Homeಮುಖಪುಟಯುಪಿ ಚುನಾವಣೆ: ಅಯೋಧ್ಯೆಯಲ್ಲಿ ಬದಿಗೆ ಸರಿದ ರಾಮಮಂದಿರ; ವ್ಯಾಪಾರಿಗಳ ಕೂಗು ಮುನ್ನಲೆಗೆ

ಯುಪಿ ಚುನಾವಣೆ: ಅಯೋಧ್ಯೆಯಲ್ಲಿ ಬದಿಗೆ ಸರಿದ ರಾಮಮಂದಿರ; ವ್ಯಾಪಾರಿಗಳ ಕೂಗು ಮುನ್ನಲೆಗೆ

- Advertisement -
- Advertisement -

ಉತ್ತರ ಪ್ರದೇಶದ ಅಯೋಧ್ಯೆಯ ಕೇಂದ್ರಬಿಂದುವಾಗಿರುವ ರಾಮ್ ಕಿ ಪೈಡಿ ಘಾಟ್ ಪ್ರದೇಶದಲ್ಲಿ ಸುಮಾರು 750 ದೊಡ್ಡ ಮತ್ತು ಚಿಕ್ಕ ಅಂಗಡಿಗಳಿವೆ. ಅವುಗಳಲ್ಲಿ ಕೆಲವು ಅಂಗಡಿಗಳು ಬಹಳ ಕಾಲದಿಂದಲೂ ಇವೆ. ಆ ಅಂಗಡಿಗಳಿಂದ ತುಂಬಿರುವ ರಸ್ತೆಯು ಹನುಮಾನ್ ಗರ್ಹಿ ದೇವಾಲಯಕ್ಕೆ ಸಂಪರ್ಕ ಕಲ್ಪಿಸುತ್ತದೆ. ಆ ಕಾರಣದಿಂದಾಗಿ ರಾಜ್ಯ ಸರ್ಕಾರವು ರಸ್ತೆ ಅಗಲೀಕರಣ ಯೋಜನೆಯನ್ನು ರೂಪಿಸಿ, ಜಾರಿಗೊಳಿಸಲು ಮುಂದಾಗಿದೆ. ಇದರಿಂದಾಗಿ, ಕೆಲವು ವ್ಯಾಪಾರಗಳು ಮತ್ತು ಅವುಗಳ ಮಾಲೀಕರಿಗೆ ತಮ್ಮ ಹೊಟ್ಟೆಗೆ ತಣ್ಣೀರು ಬಟ್ಟೆ ಬೀಳಲಿದೆ ಎಂಬ ಆತಂಕ ಉಂಟಾಗಿದೆ.

ಈ ವಿವಾದವು ಯುಪಿ ವಿಧಾನಸಭಾ ಚುನಾವಣೆಯಲ್ಲಿ ಅಯೋಧ್ಯೆ ಕ್ಷೇತ್ರದ ಪ್ರಮುಖ ಚುನಾವಣಾ ವಿಷಯವಾಗಿ ಮಾರ್ಪಟ್ಟಿದೆ. ನಿರ್ಮಾಣ ಹಂತದಲ್ಲಿರುವ ರಾಮ ಮಂದಿರ, ರಾಮ ಇಲ್ಲಿ ಜನಿಸಿದನೆಂಬ ನಂಬಿಕೆಗಳು ಮತ್ತು ಹಿಂದುತ್ವ ಯೋಜನೆಗಳ ಕೇಂದ್ರವಾಗಿದ್ದ ಅಯೋಧ್ಯೆ, ಇವೆಲ್ಲವುಗಳ ಹೊರತಾಗಿ ಈ ಬಾರಿಯ ಚುನಾವಣೆಯಲ್ಲಿ ಅಸಲಿ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿದೆ.

ಅಯೋಧ್ಯೆ ಜಿಲ್ಲೆಯು ಬಿಜೆಪಿ ಭದ್ರಕೋಟೆಯಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. ಇದೀಗ, ವಿಧಾನಸಭಾ ಚುನಾವಣೆಯಲ್ಲಿ ಐದನೇ ಹಂತದ (ಫೆ.27) ಮತದಾನ ನಡೆಯಲಿರುವ ಜಿಲ್ಲೆಗಳಲ್ಲಿ ಅಯೋಧ್ಯೆಯೂ ಒಂದಾಗಿದೆ.

ಈ ಬಾರಿ ಮೂಲಸೌಕರ್ಯ ಮತ್ತು ಸ್ಥಳೀಯ ಆಡಳಿತ ಸಮಸ್ಯೆಗಳು ಚುನಾವಣೆಯ ವಿಷಯವಾಗಿದೆ. ಇದರ ಮಧ್ಯೆ, ಅನೇಕರಿಗೆ ತಮ್ಮ ಜೀವನೋಪಾಯದ ಪ್ರಶ್ನೆಯು ಪ್ರಮುಖವಾಗಿದೆ.

