Homeಮುಖಪುಟಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ

ಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ

- Advertisement -
- Advertisement -

ತಾಜ್‌ಮಹಲ್ ಸಿಟಿ ಎಂದು ಕರೆಸಿಕೊಳ್ಳುವ ನಗರ ಆಗ್ರಾ. ಈ ಜಿಲ್ಲೆಯಲ್ಲಿರುವ ಜನಸಂಖ್ಯೆಯಲ್ಲಿ 21% ದಲಿತರು. ಅವರೆಲ್ಲರೂ, ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಬದಲಾವಣೆಯನ್ನು ನಿರೀಕ್ಷಿಸುತ್ತಿದ್ದಾರೆ.

42 ವರ್ಷದ ಸೋಹನ್ ಸಿಂಗ್ ಅವರು ಮಾಯಾವತಿಯವರ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಕಟ್ಟಾ ಬೆಂಬಲಿಗರು. ಸೋಹನ್ ಅವರು ಪರಿಶಿಷ್ಟ ಜಾತಿಗೆ ಸೇರಿದವರು. ಅವರು ಫತೇಹಾಬಾದ್ ಪ್ರದೇಶದಲ್ಲಿ ಸಣ್ಣ ವೀಳ್ಯದೆಲೆ ಅಂಗಡಿಯನ್ನು ನಡೆಸುತ್ತಿದ್ದಾರೆ. ಬಿಎಸ್‌ಪಿಗೆ ಮತ ಹಾಕುವ ವಿಚಾರದಲ್ಲಿ ಅವರು ಇತ್ತೀಚೆಗೆ ತಮ್ಮ ಅಂಗಡಿ ಬಂದ ಗ್ರಾಹಕರೊಂದಿಗೆ ವಾಗ್ವಾದ ನಡೆಸಿದ್ದರು.

ಇದನ್ನೂ ಓದಿ: ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡದಂತೆ ಯುಪಿ ರೈತರಿಗೆ ಎಸ್‌ಕೆಎಂ ಮನವಿ

ಗ್ರಾಹಕರು ತಮ್ಮ ವಾದದಲ್ಲಿ, “ಆಗ್ರಾ ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆಯುತ್ತಿದ್ದರೂ, ಮಾಯಾವತಿಯಾಗಲಿ ಅಥವಾ ಅವರ ಕಾರ್ಯಕರ್ತರಾಗಲಿ ಬಂದು ತಮ್ಮ ಜನರ ಸಮಸ್ಯೆಗಳನ್ನು ಆಲಿಸಲಿಲ್ಲ. ಆದ್ದರಿಂದ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಥವಾ ಸಮಾಜವಾದಿ ಪಕ್ಷವನ್ನು ಬೆಂಬಲಿಸುವುದು ಉತ್ತಮ” ಎಂದು ಹೇಳಿದ್ದಾರೆ. ತನ್ನ ಗ್ರಾಹಕರ ಹೇಳಿಕೆಯಿಂದ ಕೆರಳಿದ ಸೋಹನ್‌, ಬಿಎಸ್‌ಪಿಗೆ ಪರ್ಯಾಯವಾಗಿ ಇತರ ಪಕ್ಷಗಳನ್ನು ಆಯ್ಕೆಯಾಗಿ ನೋಡುವ ಜನರ ಬೆಂಬಲದ ಅಗತ್ಯ ತಮ್ಮ ಪಕ್ಷಕ್ಕಿಲ್ಲ ಎಂದು ಕೂಗಾಡಿದರು.

