Homeಮುಖಪುಟಯುಪಿ ಚುನಾವಣೆ-2022: ಯುವಜನರಿಗೆ ವಿಶೇಷ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ!

ಯುಪಿ ಚುನಾವಣೆ-2022: ಯುವಜನರಿಗೆ ವಿಶೇಷ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ!

- Advertisement -
- Advertisement -

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಯುವ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, ಭಾರತದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯಕ್ಕಾಗಿ ತನ್ನ ವಿಷನ್ ಡಾಕ್ಯುಮೆಂಟ್‌ನಲ್ಲಿ ನಿರುದ್ಯೋಗ ಸೇರಿದಂತೆ ಯುವಕರಿಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದೆ.

“ಭಾರತಕ್ಕೆ ಹೊಸ ದೃಷ್ಟಿಕೋನ ಬೇಕು ಎಂಬುವುದು ನಮ್ಮ ತಿಳುವಳಿಕೆ ಮತ್ತು ನಂಬಿಕೆ. ಭಾರತದ ಹೊಸ ದೃಷ್ಟಿಕೋನಕ್ಕಾಗಿ, ನೀವು ಉತ್ತರ ಪ್ರದೇಶದಿಂದ ಪ್ರಾರಂಭಿಸಿ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ:ಯುಪಿ ಚುನಾವಣೆ: ಮಹಿಳೆಯರಿಗೆ ಕಾಂಗ್ರೆಸ್‌ ಆದ್ಯತೆ; ಉಳಿದ ಪಕ್ಷಗಳ ಕಥೆಯೇನು..?

“ಉದ್ಯೋಗ ಸೃಷ್ಟಿ ಮಾಡುವುದನ್ನು ಮರೆತುಬಿಡಿ, ಇರುವ ಉದ್ಯೋಗವನ್ನೇ ಯುವಕರು ಇಂದು ಕಳೆದುಕೊಂಡಿದ್ದಾರೆ. ಯಾಕೆಂದರೆ ಎಲ್ಲಾ ಕೆಲಸಗಳನ್ನು 2-3 ಕೈಗಾರಿಕೋದ್ಯಮಿಗಳಿಗೆ ನೀಡಲಾಗುತ್ತಿದೆ. ಆದ್ದರಿಂದ, ಕಾಂಗ್ರೆಸ್ ಯುಪಿಯ ಯುವಕರನ್ನು ಮಾತನಾಡಿ ನಾವು ನಿಮಗೆ ಹೇಗೆ ಉದ್ಯೋಗ ಸೃಷ್ಟಿಸಬಹುದು ಎಂದು ನಿರ್ಧರಿಸಿದೆ” ಎಂದು ದೆಹಲಿಯ ಕಾಂಗ್ರೆಸ್‌ ಪ್ರಧಾನ ಕಚೇರಿಯಲ್ಲಿ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ವಿಷನ್ ಡಾಕ್ಯುಮೆಂಟ್ ಅನ್ನು ಬಿಡುಗಡೆ ಮಾಡುತ್ತಾ ರಾಹುಲ್ ಗಾಂಧಿ ಹೇಳಿದ್ದಾರೆ.

ವಿಷನ್‌ ಡಾಕ್ಯುಮಂಟ್‌ ಅನ್ನು ಯುಪಿಯ ಯುವಕರೊಂದಿಗೆ ಮಾತನಾಡಿ ಮತ್ತು ಸಂವಾದ ನಡೆಸಿದ ನಂತರ ಯುವಜನರಿಗಾಗಿ ಮಾಡಲಾಗಿದೆ ಎಂದು ಕಾಂಗ್ರೆಸ್‌‌ ಹೇಳಿದೆ.

“ಅವರು ಎದುರಿಸುತ್ತಿರುವ ಕಷ್ಟಗಳು ಮತ್ತು ಅವರ ಸಮಸ್ಯೆಗಳೇನು ಎಂಬುದನ್ನು ನಾವು ನೋಡಿದ್ದೇವೆ. ಎಲ್ಲಾ ರಾಜಕೀಯ ಪಕ್ಷಗಳು ಬಂದು 25 ಲಕ್ಷ ಉದ್ಯೋಗಗಳು, 30 ಲಕ್ಷ ಉದ್ಯೋಗಗಳು ಎಂದು ಭರವಸೆ ನೀಡುತ್ತವೆ. ಆದರೆ ಅವರು ಅದನ್ನು ಹೇಗೆ ಮಾಡುತ್ತಾರೆ ಎಂಬುದನ್ನು ಯಾರೂ ವಿವರವಾಗಿ ವಿವರಿಸುವುದಿಲ್ಲ. ಕಾಂಗ್ರೆಸ್ ತನ್ನ ಯುವ ಪ್ರಣಾಳಿಕೆಯಲ್ಲಿ ಇದನ್ನು ಮಾಡಿದೆ” ಎಂದು ಪಕ್ಷದ ಉತ್ತರ ಪ್ರದೇಶದ ಉಸ್ತುವಾರಿ, ಪಕ್ಷದ ಪ್ರಧಾನ ಕಾರ್ಯದರ್ಶಿಯು ಆಗಿರುವ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ:ಯುಪಿ ಚುನಾವಣೆ: ಬಿಜೆಪಿ ಬಿಟ್ಟು ಏಕಾಂಗಿ ಸ್ಪರ್ಧೆ ಘೋಷಿಸಿದ ಜೆಡಿಯು

