Homeಮುಖಪುಟಯುಪಿ ಚುನಾವಣೆ: ಅಯೋಧ್ಯೆಯಲ್ಲಿ ಬದಿಗೆ ಸರಿದ ರಾಮಮಂದಿರ; ವ್ಯಾಪಾರಿಗಳ ಕೂಗು ಮುನ್ನಲೆಗೆ

ಯುಪಿ ಚುನಾವಣೆ: ಅಯೋಧ್ಯೆಯಲ್ಲಿ ಬದಿಗೆ ಸರಿದ ರಾಮಮಂದಿರ; ವ್ಯಾಪಾರಿಗಳ ಕೂಗು ಮುನ್ನಲೆಗೆ

- Advertisement -
- Advertisement -

ಉತ್ತರ ಪ್ರದೇಶದ ಅಯೋಧ್ಯೆಯ ಕೇಂದ್ರಬಿಂದುವಾಗಿರುವ ರಾಮ್ ಕಿ ಪೈಡಿ ಘಾಟ್ ಪ್ರದೇಶದಲ್ಲಿ ಸುಮಾರು 750 ದೊಡ್ಡ ಮತ್ತು ಚಿಕ್ಕ ಅಂಗಡಿಗಳಿವೆ. ಅವುಗಳಲ್ಲಿ ಕೆಲವು ಅಂಗಡಿಗಳು ಬಹಳ ಕಾಲದಿಂದಲೂ ಇವೆ. ಆ ಅಂಗಡಿಗಳಿಂದ ತುಂಬಿರುವ ರಸ್ತೆಯು ಹನುಮಾನ್ ಗರ್ಹಿ ದೇವಾಲಯಕ್ಕೆ ಸಂಪರ್ಕ ಕಲ್ಪಿಸುತ್ತದೆ. ಆ ಕಾರಣದಿಂದಾಗಿ ರಾಜ್ಯ ಸರ್ಕಾರವು ರಸ್ತೆ ಅಗಲೀಕರಣ ಯೋಜನೆಯನ್ನು ರೂಪಿಸಿ, ಜಾರಿಗೊಳಿಸಲು ಮುಂದಾಗಿದೆ. ಇದರಿಂದಾಗಿ, ಕೆಲವು ವ್ಯಾಪಾರಗಳು ಮತ್ತು ಅವುಗಳ ಮಾಲೀಕರಿಗೆ ತಮ್ಮ ಹೊಟ್ಟೆಗೆ ತಣ್ಣೀರು ಬಟ್ಟೆ ಬೀಳಲಿದೆ ಎಂಬ ಆತಂಕ ಉಂಟಾಗಿದೆ.

ಈ ವಿವಾದವು ಯುಪಿ ವಿಧಾನಸಭಾ ಚುನಾವಣೆಯಲ್ಲಿ ಅಯೋಧ್ಯೆ ಕ್ಷೇತ್ರದ ಪ್ರಮುಖ ಚುನಾವಣಾ ವಿಷಯವಾಗಿ ಮಾರ್ಪಟ್ಟಿದೆ. ನಿರ್ಮಾಣ ಹಂತದಲ್ಲಿರುವ ರಾಮ ಮಂದಿರ, ರಾಮ ಇಲ್ಲಿ ಜನಿಸಿದನೆಂಬ ನಂಬಿಕೆಗಳು ಮತ್ತು ಹಿಂದುತ್ವ ಯೋಜನೆಗಳ ಕೇಂದ್ರವಾಗಿದ್ದ ಅಯೋಧ್ಯೆ, ಇವೆಲ್ಲವುಗಳ ಹೊರತಾಗಿ ಈ ಬಾರಿಯ ಚುನಾವಣೆಯಲ್ಲಿ ಅಸಲಿ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿದೆ.

ಅಯೋಧ್ಯೆ ಜಿಲ್ಲೆಯು ಬಿಜೆಪಿ ಭದ್ರಕೋಟೆಯಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. ಇದೀಗ, ವಿಧಾನಸಭಾ ಚುನಾವಣೆಯಲ್ಲಿ ಐದನೇ ಹಂತದ (ಫೆ.27) ಮತದಾನ ನಡೆಯಲಿರುವ ಜಿಲ್ಲೆಗಳಲ್ಲಿ ಅಯೋಧ್ಯೆಯೂ ಒಂದಾಗಿದೆ.

ಈ ಬಾರಿ ಮೂಲಸೌಕರ್ಯ ಮತ್ತು ಸ್ಥಳೀಯ ಆಡಳಿತ ಸಮಸ್ಯೆಗಳು ಚುನಾವಣೆಯ ವಿಷಯವಾಗಿದೆ. ಇದರ ಮಧ್ಯೆ, ಅನೇಕರಿಗೆ ತಮ್ಮ ಜೀವನೋಪಾಯದ ಪ್ರಶ್ನೆಯು ಪ್ರಮುಖವಾಗಿದೆ.

