Homeಮುಖಪುಟಯುಪಿ ಚುನಾವಣೆ 5ನೇ ಹಂತದ ಮತದಾನ: ಸಂಕಷ್ಟದಲ್ಲಿರುವ ಅಮೇಥಿ ಕ್ಷೇತ್ರದ ರೈತರು

ಯುಪಿ ಚುನಾವಣೆ 5ನೇ ಹಂತದ ಮತದಾನ: ಸಂಕಷ್ಟದಲ್ಲಿರುವ ಅಮೇಥಿ ಕ್ಷೇತ್ರದ ರೈತರು

ಅಮೇಥಿಯ ನಾಲ್ಕು ಕ್ಷೇತ್ರಗಳಲ್ಲಿ 2017ರಲ್ಲಿ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷವು ಗೌರಿಗಂಜ್ ಕ್ಷೇತ್ರವನ್ನು ಗೆದ್ದುಕೊಂಡಿತ್ತು.

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಮೇಲೆ ಈ ಬಾರಿ ರೈತ ಪ್ರಭಾವ ಹೆಚ್ಚಾಗಿದೆ. ಯುಪಿಯ ಪಶ್ಚಿಮ ಭಾಗದ 38 ಕ್ಷೇತ್ರಗಳಲ್ಲಿ ಜಾಟ್ ಸಮುದಾಯಕ್ಕೆ ಸೇರಿದ ರೈತರು ಹೆಚ್ಚಿನ ಪ್ರಭಾವ ಬೀರಲಿದ್ದಾರೆ. ಅದೇ ರೀತಿಯಲ್ಲಿ ಉಳಿದ ಭಾಗದಲ್ಲಿಯೂ ರೈತ ಮತದಾರರು ನಿರ್ಣಾಯಕ ಪಾತ್ರ ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 27 ರಂದು ನಡೆಯಲಿರುವ ಐದನೇ ಹಂತದ ಮತದಾನದ ನಿರ್ಣಾಯಕ ವಿಧಾನಸಭಾ ಕ್ಷೇತ್ರಗಳಲ್ಲಿ ಅಮೇಥಿ ಕ್ಷೇತ್ರ ಒಂದಾಗಿದೆ. ಹಿಂದೆ ಕಾಂಗ್ರೆಸ್‌ ಪಕ್ಷದ ಭದ್ರಕೋಟೆಯಾಗಿದ್ದ ಅಮೇಥಿ ಈಗ ಛಿದ್ರವಾಗಿದೆ. ಬಿಜೆಪಿ ಮತ್ತು ಎಸ್ಪಿ ಇಲ್ಲಿ ಬಲ ಸಾಧಿಸುತ್ತಿವೆ. ಈ ಕ್ಷೇತ್ರದಲ್ಲಿ ರೈತರು ಹಲವು ರೀತಿಯಲ್ಲಿ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆ ಮತದಾನದ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ.

ಅಮೇಥಿ ಕ್ಷೇತ್ರದ ಜನರು ತಮ್ಮ ಜೀವನೋಪಾಯಕ್ಕಾಗಿ ಹೆಚ್ಚಾಗಿ ಕೃಷಿಯನ್ನು ಅವಲಂಬಿಸಿದ್ದಾರೆ. ಆದರೆ, ಅವರು ತಮ್ಮ ದೈನಂದಿನ ಬದುಕನ್ನು ಸಾಗಿಸಲು ಹೋರಾಟ ನಡೆಸುವಂತಾಗಿದೆ. ಬಿಡಾಡಿ ದನಗಳ ಕಾಟ, ರಸಗೊಬ್ಬರ, ವಿದ್ಯುತ್ ಸಮಸ್ಯೆಗಳು ಅವರ ಸಂಕಷ್ಟವನ್ನು ಹೆಚ್ಚಿಸಿವೆ.

