Homeಮುಖಪುಟಯುಪಿ ಚುನಾವಣೆ: BJP ಜೊತೆ ಮೈತ್ರಿ ವಿಫಲ; JDUನಲ್ಲಿ ಹೆಚ್ಚುತ್ತಿರುವ ಆಂತರಿಕ ಬಿರುಕು!

ಯುಪಿ ಚುನಾವಣೆ: BJP ಜೊತೆ ಮೈತ್ರಿ ವಿಫಲ; JDUನಲ್ಲಿ ಹೆಚ್ಚುತ್ತಿರುವ ಆಂತರಿಕ ಬಿರುಕು!

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ವಿಫಲವಾದ ನಂತರ, ಸಂಯುಕ್ತ ಜನತಾ ದಳ(ಜೆಡಿಯು)ನ ಉನ್ನತ ನಾಯಕತ್ವವು ಒಕ್ಕೂಟ ಸರ್ಕಾರದ ಸಚಿವ ಆರ್‌ಸಿಪಿ ಸಿಂಗ್‌ ಅವರನ್ನು ಗುರಿಯಾಗಿಸಲು ಪ್ರಾರಂಭಿಸಿದೆ. ಮೋದಿ ಸಂಪುಟದಲ್ಲಿ ಸಚಿವರಾಗಿರುವ ಆರ್‌ಸಿಪಿ ಸಿಂಗ್‌ ಅವರು ಜೆಡಿಯು ಕೋಟಾದ ಅಡಿಯಲ್ಲಿ ಒಕ್ಕೂಟ ಸರ್ಕಾರದಲ್ಲಿ ಸಚಿವರಾಗಿದ್ದರೂ ಬಿಜೆಪಿ ಉನ್ನತ ನಾಯಕತ್ವದೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ಹೇಳಲಾಗುತ್ತದೆ.

ಯುಪಿ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಪಕ್ಷವು ಅವರಿಗೆ ಜವಾಬ್ದಾರಿಯನ್ನು ನೀಡಿತ್ತು, ಆದರೆ ಅವರು ವಿಫಲರಾಗಿದ್ದಾರೆ. ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಲನ್ ಸಿಂಗ್ ಉತ್ತರ ಪ್ರದೇಶ ಚುನಾವಣೆಗೆ ಪಕ್ಷದಿಂದ ಅಭ್ಯರ್ಥಿಗಳ ಘೋಷಣೆ ವಿಳಂಬವಾಗಲು ಆರ್‌ಸಿಪಿ ಸಿಂಗ್ ಕಾರಣ ಎಂದು ಈಗಾಗಲೇ ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಮೊದಲ ಹಂತದ ಸ್ಟಾರ್‌ ಪ್ರಚಾರಕ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಕಳೆದೆರಡು ದಿನಗಳಿಂದ ಜೆಡಿಯುನ ಕಿರಿಯ ನಾಯಕರು ಆರ್‌ಸಿಪಿ ಸಿಂಗ್‌ ಪರ ವಕಾಲತ್ತು ವಹಿಸುತ್ತಿದ್ದಾರೆ. ಅವರು ಉತ್ತರ ಪ್ರದೇಶದ ಚುನಾವಣಾ ಪ್ರಚಾರದಲ್ಲಿ ಪಕ್ಷವನ್ನು ಮುನ್ನಡೆಸಲಿದ್ದಾರೆ. ಮಾಜಿ ಐಎಎಸ್ ಅಧಿಕಾರಿಯಾಗಿದ್ದ ಆರ್‌ಸಿಪಿ ಸಿಂಗ್ ಅವರು ಉತ್ತರ ಪ್ರದೇಶದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದು, ಅಲ್ಲಿನ ತಳ ಮಟ್ಟದ ಪರಿಸ್ಥಿತಿಯನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾಗಿ ಎಂದು ಅವರು ಹೇಳಿದ್ದಾರೆ.

