Homeಮುಖಪುಟಯುಪಿ ಚುನಾವಣೆ-2022 | ಏಕಾಂಗಿಯಾಗಿ ಸ್ಪರ್ಧಿಸಲಿರುವ ಕಾಂಗ್ರೆಸ್: ಪ್ರಿಯಾಂಕ ಗಾಂಧಿ ಘೋಷಣೆ

ಯುಪಿ ಚುನಾವಣೆ-2022 | ಏಕಾಂಗಿಯಾಗಿ ಸ್ಪರ್ಧಿಸಲಿರುವ ಕಾಂಗ್ರೆಸ್: ಪ್ರಿಯಾಂಕ ಗಾಂಧಿ ಘೋಷಣೆ

- Advertisement -
- Advertisement -

ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್‌ ತನ್ನ ಸ್ವಂತ ಬಲದ ಮೇಲೆ ಸ್ಪರ್ಧಿಸಲಿದೆ ಮತ್ತು ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾನುವಾರ ಯುಪಿಯ ಬುಲಂದ್‌ಶಹರ್‌ನಲ್ಲಿ ನಡೆದ ‘ಪ್ರತಿಜ್ಞಾ ಸಮ್ಮೇಳನ-ಲಕ್ಷ್ಯ 2022’ ರ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಸಮಾಜವಾದಿ ಪಕ್ಷ ಅಥವಾ ಅಖಿಲೇಶ್ ಯಾದವ್ ಜೊತೆಗಿನ ಮೈತ್ರಿಯ ಬಗ್ಗೆಗಿನ ವದಂತಿಗಳನ್ನು ತಳ್ಳಿಹಾಕಿದ ಅವರು, ಕಾಂಗ್ರೆಸ್ ಕಾರ್ಯಕರ್ತರಿಗೆ ಮಾತ್ರ ಟಿಕೆಟ್ ನೀಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಹಿಂಸಾಚಾರ: ಅಮರಾವತಿ, ಪುಣೆಯಲ್ಲಿ ಸೆಕ್ಷನ್ 144 ಜಾರಿ

ಬಿಜೆಪಿಯ ಹಣದುಬ್ಬರ ಮತ್ತು ಲೂಟಿ ನೀತಿಗಳ ವಿರುದ್ಧ ಕಾಂಗ್ರೆಸ್ ತನ್ನ ಸಂಘಟನೆಯ ಬಲದ ಮೇಲೆ 5 ವರ್ಷಗಳ ಕಾಲ ಹೋರಾಡಿದೆ. ಪಕ್ಷವು ಸಂಘಟನೆಯ ಬಲದ ಮೇಲೆ ದೃಢವಾಗಿ ಚುನಾವಣೆ ಎದುರಿಸಲಿದೆ ಎಂದೂ ಅವರು ಟ್ವೀಟ್ ಮಾಡಿದ್ದಾರೆ.ಶಯ

ಯುಪಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರವು ಇಲ್ಲಿಯವರೆಗೆ ಮಹಿಳೆಯರ ಮೇಲೆ ಹೆಚ್ಚಾಗಿ ಕೇಂದ್ರೀಕರಿಸಿ ನಡೆಯುತ್ತಿದೆ. ಅವರ ಹಿತಾಸಕ್ತಿಗಳನ್ನು ಪ್ರತಿನಿಧಿಸಲು ಕಾಂಗ್ರೆಸ್‌ಗೆ ಮತ ನೀಡುವಂತೆ ಪಕ್ಷವು ಒತ್ತಾಯಿಸುತ್ತಿದೆ. ಜೊತಗೆ ಪಕ್ಷದಿಂದ 40% ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು ಎಂದು ಕಾಂಗ್ರೆಸ್ ಈಗಾಗಲೆ ಭರವಸೆ ನೀಡಿದೆ.

ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನ ಪ್ರಿಯಾಂಕಾ ಗಾಂಧಿ ಅವರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಒಟ್ಟುಗೂಡಿಸಲು ಶ್ರಮಿಸುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 403 ಸ್ಥಾನಗಳಲ್ಲಿ ಕೇವಲ 7 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. ಈ ಬಾರಿ ಪ್ರಿಯಾಂಕ ಗಾಂಧಿ ಅವರ ಮೂಲಕ ಕಾಂಗ್ರೆಸ್‌ ಶತಾಯಗತ ಅಧಿಕಾರಕ್ಕಾಗಿ ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: ಗುಜರಾತ್: ರೈಲಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ, ಅತ್ಯಾಚಾರದ ಸಂ 

ಕೊರೊನಾ ಸಾಂಕ್ರಾಮಿಕದ ಅಸಮರ್ಪಕ ನಿರ್ವಹಣೆಗಾಗಿ ತೀವ್ರ ಟೀಕೆಗಳನ್ನು ಎದುರಿಸುತ್ತಿರುವ ಆದಿತ್ಯನಾಥ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕಾ ಗಾಂಧಿ, “ಬಿಜೆಪಿ, ಎಸ್‌ಪಿ ಅಥವಾ ಬಿಎಸ್‌ಪಿ ಪಕ್ಷಗಳು ಹತ್ರಾಸ್, ಉನ್ನಾವೋ ಮತ್ತು ಸಾಂಕ್ರಾಮಿಕ ಬಿಕ್ಕಟ್ಟಿನ ಸಮಯದಲ್ಲಿ ಯುಪಿ ಜನರಿಗೆ ಸಹಾಯ ಮಾಡಲು ಬಂದಿಲ್ಲ. ಆದರೆ ಕಾಂಗ್ರೆಸ್ ಈ ಎಲ್ಲಾ ಸಂದರ್ಭದಲ್ಲಿ  ಸಹಾಯ ಮಾಡಿದೆ” ಎಂದು ಹೇಳಿದ್ದಾರೆ.

“ಭಾರತ ಸ್ವಾತಂತ್ರ್ಯ ಹೊಂದಲು ಕಾರಣಕರ್ತರಾದ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು ಮತ್ತು ಸರ್ದಾರ್ ವಲ್ಲಭಾಯಿ ಪಟೇಲ್ ಅವರಂತಹವರನ್ನು ನಿರಂತರವಾಗಿ ಬಿಜೆಪಿ ಅವಮಾನಿಸುತ್ತಿದೆ. ಬಿಜೆಪಿಗೆ ಸ್ವಾತಂತ್ರ್ಯ ಚಳವಳಿಯ ಬಗ್ಗೆ ಯಾವುದೆ ಗೌರವ ಇಲ್ಲ” ಎಂದು ಪ್ರಿಯಾಂಕ ಹೇಳಿದ್ದಾರೆ.

ಕಾಂಗ್ರೆಸ್ ಅನ್ನು ಬಲಪಡಿಸಲು, ಬೂತ್ ಮಟ್ಟದ ಚಟುವಟಿಕೆಗಳು ಮತ್ತು ಕಾರ್ಯಕರ್ತರಿಗೆ ಹೆಚ್ಚಿನ ಪ್ರಚಾರ ನೀಡಬೇಕು. ಇದಕ್ಕಾಗಿ ಸಾಮಾಜಿಕ ಮಾಧ್ಯಮವನ್ನು ಪರಿಣಾಮಕಾರಿಯಾಗಿ ಬಳಸಬೇಕು. ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚು ಸಕ್ರಿಯರಾಗಿರಬೇಕು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪಕ್ಷದ ಚಟುವಟಿಕೆಗಳನ್ನು ಹೆಚ್ಚು ಪೋಸ್ಟ್ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉತ್ತಮ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಏಕೆ ಬೇಕು ಎಂಬುದಕ್ಕೆ ಯೋಗಿ ಆದಿತ್ಯನಾಥ್ ಸಾಕ್ಷಿ: ಒವೈಸಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...