Homeಮುಖಪುಟಯುಪಿ ಚುನಾವಣೆ: ಅಯೋಧ್ಯೆಯಲ್ಲಿ ಬದಿಗೆ ಸರಿದ ರಾಮಮಂದಿರ; ವ್ಯಾಪಾರಿಗಳ ಕೂಗು ಮುನ್ನಲೆಗೆ

ಯುಪಿ ಚುನಾವಣೆ: ಅಯೋಧ್ಯೆಯಲ್ಲಿ ಬದಿಗೆ ಸರಿದ ರಾಮಮಂದಿರ; ವ್ಯಾಪಾರಿಗಳ ಕೂಗು ಮುನ್ನಲೆಗೆ

- Advertisement -
- Advertisement -

ಉತ್ತರ ಪ್ರದೇಶದ ಅಯೋಧ್ಯೆಯ ಕೇಂದ್ರಬಿಂದುವಾಗಿರುವ ರಾಮ್ ಕಿ ಪೈಡಿ ಘಾಟ್ ಪ್ರದೇಶದಲ್ಲಿ ಸುಮಾರು 750 ದೊಡ್ಡ ಮತ್ತು ಚಿಕ್ಕ ಅಂಗಡಿಗಳಿವೆ. ಅವುಗಳಲ್ಲಿ ಕೆಲವು ಅಂಗಡಿಗಳು ಬಹಳ ಕಾಲದಿಂದಲೂ ಇವೆ. ಆ ಅಂಗಡಿಗಳಿಂದ ತುಂಬಿರುವ ರಸ್ತೆಯು ಹನುಮಾನ್ ಗರ್ಹಿ ದೇವಾಲಯಕ್ಕೆ ಸಂಪರ್ಕ ಕಲ್ಪಿಸುತ್ತದೆ. ಆ ಕಾರಣದಿಂದಾಗಿ ರಾಜ್ಯ ಸರ್ಕಾರವು ರಸ್ತೆ ಅಗಲೀಕರಣ ಯೋಜನೆಯನ್ನು ರೂಪಿಸಿ, ಜಾರಿಗೊಳಿಸಲು ಮುಂದಾಗಿದೆ. ಇದರಿಂದಾಗಿ, ಕೆಲವು ವ್ಯಾಪಾರಗಳು ಮತ್ತು ಅವುಗಳ ಮಾಲೀಕರಿಗೆ ತಮ್ಮ ಹೊಟ್ಟೆಗೆ ತಣ್ಣೀರು ಬಟ್ಟೆ ಬೀಳಲಿದೆ ಎಂಬ ಆತಂಕ ಉಂಟಾಗಿದೆ.

ಈ ವಿವಾದವು ಯುಪಿ ವಿಧಾನಸಭಾ ಚುನಾವಣೆಯಲ್ಲಿ ಅಯೋಧ್ಯೆ ಕ್ಷೇತ್ರದ ಪ್ರಮುಖ ಚುನಾವಣಾ ವಿಷಯವಾಗಿ ಮಾರ್ಪಟ್ಟಿದೆ. ನಿರ್ಮಾಣ ಹಂತದಲ್ಲಿರುವ ರಾಮ ಮಂದಿರ, ರಾಮ ಇಲ್ಲಿ ಜನಿಸಿದನೆಂಬ ನಂಬಿಕೆಗಳು ಮತ್ತು ಹಿಂದುತ್ವ ಯೋಜನೆಗಳ ಕೇಂದ್ರವಾಗಿದ್ದ ಅಯೋಧ್ಯೆ, ಇವೆಲ್ಲವುಗಳ ಹೊರತಾಗಿ ಈ ಬಾರಿಯ ಚುನಾವಣೆಯಲ್ಲಿ ಅಸಲಿ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿದೆ.

ಅಯೋಧ್ಯೆ ಜಿಲ್ಲೆಯು ಬಿಜೆಪಿ ಭದ್ರಕೋಟೆಯಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. ಇದೀಗ, ವಿಧಾನಸಭಾ ಚುನಾವಣೆಯಲ್ಲಿ ಐದನೇ ಹಂತದ (ಫೆ.27) ಮತದಾನ ನಡೆಯಲಿರುವ ಜಿಲ್ಲೆಗಳಲ್ಲಿ ಅಯೋಧ್ಯೆಯೂ ಒಂದಾಗಿದೆ.

ಈ ಬಾರಿ ಮೂಲಸೌಕರ್ಯ ಮತ್ತು ಸ್ಥಳೀಯ ಆಡಳಿತ ಸಮಸ್ಯೆಗಳು ಚುನಾವಣೆಯ ವಿಷಯವಾಗಿದೆ. ಇದರ ಮಧ್ಯೆ, ಅನೇಕರಿಗೆ ತಮ್ಮ ಜೀವನೋಪಾಯದ ಪ್ರಶ್ನೆಯು ಪ್ರಮುಖವಾಗಿದೆ.

