Homeಮುಖಪುಟಯುಪಿ ಚುನಾವಣೆ: ಅಯೋಧ್ಯೆಯಲ್ಲಿ ಬದಿಗೆ ಸರಿದ ರಾಮಮಂದಿರ; ವ್ಯಾಪಾರಿಗಳ ಕೂಗು ಮುನ್ನಲೆಗೆ

ಯುಪಿ ಚುನಾವಣೆ: ಅಯೋಧ್ಯೆಯಲ್ಲಿ ಬದಿಗೆ ಸರಿದ ರಾಮಮಂದಿರ; ವ್ಯಾಪಾರಿಗಳ ಕೂಗು ಮುನ್ನಲೆಗೆ

- Advertisement -
- Advertisement -

ಉತ್ತರ ಪ್ರದೇಶದ ಅಯೋಧ್ಯೆಯ ಕೇಂದ್ರಬಿಂದುವಾಗಿರುವ ರಾಮ್ ಕಿ ಪೈಡಿ ಘಾಟ್ ಪ್ರದೇಶದಲ್ಲಿ ಸುಮಾರು 750 ದೊಡ್ಡ ಮತ್ತು ಚಿಕ್ಕ ಅಂಗಡಿಗಳಿವೆ. ಅವುಗಳಲ್ಲಿ ಕೆಲವು ಅಂಗಡಿಗಳು ಬಹಳ ಕಾಲದಿಂದಲೂ ಇವೆ. ಆ ಅಂಗಡಿಗಳಿಂದ ತುಂಬಿರುವ ರಸ್ತೆಯು ಹನುಮಾನ್ ಗರ್ಹಿ ದೇವಾಲಯಕ್ಕೆ ಸಂಪರ್ಕ ಕಲ್ಪಿಸುತ್ತದೆ. ಆ ಕಾರಣದಿಂದಾಗಿ ರಾಜ್ಯ ಸರ್ಕಾರವು ರಸ್ತೆ ಅಗಲೀಕರಣ ಯೋಜನೆಯನ್ನು ರೂಪಿಸಿ, ಜಾರಿಗೊಳಿಸಲು ಮುಂದಾಗಿದೆ. ಇದರಿಂದಾಗಿ, ಕೆಲವು ವ್ಯಾಪಾರಗಳು ಮತ್ತು ಅವುಗಳ ಮಾಲೀಕರಿಗೆ ತಮ್ಮ ಹೊಟ್ಟೆಗೆ ತಣ್ಣೀರು ಬಟ್ಟೆ ಬೀಳಲಿದೆ ಎಂಬ ಆತಂಕ ಉಂಟಾಗಿದೆ.

ಈ ವಿವಾದವು ಯುಪಿ ವಿಧಾನಸಭಾ ಚುನಾವಣೆಯಲ್ಲಿ ಅಯೋಧ್ಯೆ ಕ್ಷೇತ್ರದ ಪ್ರಮುಖ ಚುನಾವಣಾ ವಿಷಯವಾಗಿ ಮಾರ್ಪಟ್ಟಿದೆ. ನಿರ್ಮಾಣ ಹಂತದಲ್ಲಿರುವ ರಾಮ ಮಂದಿರ, ರಾಮ ಇಲ್ಲಿ ಜನಿಸಿದನೆಂಬ ನಂಬಿಕೆಗಳು ಮತ್ತು ಹಿಂದುತ್ವ ಯೋಜನೆಗಳ ಕೇಂದ್ರವಾಗಿದ್ದ ಅಯೋಧ್ಯೆ, ಇವೆಲ್ಲವುಗಳ ಹೊರತಾಗಿ ಈ ಬಾರಿಯ ಚುನಾವಣೆಯಲ್ಲಿ ಅಸಲಿ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿದೆ.

ಅಯೋಧ್ಯೆ ಜಿಲ್ಲೆಯು ಬಿಜೆಪಿ ಭದ್ರಕೋಟೆಯಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. ಇದೀಗ, ವಿಧಾನಸಭಾ ಚುನಾವಣೆಯಲ್ಲಿ ಐದನೇ ಹಂತದ (ಫೆ.27) ಮತದಾನ ನಡೆಯಲಿರುವ ಜಿಲ್ಲೆಗಳಲ್ಲಿ ಅಯೋಧ್ಯೆಯೂ ಒಂದಾಗಿದೆ.

ಈ ಬಾರಿ ಮೂಲಸೌಕರ್ಯ ಮತ್ತು ಸ್ಥಳೀಯ ಆಡಳಿತ ಸಮಸ್ಯೆಗಳು ಚುನಾವಣೆಯ ವಿಷಯವಾಗಿದೆ. ಇದರ ಮಧ್ಯೆ, ಅನೇಕರಿಗೆ ತಮ್ಮ ಜೀವನೋಪಾಯದ ಪ್ರಶ್ನೆಯು ಪ್ರಮುಖವಾಗಿದೆ.

