Homeಮುಖಪುಟಯುಪಿ ಚುನಾವಣೆ: ಅಯೋಧ್ಯೆಯಲ್ಲಿ ಬದಿಗೆ ಸರಿದ ರಾಮಮಂದಿರ; ವ್ಯಾಪಾರಿಗಳ ಕೂಗು ಮುನ್ನಲೆಗೆ

ಯುಪಿ ಚುನಾವಣೆ: ಅಯೋಧ್ಯೆಯಲ್ಲಿ ಬದಿಗೆ ಸರಿದ ರಾಮಮಂದಿರ; ವ್ಯಾಪಾರಿಗಳ ಕೂಗು ಮುನ್ನಲೆಗೆ

- Advertisement -
- Advertisement -

ಉತ್ತರ ಪ್ರದೇಶದ ಅಯೋಧ್ಯೆಯ ಕೇಂದ್ರಬಿಂದುವಾಗಿರುವ ರಾಮ್ ಕಿ ಪೈಡಿ ಘಾಟ್ ಪ್ರದೇಶದಲ್ಲಿ ಸುಮಾರು 750 ದೊಡ್ಡ ಮತ್ತು ಚಿಕ್ಕ ಅಂಗಡಿಗಳಿವೆ. ಅವುಗಳಲ್ಲಿ ಕೆಲವು ಅಂಗಡಿಗಳು ಬಹಳ ಕಾಲದಿಂದಲೂ ಇವೆ. ಆ ಅಂಗಡಿಗಳಿಂದ ತುಂಬಿರುವ ರಸ್ತೆಯು ಹನುಮಾನ್ ಗರ್ಹಿ ದೇವಾಲಯಕ್ಕೆ ಸಂಪರ್ಕ ಕಲ್ಪಿಸುತ್ತದೆ. ಆ ಕಾರಣದಿಂದಾಗಿ ರಾಜ್ಯ ಸರ್ಕಾರವು ರಸ್ತೆ ಅಗಲೀಕರಣ ಯೋಜನೆಯನ್ನು ರೂಪಿಸಿ, ಜಾರಿಗೊಳಿಸಲು ಮುಂದಾಗಿದೆ. ಇದರಿಂದಾಗಿ, ಕೆಲವು ವ್ಯಾಪಾರಗಳು ಮತ್ತು ಅವುಗಳ ಮಾಲೀಕರಿಗೆ ತಮ್ಮ ಹೊಟ್ಟೆಗೆ ತಣ್ಣೀರು ಬಟ್ಟೆ ಬೀಳಲಿದೆ ಎಂಬ ಆತಂಕ ಉಂಟಾಗಿದೆ.

ಈ ವಿವಾದವು ಯುಪಿ ವಿಧಾನಸಭಾ ಚುನಾವಣೆಯಲ್ಲಿ ಅಯೋಧ್ಯೆ ಕ್ಷೇತ್ರದ ಪ್ರಮುಖ ಚುನಾವಣಾ ವಿಷಯವಾಗಿ ಮಾರ್ಪಟ್ಟಿದೆ. ನಿರ್ಮಾಣ ಹಂತದಲ್ಲಿರುವ ರಾಮ ಮಂದಿರ, ರಾಮ ಇಲ್ಲಿ ಜನಿಸಿದನೆಂಬ ನಂಬಿಕೆಗಳು ಮತ್ತು ಹಿಂದುತ್ವ ಯೋಜನೆಗಳ ಕೇಂದ್ರವಾಗಿದ್ದ ಅಯೋಧ್ಯೆ, ಇವೆಲ್ಲವುಗಳ ಹೊರತಾಗಿ ಈ ಬಾರಿಯ ಚುನಾವಣೆಯಲ್ಲಿ ಅಸಲಿ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿದೆ.

ಅಯೋಧ್ಯೆ ಜಿಲ್ಲೆಯು ಬಿಜೆಪಿ ಭದ್ರಕೋಟೆಯಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. ಇದೀಗ, ವಿಧಾನಸಭಾ ಚುನಾವಣೆಯಲ್ಲಿ ಐದನೇ ಹಂತದ (ಫೆ.27) ಮತದಾನ ನಡೆಯಲಿರುವ ಜಿಲ್ಲೆಗಳಲ್ಲಿ ಅಯೋಧ್ಯೆಯೂ ಒಂದಾಗಿದೆ.

ಈ ಬಾರಿ ಮೂಲಸೌಕರ್ಯ ಮತ್ತು ಸ್ಥಳೀಯ ಆಡಳಿತ ಸಮಸ್ಯೆಗಳು ಚುನಾವಣೆಯ ವಿಷಯವಾಗಿದೆ. ಇದರ ಮಧ್ಯೆ, ಅನೇಕರಿಗೆ ತಮ್ಮ ಜೀವನೋಪಾಯದ ಪ್ರಶ್ನೆಯು ಪ್ರಮುಖವಾಗಿದೆ.