“ಚುನಾವಣಾ ಪ್ರಚಾರದ ಸಮಯದಲ್ಲಿ ಆರ್‌ಸಿಪಿ ಸಿಂಗ್ ಅವರನ್ನು ಬಿಜೆಪಿಯ ಉನ್ನತ ನಾಯಕತ್ವದೊಂದಿಗೆ, ವಿಶೇಷವಾಗಿ ಪಿಎಂ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮುಖಾಮುಖಿ ಮಾಡುವ ಯೋಜನೆ ಇದೆ. ಇದು ಬಿಜೆಪಿ ನಾಯಕತ್ವದೊಂದಿಗೆ ಆರ್‌ಸಿಪಿ ಸಿಂಗ್ ಅವರ ಸಂಬಂಧವನ್ನು ಹದಗೆಡಿಸುತ್ತದೆ” ಎಂದು ಆರ್‌ಜೆಡಿ ನಾಯಕರೊಬ್ಬರು ಹೇಳಿದ್ದಾರೆ ಎಂದು TNIE ವರದಿ ಮಾಡಿದೆ.

ಇದನ್ನೂ ಓದಿ: ಕೊಲ್ಕತ್ತಾ: ಗಣರಾಜ್ಯೋತ್ಸವ ಪೂರ್ವಾಭ್ಯಾಸದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಸ್ತಬ್ಧಚಿತ್ರ ಪ್ರದರ್ಶನ

ಬಿಹಾರ ಸಿಎಂ ನಿತೀಶ್ ಕುಮಾರ್ ಆರ್‌ಸಿಪಿ ಸಿಂಗ್‌‌ ಅವರಿಗೆ ಜವಾಬ್ದಾರಿ ನೀಡಿದ್ದರು. ಕಳೆದ ವರ್ಷ ನರೇಂದ್ರ ಮೋದಿ ಸರ್ಕಾರದ ಎರಡನೇ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಆರ್‌ಸಿಪಿ ಸಿಂಗ್ ಬಿಜೆಪಿಯೊಂದಿಗೆ ಮಾತುಕತೆ ನಡೆಸಿದ್ದರು. ಈ ವೇಳೆ JDU ಪಕ್ಷದಿಂದ ಒಕ್ಕೂಟ ಸರ್ಕಾರದಲ್ಲಿ ಎರಡು ಸಂಪುಟ ದರ್ಜೆಯ ಮಂತ್ರಿಗಳು ಮತ್ತು ಇಬ್ಬರು ರಾಜ್ಯ ಖಾತೆ ಮಂತ್ರಿಗಳನ್ನು ಮಾಡುವಂತೆ ಬಯಸಿತ್ತು. ಆದರೆ JDU ಕೋಟಾದ ಅಡಿಯಲ್ಲಿ ಆರ್‌ಸಿಪಿ ಸಿಂಗ್ ಅವರಿಗೆ ಮಾತ್ರ ಸಂಪುಟ ಸಚಿವ ಸ್ಥಾನ ಪಡೆದು, ಲಾಲನ್ ಸಿಂಗ್, ಉಪೇಂದ್ರ ಕುಶ್ವಾಹಾ ಮತ್ತು ಇತರರ ಶ್ರೇಣಿಯ ನಾಯಕರಿಗೆ ಸಚಿವ ಸ್ಥಾನ ನಿರಾಕರಿಸಲಾಗಿತ್ತು.

ಜೆಡಿಯು ಉತ್ತರ ಪ್ರದೇಶ ಚುನಾವಣೆಗೆ 51 ಅಭ್ಯರ್ಥಿಗಳನ್ನು ಪಟ್ಟಿ ಮಾಡಿದೆ. ಇದರಲ್ಲಿ 26 ಅಭ್ಯರ್ಥಿಗಳನ್ನು ಇದುವರೆಗೆ ಘೋಷಿಸಲಾಗಿದೆ. ಈ 26 ಅಭ್ಯರ್ಥಿಗಳು ಬಿಜೆಪಿ ಪ್ರಬಲ ಹಿಡಿತ ಹೊಂದಿರುವ ಅಥವಾ ಹಾಲಿ ಶಾಸಕರನ್ನು ಹೊಂದಿರುವ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ ಸುಪ್ರೀಂಕೋರ್ಟ್‌ನ ಮೊದಲ ಮಹಿಳಾ ನ್ಯಾಯಮೂರ್ತಿಯಾಗಿ ಆಯೆಷಾ ಮಲಿಕ್ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...