Homeಮುಖಪುಟಯುಪಿ ಚುನಾವಣೆ 5ನೇ ಹಂತದ ಮತದಾನ: ಸಂಕಷ್ಟದಲ್ಲಿರುವ ಅಮೇಥಿ ಕ್ಷೇತ್ರದ ರೈತರು

ಯುಪಿ ಚುನಾವಣೆ 5ನೇ ಹಂತದ ಮತದಾನ: ಸಂಕಷ್ಟದಲ್ಲಿರುವ ಅಮೇಥಿ ಕ್ಷೇತ್ರದ ರೈತರು

ಅಮೇಥಿಯ ನಾಲ್ಕು ಕ್ಷೇತ್ರಗಳಲ್ಲಿ 2017ರಲ್ಲಿ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷವು ಗೌರಿಗಂಜ್ ಕ್ಷೇತ್ರವನ್ನು ಗೆದ್ದುಕೊಂಡಿತ್ತು.

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಮೇಲೆ ಈ ಬಾರಿ ರೈತ ಪ್ರಭಾವ ಹೆಚ್ಚಾಗಿದೆ. ಯುಪಿಯ ಪಶ್ಚಿಮ ಭಾಗದ 38 ಕ್ಷೇತ್ರಗಳಲ್ಲಿ ಜಾಟ್ ಸಮುದಾಯಕ್ಕೆ ಸೇರಿದ ರೈತರು ಹೆಚ್ಚಿನ ಪ್ರಭಾವ ಬೀರಲಿದ್ದಾರೆ. ಅದೇ ರೀತಿಯಲ್ಲಿ ಉಳಿದ ಭಾಗದಲ್ಲಿಯೂ ರೈತ ಮತದಾರರು ನಿರ್ಣಾಯಕ ಪಾತ್ರ ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 27 ರಂದು ನಡೆಯಲಿರುವ ಐದನೇ ಹಂತದ ಮತದಾನದ ನಿರ್ಣಾಯಕ ವಿಧಾನಸಭಾ ಕ್ಷೇತ್ರಗಳಲ್ಲಿ ಅಮೇಥಿ ಕ್ಷೇತ್ರ ಒಂದಾಗಿದೆ. ಹಿಂದೆ ಕಾಂಗ್ರೆಸ್‌ ಪಕ್ಷದ ಭದ್ರಕೋಟೆಯಾಗಿದ್ದ ಅಮೇಥಿ ಈಗ ಛಿದ್ರವಾಗಿದೆ. ಬಿಜೆಪಿ ಮತ್ತು ಎಸ್ಪಿ ಇಲ್ಲಿ ಬಲ ಸಾಧಿಸುತ್ತಿವೆ. ಈ ಕ್ಷೇತ್ರದಲ್ಲಿ ರೈತರು ಹಲವು ರೀತಿಯಲ್ಲಿ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆ ಮತದಾನದ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ.

ಅಮೇಥಿ ಕ್ಷೇತ್ರದ ಜನರು ತಮ್ಮ ಜೀವನೋಪಾಯಕ್ಕಾಗಿ ಹೆಚ್ಚಾಗಿ ಕೃಷಿಯನ್ನು ಅವಲಂಬಿಸಿದ್ದಾರೆ. ಆದರೆ, ಅವರು ತಮ್ಮ ದೈನಂದಿನ ಬದುಕನ್ನು ಸಾಗಿಸಲು ಹೋರಾಟ ನಡೆಸುವಂತಾಗಿದೆ. ಬಿಡಾಡಿ ದನಗಳ ಕಾಟ, ರಸಗೊಬ್ಬರ, ವಿದ್ಯುತ್ ಸಮಸ್ಯೆಗಳು ಅವರ ಸಂಕಷ್ಟವನ್ನು ಹೆಚ್ಚಿಸಿವೆ.