ಕ್ಷೇತ್ರವು ಮತದಾನದ ಹೊಸ್ತಿಲಿನಲ್ಲಿದ್ದರೂ, ಅಮೇಥಿಯ ಆವಾಸ್ ವಿಕಾಸ್ ಕಾಲನಿಯಲ್ಲಿರುವ ಬ್ಲಾಕ್ ಕಚೇರಿಯಲ್ಲಿ ರಸಗೊಬ್ಬರಕ್ಕಾಗಿ ರೈತರು ನಿಂತಿದ್ದ ಸರತಿ ಸಾಲು 1.5 ಕಿ.ಮೀಗಿಂತ ಹೆಚ್ಚು ದಾಟಿದೆ. ಈ ಸಾಲು ನೋಡುವವರಿಗೆ ಎಲ್ಲಾ ರೈತರಿಗೂ ಗೊಬ್ಬರ ಸಿಗುತ್ತದೆಯೋ ಇಲ್ಲವೋ ಎಂಬ ಭಾವನೆಯನ್ನು ಹುಟ್ಟಿಸುತ್ತದೆ. ರೈತರೂ ಕೂಡ ಅದೇ ಆತಂಕದಲ್ಲಿ ನಿಲ್ಲುತ್ತಾರೆ.

ಅಲ್ಪಸ್ವಲ್ಪ ಸ್ಥಿತಿವಂತರು ಗೊಬ್ಬರವನ್ನು ಖರೀದಿಸಲು ಮುಗಿಬೀಳುತ್ತಾರೆ. ಇದರಿಂದಾಗಿ ಸಣ್ಣ ರೈತರು ಖಾಸಗಿ ಅಂಗಡಿಗಳಲ್ಲಿ ಖರೀದಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಅಲ್ಲಿನ ಅನೇಕ ರೈತರು ತಮ್ಮ ಅಳಲನ್ನು ಹೇಳಿಕೊಂಡಿದ್ದಾರೆ. ಸಾಮಾನ್ಯವಾಗಿ, 45 ಕೆಜಿ ಇರುವ ಒಂದು ಗೊಬ್ಬರ ಚೀಲಕ್ಕೆ ಸರ್ಕಾರದ ದರ 270 ರೂ. ಆದರೆ ಅದೇ ರಸಗೊಬ್ಬರದ ಬೆಲೆ ಖಾಸಗಿ ಅಂಗಡಿಗಳಲ್ಲಿ 410 ರೂ. ಇದೆ ಎಂದು ರೈತರು ಹೇಳುತ್ತಾರೆ.

“ನಾನು 1,500 ರೂಪಾಯಿಗೆ ರಸಗೊಬ್ಬರವನ್ನು ಖರೀದಿಸಿದೆ. ನಾವು ಏನು ಮಾಡಬೇಕು? ನಾವು ನಮ್ಮ ಹೊಟ್ಟೆಪಾಡು ನೋಡಬೇಕೋ ಅಥವಾ ಎಲ್ಲವನ್ನೂ ಕೃಷಿಗೆ ಖರ್ಚು ಮಾಡಬೇಕೋ? ಅಷ್ಟು ಖರ್ಚು ಮಾಡಿ ಬೆಳೆದ ಬೆಳೆಗಳ ಮೇಲೆ ಬಿಡಾಡಿ ದನಗಳ ಹಾವಳಿ ಮುಂದುವರಿದಿದೆ. ನಾವು ಪ್ರಾಣಿಗಳು ತಿನ್ನಲು ಕೃಷಿ ಮಾಡುತ್ತಿರುವಂತಿದೆ” ಎಂದು ಅಮೇಥಿ ಕ್ಷೇತ್ರದ ಭಗೋರಿಯಾ ಗ್ರಾಮದ ರೈತ ರಾಧೇಶ್ಯಾಮ್ ಹೇಳಿದ್ದಾರೆ.

“ನಿತ್ಯ ಬೆಳೆಗಳನ್ನು ತಿನ್ನುವ ಬಿಡಾಡಿ ದನಗಳ ಹಾವಳಿ ಹೆಚ್ಚುತ್ತಿದೆ. ಜೊತೆಗೆ ಕಾಡುಹಂದಿಗಳ ಕಾಟವೂ ಇದೆ. ಅವು ರೈತರು ಬೆಳೆದ ಕಡಲೆ, ಅವರೆಕಾಳುಗಳನ್ನು ಸಂಪೂರ್ಣವಾಗಿ ನಾಶ ಮಾಡುತ್ತವೆ. ಹೀಗಾಗಿ, ನಮಗೆ ಇನ್ನು ಮುಂದೆ ಕೃಷಿ ಮಾಡಬೇಕು ಎನಿಸುತ್ತಿಲ್ಲ. ಕೃಷಿಯಲ್ಲಿ ಲಾಭವೂ ಇಲ್ಲ, ನಮ್ಮ ಉಳಿತಾಯವೂ ಉಳಿದಿಲ್ಲ. ಸಾಲದ ಮರುಪಾವತಿಯ ಒತ್ತಡವು ಹೆಚ್ಚುತ್ತಿದೆ” ಎಂದು ರೈತರು ಹೇಳುತ್ತಾರೆ.

