Homeಮುಖಪುಟಯುಪಿ ಚುನಾವಣೆ ಹಿನ್ನೆಲೆ: ರಾಜ್ಯಸಭೆಯಲ್ಲಿ ಶ್ರೀಕೃಷ್ಣ ಜನ್ಮಭೂಮಿ ವಿಷಯ ಪ್ರಸ್ತಾಪಿಸಿದ BJP!

ಯುಪಿ ಚುನಾವಣೆ ಹಿನ್ನೆಲೆ: ರಾಜ್ಯಸಭೆಯಲ್ಲಿ ಶ್ರೀಕೃಷ್ಣ ಜನ್ಮಭೂಮಿ ವಿಷಯ ಪ್ರಸ್ತಾಪಿಸಿದ BJP!

- Advertisement -
- Advertisement -

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಲಿದೆ. ಆಡಳಿತರೂಢ ಪಕ್ಷವಾದ ಬಿಜೆಪಿ ಅಭಿವೃದ್ದಿ ಹೆಸರಲ್ಲಿ ಮತ ಕೇಳುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ಪಕ್ಷವು ಮತ್ತೆ ಹಿಂದುತ್ವದ ಬೆನ್ನು ಬಿದ್ದಿದೆ. ಗುರುವಾರ ಬಿಜೆಪಿ ಸಂಸದರೊಬ್ಬರು ರಾಜ್ಯಸಭೆಯಲ್ಲಿ ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ಭೂ ವಿವಾದದ ವಿಷಯವನ್ನು ಪ್ರಸ್ತಾಪಿಸಿ, ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವ ಕಾನೂನನ್ನು ರದ್ದುಗೊಳಿಸುವ ಕಾನೂನಿಗಾಗಿ ಒತ್ತಾಯಿಸಿದ್ದಾರೆ.

ಶೂನ್ಯವೇಳೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿದ ಹರನಾಥ್ ಸಿಂಗ್ ಯಾದವ್ ಅವರು ‘‘1991 ರ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆಯನ್ನು ಅಸಂವಿಧಾನಿಕ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಈ ಕಾಯಿದೆಯು, ಆಗಸ್ಟ್ 15, 1947 ರಂದು ಅಸ್ತಿತ್ವದಲ್ಲಿರುವ ಯಾವುದೇ ಪೂಜಾ ಸ್ಥಳವನ್ನು ಪರಿವರ್ತಿಸುವುದನ್ನು ನಿಷೇಧಿಸುತ್ತದೆ ಮತ್ತು ಯಾವುದೇ ಪೂಜಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಹಾಗೆಯೆ ಕಾಪಾಡಿಕೊಳ್ಳಬೇಕು ಎಂದು ಹೇಳುತ್ತದೆ.

ಇದನ್ನೂ ಓದಿ:ಡಿ.6 ಬಾಬರಿ ಮಸೀದಿ ಧ್ವಂಸ ದಿನ: ಮಥುರಾದಲ್ಲಿ ನಿಷೇದಾಜ್ಞೆ, ಪೊಲೀಸ್ ಬಿಗಿ ಭದ್ರತೆ

ಈ ಕಾಯಿದೆಯು ಅಯೋಧ್ಯೆಯ ಬಾಬರಿ ಮಸೀದಿ ಪ್ರಕರಣಕ್ಕೆ ವಿನಾಯಿತಿ ನೀಡುತ್ತದೆಯಾದರೂ, ಇತರ ಯಾವುದೇ ಧಾರ್ಮಿಕ ಸ್ಥಳಗಳ ಮೇಲಿನ ನ್ಯಾಯಾಲಯಗಳಲ್ಲಿನ ಎಲ್ಲಾ ಕಾನೂನು ವಿವಾದಗಳನ್ನು 1991 ರ ಕಾಯಿದೆಯ ಪ್ರಕಾರ ಇತ್ಯರ್ಥಗೊಳಿಸಬೇಕಾಗಿದೆ.

“ಈ ನಿಬಂಧನೆಯು ಸಮಾನತೆಯ ಹಕ್ಕಿನ ಸಾಂವಿಧಾನಿಕ ನಿಬಂಧನೆಯನ್ನು ಮಾತ್ರವಲ್ಲದೆ ಸಾಂವಿಧಾನಿಕ ಪೀಠಿಕೆಯ ಭಾಗವಾಗಿರುವ ಜಾತ್ಯತೀತತೆಯನ್ನು ಉಲ್ಲಂಘಿಸುತ್ತದೆ. ಯಾವುದೇ ನಾಗರಿಕರು ಇದರ ವಿರುದ್ಧ ನ್ಯಾಯಾಲಯಕ್ಕೆ ಹೋಗಬಾರದು ಎಂದು ಈ ಕಾನೂನು ಹೇಳುವುದು ವಿಚಿತ್ರವಾಗಿದೆ. ಈ ಕಾನೂನನ್ನು ಪ್ರಶ್ನಿಸುವಂತಿಲ್ಲ” ಎಂದು ಹರನಾಥ್ ಸಿಂಗ್‌ ಹೇಳಿದ್ದಾರೆ.

