಂತೆ ಪಕ್ಷವು ಒತ್ತಾಯಿಸುತ್ತಿದೆ. ಜೊತಗೆ ಪಕ್ಷದಿಂದ 40% ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು ಎಂದು ಕಾಂಗ್ರೆಸ್ ಈಗಾಗಲೆ ಭರವಸೆ ನೀಡಿದೆ.

ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಒಟ್ಟುಗೂಡಿಸಲು ಶ್ರಮಿಸುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 403 ಸ್ಥಾನಗಳಲ್ಲಿ ಕೇವಲ 7 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. ಈ ಬಾರಿ ಪ್ರಿಯಾಂಕ ಗಾಂಧಿ ಅವರ ಮೂಲಕ ಕಾಂಗ್ರೆಸ್‌ ಶತಾಯಗತ ಅಧಿಕಾರಕ್ಕಾಗಿ ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: ಗುಜರಾತ್: ರೈಲಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ, ಅತ್ಯಾಚಾರದ ಸಂ 

ಕೊರೊನಾ ಸಾಂಕ್ರಾಮಿಕದ ಅಸಮರ್ಪಕ ನಿರ್ವಹಣೆಗಾಗಿ ತೀವ್ರ ಟೀಕೆಗಳನ್ನು ಎದುರಿಸುತ್ತಿರುವ ಆದಿತ್ಯನಾಥ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕಾ ಗಾಂಧಿ, “ಬಿಜೆಪಿ, ಎಸ್‌ಪಿ ಅಥವಾ ಬಿಎಸ್‌ಪಿ ಪಕ್ಷಗಳು ಹತ್ರಾಸ್, ಉನ್ನಾವೋ ಮತ್ತು ಸಾಂಕ್ರಾಮಿಕ ಬಿಕ್ಕಟ್ಟಿನ ಸಮಯದಲ್ಲಿ ಯುಪಿ ಜನರಿಗೆ ಸಹಾಯ ಮಾಡಲು ಬಂದಿಲ್ಲ. ಆದರೆ ಕಾಂಗ್ರೆಸ್ ಈ ಎಲ್ಲಾ ಸಂದರ್ಭದಲ್ಲಿ  ಸಹಾಯ ಮಾಡಿದೆ” ಎಂದು ಹೇಳಿದ್ದಾರೆ.

“ಭಾರತ ಸ್ವಾತಂತ್ರ್ಯ ಹೊಂದಲು ಕಾರಣಕರ್ತರಾದ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು ಮತ್ತು ಸರ್ದಾರ್ ವಲ್ಲಭಾಯಿ ಪಟೇಲ್ ಅವರಂತಹವರನ್ನು ನಿರಂತರವಾಗಿ ಬಿಜೆಪಿ ಅವಮಾನಿಸುತ್ತಿದೆ. ಬಿಜೆಪಿಗೆ ಸ್ವಾತಂತ್ರ್ಯ ಚಳವಳಿಯ ಬಗ್ಗೆ ಯಾವುದೆ ಗೌರವ ಇಲ್ಲ” ಎಂದು ಪ್ರಿಯಾಂಕ ಹೇಳಿದ್ದಾರೆ.

ಕಾಂಗ್ರೆಸ್ ಅನ್ನು ಬಲಪಡಿಸಲು, ಬೂತ್ ಮಟ್ಟದ ಚಟುವಟಿಕೆಗಳು ಮತ್ತು ಕಾರ್ಯಕರ್ತರಿಗೆ ಹೆಚ್ಚಿನ ಪ್ರಚಾರ ನೀಡಬೇಕು. ಇದಕ್ಕಾಗಿ ಸಾಮಾಜಿಕ ಮಾಧ್ಯಮವನ್ನು ಪರಿಣಾಮಕಾರಿಯಾಗಿ ಬಳಸಬೇಕು. ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚು ಸಕ್ರಿಯರಾಗಿರಬೇಕು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪಕ್ಷದ ಚಟುವಟಿಕೆಗಳನ್ನು ಹೆಚ್ಚು ಪೋಸ್ಟ್ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉತ್ತಮ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಏಕೆ ಬೇಕು ಎಂಬುದಕ್ಕೆ ಯೋಗಿ ಆದಿತ್ಯನಾಥ್ ಸಾಕ್ಷಿ: ಒವೈಸಿ 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...