ತಾಜ್ ಮಹಲ್ ನಗರ ಎಂದು ಕರೆಯುವುದರ ಹೊರತಾಗಿ, ಆಗ್ರಾವನ್ನು ಉತ್ತರ ಪ್ರದೇಶದ ದಲಿತ ರಾಜಧಾನಿ ಎಂದೂ ಕರೆಯಲಾಗುತ್ತದೆ. ಅದರ ಜನಸಂಖ್ಯೆಯ ಸುಮಾರು ಐದನೇ ಒಂದು ಭಾಗದಷ್ಟು ಪರಿಶಿಷ್ಟ ಜಾತಿಗೆ ಸೇರಿದ ಜನರಿದ್ದಾರೆ. ತಾಜ್ ಜಿಲ್ಲೆಯಲ್ಲಿ ಒಂಭತ್ತು ವಿಧಾನಸಭಾ ಕ್ಷೇತ್ರಗಳಿದ್ದು, ಇವೆಲ್ಲವೂ ಬಿಜೆಪಿಯ ವಶದಲ್ಲಿವೆ. 2017ರ ಮೊದಲು ಒಂಭತ್ತು ಕ್ಷೇತ್ರಗಳ ಪೈಕಿ ಆರರಲ್ಲಿ ಬಿಎಸ್‌ಪಿ ಪ್ರಾಬಲ್ಯ ಹೊಂದಿತ್ತು.

ಆಗ್ರಾದಲ್ಲಿರುವ ದಲಿತ ಸಮುದಾಯದ ಹೆಚ್ಚಿನ ಜನರು ದೊಡ್ಡ ಶೂ ಉದ್ಯಮ, ಶುಚಿಗೊಳಿಸುವ ಉದ್ಯಮ ಮತ್ತು ಚರ್ಮದ ಉದ್ಯಮವನ್ನು ಅವಲಂಭಿಸಿದ್ದಾರೆ. ಆದರೆ, ಇತ್ತೀಚೆಗೆ ಹತ್ರಾಸ್‌ನಲ್ಲಿ ಪೊಲೀಸ್ ವಶದಲ್ಲಿ ವಾಲ್ಮೀಕಿ ಸಮುದಾಯದ ಯುವಕನ ಸಾವು ಮತ್ತು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಗಳು ಜಿಲ್ಲೆಯ ದಲಿತರನ್ನು ಅಸಮಾಧಾನಗೊಳಿಸಿವೆ.

ಇದನ್ನೂ ಓದಿ: ಯುಪಿ ಚುನಾವಣೆ: ರೈತ ಆಕ್ರೋಶದ ಜಿಲ್ಲೆ ಲಖಿಂಪುರ್‌ ಖೇರಿಯಲ್ಲಿ ಪ್ರಚಾರ ನಡೆಸಲಿರುವ ರಾಜನಾಥ್ ಸಿಂಗ್

20,000 ಕ್ಕೂ ಹೆಚ್ಚು ದಲಿತರು ವಾಸಿಸುವ ಲೋಹಾ ಮಂಡಿಯ ವಾಲ್ಮೀಕಿ ನಗರದ ನಿವಾಸಿ ಸ್ವಚ್ಛತಾ ಕಾರ್ಮಿಕ ಸೌರಭ್ ಪ್ರಕಾರ, ತಮ್ಮ ಸಮುದಾಯಕ್ಕೆ ತಮ್ಮದೇ ನಾಯಕನ ಅಗತ್ಯವಿದೆ. “ನಮಗೆ ಶಿಕ್ಷಣ ಬೇಕು, ನಮಗೆ ಉತ್ತಮ ಸೌಲಭ್ಯಗಳು ಬೇಕು, ನಮಗೆ ಗೌರವ ಬೇಕು. ವಾಲ್ಮೀಕಿ ಸಮುದಾಯ ಅಥವಾ ಪರಿಶಿಷ್ಟ ಜಾತಿಗೆ ಸೇರಿದವರು ಎಂದರೆ ನಾವು ಕೇವಲ ಶುಚಿಗೊಳಿಸುವಿಕೆ ಅಥವಾ ನೈರ್ಮಲ್ಯ ಕಾರ್ಯಗಳನ್ನು ಮಾತ್ರ ಮಾಡುವ ಜನರು ಎಂದು ಅರ್ಥವಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಗ್ರಾದಲ್ಲಿ ಇತ್ತೀಚೆಗೆ ಪೊಲೀಸ್ ವಶದಲ್ಲಿದ್ದ ನೈರ್ಮಲ್ಯ ಕಾರ್ಯಕರ್ತನ ಸಾವಿನ ಬಗ್ಗೆ ಉಲ್ಲೇಖಿಸಿದ ಅವರು, “ನಮ್ಮ ಸಹೋದರ ಅರುಣ್ ವಾಲ್ಮೀಕಿ ಕೂಡ ನೈರ್ಮಲ್ಯ ಕಾರ್ಯಕರ್ತರಾಗಿದ್ದರು. ಅವರು ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಪೊಲೀಸರಿಂದ ಕೊಲ್ಲಲ್ಪಟ್ಟರು. ವಾಲ್ಮೀಕಿಗಳು ಮನುಷ್ಯರಲ್ಲವೇ ಅಥವಾ ನಮ್ಮ ಜೀವನ ಯಾರಿಗೂ ಮುಖ್ಯವಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