“ವಿದೇಶಿ ಆಕ್ರಮಣಕಾರರು ಕೃಷ್ಣ ಜನ್ಮಭೂಮಿ ಮತ್ತು ಇತರ ಧಾರ್ಮಿಕ ಸ್ಥಳಗಳನ್ನು ಬಲವಂತವಾಗಿ ಆಕ್ರಮಿಸಿಕೊಂಡಿರುವುದಕ್ಕೆ ಕಾನೂನು ‘ಕಾನೂನು ಮಾನ್ಯತೆ’ ನೀಡುತ್ತದೆ. ಈ ಅನಿಯಂತ್ರಿತ ಮತ್ತು ಅಸಂವಿಧಾನಿಕ ಕಾನೂನು ಹಿಂದೂಗಳು, ಜೈನರು, ಸಿಖ್ ಮತ್ತು ಬೌದ್ಧರು ತಮ್ಮ ಧರ್ಮವನ್ನು ಆಚರಿಸುವ ಮತ್ತು ಪ್ರಚಾರ ಮಾಡುವ ಹಕ್ಕನ್ನು ಕಸಿದುಕೊಂಡಿದೆ. ಜೊತೆಗೆ, ಈ ಕಾನೂನು ಭಗವಾನ್ ರಾಮ ಮತ್ತು ಭಗವಾನ್ ಕೃಷ್ಣನ ನಡುವೆ ತಾರತಮ್ಯವನ್ನು ಮಾಡುತ್ತದೆ. ಆದರೆ ಇವರಿಬ್ಬರೂ ವಿಷ್ಣುವಿನ ಅವತಾರಗಳು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಥುರಾ-ವೃಂದಾವನ್ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯ 22 ವಾರ್ಡ್‌ಗಳಲ್ಲಿ ಮದ್ಯ, ಮಾಂಸ ನಿಷೇಧ!

“ಒಂದೇ ಕಾರ್ಯಗಳು ಮತ್ತು ಸನ್ನಿವೇಶಗಳಿಗೆ ಎರಡು ಕಾನೂನುಗಳು ಇರುವಂತಿಲ್ಲ. ನಾಗರಿಕರಿಗೆ ನ್ಯಾಯಾಲಯಗಳ ಬಾಗಿಲುಗಳನ್ನು ಮುಚ್ಚಲು ಸಾಧ್ಯವಿಲ್ಲ. ಈ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆಯು ಕೇವಲ ಅಸಂವಿಧಾನಿಕ ಮಾತ್ರವಲ್ಲ, ಹಿಂದೂಗಳು, ಜೈನರು, ಸಿಖ್ಖರು ಮತ್ತು ಬೌದ್ಧರ ಧಾರ್ಮಿಕ ಭಾವನೆಗಳ ವಿರುದ್ಧದ ಕ್ರೌರ್ಯವಾಗಿದೆ. ಈ ಕಾನೂನನ್ನು ತಕ್ಷಣವೇ ರದ್ದುಗೊಳಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಬಿಜೆಪಿ ಸಂಸದ ಈ ಪ್ರಸ್ತಾವನೆಗೆ ವಿರೋಧ ಪಕ್ಷದ ಕೆಲವು ಸಂಸದರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಆರ್‌ಜೆಡಿಯ ಮನೋಜ್ ಕುಮಾರ್ ಝಾ, “ಸೌಹಾರ್ದತೆ ಮತ್ತು ಸಾಮರಸ್ಯದ ಕಲ್ಪನೆಯನ್ನು ರಕ್ಷಿಸಲು ಸಂಸತ್ತಿನಲ್ಲಿ 1991 ರ ಕಾಯಿದೆಯನ್ನು ಅಂಗೀಕರಿಸಲಾಯಿತು. ಬಿಜೆಪಿ ಸಂಸದರು ಪಂಡೋರಾ ಪೆಟ್ಟಿಗೆಯನ್ನು ತೆರೆದಿದ್ದಾರೆ. ಧಾರ್ಮಿಕ ಘರ್ಷಣೆಗಳ ಹೆಸರಿನಲ್ಲಿ ರಾಷ್ಟ್ರವು ಸಾಕಷ್ಟು ನಷ್ಟವನ್ನು ಅನುಭವಿಸಿದೆ, ಭಾರತದ ಸಾಮಾಜಿಕ ರಚನೆಯನ್ನು ಕದಡಬೇಡಿ” ಎಂದು ಹೇಳಿದ್ದಾರೆ.

