Homeಮುಖಪುಟಯುಪಿ ಚುನಾವಣೆ: 2 ಹಂತಗಳ ಮತದಾನದಲ್ಲಿ ಎಸ್‌ಪಿ ಶತಕ ಬಾರಿಸಿದೆ ಎಂದ ಅಖಿಲೇಶ್ ಯಾದವ್

ಯುಪಿ ಚುನಾವಣೆ: 2 ಹಂತಗಳ ಮತದಾನದಲ್ಲಿ ಎಸ್‌ಪಿ ಶತಕ ಬಾರಿಸಿದೆ ಎಂದ ಅಖಿಲೇಶ್ ಯಾದವ್

- Advertisement -
- Advertisement -

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಮೊದಲ ಎರಡು ಹಂತದ ಮತದಾನದಲ್ಲಿ ಈಗಾಗಲೇ ತಮ್ಮ ಪಕ್ಷವು “ಶತಕ” ಬಾರಿಸಿದೆ. ನಾಲ್ಕನೇ ಹಂತದ ವೇಳೆಗೆ ಸರ್ಕಾರ ರಚಿಸಲು ಬೇಕಾದ ಸಂಖ್ಯೆಯನ್ನು ಹೊಂದಿರುತ್ತದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ನಡೆದ ಮೊದಲ ಎರಡು ಹಂತದ ಚುನಾವಣೆಯಲ್ಲಿ 113 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ತಲಾ 59 ಕ್ಷೇತ್ರಗಳಿಗೆ ಮೂರನೇ ಹಂತದಲ್ಲಿ ಫೆಬ್ರವರಿ 20 ಮತ್ತು ನಾಲ್ಕನೇ ಹಂತದಲ್ಲಿ ಫೆಬ್ರವರಿ 23 ರಂದು ಮತದಾನ ನಡೆಯಲಿದೆ.

“ಮೊದಲ ಎರಡು ಹಂತಗಳಲ್ಲಿ ಈಗಾಗಲೇ ತಮ್ಮ ಪಕ್ಷವು ಶತಕ ಬಾರಿಸಿದೆ. ನಾಲ್ಕನೇ ಹಂತದ ಮತದಾನದ ವೇಳೆಗೆ ಸಮಾಜವಾದಿ ಪಕ್ಷವು ಸರ್ಕಾರ ರಚಿಸಲು ಬೇಕಾದ ಸಂಖ್ಯೆಯನ್ನು ಹೊಂದಿರುತ್ತದೆ” ಎಂದು ಫಿರೋಜಾಬಾದ್‌ನ ನಾಸಿರ್‌ಪುರ ಪ್ರದೇಶದಲ್ಲಿ ಚುನಾವಣಾ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಫಿರೋಜಾಬಾದ್ ಕ್ಷೇತ್ರದಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ. “ಫಿರೋಜಾಬಾದ್‌ನ ಜನರು ಈ ಬಾರಿ ಬಿಜೆಪಿಯ ಕಣ್ಣು ತೆರೆಸುತ್ತಾರೆ” ಎಂದಿದ್ದಾರೆ. ರಾಜ್ಯದಲ್ಲಿ ಎಸ್‌ಪಿ ಸರ್ಕಾರ ರಚನೆಯಾದ ನಂತರ ಉತ್ತರ ಪ್ರದೇಶದಲ್ಲಿ ಜಾತಿ ಗಣತಿ, ಎಲ್ಲಾ ಜಾತಿಗಳಿಗೆ ಸಮಾನ ಪ್ರಾತಿನಿಧ್ಯ ಮತ್ತು ಘನತೆಯ ಭರವಸೆ ನೀಡಿದ್ದಾರೆ. 

ಇದನ್ನೂ ಓದಿ: ’ಪ್ರಧಾನಿ ಹುದ್ದೆಗೆ ವಿಶೇಷ ಸ್ಥಾನಮಾನವಿದೆ’: ಮೋದಿ ವಿರುದ್ಧ ಮಾಜಿ ಪಿಎಂ ಮನಮೋಹನ್ ಸಿಂಗ್ ಕಿಡಿ

