Homeಮುಖಪುಟಯುಪಿ ಚುನಾವಣೆ ಹಿನ್ನೆಲೆ: ರಾಜ್ಯಸಭೆಯಲ್ಲಿ ಶ್ರೀಕೃಷ್ಣ ಜನ್ಮಭೂಮಿ ವಿಷಯ ಪ್ರಸ್ತಾಪಿಸಿದ BJP!

ಯುಪಿ ಚುನಾವಣೆ ಹಿನ್ನೆಲೆ: ರಾಜ್ಯಸಭೆಯಲ್ಲಿ ಶ್ರೀಕೃಷ್ಣ ಜನ್ಮಭೂಮಿ ವಿಷಯ ಪ್ರಸ್ತಾಪಿಸಿದ BJP!

- Advertisement -
- Advertisement -

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಲಿದೆ. ಆಡಳಿತರೂಢ ಪಕ್ಷವಾದ ಬಿಜೆಪಿ ಅಭಿವೃದ್ದಿ ಹೆಸರಲ್ಲಿ ಮತ ಕೇಳುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ಪಕ್ಷವು ಮತ್ತೆ ಹಿಂದುತ್ವದ ಬೆನ್ನು ಬಿದ್ದಿದೆ. ಗುರುವಾರ ಬಿಜೆಪಿ ಸಂಸದರೊಬ್ಬರು ರಾಜ್ಯಸಭೆಯಲ್ಲಿ ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ಭೂ ವಿವಾದದ ವಿಷಯವನ್ನು ಪ್ರಸ್ತಾಪಿಸಿ, ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವ ಕಾನೂನನ್ನು ರದ್ದುಗೊಳಿಸುವ ಕಾನೂನಿಗಾಗಿ ಒತ್ತಾಯಿಸಿದ್ದಾರೆ.

ಶೂನ್ಯವೇಳೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿದ ಹರನಾಥ್ ಸಿಂಗ್ ಯಾದವ್ ಅವರು ‘‘1991 ರ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆಯನ್ನು ಅಸಂವಿಧಾನಿಕ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಈ ಕಾಯಿದೆಯು, ಆಗಸ್ಟ್ 15, 1947 ರಂದು ಅಸ್ತಿತ್ವದಲ್ಲಿರುವ ಯಾವುದೇ ಪೂಜಾ ಸ್ಥಳವನ್ನು ಪರಿವರ್ತಿಸುವುದನ್ನು ನಿಷೇಧಿಸುತ್ತದೆ ಮತ್ತು ಯಾವುದೇ ಪೂಜಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಹಾಗೆಯೆ ಕಾಪಾಡಿಕೊಳ್ಳಬೇಕು ಎಂದು ಹೇಳುತ್ತದೆ.

ಇದನ್ನೂ ಓದಿ:ಡಿ.6 ಬಾಬರಿ ಮಸೀದಿ ಧ್ವಂಸ ದಿನ: ಮಥುರಾದಲ್ಲಿ ನಿಷೇದಾಜ್ಞೆ, ಪೊಲೀಸ್ ಬಿಗಿ ಭದ್ರತೆ

ಈ ಕಾಯಿದೆಯು ಅಯೋಧ್ಯೆಯ ಬಾಬರಿ ಮಸೀದಿ ಪ್ರಕರಣಕ್ಕೆ ವಿನಾಯಿತಿ ನೀಡುತ್ತದೆಯಾದರೂ, ಇತರ ಯಾವುದೇ ಧಾರ್ಮಿಕ ಸ್ಥಳಗಳ ಮೇಲಿನ ನ್ಯಾಯಾಲಯಗಳಲ್ಲಿನ ಎಲ್ಲಾ ಕಾನೂನು ವಿವಾದಗಳನ್ನು 1991 ರ ಕಾಯಿದೆಯ ಪ್ರಕಾರ ಇತ್ಯರ್ಥಗೊಳಿಸಬೇಕಾಗಿದೆ.

“ಈ ನಿಬಂಧನೆಯು ಸಮಾನತೆಯ ಹಕ್ಕಿನ ಸಾಂವಿಧಾನಿಕ ನಿಬಂಧನೆಯನ್ನು ಮಾತ್ರವಲ್ಲದೆ ಸಾಂವಿಧಾನಿಕ ಪೀಠಿಕೆಯ ಭಾಗವಾಗಿರುವ ಜಾತ್ಯತೀತತೆಯನ್ನು ಉಲ್ಲಂಘಿಸುತ್ತದೆ. ಯಾವುದೇ ನಾಗರಿಕರು ಇದರ ವಿರುದ್ಧ ನ್ಯಾಯಾಲಯಕ್ಕೆ ಹೋಗಬಾರದು ಎಂದು ಈ ಕಾನೂನು ಹೇಳುವುದು ವಿಚಿತ್ರವಾಗಿದೆ. ಈ ಕಾನೂನನ್ನು ಪ್ರಶ್ನಿಸುವಂತಿಲ್ಲ” ಎಂದು ಹರನಾಥ್ ಸಿಂಗ್‌ ಹೇಳಿದ್ದಾರೆ.