“ಇಂದು ಯುಪಿಯಲ್ಲಿ ಯುವಕರು ಉದ್ಯೋಗ ಪಡೆಯುವಲ್ಲಿ ಅಪಾರ ಸಮಸ್ಯೆ ಎದುರಿಸುತ್ತಿದ್ದಾರೆ. ಅವರು ಅರ್ಹರಾಗಿದ್ದರೂ ನಿರುದ್ಯೋಗಿಗಳಾಗಿದ್ದಾರೆ. ಅವರು ಬಯಸಿದ ಮತ್ತು ಅಗತ್ಯವಿರುವ ಉದ್ಯೋಗವನ್ನು ಪಡೆಯಲು ನಾವು ಅವರಿಗೆ ಸಹಾಯ ಮಾಡುವ ಗುರಿಯನ್ನು ಹೊಂದಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಅಷ್ಟೇ ಅಲ್ಲದೆ, ಪರೀಕ್ಷೆಯ ಸಮಯದಲ್ಲಿ ಯುವಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಗಮನ ಹರಿಸುತ್ತಿದ್ದೇವೆ. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಗುರಿ ಹೊಂದಿದ್ದೇವೆ. ಪರೀಕ್ಷೆಗಳು ಮತ್ತು ವೇಳಾಪಟ್ಟಿಗಳನ್ನು ಗಮನದಲ್ಲಿಟ್ಟುಕೊಂಡು ಉದ್ಯೋಗ ಕ್ಯಾಲೆಂಡರ್ ಮಾಡುವ ಗುರಿಯನ್ನು ನಾವು ಹೊಂದಿದ್ದೇವೆ. ಇದು ಪ್ರಮುಖ ವಿಷಯವಾಗಿದ್ದು, ಹೆಚ್ಚಿನ ಅಗತ್ಯವಿದೆ. ನಾವು ಉತ್ತರ ಪ್ರದೇಶದಲ್ಲಿ ವಾರ್ಷಿಕವಾಗಿ ಯುವ ಉತ್ಸವವನ್ನು ಆಯೋಜಿಸುವ ಗುರಿಯನ್ನು ಹೊಂದಿದ್ದೇವೆ” ಎಂದು ಅವರು ಹೇಳಿದ್ದಾರೆ.

2014 ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಬಿಜೆಪಿ ಪ್ರಸ್ತಾಪಿಸಿದ ಪ್ರಣಾಳಿಕೆಯಾದ ‘ದೃಷ್ಟಿ’ಯು ಸಂಪೂರ್ಣವಾಗಿ ದುರಂತವಾಗಿದೆ ಎಂದು ಉಭಯ ನಾಯಕರು ಹೇಳಿದ್ದಾರೆ.

ಇದನ್ನೂ ಓದಿ:ಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

“ಭಾರತ ಹೊಂದಿರುವ ಜನಸಂಖ್ಯಾ ಲಾಭಾಂಶವನ್ನು ಅವರು ಜನಸಂಖ್ಯಾ ವಿಪತ್ತಾಗಿ ಪರಿವರ್ತಿಸುತ್ತಿದ್ದಾರೆ. ಬಿಜೆಪಿಯ ಕೆಲವು ನಾಯಕರು ಕೂಡಾ ಏನೋ ಒಂದು ತಪ್ಪಾಗಿದೆ ಎಂದು ಒಪ್ಪಿಕೊಳ್ಳುತ್ತಿದ್ದಾರೆ” ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಇಬ್ಬರೂ ಜಂಟಿಯಾಗಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅಪರೂಪದ ಸಂದರ್ಭಗಳಲ್ಲಿ ಇದೂ ಒಂದಾಗಿದೆ.

ಉತ್ತರ ಪ್ರದೇಶದಲ್ಲಿ ಸಂಪೂರ್ಣವಾಗಿ ಕುಸಿದಿರುವ ಕಾಂಗ್ರೆಸ್, ಯುವಕರು ಮತ್ತು ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಚುನಾವಣೆಗೆ ಹೋಗುತ್ತಿದೆ. ಉತ್ತರ ಪ್ರದೇಶದಲ್ಲಿ ಮಹಿಳೆಯರಿಗೆ 40% ದಷ್ಟು ಟಿಕೆಟ್‌ಗಳನ್ನು ಮೀಸಲಿಡುವುದಾಗಿ ಪಕ್ಷ ಘೋಷಿಸಿದೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಮಾರ್ಚ್ 7 ರ ನಡುವೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ:ಯುಪಿ ಚುನಾವಣೆ-2022: ಏಕಾಂಗಿ ಸ್ಪರ್ಧೆ ಎಂದ ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...