ಅಯೋಧ್ಯೆ ಮತ್ತು ವಾರಣಾಸಿ ಮಾದರಿಯಲ್ಲಿ ಮಥುರಾದಲ್ಲಿ ಭವ್ಯ ಮಂದಿರ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಕಳೆದ ವಾರ ಟ್ವೀಟ್ ಮಾಡಿದ್ದನ್ನು ಅನುಸರಿಸಿ ರಾಜ್ಯಸಭೆಯಲ್ಲಿ ಈ ವಿಷಯ ಪ್ರಸ್ತಾವನೆಯಾಗಿದೆ.

ಇದನ್ನೂ ಓದಿ:ಮಥುರಾ: ಈದ್ಗಾ ಮಸೀದಿ ತೆರವು ಕೋರಿದ್ದ ಮನವಿ ವಜಾ

ಮಥುರಾದಲ್ಲಿ ಪ್ರಮುಖವಾದ ಶಾಹಿ ಈದ್ಗಾ ಮಸೀದಿ ಇದ್ದು, ಅದರ ಪಕ್ಕವೇ ದೇವಸ್ಥಾನವಿದೆ. ಮಸೀದಿಯ ಜಾಗ ಕೃಷ್ಣನ ಜನ್ಮಸ್ಥಳ ಎಂದು ಬಿಜೆಪಿ ಬೆಂಬಲಿತ ಸಂಘಟನೆಳು ವಾದಿಸುತ್ತಿವೆ. ಹೀಗಾಗಿ ಮಸೀದಿಯು ವರ್ಷಗಳಿಂದ ಕಾನೂನು ಹೋರಾಟದ ಕೇಂದ್ರವಾಗಿದೆ.

ಈ ಹಿಂದೆ ದೀರ್ಘಕಾಲ ಇದ್ದ ವಿವಾದವನ್ನು ಅಕ್ಟೋಬರ್ 1968 ರಲ್ಲಿ ನ್ಯಾಯಾಲಯವು ಅದನ್ನು ನಿರ್ವಹಿಸುವ ಟ್ರಸ್ಟ್ ಮತ್ತು ಶ್ರೀ ಕೃಷ್ಣ ಜನ್ಮಸ್ಥಾನ ಸೇವಾ ಸಂಘದ ನಡುವೆ ಒಪ್ಪಂದ ನಡೆಸಿ ವಿವಾದವನ್ನು ಇತ್ಯರ್ಥ ಮಾಡಲಾಗಿತ್ತು. ಆದರೆ ಅಯೋಧ್ಯೆ ಬಾಬರಿ ಮಸೀದಿ ಧ್ವಂಸಗೊಂಡ ನಂತರ ವಿವಾದವನ್ನು ಮತ್ತೆ ಪುನಶ್ಚೇತನಗೊಳಿಸಲಾಗಿದೆ.

ಬಿಜೆಪಿ ಬೆಂಬಲಿತ ಸಂಘಟನೆಗಳು ಈ ಒಪ್ಪಂದವನ್ನು ರದ್ದುಗೊಳಿಸಬೇಕು ಮತ್ತು ಮಥುರಾದ ಈದ್ಗಾ ಮತ್ತು ದೇವಾಲಯದ ಸಂಪೂರ್ಣ ಸಂಕೀರ್ಣವನ್ನು ಹಸ್ತಾಂತರಿಸಬೇಕೆಂದು ಒತ್ತಾಯಿಸುತ್ತಿದೆ.

ಇದನ್ನೂ ಓದಿ:ಕಾಶಿ ಮತ್ತು ಮಥುರಾದಲ್ಲಿ ಇನ್ನೂ ಎರಡು ಉಳಿದಿವೆ ಅವುಗಳನ್ನು ಅಳಿಸಿಹಾಕಬೇಕು: ಕೆ. ಎಸ್. ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾಡಲು ಕೆಲಸವಿಲ್ಲದ, ಹೇಳಿಕೊಳ್ಳಲು ಸಾಧನೆಗಳಿಲ್ಲದ ಎಲ್ಲದಕ್ಕೂ ಮೀರಿ ಮಾನವ ಕುಲಕ್ಕೆ ರಾಕ್ಷಸರಂತೆ ಕಾಡುತ್ತಿರುವ ದುರುಳರು ಇದನ್ನ ಬಿಟ್ಟು ಇನ್ನೇನು ಮಾಡಲು ಸಾಧ್ಯ.

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...