“ವಿದೇಶಿ ಆಕ್ರಮಣಕಾರರು ಕೃಷ್ಣ ಜನ್ಮಭೂಮಿ ಮತ್ತು ಇತರ ಧಾರ್ಮಿಕ ಸ್ಥಳಗಳನ್ನು ಬಲವಂತವಾಗಿ ಆಕ್ರಮಿಸಿಕೊಂಡಿರುವುದಕ್ಕೆ ಕಾನೂನು ‘ಕಾನೂನು ಮಾನ್ಯತೆ’ ನೀಡುತ್ತದೆ. ಈ ಅನಿಯಂತ್ರಿತ ಮತ್ತು ಅಸಂವಿಧಾನಿಕ ಕಾನೂನು ಹಿಂದೂಗಳು, ಜೈನರು, ಸಿಖ್ ಮತ್ತು ಬೌದ್ಧರು ತಮ್ಮ ಧರ್ಮವನ್ನು ಆಚರಿಸುವ ಮತ್ತು ಪ್ರಚಾರ ಮಾಡುವ ಹಕ್ಕನ್ನು ಕಸಿದುಕೊಂಡಿದೆ. ಜೊತೆಗೆ, ಈ ಕಾನೂನು ಭಗವಾನ್ ರಾಮ ಮತ್ತು ಭಗವಾನ್ ಕೃಷ್ಣನ ನಡುವೆ ತಾರತಮ್ಯವನ್ನು ಮಾಡುತ್ತದೆ. ಆದರೆ ಇವರಿಬ್ಬರೂ ವಿಷ್ಣುವಿನ ಅವತಾರಗಳು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಥುರಾ-ವೃಂದಾವನ್ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯ 22 ವಾರ್ಡ್‌ಗಳಲ್ಲಿ ಮದ್ಯ, ಮಾಂಸ ನಿಷೇಧ!

“ಒಂದೇ ಕಾರ್ಯಗಳು ಮತ್ತು ಸನ್ನಿವೇಶಗಳಿಗೆ ಎರಡು ಕಾನೂನುಗಳು ಇರುವಂತಿಲ್ಲ. ನಾಗರಿಕರಿಗೆ ನ್ಯಾಯಾಲಯಗಳ ಬಾಗಿಲುಗಳನ್ನು ಮುಚ್ಚಲು ಸಾಧ್ಯವಿಲ್ಲ. ಈ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆಯು ಕೇವಲ ಅಸಂವಿಧಾನಿಕ ಮಾತ್ರವಲ್ಲ, ಹಿಂದೂಗಳು, ಜೈನರು, ಸಿಖ್ಖರು ಮತ್ತು ಬೌದ್ಧರ ಧಾರ್ಮಿಕ ಭಾವನೆಗಳ ವಿರುದ್ಧದ ಕ್ರೌರ್ಯವಾಗಿದೆ. ಈ ಕಾನೂನನ್ನು ತಕ್ಷಣವೇ ರದ್ದುಗೊಳಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಬಿಜೆಪಿ ಸಂಸದ ಈ ಪ್ರಸ್ತಾವನೆಗೆ ವಿರೋಧ ಪಕ್ಷದ ಕೆಲವು ಸಂಸದರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಆರ್‌ಜೆಡಿಯ ಮನೋಜ್ ಕುಮಾರ್ ಝಾ, “ಸೌಹಾರ್ದತೆ ಮತ್ತು ಸಾಮರಸ್ಯದ ಕಲ್ಪನೆಯನ್ನು ರಕ್ಷಿಸಲು ಸಂಸತ್ತಿನಲ್ಲಿ 1991 ರ ಕಾಯಿದೆಯನ್ನು ಅಂಗೀಕರಿಸಲಾಯಿತು. ಬಿಜೆಪಿ ಸಂಸದರು ಪಂಡೋರಾ ಪೆಟ್ಟಿಗೆಯನ್ನು ತೆರೆದಿದ್ದಾರೆ. ಧಾರ್ಮಿಕ ಘರ್ಷಣೆಗಳ ಹೆಸರಿನಲ್ಲಿ ರಾಷ್ಟ್ರವು ಸಾಕಷ್ಟು ನಷ್ಟವನ್ನು ಅನುಭವಿಸಿದೆ, ಭಾರತದ ಸಾಮಾಜಿಕ ರಚನೆಯನ್ನು ಕದಡಬೇಡಿ” ಎಂದು ಹೇಳಿದ್ದಾರೆ.

