Homeಮುಖಪುಟಯುಪಿ ಚುನಾವಣೆ ಹಿನ್ನೆಲೆ: ರಾಜ್ಯಸಭೆಯಲ್ಲಿ ಶ್ರೀಕೃಷ್ಣ ಜನ್ಮಭೂಮಿ ವಿಷಯ ಪ್ರಸ್ತಾಪಿಸಿದ BJP!

ಯುಪಿ ಚುನಾವಣೆ ಹಿನ್ನೆಲೆ: ರಾಜ್ಯಸಭೆಯಲ್ಲಿ ಶ್ರೀಕೃಷ್ಣ ಜನ್ಮಭೂಮಿ ವಿಷಯ ಪ್ರಸ್ತಾಪಿಸಿದ BJP!

- Advertisement -
- Advertisement -

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಲಿದೆ. ಆಡಳಿತರೂಢ ಪಕ್ಷವಾದ ಬಿಜೆಪಿ ಅಭಿವೃದ್ದಿ ಹೆಸರಲ್ಲಿ ಮತ ಕೇಳುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ಪಕ್ಷವು ಮತ್ತೆ ಹಿಂದುತ್ವದ ಬೆನ್ನು ಬಿದ್ದಿದೆ. ಗುರುವಾರ ಬಿಜೆಪಿ ಸಂಸದರೊಬ್ಬರು ರಾಜ್ಯಸಭೆಯಲ್ಲಿ ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ಭೂ ವಿವಾದದ ವಿಷಯವನ್ನು ಪ್ರಸ್ತಾಪಿಸಿ, ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವ ಕಾನೂನನ್ನು ರದ್ದುಗೊಳಿಸುವ ಕಾನೂನಿಗಾಗಿ ಒತ್ತಾಯಿಸಿದ್ದಾರೆ.

ಶೂನ್ಯವೇಳೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿದ ಹರನಾಥ್ ಸಿಂಗ್ ಯಾದವ್ ಅವರು ‘‘1991 ರ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆಯನ್ನು ಅಸಂವಿಧಾನಿಕ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಈ ಕಾಯಿದೆಯು, ಆಗಸ್ಟ್ 15, 1947 ರಂದು ಅಸ್ತಿತ್ವದಲ್ಲಿರುವ ಯಾವುದೇ ಪೂಜಾ ಸ್ಥಳವನ್ನು ಪರಿವರ್ತಿಸುವುದನ್ನು ನಿಷೇಧಿಸುತ್ತದೆ ಮತ್ತು ಯಾವುದೇ ಪೂಜಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಹಾಗೆಯೆ ಕಾಪಾಡಿಕೊಳ್ಳಬೇಕು ಎಂದು ಹೇಳುತ್ತದೆ.

ಇದನ್ನೂ ಓದಿ:ಡಿ.6 ಬಾಬರಿ ಮಸೀದಿ ಧ್ವಂಸ ದಿನ: ಮಥುರಾದಲ್ಲಿ ನಿಷೇದಾಜ್ಞೆ, ಪೊಲೀಸ್ ಬಿಗಿ ಭದ್ರತೆ

ಈ ಕಾಯಿದೆಯು ಅಯೋಧ್ಯೆಯ ಬಾಬರಿ ಮಸೀದಿ ಪ್ರಕರಣಕ್ಕೆ ವಿನಾಯಿತಿ ನೀಡುತ್ತದೆಯಾದರೂ, ಇತರ ಯಾವುದೇ ಧಾರ್ಮಿಕ ಸ್ಥಳಗಳ ಮೇಲಿನ ನ್ಯಾಯಾಲಯಗಳಲ್ಲಿನ ಎಲ್ಲಾ ಕಾನೂನು ವಿವಾದಗಳನ್ನು 1991 ರ ಕಾಯಿದೆಯ ಪ್ರಕಾರ ಇತ್ಯರ್ಥಗೊಳಿಸಬೇಕಾಗಿದೆ.

“ಈ ನಿಬಂಧನೆಯು ಸಮಾನತೆಯ ಹಕ್ಕಿನ ಸಾಂವಿಧಾನಿಕ ನಿಬಂಧನೆಯನ್ನು ಮಾತ್ರವಲ್ಲದೆ ಸಾಂವಿಧಾನಿಕ ಪೀಠಿಕೆಯ ಭಾಗವಾಗಿರುವ ಜಾತ್ಯತೀತತೆಯನ್ನು ಉಲ್ಲಂಘಿಸುತ್ತದೆ. ಯಾವುದೇ ನಾಗರಿಕರು ಇದರ ವಿರುದ್ಧ ನ್ಯಾಯಾಲಯಕ್ಕೆ ಹೋಗಬಾರದು ಎಂದು ಈ ಕಾನೂನು ಹೇಳುವುದು ವಿಚಿತ್ರವಾಗಿದೆ. ಈ ಕಾನೂನನ್ನು ಪ್ರಶ್ನಿಸುವಂತಿಲ್ಲ” ಎಂದು ಹರನಾಥ್ ಸಿಂಗ್‌ ಹೇಳಿದ್ದಾರೆ.