“ಅಯೋಧ್ಯೆಯಲ್ಲಿ ರಸ್ತೆ ಅಗಲೀಕರಣ ಯೋಜನೆ ಜಾರಿಗೆ ಬಂದರೆ, ನಮ್ಮ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಭಯವಿದೆ. ಯುವಕನಾಗಿದ್ದಾಗ ನಾನು ರಾಮಮಂದಿರ ಚಳವಳಿಯನ್ನು ನೋಡಿದ್ದೇನೆ, ಭಾಗವಹಿಸಿದ್ದೇನೆ. ಆದರೆ, ಈಗ ನಾವು ನಮ್ಮ ಜೀವನೋಪಾಯಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಪ್ರವಾಸಿಗರ ಸಂಖ್ಯೆ ಹೆಚ್ಚಿರುವುದರಿಂದ ಖದೌಸ್ (ಮರದ ಚಪ್ಪಲಿ)ಗಳಿಗೆ ಬೇಡಿಕೆಯೂ ಹೆಚ್ಚಿದೆ. ಈಗ ನಾನು ಅಂಗಡಿಯನ್ನು ಕಳೆದುಕೊಳ್ಳಬೇಕಾಗುತ್ತದೆ ಎಂಬ ಊಹೆಯೇ ಭಯಾನಕವಾಗಿದೆ” ಎಂದು ಖದೌಸ್‌‌ ವ್ಯಾಪಾರಿ ರಾಮ್ ಸಾಗರ್ ಹೇಳುತ್ತಾರೆ.

ಇದನ್ನೂ ಓದಿರಿ: ಭೂ ಹಗರಣ, ಬ್ರಾಹ್ಮಣರ ಮತಗಳು ಕೈ ತಪ್ಪುವ ಭಯ: ಅಯೋಧ್ಯೆಯ ಟಿಕೆಟ್‌ ಯೋಗಿ ಕಳೆದುಕೊಳ್ಳಲು ಕಾರಣವೇ?

51 ವರ್ಷದ ರಾಧಾ ಕೃಷ್ಣ ಅವರು ಕಳೆದ ಮೂರು ತಲೆಮಾರುಗಳಿಂದ ಸಿಹಿತಿಂಡಿ ಅಂಗಡಿ ನಡೆಸುತ್ತಿದ್ದಾರೆ. ಆದರೆ, ಅವರು ಮಳಿಗೆಯನ್ನು ಬಾಡಿಗೆಗೆ ಪಡೆದು ವ್ಯಾಪಾರ ನಡೆಸುತ್ತಿದ್ದಾರೆ. ಈಗ ಆ ಅಂಗಡಿ ಮಳಿಗೆಗಳನ್ನು ಕೆಡವಿದರೆ, ಅದರ ಪರಿಹಾರವು ಮಾಲೀಕರಿಗೆ ಸಿಗುತ್ತದೆ. ನಮ್ಮ ಗತಿ ಏನು? ಎಂದು ಅವರು ಚಿಂತಿತರಾಗಿದ್ದಾರೆ.

”ನಾವು ಯಾವುದೇ ಅಭಿವೃದ್ಧಿ ಯೋಜನೆಗಳಿಗೆ ವಿರುದ್ದವಿಲ್ಲ. ಆದರೆ, ಅಂಗಡಿಗಳನ್ನು ಕೆಡವುವ ಮುನ್ನ ಪ್ರತಿಯೊಂದು ಅಂಗಡಿಯವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು” ಎಂದು ಬಟ್ಟೆ ಅಂಗಡಿ ಮಾಲೀಕ ಅನುರಾಗ್ ಶುಕ್ಲಾ ಒತ್ತಾಯಿಸುತ್ತಾರೆ.

ಈ ವ್ಯಾಪಾರಿಗಳ ಅಸಮಾಧಾನ, ಜನರ ಸಂಕಷ್ಟಗಳು ಬಿಜೆಪಿಗೆ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಭಯವನ್ನು ಹುಟ್ಟಿಸಿವೆ. ಈ ಕಾರಣಕ್ಕಾಗಿಯೇ, ಫೆಬ್ರವರಿ 24ರಂದು ನಡೆದ ಬಿಜೆಪಿ ರೋಡ್ ಶೋನಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, “ಅಯೋಧ್ಯೆಯ ಸಂತರು ಮತ್ತು ವ್ಯಾಪಾರಿಗಳಿಗೆ ಒಪ್ಪಿಗೆಯಿಲ್ಲದೆ ಅಯೋಧ್ಯೆಯಲ್ಲಿ ಯಾವುದೇ ಯೋಜನೆಯನ್ನು ಕಾರ್ಯಗತಗೊಳಿಸುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ” ಎಂದು ಹೇಳಿದ್ದಾರೆ.

