Homeಮುಖಪುಟಯುಪಿ ಚುನಾವಣೆ 5ನೇ ಹಂತದ ಮತದಾನ: ಸಂಕಷ್ಟದಲ್ಲಿರುವ ಅಮೇಥಿ ಕ್ಷೇತ್ರದ ರೈತರು

ಯುಪಿ ಚುನಾವಣೆ 5ನೇ ಹಂತದ ಮತದಾನ: ಸಂಕಷ್ಟದಲ್ಲಿರುವ ಅಮೇಥಿ ಕ್ಷೇತ್ರದ ರೈತರು

ಅಮೇಥಿಯ ನಾಲ್ಕು ಕ್ಷೇತ್ರಗಳಲ್ಲಿ 2017ರಲ್ಲಿ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷವು ಗೌರಿಗಂಜ್ ಕ್ಷೇತ್ರವನ್ನು ಗೆದ್ದುಕೊಂಡಿತ್ತು.

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಮೇಲೆ ಈ ಬಾರಿ ರೈತ ಪ್ರಭಾವ ಹೆಚ್ಚಾಗಿದೆ. ಯುಪಿಯ ಪಶ್ಚಿಮ ಭಾಗದ 38 ಕ್ಷೇತ್ರಗಳಲ್ಲಿ ಜಾಟ್ ಸಮುದಾಯಕ್ಕೆ ಸೇರಿದ ರೈತರು ಹೆಚ್ಚಿನ ಪ್ರಭಾವ ಬೀರಲಿದ್ದಾರೆ. ಅದೇ ರೀತಿಯಲ್ಲಿ ಉಳಿದ ಭಾಗದಲ್ಲಿಯೂ ರೈತ ಮತದಾರರು ನಿರ್ಣಾಯಕ ಪಾತ್ರ ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 27 ರಂದು ನಡೆಯಲಿರುವ ಐದನೇ ಹಂತದ ಮತದಾನದ ನಿರ್ಣಾಯಕ ವಿಧಾನಸಭಾ ಕ್ಷೇತ್ರಗಳಲ್ಲಿ ಅಮೇಥಿ ಕ್ಷೇತ್ರ ಒಂದಾಗಿದೆ. ಹಿಂದೆ ಕಾಂಗ್ರೆಸ್‌ ಪಕ್ಷದ ಭದ್ರಕೋಟೆಯಾಗಿದ್ದ ಅಮೇಥಿ ಈಗ ಛಿದ್ರವಾಗಿದೆ. ಬಿಜೆಪಿ ಮತ್ತು ಎಸ್ಪಿ ಇಲ್ಲಿ ಬಲ ಸಾಧಿಸುತ್ತಿವೆ. ಈ ಕ್ಷೇತ್ರದಲ್ಲಿ ರೈತರು ಹಲವು ರೀತಿಯಲ್ಲಿ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆ ಮತದಾನದ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ.

ಅಮೇಥಿ ಕ್ಷೇತ್ರದ ಜನರು ತಮ್ಮ ಜೀವನೋಪಾಯಕ್ಕಾಗಿ ಹೆಚ್ಚಾಗಿ ಕೃಷಿಯನ್ನು ಅವಲಂಬಿಸಿದ್ದಾರೆ. ಆದರೆ, ಅವರು ತಮ್ಮ ದೈನಂದಿನ ಬದುಕನ್ನು ಸಾಗಿಸಲು ಹೋರಾಟ ನಡೆಸುವಂತಾಗಿದೆ. ಬಿಡಾಡಿ ದನಗಳ ಕಾಟ, ರಸಗೊಬ್ಬರ, ವಿದ್ಯುತ್ ಸಮಸ್ಯೆಗಳು ಅವರ ಸಂಕಷ್ಟವನ್ನು ಹೆಚ್ಚಿಸಿವೆ.

