Homeಮುಖಪುಟಯುಪಿ ಚುನಾವಣೆ: 2 ಹಂತಗಳ ಮತದಾನದಲ್ಲಿ ಎಸ್‌ಪಿ ಶತಕ ಬಾರಿಸಿದೆ ಎಂದ ಅಖಿಲೇಶ್ ಯಾದವ್

ಯುಪಿ ಚುನಾವಣೆ: 2 ಹಂತಗಳ ಮತದಾನದಲ್ಲಿ ಎಸ್‌ಪಿ ಶತಕ ಬಾರಿಸಿದೆ ಎಂದ ಅಖಿಲೇಶ್ ಯಾದವ್

- Advertisement -
- Advertisement -

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಮೊದಲ ಎರಡು ಹಂತದ ಮತದಾನದಲ್ಲಿ ಈಗಾಗಲೇ ತಮ್ಮ ಪಕ್ಷವು “ಶತಕ” ಬಾರಿಸಿದೆ. ನಾಲ್ಕನೇ ಹಂತದ ವೇಳೆಗೆ ಸರ್ಕಾರ ರಚಿಸಲು ಬೇಕಾದ ಸಂಖ್ಯೆಯನ್ನು ಹೊಂದಿರುತ್ತದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ನಡೆದ ಮೊದಲ ಎರಡು ಹಂತದ ಚುನಾವಣೆಯಲ್ಲಿ 113 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ತಲಾ 59 ಕ್ಷೇತ್ರಗಳಿಗೆ ಮೂರನೇ ಹಂತದಲ್ಲಿ ಫೆಬ್ರವರಿ 20 ಮತ್ತು ನಾಲ್ಕನೇ ಹಂತದಲ್ಲಿ ಫೆಬ್ರವರಿ 23 ರಂದು ಮತದಾನ ನಡೆಯಲಿದೆ.

“ಮೊದಲ ಎರಡು ಹಂತಗಳಲ್ಲಿ ಈಗಾಗಲೇ ತಮ್ಮ ಪಕ್ಷವು ಶತಕ ಬಾರಿಸಿದೆ. ನಾಲ್ಕನೇ ಹಂತದ ಮತದಾನದ ವೇಳೆಗೆ ಸಮಾಜವಾದಿ ಪಕ್ಷವು ಸರ್ಕಾರ ರಚಿಸಲು ಬೇಕಾದ ಸಂಖ್ಯೆಯನ್ನು ಹೊಂದಿರುತ್ತದೆ” ಎಂದು ಫಿರೋಜಾಬಾದ್‌ನ ನಾಸಿರ್‌ಪುರ ಪ್ರದೇಶದಲ್ಲಿ ಚುನಾವಣಾ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಫಿರೋಜಾಬಾದ್ ಕ್ಷೇತ್ರದಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ. “ಫಿರೋಜಾಬಾದ್‌ನ ಜನರು ಈ ಬಾರಿ ಬಿಜೆಪಿಯ ಕಣ್ಣು ತೆರೆಸುತ್ತಾರೆ” ಎಂದಿದ್ದಾರೆ. ರಾಜ್ಯದಲ್ಲಿ ಎಸ್‌ಪಿ ಸರ್ಕಾರ ರಚನೆಯಾದ ನಂತರ ಉತ್ತರ ಪ್ರದೇಶದಲ್ಲಿ ಜಾತಿ ಗಣತಿ, ಎಲ್ಲಾ ಜಾತಿಗಳಿಗೆ ಸಮಾನ ಪ್ರಾತಿನಿಧ್ಯ ಮತ್ತು ಘನತೆಯ ಭರವಸೆ ನೀಡಿದ್ದಾರೆ. 

ಇದನ್ನೂ ಓದಿ: ’ಪ್ರಧಾನಿ ಹುದ್ದೆಗೆ ವಿಶೇಷ ಸ್ಥಾನಮಾನವಿದೆ’: ಮೋದಿ ವಿರುದ್ಧ ಮಾಜಿ ಪಿಎಂ ಮನಮೋಹನ್ ಸಿಂಗ್ ಕಿಡಿ

