Homeಮುಖಪುಟಯುಪಿ ಚುನಾವಣೆ: ಅಯೋಧ್ಯೆಯಲ್ಲಿ ಬದಿಗೆ ಸರಿದ ರಾಮಮಂದಿರ; ವ್ಯಾಪಾರಿಗಳ ಕೂಗು ಮುನ್ನಲೆಗೆ

ಯುಪಿ ಚುನಾವಣೆ: ಅಯೋಧ್ಯೆಯಲ್ಲಿ ಬದಿಗೆ ಸರಿದ ರಾಮಮಂದಿರ; ವ್ಯಾಪಾರಿಗಳ ಕೂಗು ಮುನ್ನಲೆಗೆ

- Advertisement -
- Advertisement -

ಉತ್ತರ ಪ್ರದೇಶದ ಅಯೋಧ್ಯೆಯ ಕೇಂದ್ರಬಿಂದುವಾಗಿರುವ ರಾಮ್ ಕಿ ಪೈಡಿ ಘಾಟ್ ಪ್ರದೇಶದಲ್ಲಿ ಸುಮಾರು 750 ದೊಡ್ಡ ಮತ್ತು ಚಿಕ್ಕ ಅಂಗಡಿಗಳಿವೆ. ಅವುಗಳಲ್ಲಿ ಕೆಲವು ಅಂಗಡಿಗಳು ಬಹಳ ಕಾಲದಿಂದಲೂ ಇವೆ. ಆ ಅಂಗಡಿಗಳಿಂದ ತುಂಬಿರುವ ರಸ್ತೆಯು ಹನುಮಾನ್ ಗರ್ಹಿ ದೇವಾಲಯಕ್ಕೆ ಸಂಪರ್ಕ ಕಲ್ಪಿಸುತ್ತದೆ. ಆ ಕಾರಣದಿಂದಾಗಿ ರಾಜ್ಯ ಸರ್ಕಾರವು ರಸ್ತೆ ಅಗಲೀಕರಣ ಯೋಜನೆಯನ್ನು ರೂಪಿಸಿ, ಜಾರಿಗೊಳಿಸಲು ಮುಂದಾಗಿದೆ. ಇದರಿಂದಾಗಿ, ಕೆಲವು ವ್ಯಾಪಾರಗಳು ಮತ್ತು ಅವುಗಳ ಮಾಲೀಕರಿಗೆ ತಮ್ಮ ಹೊಟ್ಟೆಗೆ ತಣ್ಣೀರು ಬಟ್ಟೆ ಬೀಳಲಿದೆ ಎಂಬ ಆತಂಕ ಉಂಟಾಗಿದೆ.

ಈ ವಿವಾದವು ಯುಪಿ ವಿಧಾನಸಭಾ ಚುನಾವಣೆಯಲ್ಲಿ ಅಯೋಧ್ಯೆ ಕ್ಷೇತ್ರದ ಪ್ರಮುಖ ಚುನಾವಣಾ ವಿಷಯವಾಗಿ ಮಾರ್ಪಟ್ಟಿದೆ. ನಿರ್ಮಾಣ ಹಂತದಲ್ಲಿರುವ ರಾಮ ಮಂದಿರ, ರಾಮ ಇಲ್ಲಿ ಜನಿಸಿದನೆಂಬ ನಂಬಿಕೆಗಳು ಮತ್ತು ಹಿಂದುತ್ವ ಯೋಜನೆಗಳ ಕೇಂದ್ರವಾಗಿದ್ದ ಅಯೋಧ್ಯೆ, ಇವೆಲ್ಲವುಗಳ ಹೊರತಾಗಿ ಈ ಬಾರಿಯ ಚುನಾವಣೆಯಲ್ಲಿ ಅಸಲಿ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿದೆ.

ಅಯೋಧ್ಯೆ ಜಿಲ್ಲೆಯು ಬಿಜೆಪಿ ಭದ್ರಕೋಟೆಯಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. ಇದೀಗ, ವಿಧಾನಸಭಾ ಚುನಾವಣೆಯಲ್ಲಿ ಐದನೇ ಹಂತದ (ಫೆ.27) ಮತದಾನ ನಡೆಯಲಿರುವ ಜಿಲ್ಲೆಗಳಲ್ಲಿ ಅಯೋಧ್ಯೆಯೂ ಒಂದಾಗಿದೆ.

ಈ ಬಾರಿ ಮೂಲಸೌಕರ್ಯ ಮತ್ತು ಸ್ಥಳೀಯ ಆಡಳಿತ ಸಮಸ್ಯೆಗಳು ಚುನಾವಣೆಯ ವಿಷಯವಾಗಿದೆ. ಇದರ ಮಧ್ಯೆ, ಅನೇಕರಿಗೆ ತಮ್ಮ ಜೀವನೋಪಾಯದ ಪ್ರಶ್ನೆಯು ಪ್ರಮುಖವಾಗಿದೆ.

