Homeಮುಖಪುಟಯುಪಿ ಚುನಾವಣೆ ಹಿನ್ನೆಲೆ: ರಾಜ್ಯಸಭೆಯಲ್ಲಿ ಶ್ರೀಕೃಷ್ಣ ಜನ್ಮಭೂಮಿ ವಿಷಯ ಪ್ರಸ್ತಾಪಿಸಿದ BJP!

ಯುಪಿ ಚುನಾವಣೆ ಹಿನ್ನೆಲೆ: ರಾಜ್ಯಸಭೆಯಲ್ಲಿ ಶ್ರೀಕೃಷ್ಣ ಜನ್ಮಭೂಮಿ ವಿಷಯ ಪ್ರಸ್ತಾಪಿಸಿದ BJP!

- Advertisement -
- Advertisement -

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಲಿದೆ. ಆಡಳಿತರೂಢ ಪಕ್ಷವಾದ ಬಿಜೆಪಿ ಅಭಿವೃದ್ದಿ ಹೆಸರಲ್ಲಿ ಮತ ಕೇಳುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ಪಕ್ಷವು ಮತ್ತೆ ಹಿಂದುತ್ವದ ಬೆನ್ನು ಬಿದ್ದಿದೆ. ಗುರುವಾರ ಬಿಜೆಪಿ ಸಂಸದರೊಬ್ಬರು ರಾಜ್ಯಸಭೆಯಲ್ಲಿ ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ಭೂ ವಿವಾದದ ವಿಷಯವನ್ನು ಪ್ರಸ್ತಾಪಿಸಿ, ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವ ಕಾನೂನನ್ನು ರದ್ದುಗೊಳಿಸುವ ಕಾನೂನಿಗಾಗಿ ಒತ್ತಾಯಿಸಿದ್ದಾರೆ.

ಶೂನ್ಯವೇಳೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿದ ಹರನಾಥ್ ಸಿಂಗ್ ಯಾದವ್ ಅವರು ‘‘1991 ರ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆಯನ್ನು ಅಸಂವಿಧಾನಿಕ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಈ ಕಾಯಿದೆಯು, ಆಗಸ್ಟ್ 15, 1947 ರಂದು ಅಸ್ತಿತ್ವದಲ್ಲಿರುವ ಯಾವುದೇ ಪೂಜಾ ಸ್ಥಳವನ್ನು ಪರಿವರ್ತಿಸುವುದನ್ನು ನಿಷೇಧಿಸುತ್ತದೆ ಮತ್ತು ಯಾವುದೇ ಪೂಜಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಹಾಗೆಯೆ ಕಾಪಾಡಿಕೊಳ್ಳಬೇಕು ಎಂದು ಹೇಳುತ್ತದೆ.

ಇದನ್ನೂ ಓದಿ:ಡಿ.6 ಬಾಬರಿ ಮಸೀದಿ ಧ್ವಂಸ ದಿನ: ಮಥುರಾದಲ್ಲಿ ನಿಷೇದಾಜ್ಞೆ, ಪೊಲೀಸ್ ಬಿಗಿ ಭದ್ರತೆ

ಈ ಕಾಯಿದೆಯು ಅಯೋಧ್ಯೆಯ ಬಾಬರಿ ಮಸೀದಿ ಪ್ರಕರಣಕ್ಕೆ ವಿನಾಯಿತಿ ನೀಡುತ್ತದೆಯಾದರೂ, ಇತರ ಯಾವುದೇ ಧಾರ್ಮಿಕ ಸ್ಥಳಗಳ ಮೇಲಿನ ನ್ಯಾಯಾಲಯಗಳಲ್ಲಿನ ಎಲ್ಲಾ ಕಾನೂನು ವಿವಾದಗಳನ್ನು 1991 ರ ಕಾಯಿದೆಯ ಪ್ರಕಾರ ಇತ್ಯರ್ಥಗೊಳಿಸಬೇಕಾಗಿದೆ.

“ಈ ನಿಬಂಧನೆಯು ಸಮಾನತೆಯ ಹಕ್ಕಿನ ಸಾಂವಿಧಾನಿಕ ನಿಬಂಧನೆಯನ್ನು ಮಾತ್ರವಲ್ಲದೆ ಸಾಂವಿಧಾನಿಕ ಪೀಠಿಕೆಯ ಭಾಗವಾಗಿರುವ ಜಾತ್ಯತೀತತೆಯನ್ನು ಉಲ್ಲಂಘಿಸುತ್ತದೆ. ಯಾವುದೇ ನಾಗರಿಕರು ಇದರ ವಿರುದ್ಧ ನ್ಯಾಯಾಲಯಕ್ಕೆ ಹೋಗಬಾರದು ಎಂದು ಈ ಕಾನೂನು ಹೇಳುವುದು ವಿಚಿತ್ರವಾಗಿದೆ. ಈ ಕಾನೂನನ್ನು ಪ್ರಶ್ನಿಸುವಂತಿಲ್ಲ” ಎಂದು ಹರನಾಥ್ ಸಿಂಗ್‌ ಹೇಳಿದ್ದಾರೆ.

