Homeಮುಖಪುಟಯುಪಿ ಚುನಾವಣೆ 5ನೇ ಹಂತದ ಮತದಾನ: ಸಂಕಷ್ಟದಲ್ಲಿರುವ ಅಮೇಥಿ ಕ್ಷೇತ್ರದ ರೈತರು

ಯುಪಿ ಚುನಾವಣೆ 5ನೇ ಹಂತದ ಮತದಾನ: ಸಂಕಷ್ಟದಲ್ಲಿರುವ ಅಮೇಥಿ ಕ್ಷೇತ್ರದ ರೈತರು

ಅಮೇಥಿಯ ನಾಲ್ಕು ಕ್ಷೇತ್ರಗಳಲ್ಲಿ 2017ರಲ್ಲಿ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷವು ಗೌರಿಗಂಜ್ ಕ್ಷೇತ್ರವನ್ನು ಗೆದ್ದುಕೊಂಡಿತ್ತು.

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಮೇಲೆ ಈ ಬಾರಿ ರೈತ ಪ್ರಭಾವ ಹೆಚ್ಚಾಗಿದೆ. ಯುಪಿಯ ಪಶ್ಚಿಮ ಭಾಗದ 38 ಕ್ಷೇತ್ರಗಳಲ್ಲಿ ಜಾಟ್ ಸಮುದಾಯಕ್ಕೆ ಸೇರಿದ ರೈತರು ಹೆಚ್ಚಿನ ಪ್ರಭಾವ ಬೀರಲಿದ್ದಾರೆ. ಅದೇ ರೀತಿಯಲ್ಲಿ ಉಳಿದ ಭಾಗದಲ್ಲಿಯೂ ರೈತ ಮತದಾರರು ನಿರ್ಣಾಯಕ ಪಾತ್ರ ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 27 ರಂದು ನಡೆಯಲಿರುವ ಐದನೇ ಹಂತದ ಮತದಾನದ ನಿರ್ಣಾಯಕ ವಿಧಾನಸಭಾ ಕ್ಷೇತ್ರಗಳಲ್ಲಿ ಅಮೇಥಿ ಕ್ಷೇತ್ರ ಒಂದಾಗಿದೆ. ಹಿಂದೆ ಕಾಂಗ್ರೆಸ್‌ ಪಕ್ಷದ ಭದ್ರಕೋಟೆಯಾಗಿದ್ದ ಅಮೇಥಿ ಈಗ ಛಿದ್ರವಾಗಿದೆ. ಬಿಜೆಪಿ ಮತ್ತು ಎಸ್ಪಿ ಇಲ್ಲಿ ಬಲ ಸಾಧಿಸುತ್ತಿವೆ. ಈ ಕ್ಷೇತ್ರದಲ್ಲಿ ರೈತರು ಹಲವು ರೀತಿಯಲ್ಲಿ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆ ಮತದಾನದ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ.

ಅಮೇಥಿ ಕ್ಷೇತ್ರದ ಜನರು ತಮ್ಮ ಜೀವನೋಪಾಯಕ್ಕಾಗಿ ಹೆಚ್ಚಾಗಿ ಕೃಷಿಯನ್ನು ಅವಲಂಬಿಸಿದ್ದಾರೆ. ಆದರೆ, ಅವರು ತಮ್ಮ ದೈನಂದಿನ ಬದುಕನ್ನು ಸಾಗಿಸಲು ಹೋರಾಟ ನಡೆಸುವಂತಾಗಿದೆ. ಬಿಡಾಡಿ ದನಗಳ ಕಾಟ, ರಸಗೊಬ್ಬರ, ವಿದ್ಯುತ್ ಸಮಸ್ಯೆಗಳು ಅವರ ಸಂಕಷ್ಟವನ್ನು ಹೆಚ್ಚಿಸಿವೆ.