“ಅಯೋಧ್ಯೆಯಲ್ಲಿ ರಸ್ತೆ ಅಗಲೀಕರಣ ಯೋಜನೆ ಜಾರಿಗೆ ಬಂದರೆ, ನಮ್ಮ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಭಯವಿದೆ. ಯುವಕನಾಗಿದ್ದಾಗ ನಾನು ರಾಮಮಂದಿರ ಚಳವಳಿಯನ್ನು ನೋಡಿದ್ದೇನೆ, ಭಾಗವಹಿಸಿದ್ದೇನೆ. ಆದರೆ, ಈಗ ನಾವು ನಮ್ಮ ಜೀವನೋಪಾಯಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಪ್ರವಾಸಿಗರ ಸಂಖ್ಯೆ ಹೆಚ್ಚಿರುವುದರಿಂದ ಖದೌಸ್ (ಮರದ ಚಪ್ಪಲಿ)ಗಳಿಗೆ ಬೇಡಿಕೆಯೂ ಹೆಚ್ಚಿದೆ. ಈಗ ನಾನು ಅಂಗಡಿಯನ್ನು ಕಳೆದುಕೊಳ್ಳಬೇಕಾಗುತ್ತದೆ ಎಂಬ ಊಹೆಯೇ ಭಯಾನಕವಾಗಿದೆ” ಎಂದು ಖದೌಸ್‌‌ ವ್ಯಾಪಾರಿ ರಾಮ್ ಸಾಗರ್ ಹೇಳುತ್ತಾರೆ.

ಇದನ್ನೂ ಓದಿರಿ: ಭೂ ಹಗರಣ, ಬ್ರಾಹ್ಮಣರ ಮತಗಳು ಕೈ ತಪ್ಪುವ ಭಯ: ಅಯೋಧ್ಯೆಯ ಟಿಕೆಟ್‌ ಯೋಗಿ ಕಳೆದುಕೊಳ್ಳಲು ಕಾರಣವೇ?

51 ವರ್ಷದ ರಾಧಾ ಕೃಷ್ಣ ಅವರು ಕಳೆದ ಮೂರು ತಲೆಮಾರುಗಳಿಂದ ಸಿಹಿತಿಂಡಿ ಅಂಗಡಿ ನಡೆಸುತ್ತಿದ್ದಾರೆ. ಆದರೆ, ಅವರು ಮಳಿಗೆಯನ್ನು ಬಾಡಿಗೆಗೆ ಪಡೆದು ವ್ಯಾಪಾರ ನಡೆಸುತ್ತಿದ್ದಾರೆ. ಈಗ ಆ ಅಂಗಡಿ ಮಳಿಗೆಗಳನ್ನು ಕೆಡವಿದರೆ, ಅದರ ಪರಿಹಾರವು ಮಾಲೀಕರಿಗೆ ಸಿಗುತ್ತದೆ. ನಮ್ಮ ಗತಿ ಏನು? ಎಂದು ಅವರು ಚಿಂತಿತರಾಗಿದ್ದಾರೆ.

”ನಾವು ಯಾವುದೇ ಅಭಿವೃದ್ಧಿ ಯೋಜನೆಗಳಿಗೆ ವಿರುದ್ದವಿಲ್ಲ. ಆದರೆ, ಅಂಗಡಿಗಳನ್ನು ಕೆಡವುವ ಮುನ್ನ ಪ್ರತಿಯೊಂದು ಅಂಗಡಿಯವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು” ಎಂದು ಬಟ್ಟೆ ಅಂಗಡಿ ಮಾಲೀಕ ಅನುರಾಗ್ ಶುಕ್ಲಾ ಒತ್ತಾಯಿಸುತ್ತಾರೆ.

ಈ ವ್ಯಾಪಾರಿಗಳ ಅಸಮಾಧಾನ, ಜನರ ಸಂಕಷ್ಟಗಳು ಬಿಜೆಪಿಗೆ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಭಯವನ್ನು ಹುಟ್ಟಿಸಿವೆ. ಈ ಕಾರಣಕ್ಕಾಗಿಯೇ, ಫೆಬ್ರವರಿ 24ರಂದು ನಡೆದ ಬಿಜೆಪಿ ರೋಡ್ ಶೋನಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, “ಅಯೋಧ್ಯೆಯ ಸಂತರು ಮತ್ತು ವ್ಯಾಪಾರಿಗಳಿಗೆ ಒಪ್ಪಿಗೆಯಿಲ್ಲದೆ ಅಯೋಧ್ಯೆಯಲ್ಲಿ ಯಾವುದೇ ಯೋಜನೆಯನ್ನು ಕಾರ್ಯಗತಗೊಳಿಸುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ” ಎಂದು ಹೇಳಿದ್ದಾರೆ.