ಕ್ಷೇತ್ರವು ಮತದಾನದ ಹೊಸ್ತಿಲಿನಲ್ಲಿದ್ದರೂ, ಅಮೇಥಿಯ ಆವಾಸ್ ವಿಕಾಸ್ ಕಾಲನಿಯಲ್ಲಿರುವ ಬ್ಲಾಕ್ ಕಚೇರಿಯಲ್ಲಿ ರಸಗೊಬ್ಬರಕ್ಕಾಗಿ ರೈತರು ನಿಂತಿದ್ದ ಸರತಿ ಸಾಲು 1.5 ಕಿ.ಮೀಗಿಂತ ಹೆಚ್ಚು ದಾಟಿದೆ. ಈ ಸಾಲು ನೋಡುವವರಿಗೆ ಎಲ್ಲಾ ರೈತರಿಗೂ ಗೊಬ್ಬರ ಸಿಗುತ್ತದೆಯೋ ಇಲ್ಲವೋ ಎಂಬ ಭಾವನೆಯನ್ನು ಹುಟ್ಟಿಸುತ್ತದೆ. ರೈತರೂ ಕೂಡ ಅದೇ ಆತಂಕದಲ್ಲಿ ನಿಲ್ಲುತ್ತಾರೆ.

ಅಲ್ಪಸ್ವಲ್ಪ ಸ್ಥಿತಿವಂತರು ಗೊಬ್ಬರವನ್ನು ಖರೀದಿಸಲು ಮುಗಿಬೀಳುತ್ತಾರೆ. ಇದರಿಂದಾಗಿ ಸಣ್ಣ ರೈತರು ಖಾಸಗಿ ಅಂಗಡಿಗಳಲ್ಲಿ ಖರೀದಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಅಲ್ಲಿನ ಅನೇಕ ರೈತರು ತಮ್ಮ ಅಳಲನ್ನು ಹೇಳಿಕೊಂಡಿದ್ದಾರೆ. ಸಾಮಾನ್ಯವಾಗಿ, 45 ಕೆಜಿ ಇರುವ ಒಂದು ಗೊಬ್ಬರ ಚೀಲಕ್ಕೆ ಸರ್ಕಾರದ ದರ 270 ರೂ. ಆದರೆ ಅದೇ ರಸಗೊಬ್ಬರದ ಬೆಲೆ ಖಾಸಗಿ ಅಂಗಡಿಗಳಲ್ಲಿ 410 ರೂ. ಇದೆ ಎಂದು ರೈತರು ಹೇಳುತ್ತಾರೆ.

“ನಾನು 1,500 ರೂಪಾಯಿಗೆ ರಸಗೊಬ್ಬರವನ್ನು ಖರೀದಿಸಿದೆ. ನಾವು ಏನು ಮಾಡಬೇಕು? ನಾವು ನಮ್ಮ ಹೊಟ್ಟೆಪಾಡು ನೋಡಬೇಕೋ ಅಥವಾ ಎಲ್ಲವನ್ನೂ ಕೃಷಿಗೆ ಖರ್ಚು ಮಾಡಬೇಕೋ? ಅಷ್ಟು ಖರ್ಚು ಮಾಡಿ ಬೆಳೆದ ಬೆಳೆಗಳ ಮೇಲೆ ಬಿಡಾಡಿ ದನಗಳ ಹಾವಳಿ ಮುಂದುವರಿದಿದೆ. ನಾವು ಪ್ರಾಣಿಗಳು ತಿನ್ನಲು ಕೃಷಿ ಮಾಡುತ್ತಿರುವಂತಿದೆ” ಎಂದು ಅಮೇಥಿ ಕ್ಷೇತ್ರದ ಭಗೋರಿಯಾ ಗ್ರಾಮದ ರೈತ ರಾಧೇಶ್ಯಾಮ್ ಹೇಳಿದ್ದಾರೆ.

“ನಿತ್ಯ ಬೆಳೆಗಳನ್ನು ತಿನ್ನುವ ಬಿಡಾಡಿ ದನಗಳ ಹಾವಳಿ ಹೆಚ್ಚುತ್ತಿದೆ. ಜೊತೆಗೆ ಕಾಡುಹಂದಿಗಳ ಕಾಟವೂ ಇದೆ. ಅವು ರೈತರು ಬೆಳೆದ ಕಡಲೆ, ಅವರೆಕಾಳುಗಳನ್ನು ಸಂಪೂರ್ಣವಾಗಿ ನಾಶ ಮಾಡುತ್ತವೆ. ಹೀಗಾಗಿ, ನಮಗೆ ಇನ್ನು ಮುಂದೆ ಕೃಷಿ ಮಾಡಬೇಕು ಎನಿಸುತ್ತಿಲ್ಲ. ಕೃಷಿಯಲ್ಲಿ ಲಾಭವೂ ಇಲ್ಲ, ನಮ್ಮ ಉಳಿತಾಯವೂ ಉಳಿದಿಲ್ಲ. ಸಾಲದ ಮರುಪಾವತಿಯ ಒತ್ತಡವು ಹೆಚ್ಚುತ್ತಿದೆ” ಎಂದು ರೈತರು ಹೇಳುತ್ತಾರೆ.