ಕ್ಷೇತ್ರವು ಮತದಾನದ ಹೊಸ್ತಿಲಿನಲ್ಲಿದ್ದರೂ, ಅಮೇಥಿಯ ಆವಾಸ್ ವಿಕಾಸ್ ಕಾಲನಿಯಲ್ಲಿರುವ ಬ್ಲಾಕ್ ಕಚೇರಿಯಲ್ಲಿ ರಸಗೊಬ್ಬರಕ್ಕಾಗಿ ರೈತರು ನಿಂತಿದ್ದ ಸರತಿ ಸಾಲು 1.5 ಕಿ.ಮೀಗಿಂತ ಹೆಚ್ಚು ದಾಟಿದೆ. ಈ ಸಾಲು ನೋಡುವವರಿಗೆ ಎಲ್ಲಾ ರೈತರಿಗೂ ಗೊಬ್ಬರ ಸಿಗುತ್ತದೆಯೋ ಇಲ್ಲವೋ ಎಂಬ ಭಾವನೆಯನ್ನು ಹುಟ್ಟಿಸುತ್ತದೆ. ರೈತರೂ ಕೂಡ ಅದೇ ಆತಂಕದಲ್ಲಿ ನಿಲ್ಲುತ್ತಾರೆ.

ಅಲ್ಪಸ್ವಲ್ಪ ಸ್ಥಿತಿವಂತರು ಗೊಬ್ಬರವನ್ನು ಖರೀದಿಸಲು ಮುಗಿಬೀಳುತ್ತಾರೆ. ಇದರಿಂದಾಗಿ ಸಣ್ಣ ರೈತರು ಖಾಸಗಿ ಅಂಗಡಿಗಳಲ್ಲಿ ಖರೀದಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಅಲ್ಲಿನ ಅನೇಕ ರೈತರು ತಮ್ಮ ಅಳಲನ್ನು ಹೇಳಿಕೊಂಡಿದ್ದಾರೆ. ಸಾಮಾನ್ಯವಾಗಿ, 45 ಕೆಜಿ ಇರುವ ಒಂದು ಗೊಬ್ಬರ ಚೀಲಕ್ಕೆ ಸರ್ಕಾರದ ದರ 270 ರೂ. ಆದರೆ ಅದೇ ರಸಗೊಬ್ಬರದ ಬೆಲೆ ಖಾಸಗಿ ಅಂಗಡಿಗಳಲ್ಲಿ 410 ರೂ. ಇದೆ ಎಂದು ರೈತರು ಹೇಳುತ್ತಾರೆ.

“ನಾನು 1,500 ರೂಪಾಯಿಗೆ ರಸಗೊಬ್ಬರವನ್ನು ಖರೀದಿಸಿದೆ. ನಾವು ಏನು ಮಾಡಬೇಕು? ನಾವು ನಮ್ಮ ಹೊಟ್ಟೆಪಾಡು ನೋಡಬೇಕೋ ಅಥವಾ ಎಲ್ಲವನ್ನೂ ಕೃಷಿಗೆ ಖರ್ಚು ಮಾಡಬೇಕೋ? ಅಷ್ಟು ಖರ್ಚು ಮಾಡಿ ಬೆಳೆದ ಬೆಳೆಗಳ ಮೇಲೆ ಬಿಡಾಡಿ ದನಗಳ ಹಾವಳಿ ಮುಂದುವರಿದಿದೆ. ನಾವು ಪ್ರಾಣಿಗಳು ತಿನ್ನಲು ಕೃಷಿ ಮಾಡುತ್ತಿರುವಂತಿದೆ” ಎಂದು ಅಮೇಥಿ ಕ್ಷೇತ್ರದ ಭಗೋರಿಯಾ ಗ್ರಾಮದ ರೈತ ರಾಧೇಶ್ಯಾಮ್ ಹೇಳಿದ್ದಾರೆ.

“ನಿತ್ಯ ಬೆಳೆಗಳನ್ನು ತಿನ್ನುವ ಬಿಡಾಡಿ ದನಗಳ ಹಾವಳಿ ಹೆಚ್ಚುತ್ತಿದೆ. ಜೊತೆಗೆ ಕಾಡುಹಂದಿಗಳ ಕಾಟವೂ ಇದೆ. ಅವು ರೈತರು ಬೆಳೆದ ಕಡಲೆ, ಅವರೆಕಾಳುಗಳನ್ನು ಸಂಪೂರ್ಣವಾಗಿ ನಾಶ ಮಾಡುತ್ತವೆ. ಹೀಗಾಗಿ, ನಮಗೆ ಇನ್ನು ಮುಂದೆ ಕೃಷಿ ಮಾಡಬೇಕು ಎನಿಸುತ್ತಿಲ್ಲ. ಕೃಷಿಯಲ್ಲಿ ಲಾಭವೂ ಇಲ್ಲ, ನಮ್ಮ ಉಳಿತಾಯವೂ ಉಳಿದಿಲ್ಲ. ಸಾಲದ ಮರುಪಾವತಿಯ ಒತ್ತಡವು ಹೆಚ್ಚುತ್ತಿದೆ” ಎಂದು ರೈತರು ಹೇಳುತ್ತಾರೆ.