ಈ ಸಮಸ್ಯೆಗಳನ್ನು ಗ್ರಹಿಸಿರುವ ಮತ್ತು ಅವಕಾಶಕ್ಕಾಗಿ ಕಾಯುತ್ತಿದ್ದ ಸಮಾಜವಾದಿ ಪಕ್ಷದ (SP) ಮಾಜಿ ಶಾಸಕ ತೇಜ್ ನಾರಾಯಣ್ ಪಾಂಡೆ ಅವರು ಸಂಪೂರ್ಣವಾಗಿ ವ್ಯಾಪಾರಿಗಳ ಪರ ನಿಂತಿದ್ದಾರೆ. 2012ರಲ್ಲಿ ಅಯೋಧ್ಯೆಯಲ್ಲಿ ಬಿಜೆಪಿಯ ಲಲ್ಲು ಸಿಂಗ್ ಅವರನ್ನು ಸೋಲಿಸಿದ್ದ ಪಾಂಡೆ, 2017ರಲ್ಲಿ ಬಿಜೆಪಿಯ ವೇದ್ ಪ್ರಕಾಶ್ ಗುಪ್ತಾ ವಿರುದ್ಧ ಸೋತಿದ್ದರು. ಈ ಬಾರಿಯೂ ಅವರು ಎಸ್ಪಿ ಅಭ್ಯರ್ಥಿಯಾಗಿದ್ದಾರೆ. ಬಿಜೆಪಿಯನ್ನು ಮಣಿಸಿ, ಗೆಲುವು ಸಾಧಿಸಲೇಬೇಕು ಎದು ಅವರು ಯತ್ನಿಸುತ್ತಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಾಣ ಮಾಡುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ನಂತರ, ರಾಮ ಮಂದಿರ ನಿರ್ಮಾಣದ ಕೆಲಸಗಳು ನಡೆಯುತ್ತಿವೆ. ಈಗ ಅಯೋಧ್ಯೆ ವಿವಾದವು ರಾಜಕೀಯ ದಾಳವಾಗಿ ಯಾವ ಪಕ್ಷಕ್ಕೂ ಉಳಿದಿಲ್ಲ. ಜನರು, “ರಾಮಮಂದಿರ ವಿವಾದ ಮುಗಿದಿದೆ. ರಾಮಮಂದಿರ ನಿರ್ಮಾಣವಾಗುತ್ತಿದೆ. ಈಗ ಅದರ ಬಗ್ಗೆ ಮಾತನಾಡುವುದೇನಿದೆ?” ಎಂದು ಪ್ರಶ್ನಿಸುತ್ತಿದ್ದಾರೆ. ತಮ್ಮ ಅಸಲಿ ಸಮಸ್ಯೆಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ.

ಹೀಗಾಗಿ, ಬಿಜೆಪಿಯು ಈ ಬಾರಿಯ ಚುನಾವಣೆಯಲ್ಲಿ ರಾಮಮಂದಿರ ವಿಚಾರವನ್ನು ತಮ್ಮ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತಿಲ್ಲ. ಅಲ್ಲದೆ, ಜನರ ಅಸಲಿ ಸಮಸ್ಯೆಗಳಿಗೆ ಉತ್ತರಿಸಲೂ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಅಯೋಧ್ಯೆಯಲ್ಲಿ ಬಿಜೆಪಿಗೆ ಮತಗಳನ್ನು ತರಲು ಅಲ್ಲಿನ ಸಂತರು ಎಲ್ಲಾ ದೇವಾಲಯಗಳಲ್ಲಿಯೂ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಜನರ ಚಿತ್ತವನ್ನು ಬಿಜೆಪಿಯತ್ತ ಸೆಳೆಯಲು ಯತ್ನಿಸುತ್ತಿದ್ದಾರೆ.

ಸಮಾಜವಾದಿ ಪಕ್ಷವು ಜನರ ಸಮಸ್ಯೆಗಳನ್ನಿಟ್ಟುಕೊಂಡು ಚುನಾವಣಾ ಮೈಲೇಜ್ ಪಡೆಯಲು ಮುಂದಾಗಿದೆ. ಅಯೋಧ್ಯೆ ಜನರು ಏನನ್ನು ನಿರ್ಧರಿಸುತ್ತಾರೆ ಎಂಬುದನ್ನು ಮಾರ್ಚ್ 10ರಂದು ಪ್ರಕಟವಾಗುವ ಫಲಿತಾಂಶದಲ್ಲಿ ನೋಡಬೇಕಿದೆ.


ಇದನ್ನೂ ಓದಿರಿ: ಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...