“ವಾಲ್ಮೀಕಿನಗರದಲ್ಲಿ ಹಾದು ಹೋಗಿರುವ ದೊಡ್ಡ ಚರಂಡಿಯಿಂದ ದುರ್ನಾತ ಬರುತ್ತಿತ್ತು. ಆದರೂ, ತಮ್ಮ ಸಮಸ್ಯೆಯನ್ನು ಪಕ್ಕಕ್ಕಿಟ್ಟು, 2017ರಲ್ಲಿ ಹಿಂದುತ್ವದ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿಗೆ ಮತ ಹಾಕಿದ್ದೆವು. ಆದರೆ, ಈಗ ನಾವು ಎಚ್ಚೆತ್ತುಕೊಂಡಿದ್ದೇವೆ. ನಮಗೆ ಹಿಂದೂತ್ವ ಬೇಡ, ಸಮಸ್ಯೆಗೆ ಪರಿಹಾರ ಬೇಕು” ಎಂದು ಸೌರಭ್ ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಯಾವ ಪಕ್ಷಕ್ಕೂ ಇಲ್ಲ ರೈತರ ಮತ, ನೋಟಾದತ್ತ ಎಲ್ಲರ ಚಿತ್ತ

ಆಗ್ರಾದಿಂದ ಸುಮಾರು ನೂರು ಕಿ.ಮೀ. ದೂರದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ಅರುಣ್ ವಾಲ್ಮೀಕಿ ಮನೆ ಇದೆ. ಆದರೆ, ಅವರ ಸಾವು ಹೃದಯಾಘಾತವಲ್ಲ ಪೊಲೀಸ್ ವಶದಲ್ಲಿ ಅವರ ಹತ್ಯೆಯಾಗಿದೆ ಎಂದು ಕುಟುಂಬ ಮತ್ತು ಸಮುದಾಯದವರು ಆರೋಪಿಸಿದ್ದಾರೆ. 31 ವರ್ಷದ ಈ ನೈರ್ಮಲ್ಯ ಕಾರ್ಯಕರ್ತನ ಸಾವು ಜಿಲ್ಲೆಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ.

ಅರುಣ್ ವಾಲ್ಮೀಕಿ ಅವರ ಕುಟುಂಬ ಸದಸ್ಯರನ್ನು ಕಾಂಗ್ರೆಸ್‌ನ ಸ್ಟಾರ್ ಪ್ರಚಾರಕಿ ಪ್ರಿಯಾಂಕಾ ಗಾಂಧಿ ಮತ್ತು ಇತರ ರಾಜಕೀಯ ಪಕ್ಷದ ಮುಖಂಡರು ಭೇಟಿ ಮಾಡಿದ್ದರು. ಕಾಂಗ್ರೆಸ್ ಮತ್ತು ಎಸ್‌ಪಿಯಂತಹ ಪಕ್ಷಗಳು ಕುಟುಂಬಕ್ಕೆ ಆರ್ಥಿಕ ಪರಿಹಾರವನ್ನು ಸಹ ನೀಡಿವೆ. ಇದರಿಂದ ಸಮುದಾಯವು ಬಿಎಸ್‌ಪಿಗೆ ಪರ್ಯಾಯವಾಗಿ ಈ ಪಕ್ಷಗಳತ್ತ ಮುಖಮಾಡುವಂತೆ ಮಾಡಿದೆ.

