Homeಮುಖಪುಟಯುಪಿ ಚುನಾವಣೆ 5ನೇ ಹಂತದ ಮತದಾನ: ಸಂಕಷ್ಟದಲ್ಲಿರುವ ಅಮೇಥಿ ಕ್ಷೇತ್ರದ ರೈತರು

ಯುಪಿ ಚುನಾವಣೆ 5ನೇ ಹಂತದ ಮತದಾನ: ಸಂಕಷ್ಟದಲ್ಲಿರುವ ಅಮೇಥಿ ಕ್ಷೇತ್ರದ ರೈತರು

ಅಮೇಥಿಯ ನಾಲ್ಕು ಕ್ಷೇತ್ರಗಳಲ್ಲಿ 2017ರಲ್ಲಿ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷವು ಗೌರಿಗಂಜ್ ಕ್ಷೇತ್ರವನ್ನು ಗೆದ್ದುಕೊಂಡಿತ್ತು.

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಮೇಲೆ ಈ ಬಾರಿ ರೈತ ಪ್ರಭಾವ ಹೆಚ್ಚಾಗಿದೆ. ಯುಪಿಯ ಪಶ್ಚಿಮ ಭಾಗದ 38 ಕ್ಷೇತ್ರಗಳಲ್ಲಿ ಜಾಟ್ ಸಮುದಾಯಕ್ಕೆ ಸೇರಿದ ರೈತರು ಹೆಚ್ಚಿನ ಪ್ರಭಾವ ಬೀರಲಿದ್ದಾರೆ. ಅದೇ ರೀತಿಯಲ್ಲಿ ಉಳಿದ ಭಾಗದಲ್ಲಿಯೂ ರೈತ ಮತದಾರರು ನಿರ್ಣಾಯಕ ಪಾತ್ರ ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 27 ರಂದು ನಡೆಯಲಿರುವ ಐದನೇ ಹಂತದ ಮತದಾನದ ನಿರ್ಣಾಯಕ ವಿಧಾನಸಭಾ ಕ್ಷೇತ್ರಗಳಲ್ಲಿ ಅಮೇಥಿ ಕ್ಷೇತ್ರ ಒಂದಾಗಿದೆ. ಹಿಂದೆ ಕಾಂಗ್ರೆಸ್‌ ಪಕ್ಷದ ಭದ್ರಕೋಟೆಯಾಗಿದ್ದ ಅಮೇಥಿ ಈಗ ಛಿದ್ರವಾಗಿದೆ. ಬಿಜೆಪಿ ಮತ್ತು ಎಸ್ಪಿ ಇಲ್ಲಿ ಬಲ ಸಾಧಿಸುತ್ತಿವೆ. ಈ ಕ್ಷೇತ್ರದಲ್ಲಿ ರೈತರು ಹಲವು ರೀತಿಯಲ್ಲಿ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆ ಮತದಾನದ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ.

ಅಮೇಥಿ ಕ್ಷೇತ್ರದ ಜನರು ತಮ್ಮ ಜೀವನೋಪಾಯಕ್ಕಾಗಿ ಹೆಚ್ಚಾಗಿ ಕೃಷಿಯನ್ನು ಅವಲಂಬಿಸಿದ್ದಾರೆ. ಆದರೆ, ಅವರು ತಮ್ಮ ದೈನಂದಿನ ಬದುಕನ್ನು ಸಾಗಿಸಲು ಹೋರಾಟ ನಡೆಸುವಂತಾಗಿದೆ. ಬಿಡಾಡಿ ದನಗಳ ಕಾಟ, ರಸಗೊಬ್ಬರ, ವಿದ್ಯುತ್ ಸಮಸ್ಯೆಗಳು ಅವರ ಸಂಕಷ್ಟವನ್ನು ಹೆಚ್ಚಿಸಿವೆ.