“ಅಯೋಧ್ಯೆಯಲ್ಲಿ ರಸ್ತೆ ಅಗಲೀಕರಣ ಯೋಜನೆ ಜಾರಿಗೆ ಬಂದರೆ, ನಮ್ಮ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಭಯವಿದೆ. ಯುವಕನಾಗಿದ್ದಾಗ ನಾನು ರಾಮಮಂದಿರ ಚಳವಳಿಯನ್ನು ನೋಡಿದ್ದೇನೆ, ಭಾಗವಹಿಸಿದ್ದೇನೆ. ಆದರೆ, ಈಗ ನಾವು ನಮ್ಮ ಜೀವನೋಪಾಯಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಪ್ರವಾಸಿಗರ ಸಂಖ್ಯೆ ಹೆಚ್ಚಿರುವುದರಿಂದ ಖದೌಸ್ (ಮರದ ಚಪ್ಪಲಿ)ಗಳಿಗೆ ಬೇಡಿಕೆಯೂ ಹೆಚ್ಚಿದೆ. ಈಗ ನಾನು ಅಂಗಡಿಯನ್ನು ಕಳೆದುಕೊಳ್ಳಬೇಕಾಗುತ್ತದೆ ಎಂಬ ಊಹೆಯೇ ಭಯಾನಕವಾಗಿದೆ” ಎಂದು ಖದೌಸ್‌‌ ವ್ಯಾಪಾರಿ ರಾಮ್ ಸಾಗರ್ ಹೇಳುತ್ತಾರೆ.

ಇದನ್ನೂ ಓದಿರಿ: ಭೂ ಹಗರಣ, ಬ್ರಾಹ್ಮಣರ ಮತಗಳು ಕೈ ತಪ್ಪುವ ಭಯ: ಅಯೋಧ್ಯೆಯ ಟಿಕೆಟ್‌ ಯೋಗಿ ಕಳೆದುಕೊಳ್ಳಲು ಕಾರಣವೇ?

51 ವರ್ಷದ ರಾಧಾ ಕೃಷ್ಣ ಅವರು ಕಳೆದ ಮೂರು ತಲೆಮಾರುಗಳಿಂದ ಸಿಹಿತಿಂಡಿ ಅಂಗಡಿ ನಡೆಸುತ್ತಿದ್ದಾರೆ. ಆದರೆ, ಅವರು ಮಳಿಗೆಯನ್ನು ಬಾಡಿಗೆಗೆ ಪಡೆದು ವ್ಯಾಪಾರ ನಡೆಸುತ್ತಿದ್ದಾರೆ. ಈಗ ಆ ಅಂಗಡಿ ಮಳಿಗೆಗಳನ್ನು ಕೆಡವಿದರೆ, ಅದರ ಪರಿಹಾರವು ಮಾಲೀಕರಿಗೆ ಸಿಗುತ್ತದೆ. ನಮ್ಮ ಗತಿ ಏನು? ಎಂದು ಅವರು ಚಿಂತಿತರಾಗಿದ್ದಾರೆ.

”ನಾವು ಯಾವುದೇ ಅಭಿವೃದ್ಧಿ ಯೋಜನೆಗಳಿಗೆ ವಿರುದ್ದವಿಲ್ಲ. ಆದರೆ, ಅಂಗಡಿಗಳನ್ನು ಕೆಡವುವ ಮುನ್ನ ಪ್ರತಿಯೊಂದು ಅಂಗಡಿಯವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು” ಎಂದು ಬಟ್ಟೆ ಅಂಗಡಿ ಮಾಲೀಕ ಅನುರಾಗ್ ಶುಕ್ಲಾ ಒತ್ತಾಯಿಸುತ್ತಾರೆ.

ಈ ವ್ಯಾಪಾರಿಗಳ ಅಸಮಾಧಾನ, ಜನರ ಸಂಕಷ್ಟಗಳು ಬಿಜೆಪಿಗೆ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಭಯವನ್ನು ಹುಟ್ಟಿಸಿವೆ. ಈ ಕಾರಣಕ್ಕಾಗಿಯೇ, ಫೆಬ್ರವರಿ 24ರಂದು ನಡೆದ ಬಿಜೆಪಿ ರೋಡ್ ಶೋನಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, “ಅಯೋಧ್ಯೆಯ ಸಂತರು ಮತ್ತು ವ್ಯಾಪಾರಿಗಳಿಗೆ ಒಪ್ಪಿಗೆಯಿಲ್ಲದೆ ಅಯೋಧ್ಯೆಯಲ್ಲಿ ಯಾವುದೇ ಯೋಜನೆಯನ್ನು ಕಾರ್ಯಗತಗೊಳಿಸುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ” ಎಂದು ಹೇಳಿದ್ದಾರೆ.

