Homeಮುಖಪುಟಯುಪಿ ಚುನಾವಣೆ-2022: ಯುವಜನರಿಗೆ ವಿಶೇಷ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ!

ಯುಪಿ ಚುನಾವಣೆ-2022: ಯುವಜನರಿಗೆ ವಿಶೇಷ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ!

- Advertisement -
- Advertisement -

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಯುವ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, ಭಾರತದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯಕ್ಕಾಗಿ ತನ್ನ ವಿಷನ್ ಡಾಕ್ಯುಮೆಂಟ್‌ನಲ್ಲಿ ನಿರುದ್ಯೋಗ ಸೇರಿದಂತೆ ಯುವಕರಿಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದೆ.

“ಭಾರತಕ್ಕೆ ಹೊಸ ದೃಷ್ಟಿಕೋನ ಬೇಕು ಎಂಬುವುದು ನಮ್ಮ ತಿಳುವಳಿಕೆ ಮತ್ತು ನಂಬಿಕೆ. ಭಾರತದ ಹೊಸ ದೃಷ್ಟಿಕೋನಕ್ಕಾಗಿ, ನೀವು ಉತ್ತರ ಪ್ರದೇಶದಿಂದ ಪ್ರಾರಂಭಿಸಿ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ:ಯುಪಿ ಚುನಾವಣೆ: ಮಹಿಳೆಯರಿಗೆ ಕಾಂಗ್ರೆಸ್‌ ಆದ್ಯತೆ; ಉಳಿದ ಪಕ್ಷಗಳ ಕಥೆಯೇನು..?

“ಉದ್ಯೋಗ ಸೃಷ್ಟಿ ಮಾಡುವುದನ್ನು ಮರೆತುಬಿಡಿ, ಇರುವ ಉದ್ಯೋಗವನ್ನೇ ಯುವಕರು ಇಂದು ಕಳೆದುಕೊಂಡಿದ್ದಾರೆ. ಯಾಕೆಂದರೆ ಎಲ್ಲಾ ಕೆಲಸಗಳನ್ನು 2-3 ಕೈಗಾರಿಕೋದ್ಯಮಿಗಳಿಗೆ ನೀಡಲಾಗುತ್ತಿದೆ. ಆದ್ದರಿಂದ, ಕಾಂಗ್ರೆಸ್ ಯುಪಿಯ ಯುವಕರನ್ನು ಮಾತನಾಡಿ ನಾವು ನಿಮಗೆ ಹೇಗೆ ಉದ್ಯೋಗ ಸೃಷ್ಟಿಸಬಹುದು ಎಂದು ನಿರ್ಧರಿಸಿದೆ” ಎಂದು ದೆಹಲಿಯ ಕಾಂಗ್ರೆಸ್‌ ಪ್ರಧಾನ ಕಚೇರಿಯಲ್ಲಿ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ವಿಷನ್ ಡಾಕ್ಯುಮೆಂಟ್ ಅನ್ನು ಬಿಡುಗಡೆ ಮಾಡುತ್ತಾ ರಾಹುಲ್ ಗಾಂಧಿ ಹೇಳಿದ್ದಾರೆ.

ವಿಷನ್‌ ಡಾಕ್ಯುಮಂಟ್‌ ಅನ್ನು ಯುಪಿಯ ಯುವಕರೊಂದಿಗೆ ಮಾತನಾಡಿ ಮತ್ತು ಸಂವಾದ ನಡೆಸಿದ ನಂತರ ಯುವಜನರಿಗಾಗಿ ಮಾಡಲಾಗಿದೆ ಎಂದು ಕಾಂಗ್ರೆಸ್‌‌ ಹೇಳಿದೆ.

“ಅವರು ಎದುರಿಸುತ್ತಿರುವ ಕಷ್ಟಗಳು ಮತ್ತು ಅವರ ಸಮಸ್ಯೆಗಳೇನು ಎಂಬುದನ್ನು ನಾವು ನೋಡಿದ್ದೇವೆ. ಎಲ್ಲಾ ರಾಜಕೀಯ ಪಕ್ಷಗಳು ಬಂದು 25 ಲಕ್ಷ ಉದ್ಯೋಗಗಳು, 30 ಲಕ್ಷ ಉದ್ಯೋಗಗಳು ಎಂದು ಭರವಸೆ ನೀಡುತ್ತವೆ. ಆದರೆ ಅವರು ಅದನ್ನು ಹೇಗೆ ಮಾಡುತ್ತಾರೆ ಎಂಬುದನ್ನು ಯಾರೂ ವಿವರವಾಗಿ ವಿವರಿಸುವುದಿಲ್ಲ. ಕಾಂಗ್ರೆಸ್ ತನ್ನ ಯುವ ಪ್ರಣಾಳಿಕೆಯಲ್ಲಿ ಇದನ್ನು ಮಾಡಿದೆ” ಎಂದು ಪಕ್ಷದ ಉತ್ತರ ಪ್ರದೇಶದ ಉಸ್ತುವಾರಿ, ಪಕ್ಷದ ಪ್ರಧಾನ ಕಾರ್ಯದರ್ಶಿಯು ಆಗಿರುವ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ:ಯುಪಿ ಚುನಾವಣೆ: ಬಿಜೆಪಿ ಬಿಟ್ಟು ಏಕಾಂಗಿ ಸ್ಪರ್ಧೆ ಘೋಷಿಸಿದ ಜೆಡಿಯು