ಅಯೋಧ್ಯೆ ಮತ್ತು ವಾರಣಾಸಿ ಮಾದರಿಯಲ್ಲಿ ಮಥುರಾದಲ್ಲಿ ಭವ್ಯ ಮಂದಿರ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಕಳೆದ ವಾರ ಟ್ವೀಟ್ ಮಾಡಿದ್ದನ್ನು ಅನುಸರಿಸಿ ರಾಜ್ಯಸಭೆಯಲ್ಲಿ ಈ ವಿಷಯ ಪ್ರಸ್ತಾವನೆಯಾಗಿದೆ.

ಇದನ್ನೂ ಓದಿ:ಮಥುರಾ: ಈದ್ಗಾ ಮಸೀದಿ ತೆರವು ಕೋರಿದ್ದ ಮನವಿ ವಜಾ

ಮಥುರಾದಲ್ಲಿ ಪ್ರಮುಖವಾದ ಶಾಹಿ ಈದ್ಗಾ ಮಸೀದಿ ಇದ್ದು, ಅದರ ಪಕ್ಕವೇ ದೇವಸ್ಥಾನವಿದೆ. ಮಸೀದಿಯ ಜಾಗ ಕೃಷ್ಣನ ಜನ್ಮಸ್ಥಳ ಎಂದು ಬಿಜೆಪಿ ಬೆಂಬಲಿತ ಸಂಘಟನೆಳು ವಾದಿಸುತ್ತಿವೆ. ಹೀಗಾಗಿ ಮಸೀದಿಯು ವರ್ಷಗಳಿಂದ ಕಾನೂನು ಹೋರಾಟದ ಕೇಂದ್ರವಾಗಿದೆ.

ಈ ಹಿಂದೆ ದೀರ್ಘಕಾಲ ಇದ್ದ ವಿವಾದವನ್ನು ಅಕ್ಟೋಬರ್ 1968 ರಲ್ಲಿ ನ್ಯಾಯಾಲಯವು ಅದನ್ನು ನಿರ್ವಹಿಸುವ ಟ್ರಸ್ಟ್ ಮತ್ತು ಶ್ರೀ ಕೃಷ್ಣ ಜನ್ಮಸ್ಥಾನ ಸೇವಾ ಸಂಘದ ನಡುವೆ ಒಪ್ಪಂದ ನಡೆಸಿ ವಿವಾದವನ್ನು ಇತ್ಯರ್ಥ ಮಾಡಲಾಗಿತ್ತು. ಆದರೆ ಅಯೋಧ್ಯೆ ಬಾಬರಿ ಮಸೀದಿ ಧ್ವಂಸಗೊಂಡ ನಂತರ ವಿವಾದವನ್ನು ಮತ್ತೆ ಪುನಶ್ಚೇತನಗೊಳಿಸಲಾಗಿದೆ.

ಬಿಜೆಪಿ ಬೆಂಬಲಿತ ಸಂಘಟನೆಗಳು ಈ ಒಪ್ಪಂದವನ್ನು ರದ್ದುಗೊಳಿಸಬೇಕು ಮತ್ತು ಮಥುರಾದ ಈದ್ಗಾ ಮತ್ತು ದೇವಾಲಯದ ಸಂಪೂರ್ಣ ಸಂಕೀರ್ಣವನ್ನು ಹಸ್ತಾಂತರಿಸಬೇಕೆಂದು ಒತ್ತಾಯಿಸುತ್ತಿದೆ.

ಇದನ್ನೂ ಓದಿ:ಕಾಶಿ ಮತ್ತು ಮಥುರಾದಲ್ಲಿ ಇನ್ನೂ ಎರಡು ಉಳಿದಿವೆ ಅವುಗಳನ್ನು ಅಳಿಸಿಹಾಕಬೇಕು: ಕೆ. ಎಸ್. ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾಡಲು ಕೆಲಸವಿಲ್ಲದ, ಹೇಳಿಕೊಳ್ಳಲು ಸಾಧನೆಗಳಿಲ್ಲದ ಎಲ್ಲದಕ್ಕೂ ಮೀರಿ ಮಾನವ ಕುಲಕ್ಕೆ ರಾಕ್ಷಸರಂತೆ ಕಾಡುತ್ತಿರುವ ದುರುಳರು ಇದನ್ನ ಬಿಟ್ಟು ಇನ್ನೇನು ಮಾಡಲು ಸಾಧ್ಯ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...