ಅರುಣ್ ವಾಲ್ಮೀಕಿಯ ಹಿರಿಯ ಸಹೋದರ ಸೋನು ನರ್ವಾಲ್, “ತನ್ನ ಸಹೋದರ ಸಾವನ್ನಪ್ಪಿದ ಸಮಯದಲ್ಲಿ, ಬಿಎಸ್‌ಪಿ ಮುಖ್ಯಸ್ಥರು ಮತ್ತು ಅವರ ಕೇಡರ್‌ನ ಪ್ರಮುಖ ನಾಯಕರು ನಮ್ಮ ಸಮುದಾಯದೊಂದಿಗೆ (ಬಿಎಸ್ಪಿಗೆ ಮತಹಾಕುವ ಬೃಹತ್ ಸಮುದಾಯ) ಇರಬೇಕಿತ್ತು. ಬದಲಾಗಿ, ಅವರೆಲ್ಲರೂ ಬ್ರಾಹ್ಮಣರನ್ನು ಸಮಾಧಾನಪಡಿಸುವಲ್ಲಿ ನಿರತರಾಗಿದ್ದರು” ಎಂದು ದೂರಿದ್ದಾರೆ.

“ನಮಗಾಗಿ ನಿಲ್ಲುವ ಪಕ್ಷಕ್ಕೆ ನಾವು ಮತ ಹಾಕುತ್ತೇವೆ ಎಂಬುದು ಸ್ಪಷ್ಟವಾಗಿದೆ. ಆ ಪಟ್ಟಿಯಲ್ಲಿ ಬಿಜೆಪಿ ಇಲ್ಲ. ನಮ್ಮ ಸಮುದಾಯವು ಯಾವ ಪಕ್ಷದತ್ತ ಹೋಗುತ್ತದೆ ಎಂಬುದನ್ನು ಸಮಯ ನಿರ್ಧರಿಸುತ್ತದೆ” ಎಂದು ನರ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಯುಪಿ-2022: ಅಖಿಲೇಶ್‌ ವಿರುದ್ಧ ಅಭ್ಯರ್ಥಿಗಳನ್ನು ಕಣಕ್ಕಿಳಿಸದ ಕಾಂಗ್ರೆಸ್!

ಒಂದು ಕಾಲದಲ್ಲಿ ಬಿಎಸ್‌ಪಿಯ ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿದ್ದ ಆಗ್ರಾದ ಹಿರಿಯ ಬಿಎಸ್‌ಪಿ ಕಾರ್ಯಕರ್ತರೊಬ್ಬರು ಮಾತನಾಡಿ, “ಈ ಬಾರಿ 2017 ರ ಚುನಾವಣೆಯಂತಲ್ಲ. ಮೋದಿ ಅಥವಾ ಯೋಗಿ ಅಲೆ ಇಲ್ಲ. ಜನರು ಈಗ ತಮ್ಮ ಸಮಸ್ಯೆಗಳ ಬಗ್ಗೆ ಚೆನ್ನಾಗಿ ತಿಳಿದಿದ್ದಾರೆ. ಕಾರ್ಯಕರ್ತರಿಗೆ ಈ ಆಡಳಿತದಲ್ಲಿ ಎದುರಿಸಿದ ತಾರತಮ್ಯಗಳ ಬಗ್ಗೆ ತಿಳಿದಿದೆ. ಇಡೀ ಎಸ್‌ಸಿ, ಎಸ್‌ಟಿ ಸಮುದಾಯದ ಜನರು ತಮ್ಮ ಮೇಲಾದ ದೌರ್ಜನ್ಯ ಮತ್ತು ಅನ್ಯಾಯದ ಸಮಸ್ಯೆಯಿಂದ ಸಿಟ್ಟಿಗೆದ್ದಿದ್ದಾರೆ. ಬಿಎಸ್‌ಪಿ ತಮ್ಮ ಗೆಲುವನ್ನು ಖಾತ್ರಿ ಮಾಡಿಕೊಳ್ಳಲು ಈ ಚುನಾವಣೆಯಲ್ಲಿ ಪ್ರತಿ ಕ್ಷೇತ್ರದಲ್ಲಿ ಪಕ್ಷವಾಗಿ ಸ್ಪರ್ಧಿಸಬೇಕು, ಅಭ್ಯರ್ಥಿಗಳಾಗಿ ಅಲ್ಲ” ಎಂದು ಹೇಳಿದ್ದಾರೆ.