ಜಿಲ್ಲೆಯ ಅಧಿಕೃತ ವೆಬ್‌ಸೈಟ್ ಪ್ರಕಾರ, ಅಮೇಥಿ ಜಿಲ್ಲೆಯಲ್ಲಿ 1,000 ಹಳ್ಳಿಗಳು, ನಾಲ್ಕು ತಾಲೂಕುಗಳು, 13 ಬ್ಲಾಕ್‌ಗಳನ್ನು ಹೊಂದಿದ್ದು, ಕ್ಷೇತ್ರದಲ್ಲಿ 18,67,678 ಜನಸಂಖ್ಯೆ ಇದೆ. ಅಮೇಥಿ ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಿವೆ – ಗೌರಿಗಂಜ್, ತಿಲೋಯಿ, ಜಗದೀಶ್ಪುರ ಮತ್ತು ಅಮೇಥಿ.

ಈ ಪೈಕಿ, 2017ರಲ್ಲಿ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷವು ಗೌರಿಗಂಜ್ ಕ್ಷೇತ್ರವನ್ನು ಗೆದ್ದುಕೊಂಡಿತ್ತು. ಈ ಬಾರಿ ಅಮೇಥಿ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಆಶಿಶ್ ಶುಕ್ಲಾ, ಬಿಜೆಪಿಯಿಂದ ಸಂಜಯ್ ಸಿನ್ಹ್, ಎಸ್ಪಿಯಿಂದ ಮಹಾರಾಜಿ ಪ್ರಜಾಪತಿ, ಬಿಎಸ್‌ಪಿಯಿಂದ ರಾಗಿಣಿ ತಿವಾರಿ ಮತ್ತು ಎಎಪಿಯಿಂದ ಅನುರಾಗ್ ಸ್ಪರ್ಧಿಸಿದ್ದಾರೆ. ಹಿಂದೆ ರಾಹುಲ್ ಗಾಂಧಿ ಸಂಸದರಾಗಿದ್ದ ಇಲ್ಲಿ ಈಗ ಸ್ಮೃತಿ ಇರಾನಿ ಗೆದ್ದಿದ್ದಾರೆ.

ಕಳೆದ ಬಾರಿ ಅಮೇಥಿ ಗೆದ್ದಿದ್ದ ಬಿಜೆಪಿ ವಿರುದ್ಧ ರೈತರು ಸಿಟ್ಟಾಗಿದ್ದಾರೆ. ಆ ಕ್ಷೇತ್ರದ ರೈತರ ಸಮಸ್ಯೆಗಳನ್ನು ಉಳಿದ ಪಕ್ಷಗಳು ತಮ್ಮ ಪ್ರಚಾರಕ್ಕೆ ಬಳಸಿಕೊಳ್ಳುತ್ತಿವೆ ಮತ್ತು ವಿವಿಧ ರೀತಿಯ ಭರವಸೆಗಳನ್ನು ನೀಡುತ್ತಿವೆ. ಆದರೆ, ಅಲ್ಲಿನ ರೈತರು ಯಾರ ಮೇಲೆ ವಿಶ್ವಾಸವಿಡುತ್ತಾರೆ ಎಂದು ಕಾದು ನೋಡಬೇಕಿದೆ.

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಏಳು ಹಂತಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ನಾಲ್ಕು ಹಂತಗಳಲ್ಲಿ ಮತದಾನ ಮುಗಿದಿದೆ. ಉಳಿದ ಹಂತದ ಮತದಾನವು ಫೆಬ್ರವರಿ 27, ಮಾರ್ಚ್ 3 ಮತ್ತು 7 ರಂದು ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿ; ನಟ ಚೇತನ್‌ಗೆ ಜಾಮೀನು ಮಂಜೂರು, ಆದರೂ ಸದ್ಯಕ್ಕೆ ಬಿಡುಗಡೆಯಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...