“ಅಯೋಧ್ಯೆಯಲ್ಲಿ ರಸ್ತೆ ಅಗಲೀಕರಣ ಯೋಜನೆ ಜಾರಿಗೆ ಬಂದರೆ, ನಮ್ಮ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಭಯವಿದೆ. ಯುವಕನಾಗಿದ್ದಾಗ ನಾನು ರಾಮಮಂದಿರ ಚಳವಳಿಯನ್ನು ನೋಡಿದ್ದೇನೆ, ಭಾಗವಹಿಸಿದ್ದೇನೆ. ಆದರೆ, ಈಗ ನಾವು ನಮ್ಮ ಜೀವನೋಪಾಯಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಪ್ರವಾಸಿಗರ ಸಂಖ್ಯೆ ಹೆಚ್ಚಿರುವುದರಿಂದ ಖದೌಸ್ (ಮರದ ಚಪ್ಪಲಿ)ಗಳಿಗೆ ಬೇಡಿಕೆಯೂ ಹೆಚ್ಚಿದೆ. ಈಗ ನಾನು ಅಂಗಡಿಯನ್ನು ಕಳೆದುಕೊಳ್ಳಬೇಕಾಗುತ್ತದೆ ಎಂಬ ಊಹೆಯೇ ಭಯಾನಕವಾಗಿದೆ” ಎಂದು ಖದೌಸ್‌‌ ವ್ಯಾಪಾರಿ ರಾಮ್ ಸಾಗರ್ ಹೇಳುತ್ತಾರೆ.

ಇದನ್ನೂ ಓದಿರಿ: ಭೂ ಹಗರಣ, ಬ್ರಾಹ್ಮಣರ ಮತಗಳು ಕೈ ತಪ್ಪುವ ಭಯ: ಅಯೋಧ್ಯೆಯ ಟಿಕೆಟ್‌ ಯೋಗಿ ಕಳೆದುಕೊಳ್ಳಲು ಕಾರಣವೇ?

51 ವರ್ಷದ ರಾಧಾ ಕೃಷ್ಣ ಅವರು ಕಳೆದ ಮೂರು ತಲೆಮಾರುಗಳಿಂದ ಸಿಹಿತಿಂಡಿ ಅಂಗಡಿ ನಡೆಸುತ್ತಿದ್ದಾರೆ. ಆದರೆ, ಅವರು ಮಳಿಗೆಯನ್ನು ಬಾಡಿಗೆಗೆ ಪಡೆದು ವ್ಯಾಪಾರ ನಡೆಸುತ್ತಿದ್ದಾರೆ. ಈಗ ಆ ಅಂಗಡಿ ಮಳಿಗೆಗಳನ್ನು ಕೆಡವಿದರೆ, ಅದರ ಪರಿಹಾರವು ಮಾಲೀಕರಿಗೆ ಸಿಗುತ್ತದೆ. ನಮ್ಮ ಗತಿ ಏನು? ಎಂದು ಅವರು ಚಿಂತಿತರಾಗಿದ್ದಾರೆ.

”ನಾವು ಯಾವುದೇ ಅಭಿವೃದ್ಧಿ ಯೋಜನೆಗಳಿಗೆ ವಿರುದ್ದವಿಲ್ಲ. ಆದರೆ, ಅಂಗಡಿಗಳನ್ನು ಕೆಡವುವ ಮುನ್ನ ಪ್ರತಿಯೊಂದು ಅಂಗಡಿಯವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು” ಎಂದು ಬಟ್ಟೆ ಅಂಗಡಿ ಮಾಲೀಕ ಅನುರಾಗ್ ಶುಕ್ಲಾ ಒತ್ತಾಯಿಸುತ್ತಾರೆ.

ಈ ವ್ಯಾಪಾರಿಗಳ ಅಸಮಾಧಾನ, ಜನರ ಸಂಕಷ್ಟಗಳು ಬಿಜೆಪಿಗೆ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಭಯವನ್ನು ಹುಟ್ಟಿಸಿವೆ. ಈ ಕಾರಣಕ್ಕಾಗಿಯೇ, ಫೆಬ್ರವರಿ 24ರಂದು ನಡೆದ ಬಿಜೆಪಿ ರೋಡ್ ಶೋನಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, “ಅಯೋಧ್ಯೆಯ ಸಂತರು ಮತ್ತು ವ್ಯಾಪಾರಿಗಳಿಗೆ ಒಪ್ಪಿಗೆಯಿಲ್ಲದೆ ಅಯೋಧ್ಯೆಯಲ್ಲಿ ಯಾವುದೇ ಯೋಜನೆಯನ್ನು ಕಾರ್ಯಗತಗೊಳಿಸುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ” ಎಂದು ಹೇಳಿದ್ದಾರೆ.