ಕ್ಷೇತ್ರವು ಮತದಾನದ ಹೊಸ್ತಿಲಿನಲ್ಲಿದ್ದರೂ, ಅಮೇಥಿಯ ಆವಾಸ್ ವಿಕಾಸ್ ಕಾಲನಿಯಲ್ಲಿರುವ ಬ್ಲಾಕ್ ಕಚೇರಿಯಲ್ಲಿ ರಸಗೊಬ್ಬರಕ್ಕಾಗಿ ರೈತರು ನಿಂತಿದ್ದ ಸರತಿ ಸಾಲು 1.5 ಕಿ.ಮೀಗಿಂತ ಹೆಚ್ಚು ದಾಟಿದೆ. ಈ ಸಾಲು ನೋಡುವವರಿಗೆ ಎಲ್ಲಾ ರೈತರಿಗೂ ಗೊಬ್ಬರ ಸಿಗುತ್ತದೆಯೋ ಇಲ್ಲವೋ ಎಂಬ ಭಾವನೆಯನ್ನು ಹುಟ್ಟಿಸುತ್ತದೆ. ರೈತರೂ ಕೂಡ ಅದೇ ಆತಂಕದಲ್ಲಿ ನಿಲ್ಲುತ್ತಾರೆ.

ಅಲ್ಪಸ್ವಲ್ಪ ಸ್ಥಿತಿವಂತರು ಗೊಬ್ಬರವನ್ನು ಖರೀದಿಸಲು ಮುಗಿಬೀಳುತ್ತಾರೆ. ಇದರಿಂದಾಗಿ ಸಣ್ಣ ರೈತರು ಖಾಸಗಿ ಅಂಗಡಿಗಳಲ್ಲಿ ಖರೀದಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಅಲ್ಲಿನ ಅನೇಕ ರೈತರು ತಮ್ಮ ಅಳಲನ್ನು ಹೇಳಿಕೊಂಡಿದ್ದಾರೆ. ಸಾಮಾನ್ಯವಾಗಿ, 45 ಕೆಜಿ ಇರುವ ಒಂದು ಗೊಬ್ಬರ ಚೀಲಕ್ಕೆ ಸರ್ಕಾರದ ದರ 270 ರೂ. ಆದರೆ ಅದೇ ರಸಗೊಬ್ಬರದ ಬೆಲೆ ಖಾಸಗಿ ಅಂಗಡಿಗಳಲ್ಲಿ 410 ರೂ. ಇದೆ ಎಂದು ರೈತರು ಹೇಳುತ್ತಾರೆ.

“ನಾನು 1,500 ರೂಪಾಯಿಗೆ ರಸಗೊಬ್ಬರವನ್ನು ಖರೀದಿಸಿದೆ. ನಾವು ಏನು ಮಾಡಬೇಕು? ನಾವು ನಮ್ಮ ಹೊಟ್ಟೆಪಾಡು ನೋಡಬೇಕೋ ಅಥವಾ ಎಲ್ಲವನ್ನೂ ಕೃಷಿಗೆ ಖರ್ಚು ಮಾಡಬೇಕೋ? ಅಷ್ಟು ಖರ್ಚು ಮಾಡಿ ಬೆಳೆದ ಬೆಳೆಗಳ ಮೇಲೆ ಬಿಡಾಡಿ ದನಗಳ ಹಾವಳಿ ಮುಂದುವರಿದಿದೆ. ನಾವು ಪ್ರಾಣಿಗಳು ತಿನ್ನಲು ಕೃಷಿ ಮಾಡುತ್ತಿರುವಂತಿದೆ” ಎಂದು ಅಮೇಥಿ ಕ್ಷೇತ್ರದ ಭಗೋರಿಯಾ ಗ್ರಾಮದ ರೈತ ರಾಧೇಶ್ಯಾಮ್ ಹೇಳಿದ್ದಾರೆ.

“ನಿತ್ಯ ಬೆಳೆಗಳನ್ನು ತಿನ್ನುವ ಬಿಡಾಡಿ ದನಗಳ ಹಾವಳಿ ಹೆಚ್ಚುತ್ತಿದೆ. ಜೊತೆಗೆ ಕಾಡುಹಂದಿಗಳ ಕಾಟವೂ ಇದೆ. ಅವು ರೈತರು ಬೆಳೆದ ಕಡಲೆ, ಅವರೆಕಾಳುಗಳನ್ನು ಸಂಪೂರ್ಣವಾಗಿ ನಾಶ ಮಾಡುತ್ತವೆ. ಹೀಗಾಗಿ, ನಮಗೆ ಇನ್ನು ಮುಂದೆ ಕೃಷಿ ಮಾಡಬೇಕು ಎನಿಸುತ್ತಿಲ್ಲ. ಕೃಷಿಯಲ್ಲಿ ಲಾಭವೂ ಇಲ್ಲ, ನಮ್ಮ ಉಳಿತಾಯವೂ ಉಳಿದಿಲ್ಲ. ಸಾಲದ ಮರುಪಾವತಿಯ ಒತ್ತಡವು ಹೆಚ್ಚುತ್ತಿದೆ” ಎಂದು ರೈತರು ಹೇಳುತ್ತಾರೆ.