“ಅಯೋಧ್ಯೆಯಲ್ಲಿ ರಸ್ತೆ ಅಗಲೀಕರಣ ಯೋಜನೆ ಜಾರಿಗೆ ಬಂದರೆ, ನಮ್ಮ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಭಯವಿದೆ. ಯುವಕನಾಗಿದ್ದಾಗ ನಾನು ರಾಮಮಂದಿರ ಚಳವಳಿಯನ್ನು ನೋಡಿದ್ದೇನೆ, ಭಾಗವಹಿಸಿದ್ದೇನೆ. ಆದರೆ, ಈಗ ನಾವು ನಮ್ಮ ಜೀವನೋಪಾಯಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಪ್ರವಾಸಿಗರ ಸಂಖ್ಯೆ ಹೆಚ್ಚಿರುವುದರಿಂದ ಖದೌಸ್ (ಮರದ ಚಪ್ಪಲಿ)ಗಳಿಗೆ ಬೇಡಿಕೆಯೂ ಹೆಚ್ಚಿದೆ. ಈಗ ನಾನು ಅಂಗಡಿಯನ್ನು ಕಳೆದುಕೊಳ್ಳಬೇಕಾಗುತ್ತದೆ ಎಂಬ ಊಹೆಯೇ ಭಯಾನಕವಾಗಿದೆ” ಎಂದು ಖದೌಸ್‌‌ ವ್ಯಾಪಾರಿ ರಾಮ್ ಸಾಗರ್ ಹೇಳುತ್ತಾರೆ.

ಇದನ್ನೂ ಓದಿರಿ: ಭೂ ಹಗರಣ, ಬ್ರಾಹ್ಮಣರ ಮತಗಳು ಕೈ ತಪ್ಪುವ ಭಯ: ಅಯೋಧ್ಯೆಯ ಟಿಕೆಟ್‌ ಯೋಗಿ ಕಳೆದುಕೊಳ್ಳಲು ಕಾರಣವೇ?

51 ವರ್ಷದ ರಾಧಾ ಕೃಷ್ಣ ಅವರು ಕಳೆದ ಮೂರು ತಲೆಮಾರುಗಳಿಂದ ಸಿಹಿತಿಂಡಿ ಅಂಗಡಿ ನಡೆಸುತ್ತಿದ್ದಾರೆ. ಆದರೆ, ಅವರು ಮಳಿಗೆಯನ್ನು ಬಾಡಿಗೆಗೆ ಪಡೆದು ವ್ಯಾಪಾರ ನಡೆಸುತ್ತಿದ್ದಾರೆ. ಈಗ ಆ ಅಂಗಡಿ ಮಳಿಗೆಗಳನ್ನು ಕೆಡವಿದರೆ, ಅದರ ಪರಿಹಾರವು ಮಾಲೀಕರಿಗೆ ಸಿಗುತ್ತದೆ. ನಮ್ಮ ಗತಿ ಏನು? ಎಂದು ಅವರು ಚಿಂತಿತರಾಗಿದ್ದಾರೆ.

”ನಾವು ಯಾವುದೇ ಅಭಿವೃದ್ಧಿ ಯೋಜನೆಗಳಿಗೆ ವಿರುದ್ದವಿಲ್ಲ. ಆದರೆ, ಅಂಗಡಿಗಳನ್ನು ಕೆಡವುವ ಮುನ್ನ ಪ್ರತಿಯೊಂದು ಅಂಗಡಿಯವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು” ಎಂದು ಬಟ್ಟೆ ಅಂಗಡಿ ಮಾಲೀಕ ಅನುರಾಗ್ ಶುಕ್ಲಾ ಒತ್ತಾಯಿಸುತ್ತಾರೆ.

ಈ ವ್ಯಾಪಾರಿಗಳ ಅಸಮಾಧಾನ, ಜನರ ಸಂಕಷ್ಟಗಳು ಬಿಜೆಪಿಗೆ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಭಯವನ್ನು ಹುಟ್ಟಿಸಿವೆ. ಈ ಕಾರಣಕ್ಕಾಗಿಯೇ, ಫೆಬ್ರವರಿ 24ರಂದು ನಡೆದ ಬಿಜೆಪಿ ರೋಡ್ ಶೋನಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, “ಅಯೋಧ್ಯೆಯ ಸಂತರು ಮತ್ತು ವ್ಯಾಪಾರಿಗಳಿಗೆ ಒಪ್ಪಿಗೆಯಿಲ್ಲದೆ ಅಯೋಧ್ಯೆಯಲ್ಲಿ ಯಾವುದೇ ಯೋಜನೆಯನ್ನು ಕಾರ್ಯಗತಗೊಳಿಸುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ” ಎಂದು ಹೇಳಿದ್ದಾರೆ.