“ಅಯೋಧ್ಯೆಯಲ್ಲಿ ರಸ್ತೆ ಅಗಲೀಕರಣ ಯೋಜನೆ ಜಾರಿಗೆ ಬಂದರೆ, ನಮ್ಮ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಭಯವಿದೆ. ಯುವಕನಾಗಿದ್ದಾಗ ನಾನು ರಾಮಮಂದಿರ ಚಳವಳಿಯನ್ನು ನೋಡಿದ್ದೇನೆ, ಭಾಗವಹಿಸಿದ್ದೇನೆ. ಆದರೆ, ಈಗ ನಾವು ನಮ್ಮ ಜೀವನೋಪಾಯಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಪ್ರವಾಸಿಗರ ಸಂಖ್ಯೆ ಹೆಚ್ಚಿರುವುದರಿಂದ ಖದೌಸ್ (ಮರದ ಚಪ್ಪಲಿ)ಗಳಿಗೆ ಬೇಡಿಕೆಯೂ ಹೆಚ್ಚಿದೆ. ಈಗ ನಾನು ಅಂಗಡಿಯನ್ನು ಕಳೆದುಕೊಳ್ಳಬೇಕಾಗುತ್ತದೆ ಎಂಬ ಊಹೆಯೇ ಭಯಾನಕವಾಗಿದೆ” ಎಂದು ಖದೌಸ್‌‌ ವ್ಯಾಪಾರಿ ರಾಮ್ ಸಾಗರ್ ಹೇಳುತ್ತಾರೆ.

ಇದನ್ನೂ ಓದಿರಿ: ಭೂ ಹಗರಣ, ಬ್ರಾಹ್ಮಣರ ಮತಗಳು ಕೈ ತಪ್ಪುವ ಭಯ: ಅಯೋಧ್ಯೆಯ ಟಿಕೆಟ್‌ ಯೋಗಿ ಕಳೆದುಕೊಳ್ಳಲು ಕಾರಣವೇ?

51 ವರ್ಷದ ರಾಧಾ ಕೃಷ್ಣ ಅವರು ಕಳೆದ ಮೂರು ತಲೆಮಾರುಗಳಿಂದ ಸಿಹಿತಿಂಡಿ ಅಂಗಡಿ ನಡೆಸುತ್ತಿದ್ದಾರೆ. ಆದರೆ, ಅವರು ಮಳಿಗೆಯನ್ನು ಬಾಡಿಗೆಗೆ ಪಡೆದು ವ್ಯಾಪಾರ ನಡೆಸುತ್ತಿದ್ದಾರೆ. ಈಗ ಆ ಅಂಗಡಿ ಮಳಿಗೆಗಳನ್ನು ಕೆಡವಿದರೆ, ಅದರ ಪರಿಹಾರವು ಮಾಲೀಕರಿಗೆ ಸಿಗುತ್ತದೆ. ನಮ್ಮ ಗತಿ ಏನು? ಎಂದು ಅವರು ಚಿಂತಿತರಾಗಿದ್ದಾರೆ.

”ನಾವು ಯಾವುದೇ ಅಭಿವೃದ್ಧಿ ಯೋಜನೆಗಳಿಗೆ ವಿರುದ್ದವಿಲ್ಲ. ಆದರೆ, ಅಂಗಡಿಗಳನ್ನು ಕೆಡವುವ ಮುನ್ನ ಪ್ರತಿಯೊಂದು ಅಂಗಡಿಯವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು” ಎಂದು ಬಟ್ಟೆ ಅಂಗಡಿ ಮಾಲೀಕ ಅನುರಾಗ್ ಶುಕ್ಲಾ ಒತ್ತಾಯಿಸುತ್ತಾರೆ.

ಈ ವ್ಯಾಪಾರಿಗಳ ಅಸಮಾಧಾನ, ಜನರ ಸಂಕಷ್ಟಗಳು ಬಿಜೆಪಿಗೆ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಭಯವನ್ನು ಹುಟ್ಟಿಸಿವೆ. ಈ ಕಾರಣಕ್ಕಾಗಿಯೇ, ಫೆಬ್ರವರಿ 24ರಂದು ನಡೆದ ಬಿಜೆಪಿ ರೋಡ್ ಶೋನಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, “ಅಯೋಧ್ಯೆಯ ಸಂತರು ಮತ್ತು ವ್ಯಾಪಾರಿಗಳಿಗೆ ಒಪ್ಪಿಗೆಯಿಲ್ಲದೆ ಅಯೋಧ್ಯೆಯಲ್ಲಿ ಯಾವುದೇ ಯೋಜನೆಯನ್ನು ಕಾರ್ಯಗತಗೊಳಿಸುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ” ಎಂದು ಹೇಳಿದ್ದಾರೆ.