ಕ್ಷೇತ್ರವು ಮತದಾನದ ಹೊಸ್ತಿಲಿನಲ್ಲಿದ್ದರೂ, ಅಮೇಥಿಯ ಆವಾಸ್ ವಿಕಾಸ್ ಕಾಲನಿಯಲ್ಲಿರುವ ಬ್ಲಾಕ್ ಕಚೇರಿಯಲ್ಲಿ ರಸಗೊಬ್ಬರಕ್ಕಾಗಿ ರೈತರು ನಿಂತಿದ್ದ ಸರತಿ ಸಾಲು 1.5 ಕಿ.ಮೀಗಿಂತ ಹೆಚ್ಚು ದಾಟಿದೆ. ಈ ಸಾಲು ನೋಡುವವರಿಗೆ ಎಲ್ಲಾ ರೈತರಿಗೂ ಗೊಬ್ಬರ ಸಿಗುತ್ತದೆಯೋ ಇಲ್ಲವೋ ಎಂಬ ಭಾವನೆಯನ್ನು ಹುಟ್ಟಿಸುತ್ತದೆ. ರೈತರೂ ಕೂಡ ಅದೇ ಆತಂಕದಲ್ಲಿ ನಿಲ್ಲುತ್ತಾರೆ.

ಅಲ್ಪಸ್ವಲ್ಪ ಸ್ಥಿತಿವಂತರು ಗೊಬ್ಬರವನ್ನು ಖರೀದಿಸಲು ಮುಗಿಬೀಳುತ್ತಾರೆ. ಇದರಿಂದಾಗಿ ಸಣ್ಣ ರೈತರು ಖಾಸಗಿ ಅಂಗಡಿಗಳಲ್ಲಿ ಖರೀದಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಅಲ್ಲಿನ ಅನೇಕ ರೈತರು ತಮ್ಮ ಅಳಲನ್ನು ಹೇಳಿಕೊಂಡಿದ್ದಾರೆ. ಸಾಮಾನ್ಯವಾಗಿ, 45 ಕೆಜಿ ಇರುವ ಒಂದು ಗೊಬ್ಬರ ಚೀಲಕ್ಕೆ ಸರ್ಕಾರದ ದರ 270 ರೂ. ಆದರೆ ಅದೇ ರಸಗೊಬ್ಬರದ ಬೆಲೆ ಖಾಸಗಿ ಅಂಗಡಿಗಳಲ್ಲಿ 410 ರೂ. ಇದೆ ಎಂದು ರೈತರು ಹೇಳುತ್ತಾರೆ.

“ನಾನು 1,500 ರೂಪಾಯಿಗೆ ರಸಗೊಬ್ಬರವನ್ನು ಖರೀದಿಸಿದೆ. ನಾವು ಏನು ಮಾಡಬೇಕು? ನಾವು ನಮ್ಮ ಹೊಟ್ಟೆಪಾಡು ನೋಡಬೇಕೋ ಅಥವಾ ಎಲ್ಲವನ್ನೂ ಕೃಷಿಗೆ ಖರ್ಚು ಮಾಡಬೇಕೋ? ಅಷ್ಟು ಖರ್ಚು ಮಾಡಿ ಬೆಳೆದ ಬೆಳೆಗಳ ಮೇಲೆ ಬಿಡಾಡಿ ದನಗಳ ಹಾವಳಿ ಮುಂದುವರಿದಿದೆ. ನಾವು ಪ್ರಾಣಿಗಳು ತಿನ್ನಲು ಕೃಷಿ ಮಾಡುತ್ತಿರುವಂತಿದೆ” ಎಂದು ಅಮೇಥಿ ಕ್ಷೇತ್ರದ ಭಗೋರಿಯಾ ಗ್ರಾಮದ ರೈತ ರಾಧೇಶ್ಯಾಮ್ ಹೇಳಿದ್ದಾರೆ.

“ನಿತ್ಯ ಬೆಳೆಗಳನ್ನು ತಿನ್ನುವ ಬಿಡಾಡಿ ದನಗಳ ಹಾವಳಿ ಹೆಚ್ಚುತ್ತಿದೆ. ಜೊತೆಗೆ ಕಾಡುಹಂದಿಗಳ ಕಾಟವೂ ಇದೆ. ಅವು ರೈತರು ಬೆಳೆದ ಕಡಲೆ, ಅವರೆಕಾಳುಗಳನ್ನು ಸಂಪೂರ್ಣವಾಗಿ ನಾಶ ಮಾಡುತ್ತವೆ. ಹೀಗಾಗಿ, ನಮಗೆ ಇನ್ನು ಮುಂದೆ ಕೃಷಿ ಮಾಡಬೇಕು ಎನಿಸುತ್ತಿಲ್ಲ. ಕೃಷಿಯಲ್ಲಿ ಲಾಭವೂ ಇಲ್ಲ, ನಮ್ಮ ಉಳಿತಾಯವೂ ಉಳಿದಿಲ್ಲ. ಸಾಲದ ಮರುಪಾವತಿಯ ಒತ್ತಡವು ಹೆಚ್ಚುತ್ತಿದೆ” ಎಂದು ರೈತರು ಹೇಳುತ್ತಾರೆ.