ಈ ಸಮಸ್ಯೆಗಳನ್ನು ಗ್ರಹಿಸಿರುವ ಮತ್ತು ಅವಕಾಶಕ್ಕಾಗಿ ಕಾಯುತ್ತಿದ್ದ ಸಮಾಜವಾದಿ ಪಕ್ಷದ (SP) ಮಾಜಿ ಶಾಸಕ ತೇಜ್ ನಾರಾಯಣ್ ಪಾಂಡೆ ಅವರು ಸಂಪೂರ್ಣವಾಗಿ ವ್ಯಾಪಾರಿಗಳ ಪರ ನಿಂತಿದ್ದಾರೆ. 2012ರಲ್ಲಿ ಅಯೋಧ್ಯೆಯಲ್ಲಿ ಬಿಜೆಪಿಯ ಲಲ್ಲು ಸಿಂಗ್ ಅವರನ್ನು ಸೋಲಿಸಿದ್ದ ಪಾಂಡೆ, 2017ರಲ್ಲಿ ಬಿಜೆಪಿಯ ವೇದ್ ಪ್ರಕಾಶ್ ಗುಪ್ತಾ ವಿರುದ್ಧ ಸೋತಿದ್ದರು. ಈ ಬಾರಿಯೂ ಅವರು ಎಸ್ಪಿ ಅಭ್ಯರ್ಥಿಯಾಗಿದ್ದಾರೆ. ಬಿಜೆಪಿಯನ್ನು ಮಣಿಸಿ, ಗೆಲುವು ಸಾಧಿಸಲೇಬೇಕು ಎದು ಅವರು ಯತ್ನಿಸುತ್ತಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಾಣ ಮಾಡುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ನಂತರ, ರಾಮ ಮಂದಿರ ನಿರ್ಮಾಣದ ಕೆಲಸಗಳು ನಡೆಯುತ್ತಿವೆ. ಈಗ ಅಯೋಧ್ಯೆ ವಿವಾದವು ರಾಜಕೀಯ ದಾಳವಾಗಿ ಯಾವ ಪಕ್ಷಕ್ಕೂ ಉಳಿದಿಲ್ಲ. ಜನರು, “ರಾಮಮಂದಿರ ವಿವಾದ ಮುಗಿದಿದೆ. ರಾಮಮಂದಿರ ನಿರ್ಮಾಣವಾಗುತ್ತಿದೆ. ಈಗ ಅದರ ಬಗ್ಗೆ ಮಾತನಾಡುವುದೇನಿದೆ?” ಎಂದು ಪ್ರಶ್ನಿಸುತ್ತಿದ್ದಾರೆ. ತಮ್ಮ ಅಸಲಿ ಸಮಸ್ಯೆಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ.

ಹೀಗಾಗಿ, ಬಿಜೆಪಿಯು ಈ ಬಾರಿಯ ಚುನಾವಣೆಯಲ್ಲಿ ರಾಮಮಂದಿರ ವಿಚಾರವನ್ನು ತಮ್ಮ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತಿಲ್ಲ. ಅಲ್ಲದೆ, ಜನರ ಅಸಲಿ ಸಮಸ್ಯೆಗಳಿಗೆ ಉತ್ತರಿಸಲೂ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಅಯೋಧ್ಯೆಯಲ್ಲಿ ಬಿಜೆಪಿಗೆ ಮತಗಳನ್ನು ತರಲು ಅಲ್ಲಿನ ಸಂತರು ಎಲ್ಲಾ ದೇವಾಲಯಗಳಲ್ಲಿಯೂ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಜನರ ಚಿತ್ತವನ್ನು ಬಿಜೆಪಿಯತ್ತ ಸೆಳೆಯಲು ಯತ್ನಿಸುತ್ತಿದ್ದಾರೆ.

ಸಮಾಜವಾದಿ ಪಕ್ಷವು ಜನರ ಸಮಸ್ಯೆಗಳನ್ನಿಟ್ಟುಕೊಂಡು ಚುನಾವಣಾ ಮೈಲೇಜ್ ಪಡೆಯಲು ಮುಂದಾಗಿದೆ. ಅಯೋಧ್ಯೆ ಜನರು ಏನನ್ನು ನಿರ್ಧರಿಸುತ್ತಾರೆ ಎಂಬುದನ್ನು ಮಾರ್ಚ್ 10ರಂದು ಪ್ರಕಟವಾಗುವ ಫಲಿತಾಂಶದಲ್ಲಿ ನೋಡಬೇಕಿದೆ.


ಇದನ್ನೂ ಓದಿರಿ: ಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...