“ವಿದೇಶಿ ಆಕ್ರಮಣಕಾರರು ಕೃಷ್ಣ ಜನ್ಮಭೂಮಿ ಮತ್ತು ಇತರ ಧಾರ್ಮಿಕ ಸ್ಥಳಗಳನ್ನು ಬಲವಂತವಾಗಿ ಆಕ್ರಮಿಸಿಕೊಂಡಿರುವುದಕ್ಕೆ ಕಾನೂನು ‘ಕಾನೂನು ಮಾನ್ಯತೆ’ ನೀಡುತ್ತದೆ. ಈ ಅನಿಯಂತ್ರಿತ ಮತ್ತು ಅಸಂವಿಧಾನಿಕ ಕಾನೂನು ಹಿಂದೂಗಳು, ಜೈನರು, ಸಿಖ್ ಮತ್ತು ಬೌದ್ಧರು ತಮ್ಮ ಧರ್ಮವನ್ನು ಆಚರಿಸುವ ಮತ್ತು ಪ್ರಚಾರ ಮಾಡುವ ಹಕ್ಕನ್ನು ಕಸಿದುಕೊಂಡಿದೆ. ಜೊತೆಗೆ, ಈ ಕಾನೂನು ಭಗವಾನ್ ರಾಮ ಮತ್ತು ಭಗವಾನ್ ಕೃಷ್ಣನ ನಡುವೆ ತಾರತಮ್ಯವನ್ನು ಮಾಡುತ್ತದೆ. ಆದರೆ ಇವರಿಬ್ಬರೂ ವಿಷ್ಣುವಿನ ಅವತಾರಗಳು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಥುರಾ-ವೃಂದಾವನ್ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯ 22 ವಾರ್ಡ್‌ಗಳಲ್ಲಿ ಮದ್ಯ, ಮಾಂಸ ನಿಷೇಧ!

“ಒಂದೇ ಕಾರ್ಯಗಳು ಮತ್ತು ಸನ್ನಿವೇಶಗಳಿಗೆ ಎರಡು ಕಾನೂನುಗಳು ಇರುವಂತಿಲ್ಲ. ನಾಗರಿಕರಿಗೆ ನ್ಯಾಯಾಲಯಗಳ ಬಾಗಿಲುಗಳನ್ನು ಮುಚ್ಚಲು ಸಾಧ್ಯವಿಲ್ಲ. ಈ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆಯು ಕೇವಲ ಅಸಂವಿಧಾನಿಕ ಮಾತ್ರವಲ್ಲ, ಹಿಂದೂಗಳು, ಜೈನರು, ಸಿಖ್ಖರು ಮತ್ತು ಬೌದ್ಧರ ಧಾರ್ಮಿಕ ಭಾವನೆಗಳ ವಿರುದ್ಧದ ಕ್ರೌರ್ಯವಾಗಿದೆ. ಈ ಕಾನೂನನ್ನು ತಕ್ಷಣವೇ ರದ್ದುಗೊಳಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಬಿಜೆಪಿ ಸಂಸದ ಈ ಪ್ರಸ್ತಾವನೆಗೆ ವಿರೋಧ ಪಕ್ಷದ ಕೆಲವು ಸಂಸದರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಆರ್‌ಜೆಡಿಯ ಮನೋಜ್ ಕುಮಾರ್ ಝಾ, “ಸೌಹಾರ್ದತೆ ಮತ್ತು ಸಾಮರಸ್ಯದ ಕಲ್ಪನೆಯನ್ನು ರಕ್ಷಿಸಲು ಸಂಸತ್ತಿನಲ್ಲಿ 1991 ರ ಕಾಯಿದೆಯನ್ನು ಅಂಗೀಕರಿಸಲಾಯಿತು. ಬಿಜೆಪಿ ಸಂಸದರು ಪಂಡೋರಾ ಪೆಟ್ಟಿಗೆಯನ್ನು ತೆರೆದಿದ್ದಾರೆ. ಧಾರ್ಮಿಕ ಘರ್ಷಣೆಗಳ ಹೆಸರಿನಲ್ಲಿ ರಾಷ್ಟ್ರವು ಸಾಕಷ್ಟು ನಷ್ಟವನ್ನು ಅನುಭವಿಸಿದೆ, ಭಾರತದ ಸಾಮಾಜಿಕ ರಚನೆಯನ್ನು ಕದಡಬೇಡಿ” ಎಂದು ಹೇಳಿದ್ದಾರೆ.