“ವಿದೇಶಿ ಆಕ್ರಮಣಕಾರರು ಕೃಷ್ಣ ಜನ್ಮಭೂಮಿ ಮತ್ತು ಇತರ ಧಾರ್ಮಿಕ ಸ್ಥಳಗಳನ್ನು ಬಲವಂತವಾಗಿ ಆಕ್ರಮಿಸಿಕೊಂಡಿರುವುದಕ್ಕೆ ಕಾನೂನು ‘ಕಾನೂನು ಮಾನ್ಯತೆ’ ನೀಡುತ್ತದೆ. ಈ ಅನಿಯಂತ್ರಿತ ಮತ್ತು ಅಸಂವಿಧಾನಿಕ ಕಾನೂನು ಹಿಂದೂಗಳು, ಜೈನರು, ಸಿಖ್ ಮತ್ತು ಬೌದ್ಧರು ತಮ್ಮ ಧರ್ಮವನ್ನು ಆಚರಿಸುವ ಮತ್ತು ಪ್ರಚಾರ ಮಾಡುವ ಹಕ್ಕನ್ನು ಕಸಿದುಕೊಂಡಿದೆ. ಜೊತೆಗೆ, ಈ ಕಾನೂನು ಭಗವಾನ್ ರಾಮ ಮತ್ತು ಭಗವಾನ್ ಕೃಷ್ಣನ ನಡುವೆ ತಾರತಮ್ಯವನ್ನು ಮಾಡುತ್ತದೆ. ಆದರೆ ಇವರಿಬ್ಬರೂ ವಿಷ್ಣುವಿನ ಅವತಾರಗಳು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಥುರಾ-ವೃಂದಾವನ್ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯ 22 ವಾರ್ಡ್‌ಗಳಲ್ಲಿ ಮದ್ಯ, ಮಾಂಸ ನಿಷೇಧ!

“ಒಂದೇ ಕಾರ್ಯಗಳು ಮತ್ತು ಸನ್ನಿವೇಶಗಳಿಗೆ ಎರಡು ಕಾನೂನುಗಳು ಇರುವಂತಿಲ್ಲ. ನಾಗರಿಕರಿಗೆ ನ್ಯಾಯಾಲಯಗಳ ಬಾಗಿಲುಗಳನ್ನು ಮುಚ್ಚಲು ಸಾಧ್ಯವಿಲ್ಲ. ಈ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆಯು ಕೇವಲ ಅಸಂವಿಧಾನಿಕ ಮಾತ್ರವಲ್ಲ, ಹಿಂದೂಗಳು, ಜೈನರು, ಸಿಖ್ಖರು ಮತ್ತು ಬೌದ್ಧರ ಧಾರ್ಮಿಕ ಭಾವನೆಗಳ ವಿರುದ್ಧದ ಕ್ರೌರ್ಯವಾಗಿದೆ. ಈ ಕಾನೂನನ್ನು ತಕ್ಷಣವೇ ರದ್ದುಗೊಳಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಬಿಜೆಪಿ ಸಂಸದ ಈ ಪ್ರಸ್ತಾವನೆಗೆ ವಿರೋಧ ಪಕ್ಷದ ಕೆಲವು ಸಂಸದರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಆರ್‌ಜೆಡಿಯ ಮನೋಜ್ ಕುಮಾರ್ ಝಾ, “ಸೌಹಾರ್ದತೆ ಮತ್ತು ಸಾಮರಸ್ಯದ ಕಲ್ಪನೆಯನ್ನು ರಕ್ಷಿಸಲು ಸಂಸತ್ತಿನಲ್ಲಿ 1991 ರ ಕಾಯಿದೆಯನ್ನು ಅಂಗೀಕರಿಸಲಾಯಿತು. ಬಿಜೆಪಿ ಸಂಸದರು ಪಂಡೋರಾ ಪೆಟ್ಟಿಗೆಯನ್ನು ತೆರೆದಿದ್ದಾರೆ. ಧಾರ್ಮಿಕ ಘರ್ಷಣೆಗಳ ಹೆಸರಿನಲ್ಲಿ ರಾಷ್ಟ್ರವು ಸಾಕಷ್ಟು ನಷ್ಟವನ್ನು ಅನುಭವಿಸಿದೆ, ಭಾರತದ ಸಾಮಾಜಿಕ ರಚನೆಯನ್ನು ಕದಡಬೇಡಿ” ಎಂದು ಹೇಳಿದ್ದಾರೆ.