“ಪ್ರಜಾಪ್ರಭುತ್ವ ಉಳಿಸುವ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಉಳಿಸುವ, ಅವಮಾನಕ್ಕೊಳಗಾದ ಹಿಂದುಳಿದ, ದಲಿತ, ಅಲ್ಪಸಂಖ್ಯಾತರ ಗೌರವ ಉಳಿಸುವ ಚುನಾವಣೆ ಇದಾಗಿದೆ. ನಾನು ಮತ್ತೊಮ್ಮೆ ಹೇಳುತ್ತಿದ್ದೇನೆ, ಕಾನೂನನ್ನು ಉಲ್ಲಂಘಿಸಬೇಕಾದವರು ಅಥವಾ ಕಾನೂನಿನ ಪ್ರಕಾರ ಕೆಲಸ ಮಾಡದಿರುವವರು ಸಮಾಜವಾದಿ ಪಕ್ಷಕ್ಕೆ ಮತ ಹಾಕಬೇಕಾಗಿಲ್ಲ” ಎಂದು ಹೇಳಿದ್ದಾರೆ.

ಬಿಜೆಪಿಯವರು ಜನರಿಗೆ ದ್ರೋಹ ಎಸಗಿದ್ದಾರೆ ಎಂದು ಆರೋಪಿಸಿರುವ ಅವರು, “ಅವರ ಮಾತುಗಳನ್ನು ಕೇಳಿ, ಸಣ್ಣ ನಾಯಕರು ಸಣ್ಣ ಸುಳ್ಳು ಹೇಳುತ್ತಾರೆ, ದೊಡ್ಡವರು ದೊಡ್ಡ ಸುಳ್ಳು ಹೇಳುತ್ತಾರೆ, ಮತ್ತೂ ದೊಡ್ಡವರು ಇನ್ನಷ್ಟು ದೊಡ್ಡ ಸುಳ್ಳು ಹೇಳುತ್ತಾರೆ. ಬಿಜೆಪಿಯು ಯುವಕರಿಗೆ ಉದ್ಯೋಗ, ರೈತರಿಗೆ ಆದಾಯ ದ್ವಿಗುಣಗೊಳಿಸುವ ಭರವಸೆಯನ್ನು ಈಡೇರಿಸಿಲ್ಲ” ಎಂದು ಆರೋಪಿಸಿದ್ದಾರೆ.

ಮೋದಿ ಸರ್ಕಾರ ವಿಮಾನ ನಿಲ್ದಾಣ, ರೈಲು, ರೈಲ್ವೇ ಸೇರಿದಂತೆ ಎಲ್ಲವನ್ನು ಮಾರಾಟ ಮಾಡುತ್ತಿದೆ ಇದರಿಂದ ಯಾರಿಗೂ ಉದ್ಯೋಗದಲ್ಲಿ ಮೀಸಲಾತಿ ಸಿಗುವುದಿಲ್ಲ ಎಂದಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಅವರು ಹೋರಾಡಿದ ಸಮಾಜವಾದಿ ತತ್ವಗಳ ಮೇಲೆ ಕೆಲಸ ಮಾಡುವುದಾಗಿ ಅಖಿಲೇಶ್ ಯಾದವ್ ಜನರಿಗೆ ಭರವಸೆ ನೀಡಿದ್ದಾರೆ.

ಇನ್ನು, ಉತ್ತರ ಪ್ರದೇಶ ಚುನಾವಣೆಯ ಫಲಿತಾಂಶ ಬರುವ ಮೊದಲೆ ಬಿಜೆಪಿ ಈ ಬಾರಿ ಮತ್ತೆ ಸರ್ಕಾರ ರಚಿಸುವುದಿಲ್ಲ. ಸೋಲನುಭವಿಸಲಿದೆ ಎಂಬ ಮಾತುಗಳು ಕೇಳಿ ಬಂದಿವೆ. ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಈ ಬಗ್ಗೆ ದಿ ವೈರ್‌ಗೆ ನೀಡಿರುವ ಸಂದರ್ಶನದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಚುನಾವಣೆ ನಡೆದಿರುವ ಎರಡು ಹಂತಗಳಲ್ಲಿ ಬಿಜೆಪಿ ಹೀನಾಯವಾಗಿ ಸೋಲನುಭವಿಸಿದೆ ಎಂದು ಆತಂಕ ವ್ಯಕ್ತಪಡಿಸಿದ್ದು, ಈ ಕುರಿತು ಸಂಘದ ಉನ್ನತ ಪದಾಧಿಕಾರಿಗಳೊಂದಿಗೆ ವರ್ಚುವಲ್ ಕಾನ್ಫರೆನ್ಸ್ ನಡೆಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ -2022: ಬಿಜೆಪಿ ಸೋಲಿನ ಭವಿಷ್ಯ ನುಡಿದ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...