ಈ ಸಮಸ್ಯೆಗಳನ್ನು ಗ್ರಹಿಸಿರುವ ಮತ್ತು ಅವಕಾಶಕ್ಕಾಗಿ ಕಾಯುತ್ತಿದ್ದ ಸಮಾಜವಾದಿ ಪಕ್ಷದ (SP) ಮಾಜಿ ಶಾಸಕ ತೇಜ್ ನಾರಾಯಣ್ ಪಾಂಡೆ ಅವರು ಸಂಪೂರ್ಣವಾಗಿ ವ್ಯಾಪಾರಿಗಳ ಪರ ನಿಂತಿದ್ದಾರೆ. 2012ರಲ್ಲಿ ಅಯೋಧ್ಯೆಯಲ್ಲಿ ಬಿಜೆಪಿಯ ಲಲ್ಲು ಸಿಂಗ್ ಅವರನ್ನು ಸೋಲಿಸಿದ್ದ ಪಾಂಡೆ, 2017ರಲ್ಲಿ ಬಿಜೆಪಿಯ ವೇದ್ ಪ್ರಕಾಶ್ ಗುಪ್ತಾ ವಿರುದ್ಧ ಸೋತಿದ್ದರು. ಈ ಬಾರಿಯೂ ಅವರು ಎಸ್ಪಿ ಅಭ್ಯರ್ಥಿಯಾಗಿದ್ದಾರೆ. ಬಿಜೆಪಿಯನ್ನು ಮಣಿಸಿ, ಗೆಲುವು ಸಾಧಿಸಲೇಬೇಕು ಎದು ಅವರು ಯತ್ನಿಸುತ್ತಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಾಣ ಮಾಡುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ನಂತರ, ರಾಮ ಮಂದಿರ ನಿರ್ಮಾಣದ ಕೆಲಸಗಳು ನಡೆಯುತ್ತಿವೆ. ಈಗ ಅಯೋಧ್ಯೆ ವಿವಾದವು ರಾಜಕೀಯ ದಾಳವಾಗಿ ಯಾವ ಪಕ್ಷಕ್ಕೂ ಉಳಿದಿಲ್ಲ. ಜನರು, “ರಾಮಮಂದಿರ ವಿವಾದ ಮುಗಿದಿದೆ. ರಾಮಮಂದಿರ ನಿರ್ಮಾಣವಾಗುತ್ತಿದೆ. ಈಗ ಅದರ ಬಗ್ಗೆ ಮಾತನಾಡುವುದೇನಿದೆ?” ಎಂದು ಪ್ರಶ್ನಿಸುತ್ತಿದ್ದಾರೆ. ತಮ್ಮ ಅಸಲಿ ಸಮಸ್ಯೆಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ.

ಹೀಗಾಗಿ, ಬಿಜೆಪಿಯು ಈ ಬಾರಿಯ ಚುನಾವಣೆಯಲ್ಲಿ ರಾಮಮಂದಿರ ವಿಚಾರವನ್ನು ತಮ್ಮ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತಿಲ್ಲ. ಅಲ್ಲದೆ, ಜನರ ಅಸಲಿ ಸಮಸ್ಯೆಗಳಿಗೆ ಉತ್ತರಿಸಲೂ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಅಯೋಧ್ಯೆಯಲ್ಲಿ ಬಿಜೆಪಿಗೆ ಮತಗಳನ್ನು ತರಲು ಅಲ್ಲಿನ ಸಂತರು ಎಲ್ಲಾ ದೇವಾಲಯಗಳಲ್ಲಿಯೂ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಜನರ ಚಿತ್ತವನ್ನು ಬಿಜೆಪಿಯತ್ತ ಸೆಳೆಯಲು ಯತ್ನಿಸುತ್ತಿದ್ದಾರೆ.

ಸಮಾಜವಾದಿ ಪಕ್ಷವು ಜನರ ಸಮಸ್ಯೆಗಳನ್ನಿಟ್ಟುಕೊಂಡು ಚುನಾವಣಾ ಮೈಲೇಜ್ ಪಡೆಯಲು ಮುಂದಾಗಿದೆ. ಅಯೋಧ್ಯೆ ಜನರು ಏನನ್ನು ನಿರ್ಧರಿಸುತ್ತಾರೆ ಎಂಬುದನ್ನು ಮಾರ್ಚ್ 10ರಂದು ಪ್ರಕಟವಾಗುವ ಫಲಿತಾಂಶದಲ್ಲಿ ನೋಡಬೇಕಿದೆ.


ಇದನ್ನೂ ಓದಿರಿ: ಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...