ಫೆಬ್ರವರಿ 2 ರಂದು, ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮೊದಲ ರ್‍ಯಾಲಿಯಲ್ಲಿ ಆಗ್ರಾದಲ್ಲಿ ಮಾತನಾಡಿದ್ದ ಬಿಎಸ್‌ಪಿ ವರಿಷ್ಠೆ ಮಾಯಾವತಿ, ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಮಾತನಾಡಿದ್ದರು. “ನಾವು ಅಧಿಕಾರದಲ್ಲಿದ್ದಾಗ ಅದ್ಭುತ ಕೆಲಸ ಮಾಡಿದ್ದೇವೆ. ನಮ್ಮ ಆಡಳಿತದಲ್ಲಿ ಕೈಗೊಂಡ ಕಾರ್ಯಗಳನ್ನು ನಮ್ಮ ನಂತರ ಅಧಿಕಾರಕ್ಕೆ ಬಂದ ಪಕ್ಷಗಳು ನಕಲು ಮಾಡಿವೆ. ಎಲ್ಲ ಜಾತಿ, ಸಮುದಾಯಗಳ ಕಲ್ಯಾಣಕ್ಕಾಗಿ ನಮ್ಮ ಸರ್ಕಾರವನ್ನು ಮರಳಿ ತರಬೇಕು” ಎಂದು ಹೇಳಿದ್ದರು.

ಬಿಜೆಪಿಯಿಂದ ರಾಮರಾಜ್ಯ ಅಥವಾ ಆದರ್ಶ ರಾಜ್ಯ ಎಂದು ಕರೆಯಲ್ಪಟ್ಟಿರುವ ಉತ್ತರ ಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆಯ ಸ್ಥಿತಿಯು ಹಲವಾರು ಘಟನೆಗಳಿಂದಾಗಿ ಪ್ರಶ್ನಾರ್ಹವಾಗಿದೆ. ಇದರಲ್ಲಿ ಆಪಾದಿತ ಕಸ್ಟಡಿ ಸಾವುಗಳು ಮತ್ತು ಪೊಲೀಸ್ ದೌರ್ಜನ್ಯಗಳೂ ಸೇರಿವೆ. ಇದೆಲ್ಲದರ ನಡುವೆ, ಸೋಹನ್ ಸಿಂಗ್ ಅವರಂತಹ ಬಿಎಸ್‌ಪಿ ಕಾರ್ಯಕರ್ತರು ನಿಂದನೆಗಳಿಗೆ ಒಳಗಾದರೂ, ನಿಷ್ಠಾವಂತ ಕಾರ್ಯಕರ್ತರಂತೆ ಜನರನ್ನು ಬಿಎಸ್‌ಪಿಗೆ ಮತ ಹಾಕಲು ಮನವೊಲಿಸಲು ತಮ್ಮ ಕೆಲಸವನ್ನು ಮುಂದುವರಿಸಿದ್ದಾರೆ. ಆದರೆ, ಜನರು ಬಿಎಸ್ಪಿ ಮತ್ತು ಬಿಜೆಪಿಗೆ ಪರ್ಯಾಯವನ್ನು ಹುಡುಕುತ್ತಿದ್ದಾರೆ.

ಕೃಪೆ: News Click

ಇದನ್ನೂ ಓದಿ: ಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...