ಜಿಲ್ಲೆಯ ಅಧಿಕೃತ ವೆಬ್‌ಸೈಟ್ ಪ್ರಕಾರ, ಅಮೇಥಿ ಜಿಲ್ಲೆಯಲ್ಲಿ 1,000 ಹಳ್ಳಿಗಳು, ನಾಲ್ಕು ತಾಲೂಕುಗಳು, 13 ಬ್ಲಾಕ್‌ಗಳನ್ನು ಹೊಂದಿದ್ದು, ಕ್ಷೇತ್ರದಲ್ಲಿ 18,67,678 ಜನಸಂಖ್ಯೆ ಇದೆ. ಅಮೇಥಿ ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಿವೆ – ಗೌರಿಗಂಜ್, ತಿಲೋಯಿ, ಜಗದೀಶ್ಪುರ ಮತ್ತು ಅಮೇಥಿ.

ಈ ಪೈಕಿ, 2017ರಲ್ಲಿ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷವು ಗೌರಿಗಂಜ್ ಕ್ಷೇತ್ರವನ್ನು ಗೆದ್ದುಕೊಂಡಿತ್ತು. ಈ ಬಾರಿ ಅಮೇಥಿ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಆಶಿಶ್ ಶುಕ್ಲಾ, ಬಿಜೆಪಿಯಿಂದ ಸಂಜಯ್ ಸಿನ್ಹ್, ಎಸ್ಪಿಯಿಂದ ಮಹಾರಾಜಿ ಪ್ರಜಾಪತಿ, ಬಿಎಸ್‌ಪಿಯಿಂದ ರಾಗಿಣಿ ತಿವಾರಿ ಮತ್ತು ಎಎಪಿಯಿಂದ ಅನುರಾಗ್ ಸ್ಪರ್ಧಿಸಿದ್ದಾರೆ. ಹಿಂದೆ ರಾಹುಲ್ ಗಾಂಧಿ ಸಂಸದರಾಗಿದ್ದ ಇಲ್ಲಿ ಈಗ ಸ್ಮೃತಿ ಇರಾನಿ ಗೆದ್ದಿದ್ದಾರೆ.

ಕಳೆದ ಬಾರಿ ಅಮೇಥಿ ಗೆದ್ದಿದ್ದ ಬಿಜೆಪಿ ವಿರುದ್ಧ ರೈತರು ಸಿಟ್ಟಾಗಿದ್ದಾರೆ. ಆ ಕ್ಷೇತ್ರದ ರೈತರ ಸಮಸ್ಯೆಗಳನ್ನು ಉಳಿದ ಪಕ್ಷಗಳು ತಮ್ಮ ಪ್ರಚಾರಕ್ಕೆ ಬಳಸಿಕೊಳ್ಳುತ್ತಿವೆ ಮತ್ತು ವಿವಿಧ ರೀತಿಯ ಭರವಸೆಗಳನ್ನು ನೀಡುತ್ತಿವೆ. ಆದರೆ, ಅಲ್ಲಿನ ರೈತರು ಯಾರ ಮೇಲೆ ವಿಶ್ವಾಸವಿಡುತ್ತಾರೆ ಎಂದು ಕಾದು ನೋಡಬೇಕಿದೆ.

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಏಳು ಹಂತಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ನಾಲ್ಕು ಹಂತಗಳಲ್ಲಿ ಮತದಾನ ಮುಗಿದಿದೆ. ಉಳಿದ ಹಂತದ ಮತದಾನವು ಫೆಬ್ರವರಿ 27, ಮಾರ್ಚ್ 3 ಮತ್ತು 7 ರಂದು ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿ; ನಟ ಚೇತನ್‌ಗೆ ಜಾಮೀನು ಮಂಜೂರು, ಆದರೂ ಸದ್ಯಕ್ಕೆ ಬಿಡುಗಡೆಯಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...