ಈ ಸಮಸ್ಯೆಗಳನ್ನು ಗ್ರಹಿಸಿರುವ ಮತ್ತು ಅವಕಾಶಕ್ಕಾಗಿ ಕಾಯುತ್ತಿದ್ದ ಸಮಾಜವಾದಿ ಪಕ್ಷದ (SP) ಮಾಜಿ ಶಾಸಕ ತೇಜ್ ನಾರಾಯಣ್ ಪಾಂಡೆ ಅವರು ಸಂಪೂರ್ಣವಾಗಿ ವ್ಯಾಪಾರಿಗಳ ಪರ ನಿಂತಿದ್ದಾರೆ. 2012ರಲ್ಲಿ ಅಯೋಧ್ಯೆಯಲ್ಲಿ ಬಿಜೆಪಿಯ ಲಲ್ಲು ಸಿಂಗ್ ಅವರನ್ನು ಸೋಲಿಸಿದ್ದ ಪಾಂಡೆ, 2017ರಲ್ಲಿ ಬಿಜೆಪಿಯ ವೇದ್ ಪ್ರಕಾಶ್ ಗುಪ್ತಾ ವಿರುದ್ಧ ಸೋತಿದ್ದರು. ಈ ಬಾರಿಯೂ ಅವರು ಎಸ್ಪಿ ಅಭ್ಯರ್ಥಿಯಾಗಿದ್ದಾರೆ. ಬಿಜೆಪಿಯನ್ನು ಮಣಿಸಿ, ಗೆಲುವು ಸಾಧಿಸಲೇಬೇಕು ಎದು ಅವರು ಯತ್ನಿಸುತ್ತಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಾಣ ಮಾಡುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ನಂತರ, ರಾಮ ಮಂದಿರ ನಿರ್ಮಾಣದ ಕೆಲಸಗಳು ನಡೆಯುತ್ತಿವೆ. ಈಗ ಅಯೋಧ್ಯೆ ವಿವಾದವು ರಾಜಕೀಯ ದಾಳವಾಗಿ ಯಾವ ಪಕ್ಷಕ್ಕೂ ಉಳಿದಿಲ್ಲ. ಜನರು, “ರಾಮಮಂದಿರ ವಿವಾದ ಮುಗಿದಿದೆ. ರಾಮಮಂದಿರ ನಿರ್ಮಾಣವಾಗುತ್ತಿದೆ. ಈಗ ಅದರ ಬಗ್ಗೆ ಮಾತನಾಡುವುದೇನಿದೆ?” ಎಂದು ಪ್ರಶ್ನಿಸುತ್ತಿದ್ದಾರೆ. ತಮ್ಮ ಅಸಲಿ ಸಮಸ್ಯೆಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ.

ಹೀಗಾಗಿ, ಬಿಜೆಪಿಯು ಈ ಬಾರಿಯ ಚುನಾವಣೆಯಲ್ಲಿ ರಾಮಮಂದಿರ ವಿಚಾರವನ್ನು ತಮ್ಮ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತಿಲ್ಲ. ಅಲ್ಲದೆ, ಜನರ ಅಸಲಿ ಸಮಸ್ಯೆಗಳಿಗೆ ಉತ್ತರಿಸಲೂ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಅಯೋಧ್ಯೆಯಲ್ಲಿ ಬಿಜೆಪಿಗೆ ಮತಗಳನ್ನು ತರಲು ಅಲ್ಲಿನ ಸಂತರು ಎಲ್ಲಾ ದೇವಾಲಯಗಳಲ್ಲಿಯೂ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಜನರ ಚಿತ್ತವನ್ನು ಬಿಜೆಪಿಯತ್ತ ಸೆಳೆಯಲು ಯತ್ನಿಸುತ್ತಿದ್ದಾರೆ.

ಸಮಾಜವಾದಿ ಪಕ್ಷವು ಜನರ ಸಮಸ್ಯೆಗಳನ್ನಿಟ್ಟುಕೊಂಡು ಚುನಾವಣಾ ಮೈಲೇಜ್ ಪಡೆಯಲು ಮುಂದಾಗಿದೆ. ಅಯೋಧ್ಯೆ ಜನರು ಏನನ್ನು ನಿರ್ಧರಿಸುತ್ತಾರೆ ಎಂಬುದನ್ನು ಮಾರ್ಚ್ 10ರಂದು ಪ್ರಕಟವಾಗುವ ಫಲಿತಾಂಶದಲ್ಲಿ ನೋಡಬೇಕಿದೆ.


ಇದನ್ನೂ ಓದಿರಿ: ಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...