“ಪ್ರಜಾಪ್ರಭುತ್ವ ಉಳಿಸುವ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಉಳಿಸುವ, ಅವಮಾನಕ್ಕೊಳಗಾದ ಹಿಂದುಳಿದ, ದಲಿತ, ಅಲ್ಪಸಂಖ್ಯಾತರ ಗೌರವ ಉಳಿಸುವ ಚುನಾವಣೆ ಇದಾಗಿದೆ. ನಾನು ಮತ್ತೊಮ್ಮೆ ಹೇಳುತ್ತಿದ್ದೇನೆ, ಕಾನೂನನ್ನು ಉಲ್ಲಂಘಿಸಬೇಕಾದವರು ಅಥವಾ ಕಾನೂನಿನ ಪ್ರಕಾರ ಕೆಲಸ ಮಾಡದಿರುವವರು ಸಮಾಜವಾದಿ ಪಕ್ಷಕ್ಕೆ ಮತ ಹಾಕಬೇಕಾಗಿಲ್ಲ” ಎಂದು ಹೇಳಿದ್ದಾರೆ.

ಬಿಜೆಪಿಯವರು ಜನರಿಗೆ ದ್ರೋಹ ಎಸಗಿದ್ದಾರೆ ಎಂದು ಆರೋಪಿಸಿರುವ ಅವರು, “ಅವರ ಮಾತುಗಳನ್ನು ಕೇಳಿ, ಸಣ್ಣ ನಾಯಕರು ಸಣ್ಣ ಸುಳ್ಳು ಹೇಳುತ್ತಾರೆ, ದೊಡ್ಡವರು ದೊಡ್ಡ ಸುಳ್ಳು ಹೇಳುತ್ತಾರೆ, ಮತ್ತೂ ದೊಡ್ಡವರು ಇನ್ನಷ್ಟು ದೊಡ್ಡ ಸುಳ್ಳು ಹೇಳುತ್ತಾರೆ. ಬಿಜೆಪಿಯು ಯುವಕರಿಗೆ ಉದ್ಯೋಗ, ರೈತರಿಗೆ ಆದಾಯ ದ್ವಿಗುಣಗೊಳಿಸುವ ಭರವಸೆಯನ್ನು ಈಡೇರಿಸಿಲ್ಲ” ಎಂದು ಆರೋಪಿಸಿದ್ದಾರೆ.

ಮೋದಿ ಸರ್ಕಾರ ವಿಮಾನ ನಿಲ್ದಾಣ, ರೈಲು, ರೈಲ್ವೇ ಸೇರಿದಂತೆ ಎಲ್ಲವನ್ನು ಮಾರಾಟ ಮಾಡುತ್ತಿದೆ ಇದರಿಂದ ಯಾರಿಗೂ ಉದ್ಯೋಗದಲ್ಲಿ ಮೀಸಲಾತಿ ಸಿಗುವುದಿಲ್ಲ ಎಂದಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಅವರು ಹೋರಾಡಿದ ಸಮಾಜವಾದಿ ತತ್ವಗಳ ಮೇಲೆ ಕೆಲಸ ಮಾಡುವುದಾಗಿ ಅಖಿಲೇಶ್ ಯಾದವ್ ಜನರಿಗೆ ಭರವಸೆ ನೀಡಿದ್ದಾರೆ.

ಇನ್ನು, ಉತ್ತರ ಪ್ರದೇಶ ಚುನಾವಣೆಯ ಫಲಿತಾಂಶ ಬರುವ ಮೊದಲೆ ಬಿಜೆಪಿ ಈ ಬಾರಿ ಮತ್ತೆ ಸರ್ಕಾರ ರಚಿಸುವುದಿಲ್ಲ. ಸೋಲನುಭವಿಸಲಿದೆ ಎಂಬ ಮಾತುಗಳು ಕೇಳಿ ಬಂದಿವೆ. ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಈ ಬಗ್ಗೆ ದಿ ವೈರ್‌ಗೆ ನೀಡಿರುವ ಸಂದರ್ಶನದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಚುನಾವಣೆ ನಡೆದಿರುವ ಎರಡು ಹಂತಗಳಲ್ಲಿ ಬಿಜೆಪಿ ಹೀನಾಯವಾಗಿ ಸೋಲನುಭವಿಸಿದೆ ಎಂದು ಆತಂಕ ವ್ಯಕ್ತಪಡಿಸಿದ್ದು, ಈ ಕುರಿತು ಸಂಘದ ಉನ್ನತ ಪದಾಧಿಕಾರಿಗಳೊಂದಿಗೆ ವರ್ಚುವಲ್ ಕಾನ್ಫರೆನ್ಸ್ ನಡೆಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ -2022: ಬಿಜೆಪಿ ಸೋಲಿನ ಭವಿಷ್ಯ ನುಡಿದ ನಾಯಕರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read