ಈ ಸಮಸ್ಯೆಗಳನ್ನು ಗ್ರಹಿಸಿರುವ ಮತ್ತು ಅವಕಾಶಕ್ಕಾಗಿ ಕಾಯುತ್ತಿದ್ದ ಸಮಾಜವಾದಿ ಪಕ್ಷದ (SP) ಮಾಜಿ ಶಾಸಕ ತೇಜ್ ನಾರಾಯಣ್ ಪಾಂಡೆ ಅವರು ಸಂಪೂರ್ಣವಾಗಿ ವ್ಯಾಪಾರಿಗಳ ಪರ ನಿಂತಿದ್ದಾರೆ. 2012ರಲ್ಲಿ ಅಯೋಧ್ಯೆಯಲ್ಲಿ ಬಿಜೆಪಿಯ ಲಲ್ಲು ಸಿಂಗ್ ಅವರನ್ನು ಸೋಲಿಸಿದ್ದ ಪಾಂಡೆ, 2017ರಲ್ಲಿ ಬಿಜೆಪಿಯ ವೇದ್ ಪ್ರಕಾಶ್ ಗುಪ್ತಾ ವಿರುದ್ಧ ಸೋತಿದ್ದರು. ಈ ಬಾರಿಯೂ ಅವರು ಎಸ್ಪಿ ಅಭ್ಯರ್ಥಿಯಾಗಿದ್ದಾರೆ. ಬಿಜೆಪಿಯನ್ನು ಮಣಿಸಿ, ಗೆಲುವು ಸಾಧಿಸಲೇಬೇಕು ಎದು ಅವರು ಯತ್ನಿಸುತ್ತಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಾಣ ಮಾಡುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ನಂತರ, ರಾಮ ಮಂದಿರ ನಿರ್ಮಾಣದ ಕೆಲಸಗಳು ನಡೆಯುತ್ತಿವೆ. ಈಗ ಅಯೋಧ್ಯೆ ವಿವಾದವು ರಾಜಕೀಯ ದಾಳವಾಗಿ ಯಾವ ಪಕ್ಷಕ್ಕೂ ಉಳಿದಿಲ್ಲ. ಜನರು, “ರಾಮಮಂದಿರ ವಿವಾದ ಮುಗಿದಿದೆ. ರಾಮಮಂದಿರ ನಿರ್ಮಾಣವಾಗುತ್ತಿದೆ. ಈಗ ಅದರ ಬಗ್ಗೆ ಮಾತನಾಡುವುದೇನಿದೆ?” ಎಂದು ಪ್ರಶ್ನಿಸುತ್ತಿದ್ದಾರೆ. ತಮ್ಮ ಅಸಲಿ ಸಮಸ್ಯೆಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ.

ಹೀಗಾಗಿ, ಬಿಜೆಪಿಯು ಈ ಬಾರಿಯ ಚುನಾವಣೆಯಲ್ಲಿ ರಾಮಮಂದಿರ ವಿಚಾರವನ್ನು ತಮ್ಮ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತಿಲ್ಲ. ಅಲ್ಲದೆ, ಜನರ ಅಸಲಿ ಸಮಸ್ಯೆಗಳಿಗೆ ಉತ್ತರಿಸಲೂ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಅಯೋಧ್ಯೆಯಲ್ಲಿ ಬಿಜೆಪಿಗೆ ಮತಗಳನ್ನು ತರಲು ಅಲ್ಲಿನ ಸಂತರು ಎಲ್ಲಾ ದೇವಾಲಯಗಳಲ್ಲಿಯೂ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಜನರ ಚಿತ್ತವನ್ನು ಬಿಜೆಪಿಯತ್ತ ಸೆಳೆಯಲು ಯತ್ನಿಸುತ್ತಿದ್ದಾರೆ.

ಸಮಾಜವಾದಿ ಪಕ್ಷವು ಜನರ ಸಮಸ್ಯೆಗಳನ್ನಿಟ್ಟುಕೊಂಡು ಚುನಾವಣಾ ಮೈಲೇಜ್ ಪಡೆಯಲು ಮುಂದಾಗಿದೆ. ಅಯೋಧ್ಯೆ ಜನರು ಏನನ್ನು ನಿರ್ಧರಿಸುತ್ತಾರೆ ಎಂಬುದನ್ನು ಮಾರ್ಚ್ 10ರಂದು ಪ್ರಕಟವಾಗುವ ಫಲಿತಾಂಶದಲ್ಲಿ ನೋಡಬೇಕಿದೆ.


ಇದನ್ನೂ ಓದಿರಿ: ಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...