ಅಯೋಧ್ಯೆ ಮತ್ತು ವಾರಣಾಸಿ ಮಾದರಿಯಲ್ಲಿ ಮಥುರಾದಲ್ಲಿ ಭವ್ಯ ಮಂದಿರ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಕಳೆದ ವಾರ ಟ್ವೀಟ್ ಮಾಡಿದ್ದನ್ನು ಅನುಸರಿಸಿ ರಾಜ್ಯಸಭೆಯಲ್ಲಿ ಈ ವಿಷಯ ಪ್ರಸ್ತಾವನೆಯಾಗಿದೆ.

ಇದನ್ನೂ ಓದಿ:ಮಥುರಾ: ಈದ್ಗಾ ಮಸೀದಿ ತೆರವು ಕೋರಿದ್ದ ಮನವಿ ವಜಾ

ಮಥುರಾದಲ್ಲಿ ಪ್ರಮುಖವಾದ ಶಾಹಿ ಈದ್ಗಾ ಮಸೀದಿ ಇದ್ದು, ಅದರ ಪಕ್ಕವೇ ದೇವಸ್ಥಾನವಿದೆ. ಮಸೀದಿಯ ಜಾಗ ಕೃಷ್ಣನ ಜನ್ಮಸ್ಥಳ ಎಂದು ಬಿಜೆಪಿ ಬೆಂಬಲಿತ ಸಂಘಟನೆಳು ವಾದಿಸುತ್ತಿವೆ. ಹೀಗಾಗಿ ಮಸೀದಿಯು ವರ್ಷಗಳಿಂದ ಕಾನೂನು ಹೋರಾಟದ ಕೇಂದ್ರವಾಗಿದೆ.

ಈ ಹಿಂದೆ ದೀರ್ಘಕಾಲ ಇದ್ದ ವಿವಾದವನ್ನು ಅಕ್ಟೋಬರ್ 1968 ರಲ್ಲಿ ನ್ಯಾಯಾಲಯವು ಅದನ್ನು ನಿರ್ವಹಿಸುವ ಟ್ರಸ್ಟ್ ಮತ್ತು ಶ್ರೀ ಕೃಷ್ಣ ಜನ್ಮಸ್ಥಾನ ಸೇವಾ ಸಂಘದ ನಡುವೆ ಒಪ್ಪಂದ ನಡೆಸಿ ವಿವಾದವನ್ನು ಇತ್ಯರ್ಥ ಮಾಡಲಾಗಿತ್ತು. ಆದರೆ ಅಯೋಧ್ಯೆ ಬಾಬರಿ ಮಸೀದಿ ಧ್ವಂಸಗೊಂಡ ನಂತರ ವಿವಾದವನ್ನು ಮತ್ತೆ ಪುನಶ್ಚೇತನಗೊಳಿಸಲಾಗಿದೆ.

ಬಿಜೆಪಿ ಬೆಂಬಲಿತ ಸಂಘಟನೆಗಳು ಈ ಒಪ್ಪಂದವನ್ನು ರದ್ದುಗೊಳಿಸಬೇಕು ಮತ್ತು ಮಥುರಾದ ಈದ್ಗಾ ಮತ್ತು ದೇವಾಲಯದ ಸಂಪೂರ್ಣ ಸಂಕೀರ್ಣವನ್ನು ಹಸ್ತಾಂತರಿಸಬೇಕೆಂದು ಒತ್ತಾಯಿಸುತ್ತಿದೆ.

ಇದನ್ನೂ ಓದಿ:ಕಾಶಿ ಮತ್ತು ಮಥುರಾದಲ್ಲಿ ಇನ್ನೂ ಎರಡು ಉಳಿದಿವೆ ಅವುಗಳನ್ನು ಅಳಿಸಿಹಾಕಬೇಕು: ಕೆ. ಎಸ್. ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾಡಲು ಕೆಲಸವಿಲ್ಲದ, ಹೇಳಿಕೊಳ್ಳಲು ಸಾಧನೆಗಳಿಲ್ಲದ ಎಲ್ಲದಕ್ಕೂ ಮೀರಿ ಮಾನವ ಕುಲಕ್ಕೆ ರಾಕ್ಷಸರಂತೆ ಕಾಡುತ್ತಿರುವ ದುರುಳರು ಇದನ್ನ ಬಿಟ್ಟು ಇನ್ನೇನು ಮಾಡಲು ಸಾಧ್ಯ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...