ಜಿಲ್ಲೆಯ ಅಧಿಕೃತ ವೆಬ್‌ಸೈಟ್ ಪ್ರಕಾರ, ಅಮೇಥಿ ಜಿಲ್ಲೆಯಲ್ಲಿ 1,000 ಹಳ್ಳಿಗಳು, ನಾಲ್ಕು ತಾಲೂಕುಗಳು, 13 ಬ್ಲಾಕ್‌ಗಳನ್ನು ಹೊಂದಿದ್ದು, ಕ್ಷೇತ್ರದಲ್ಲಿ 18,67,678 ಜನಸಂಖ್ಯೆ ಇದೆ. ಅಮೇಥಿ ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಿವೆ – ಗೌರಿಗಂಜ್, ತಿಲೋಯಿ, ಜಗದೀಶ್ಪುರ ಮತ್ತು ಅಮೇಥಿ.

ಈ ಪೈಕಿ, 2017ರಲ್ಲಿ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷವು ಗೌರಿಗಂಜ್ ಕ್ಷೇತ್ರವನ್ನು ಗೆದ್ದುಕೊಂಡಿತ್ತು. ಈ ಬಾರಿ ಅಮೇಥಿ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಆಶಿಶ್ ಶುಕ್ಲಾ, ಬಿಜೆಪಿಯಿಂದ ಸಂಜಯ್ ಸಿನ್ಹ್, ಎಸ್ಪಿಯಿಂದ ಮಹಾರಾಜಿ ಪ್ರಜಾಪತಿ, ಬಿಎಸ್‌ಪಿಯಿಂದ ರಾಗಿಣಿ ತಿವಾರಿ ಮತ್ತು ಎಎಪಿಯಿಂದ ಅನುರಾಗ್ ಸ್ಪರ್ಧಿಸಿದ್ದಾರೆ. ಹಿಂದೆ ರಾಹುಲ್ ಗಾಂಧಿ ಸಂಸದರಾಗಿದ್ದ ಇಲ್ಲಿ ಈಗ ಸ್ಮೃತಿ ಇರಾನಿ ಗೆದ್ದಿದ್ದಾರೆ.

ಕಳೆದ ಬಾರಿ ಅಮೇಥಿ ಗೆದ್ದಿದ್ದ ಬಿಜೆಪಿ ವಿರುದ್ಧ ರೈತರು ಸಿಟ್ಟಾಗಿದ್ದಾರೆ. ಆ ಕ್ಷೇತ್ರದ ರೈತರ ಸಮಸ್ಯೆಗಳನ್ನು ಉಳಿದ ಪಕ್ಷಗಳು ತಮ್ಮ ಪ್ರಚಾರಕ್ಕೆ ಬಳಸಿಕೊಳ್ಳುತ್ತಿವೆ ಮತ್ತು ವಿವಿಧ ರೀತಿಯ ಭರವಸೆಗಳನ್ನು ನೀಡುತ್ತಿವೆ. ಆದರೆ, ಅಲ್ಲಿನ ರೈತರು ಯಾರ ಮೇಲೆ ವಿಶ್ವಾಸವಿಡುತ್ತಾರೆ ಎಂದು ಕಾದು ನೋಡಬೇಕಿದೆ.

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಏಳು ಹಂತಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ನಾಲ್ಕು ಹಂತಗಳಲ್ಲಿ ಮತದಾನ ಮುಗಿದಿದೆ. ಉಳಿದ ಹಂತದ ಮತದಾನವು ಫೆಬ್ರವರಿ 27, ಮಾರ್ಚ್ 3 ಮತ್ತು 7 ರಂದು ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿ; ನಟ ಚೇತನ್‌ಗೆ ಜಾಮೀನು ಮಂಜೂರು, ಆದರೂ ಸದ್ಯಕ್ಕೆ ಬಿಡುಗಡೆಯಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...