ಜಿಲ್ಲೆಯ ಅಧಿಕೃತ ವೆಬ್‌ಸೈಟ್ ಪ್ರಕಾರ, ಅಮೇಥಿ ಜಿಲ್ಲೆಯಲ್ಲಿ 1,000 ಹಳ್ಳಿಗಳು, ನಾಲ್ಕು ತಾಲೂಕುಗಳು, 13 ಬ್ಲಾಕ್‌ಗಳನ್ನು ಹೊಂದಿದ್ದು, ಕ್ಷೇತ್ರದಲ್ಲಿ 18,67,678 ಜನಸಂಖ್ಯೆ ಇದೆ. ಅಮೇಥಿ ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಿವೆ – ಗೌರಿಗಂಜ್, ತಿಲೋಯಿ, ಜಗದೀಶ್ಪುರ ಮತ್ತು ಅಮೇಥಿ.

ಈ ಪೈಕಿ, 2017ರಲ್ಲಿ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷವು ಗೌರಿಗಂಜ್ ಕ್ಷೇತ್ರವನ್ನು ಗೆದ್ದುಕೊಂಡಿತ್ತು. ಈ ಬಾರಿ ಅಮೇಥಿ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಆಶಿಶ್ ಶುಕ್ಲಾ, ಬಿಜೆಪಿಯಿಂದ ಸಂಜಯ್ ಸಿನ್ಹ್, ಎಸ್ಪಿಯಿಂದ ಮಹಾರಾಜಿ ಪ್ರಜಾಪತಿ, ಬಿಎಸ್‌ಪಿಯಿಂದ ರಾಗಿಣಿ ತಿವಾರಿ ಮತ್ತು ಎಎಪಿಯಿಂದ ಅನುರಾಗ್ ಸ್ಪರ್ಧಿಸಿದ್ದಾರೆ. ಹಿಂದೆ ರಾಹುಲ್ ಗಾಂಧಿ ಸಂಸದರಾಗಿದ್ದ ಇಲ್ಲಿ ಈಗ ಸ್ಮೃತಿ ಇರಾನಿ ಗೆದ್ದಿದ್ದಾರೆ.

ಕಳೆದ ಬಾರಿ ಅಮೇಥಿ ಗೆದ್ದಿದ್ದ ಬಿಜೆಪಿ ವಿರುದ್ಧ ರೈತರು ಸಿಟ್ಟಾಗಿದ್ದಾರೆ. ಆ ಕ್ಷೇತ್ರದ ರೈತರ ಸಮಸ್ಯೆಗಳನ್ನು ಉಳಿದ ಪಕ್ಷಗಳು ತಮ್ಮ ಪ್ರಚಾರಕ್ಕೆ ಬಳಸಿಕೊಳ್ಳುತ್ತಿವೆ ಮತ್ತು ವಿವಿಧ ರೀತಿಯ ಭರವಸೆಗಳನ್ನು ನೀಡುತ್ತಿವೆ. ಆದರೆ, ಅಲ್ಲಿನ ರೈತರು ಯಾರ ಮೇಲೆ ವಿಶ್ವಾಸವಿಡುತ್ತಾರೆ ಎಂದು ಕಾದು ನೋಡಬೇಕಿದೆ.

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಏಳು ಹಂತಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ನಾಲ್ಕು ಹಂತಗಳಲ್ಲಿ ಮತದಾನ ಮುಗಿದಿದೆ. ಉಳಿದ ಹಂತದ ಮತದಾನವು ಫೆಬ್ರವರಿ 27, ಮಾರ್ಚ್ 3 ಮತ್ತು 7 ರಂದು ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿ; ನಟ ಚೇತನ್‌ಗೆ ಜಾಮೀನು ಮಂಜೂರು, ಆದರೂ ಸದ್ಯಕ್ಕೆ ಬಿಡುಗಡೆಯಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...