ಈ ಸಮಸ್ಯೆಗಳನ್ನು ಗ್ರಹಿಸಿರುವ ಮತ್ತು ಅವಕಾಶಕ್ಕಾಗಿ ಕಾಯುತ್ತಿದ್ದ ಸಮಾಜವಾದಿ ಪಕ್ಷದ (SP) ಮಾಜಿ ಶಾಸಕ ತೇಜ್ ನಾರಾಯಣ್ ಪಾಂಡೆ ಅವರು ಸಂಪೂರ್ಣವಾಗಿ ವ್ಯಾಪಾರಿಗಳ ಪರ ನಿಂತಿದ್ದಾರೆ. 2012ರಲ್ಲಿ ಅಯೋಧ್ಯೆಯಲ್ಲಿ ಬಿಜೆಪಿಯ ಲಲ್ಲು ಸಿಂಗ್ ಅವರನ್ನು ಸೋಲಿಸಿದ್ದ ಪಾಂಡೆ, 2017ರಲ್ಲಿ ಬಿಜೆಪಿಯ ವೇದ್ ಪ್ರಕಾಶ್ ಗುಪ್ತಾ ವಿರುದ್ಧ ಸೋತಿದ್ದರು. ಈ ಬಾರಿಯೂ ಅವರು ಎಸ್ಪಿ ಅಭ್ಯರ್ಥಿಯಾಗಿದ್ದಾರೆ. ಬಿಜೆಪಿಯನ್ನು ಮಣಿಸಿ, ಗೆಲುವು ಸಾಧಿಸಲೇಬೇಕು ಎದು ಅವರು ಯತ್ನಿಸುತ್ತಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಾಣ ಮಾಡುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ನಂತರ, ರಾಮ ಮಂದಿರ ನಿರ್ಮಾಣದ ಕೆಲಸಗಳು ನಡೆಯುತ್ತಿವೆ. ಈಗ ಅಯೋಧ್ಯೆ ವಿವಾದವು ರಾಜಕೀಯ ದಾಳವಾಗಿ ಯಾವ ಪಕ್ಷಕ್ಕೂ ಉಳಿದಿಲ್ಲ. ಜನರು, “ರಾಮಮಂದಿರ ವಿವಾದ ಮುಗಿದಿದೆ. ರಾಮಮಂದಿರ ನಿರ್ಮಾಣವಾಗುತ್ತಿದೆ. ಈಗ ಅದರ ಬಗ್ಗೆ ಮಾತನಾಡುವುದೇನಿದೆ?” ಎಂದು ಪ್ರಶ್ನಿಸುತ್ತಿದ್ದಾರೆ. ತಮ್ಮ ಅಸಲಿ ಸಮಸ್ಯೆಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ.

ಹೀಗಾಗಿ, ಬಿಜೆಪಿಯು ಈ ಬಾರಿಯ ಚುನಾವಣೆಯಲ್ಲಿ ರಾಮಮಂದಿರ ವಿಚಾರವನ್ನು ತಮ್ಮ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತಿಲ್ಲ. ಅಲ್ಲದೆ, ಜನರ ಅಸಲಿ ಸಮಸ್ಯೆಗಳಿಗೆ ಉತ್ತರಿಸಲೂ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಅಯೋಧ್ಯೆಯಲ್ಲಿ ಬಿಜೆಪಿಗೆ ಮತಗಳನ್ನು ತರಲು ಅಲ್ಲಿನ ಸಂತರು ಎಲ್ಲಾ ದೇವಾಲಯಗಳಲ್ಲಿಯೂ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಜನರ ಚಿತ್ತವನ್ನು ಬಿಜೆಪಿಯತ್ತ ಸೆಳೆಯಲು ಯತ್ನಿಸುತ್ತಿದ್ದಾರೆ.

ಸಮಾಜವಾದಿ ಪಕ್ಷವು ಜನರ ಸಮಸ್ಯೆಗಳನ್ನಿಟ್ಟುಕೊಂಡು ಚುನಾವಣಾ ಮೈಲೇಜ್ ಪಡೆಯಲು ಮುಂದಾಗಿದೆ. ಅಯೋಧ್ಯೆ ಜನರು ಏನನ್ನು ನಿರ್ಧರಿಸುತ್ತಾರೆ ಎಂಬುದನ್ನು ಮಾರ್ಚ್ 10ರಂದು ಪ್ರಕಟವಾಗುವ ಫಲಿತಾಂಶದಲ್ಲಿ ನೋಡಬೇಕಿದೆ.


ಇದನ್ನೂ ಓದಿರಿ: ಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...