ಅಯೋಧ್ಯೆ ಮತ್ತು ವಾರಣಾಸಿ ಮಾದರಿಯಲ್ಲಿ ಮಥುರಾದಲ್ಲಿ ಭವ್ಯ ಮಂದಿರ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಕಳೆದ ವಾರ ಟ್ವೀಟ್ ಮಾಡಿದ್ದನ್ನು ಅನುಸರಿಸಿ ರಾಜ್ಯಸಭೆಯಲ್ಲಿ ಈ ವಿಷಯ ಪ್ರಸ್ತಾವನೆಯಾಗಿದೆ.

ಇದನ್ನೂ ಓದಿ:ಮಥುರಾ: ಈದ್ಗಾ ಮಸೀದಿ ತೆರವು ಕೋರಿದ್ದ ಮನವಿ ವಜಾ

ಮಥುರಾದಲ್ಲಿ ಪ್ರಮುಖವಾದ ಶಾಹಿ ಈದ್ಗಾ ಮಸೀದಿ ಇದ್ದು, ಅದರ ಪಕ್ಕವೇ ದೇವಸ್ಥಾನವಿದೆ. ಮಸೀದಿಯ ಜಾಗ ಕೃಷ್ಣನ ಜನ್ಮಸ್ಥಳ ಎಂದು ಬಿಜೆಪಿ ಬೆಂಬಲಿತ ಸಂಘಟನೆಳು ವಾದಿಸುತ್ತಿವೆ. ಹೀಗಾಗಿ ಮಸೀದಿಯು ವರ್ಷಗಳಿಂದ ಕಾನೂನು ಹೋರಾಟದ ಕೇಂದ್ರವಾಗಿದೆ.

ಈ ಹಿಂದೆ ದೀರ್ಘಕಾಲ ಇದ್ದ ವಿವಾದವನ್ನು ಅಕ್ಟೋಬರ್ 1968 ರಲ್ಲಿ ನ್ಯಾಯಾಲಯವು ಅದನ್ನು ನಿರ್ವಹಿಸುವ ಟ್ರಸ್ಟ್ ಮತ್ತು ಶ್ರೀ ಕೃಷ್ಣ ಜನ್ಮಸ್ಥಾನ ಸೇವಾ ಸಂಘದ ನಡುವೆ ಒಪ್ಪಂದ ನಡೆಸಿ ವಿವಾದವನ್ನು ಇತ್ಯರ್ಥ ಮಾಡಲಾಗಿತ್ತು. ಆದರೆ ಅಯೋಧ್ಯೆ ಬಾಬರಿ ಮಸೀದಿ ಧ್ವಂಸಗೊಂಡ ನಂತರ ವಿವಾದವನ್ನು ಮತ್ತೆ ಪುನಶ್ಚೇತನಗೊಳಿಸಲಾಗಿದೆ.

ಬಿಜೆಪಿ ಬೆಂಬಲಿತ ಸಂಘಟನೆಗಳು ಈ ಒಪ್ಪಂದವನ್ನು ರದ್ದುಗೊಳಿಸಬೇಕು ಮತ್ತು ಮಥುರಾದ ಈದ್ಗಾ ಮತ್ತು ದೇವಾಲಯದ ಸಂಪೂರ್ಣ ಸಂಕೀರ್ಣವನ್ನು ಹಸ್ತಾಂತರಿಸಬೇಕೆಂದು ಒತ್ತಾಯಿಸುತ್ತಿದೆ.

ಇದನ್ನೂ ಓದಿ:ಕಾಶಿ ಮತ್ತು ಮಥುರಾದಲ್ಲಿ ಇನ್ನೂ ಎರಡು ಉಳಿದಿವೆ ಅವುಗಳನ್ನು ಅಳಿಸಿಹಾಕಬೇಕು: ಕೆ. ಎಸ್. ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾಡಲು ಕೆಲಸವಿಲ್ಲದ, ಹೇಳಿಕೊಳ್ಳಲು ಸಾಧನೆಗಳಿಲ್ಲದ ಎಲ್ಲದಕ್ಕೂ ಮೀರಿ ಮಾನವ ಕುಲಕ್ಕೆ ರಾಕ್ಷಸರಂತೆ ಕಾಡುತ್ತಿರುವ ದುರುಳರು ಇದನ್ನ ಬಿಟ್ಟು ಇನ್ನೇನು ಮಾಡಲು ಸಾಧ್ಯ.

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...