“ಇಂದು ಯುಪಿಯಲ್ಲಿ ಯುವಕರು ಉದ್ಯೋಗ ಪಡೆಯುವಲ್ಲಿ ಅಪಾರ ಸಮಸ್ಯೆ ಎದುರಿಸುತ್ತಿದ್ದಾರೆ. ಅವರು ಅರ್ಹರಾಗಿದ್ದರೂ ನಿರುದ್ಯೋಗಿಗಳಾಗಿದ್ದಾರೆ. ಅವರು ಬಯಸಿದ ಮತ್ತು ಅಗತ್ಯವಿರುವ ಉದ್ಯೋಗವನ್ನು ಪಡೆಯಲು ನಾವು ಅವರಿಗೆ ಸಹಾಯ ಮಾಡುವ ಗುರಿಯನ್ನು ಹೊಂದಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಅಷ್ಟೇ ಅಲ್ಲದೆ, ಪರೀಕ್ಷೆಯ ಸಮಯದಲ್ಲಿ ಯುವಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಗಮನ ಹರಿಸುತ್ತಿದ್ದೇವೆ. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಗುರಿ ಹೊಂದಿದ್ದೇವೆ. ಪರೀಕ್ಷೆಗಳು ಮತ್ತು ವೇಳಾಪಟ್ಟಿಗಳನ್ನು ಗಮನದಲ್ಲಿಟ್ಟುಕೊಂಡು ಉದ್ಯೋಗ ಕ್ಯಾಲೆಂಡರ್ ಮಾಡುವ ಗುರಿಯನ್ನು ನಾವು ಹೊಂದಿದ್ದೇವೆ. ಇದು ಪ್ರಮುಖ ವಿಷಯವಾಗಿದ್ದು, ಹೆಚ್ಚಿನ ಅಗತ್ಯವಿದೆ. ನಾವು ಉತ್ತರ ಪ್ರದೇಶದಲ್ಲಿ ವಾರ್ಷಿಕವಾಗಿ ಯುವ ಉತ್ಸವವನ್ನು ಆಯೋಜಿಸುವ ಗುರಿಯನ್ನು ಹೊಂದಿದ್ದೇವೆ” ಎಂದು ಅವರು ಹೇಳಿದ್ದಾರೆ.

2014 ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಬಿಜೆಪಿ ಪ್ರಸ್ತಾಪಿಸಿದ ಪ್ರಣಾಳಿಕೆಯಾದ ‘ದೃಷ್ಟಿ’ಯು ಸಂಪೂರ್ಣವಾಗಿ ದುರಂತವಾಗಿದೆ ಎಂದು ಉಭಯ ನಾಯಕರು ಹೇಳಿದ್ದಾರೆ.

ಇದನ್ನೂ ಓದಿ:ಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

“ಭಾರತ ಹೊಂದಿರುವ ಜನಸಂಖ್ಯಾ ಲಾಭಾಂಶವನ್ನು ಅವರು ಜನಸಂಖ್ಯಾ ವಿಪತ್ತಾಗಿ ಪರಿವರ್ತಿಸುತ್ತಿದ್ದಾರೆ. ಬಿಜೆಪಿಯ ಕೆಲವು ನಾಯಕರು ಕೂಡಾ ಏನೋ ಒಂದು ತಪ್ಪಾಗಿದೆ ಎಂದು ಒಪ್ಪಿಕೊಳ್ಳುತ್ತಿದ್ದಾರೆ” ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಇಬ್ಬರೂ ಜಂಟಿಯಾಗಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅಪರೂಪದ ಸಂದರ್ಭಗಳಲ್ಲಿ ಇದೂ ಒಂದಾಗಿದೆ.

ಉತ್ತರ ಪ್ರದೇಶದಲ್ಲಿ ಸಂಪೂರ್ಣವಾಗಿ ಕುಸಿದಿರುವ ಕಾಂಗ್ರೆಸ್, ಯುವಕರು ಮತ್ತು ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಚುನಾವಣೆಗೆ ಹೋಗುತ್ತಿದೆ. ಉತ್ತರ ಪ್ರದೇಶದಲ್ಲಿ ಮಹಿಳೆಯರಿಗೆ 40% ದಷ್ಟು ಟಿಕೆಟ್‌ಗಳನ್ನು ಮೀಸಲಿಡುವುದಾಗಿ ಪಕ್ಷ ಘೋಷಿಸಿದೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಮಾರ್ಚ್ 7 ರ ನಡುವೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ:ಯುಪಿ ಚುನಾವಣೆ-2022: ಏಕಾಂಗಿ ಸ್ಪರ್ಧೆ ಎಂದ ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...