ಜಿಲ್ಲೆಯ ಅಧಿಕೃತ ವೆಬ್‌ಸೈಟ್ ಪ್ರಕಾರ, ಅಮೇಥಿ ಜಿಲ್ಲೆಯಲ್ಲಿ 1,000 ಹಳ್ಳಿಗಳು, ನಾಲ್ಕು ತಾಲೂಕುಗಳು, 13 ಬ್ಲಾಕ್‌ಗಳನ್ನು ಹೊಂದಿದ್ದು, ಕ್ಷೇತ್ರದಲ್ಲಿ 18,67,678 ಜನಸಂಖ್ಯೆ ಇದೆ. ಅಮೇಥಿ ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಿವೆ – ಗೌರಿಗಂಜ್, ತಿಲೋಯಿ, ಜಗದೀಶ್ಪುರ ಮತ್ತು ಅಮೇಥಿ.

ಈ ಪೈಕಿ, 2017ರಲ್ಲಿ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷವು ಗೌರಿಗಂಜ್ ಕ್ಷೇತ್ರವನ್ನು ಗೆದ್ದುಕೊಂಡಿತ್ತು. ಈ ಬಾರಿ ಅಮೇಥಿ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಆಶಿಶ್ ಶುಕ್ಲಾ, ಬಿಜೆಪಿಯಿಂದ ಸಂಜಯ್ ಸಿನ್ಹ್, ಎಸ್ಪಿಯಿಂದ ಮಹಾರಾಜಿ ಪ್ರಜಾಪತಿ, ಬಿಎಸ್‌ಪಿಯಿಂದ ರಾಗಿಣಿ ತಿವಾರಿ ಮತ್ತು ಎಎಪಿಯಿಂದ ಅನುರಾಗ್ ಸ್ಪರ್ಧಿಸಿದ್ದಾರೆ. ಹಿಂದೆ ರಾಹುಲ್ ಗಾಂಧಿ ಸಂಸದರಾಗಿದ್ದ ಇಲ್ಲಿ ಈಗ ಸ್ಮೃತಿ ಇರಾನಿ ಗೆದ್ದಿದ್ದಾರೆ.

ಕಳೆದ ಬಾರಿ ಅಮೇಥಿ ಗೆದ್ದಿದ್ದ ಬಿಜೆಪಿ ವಿರುದ್ಧ ರೈತರು ಸಿಟ್ಟಾಗಿದ್ದಾರೆ. ಆ ಕ್ಷೇತ್ರದ ರೈತರ ಸಮಸ್ಯೆಗಳನ್ನು ಉಳಿದ ಪಕ್ಷಗಳು ತಮ್ಮ ಪ್ರಚಾರಕ್ಕೆ ಬಳಸಿಕೊಳ್ಳುತ್ತಿವೆ ಮತ್ತು ವಿವಿಧ ರೀತಿಯ ಭರವಸೆಗಳನ್ನು ನೀಡುತ್ತಿವೆ. ಆದರೆ, ಅಲ್ಲಿನ ರೈತರು ಯಾರ ಮೇಲೆ ವಿಶ್ವಾಸವಿಡುತ್ತಾರೆ ಎಂದು ಕಾದು ನೋಡಬೇಕಿದೆ.

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಏಳು ಹಂತಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ನಾಲ್ಕು ಹಂತಗಳಲ್ಲಿ ಮತದಾನ ಮುಗಿದಿದೆ. ಉಳಿದ ಹಂತದ ಮತದಾನವು ಫೆಬ್ರವರಿ 27, ಮಾರ್ಚ್ 3 ಮತ್ತು 7 ರಂದು ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿ; ನಟ ಚೇತನ್‌ಗೆ ಜಾಮೀನು ಮಂಜೂರು, ಆದರೂ ಸದ್ಯಕ್ಕೆ ಬಿಡುಗಡೆಯಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...