HomeಮುಖಪುಟUP: ಸಾಕು ಬಾಯಿ ಮುಚ್ಚು- ಮಗು ಕಳೆದುಕೊಂಡು ದುಃಖಿಸುತ್ತಿದ್ದ ತಾಯಿಯ ಮುಂದೆ ಅಧಿಕಾರಿಯ ದರ್ಪ

UP: ಸಾಕು ಬಾಯಿ ಮುಚ್ಚು- ಮಗು ಕಳೆದುಕೊಂಡು ದುಃಖಿಸುತ್ತಿದ್ದ ತಾಯಿಯ ಮುಂದೆ ಅಧಿಕಾರಿಯ ದರ್ಪ

- Advertisement -
- Advertisement -

ಶಾಲಾ ಬಸ್ಸಿನಲ್ಲಿ ಸಂಭವಿಸಿದ ಅಪಘಾತದಲ್ಲಿ ತನ್ನ 10 ವರ್ಷದ ಮಗುವನ್ನು ಕಳೆದುಕೊಂಡ ತಾಯಿಯೊಬ್ಬರು ರೋದಿಸುತ್ತಿದ್ದಾಗ, ಬಾಯಿ ಮುಚ್ಚುವಂತೆ ಮಹಿಳಾ ಅಧಿಕಾರಿಯೊಬ್ಬರು ಗದರಿಸಿದ್ದಾರೆ. “ಬಸ್! ಚುಪ್” (ಸಾಕು! ಮುಚ್ಚು) ಎಂದು ಅಧಿಕಾರಿ ಕಿರುಚಿದ್ದಾರೆ. ಈ ಘಟನೆಯು ಉತ್ತರ ಪ್ರದೇಶದ ಮೋದಿನಗರದಲ್ಲಿ ನಡೆದಿದೆ.

ಸರ್ಕಾರಿ ಅಧಿಕಾರಿ ಅಸೂಕ್ಷ್ಮತೆಯಿಂದ ನಡೆದುಕೊಂಡಿರುವ ವಿಡಿಯೊ, ದೆಹಲಿಯಿಂದ ಸುಮಾರು 40 ಕಿಮೀ ದೂರದಲ್ಲಿರುವ ಮೋದಿನಗರದ ಪೊಲೀಸ್ ಠಾಣೆಯಿಂದ ಹೊರಬಿದ್ದಿದೆ. ಅಪಘಾತದಲ್ಲಿ ಸಾವಿಗೀಡಾದ 4ನೇ ತರಗತಿಯ ವಿದ್ಯಾರ್ಥಿ ಅನುರಾಗ್ ಭಾರದ್ವಾಜ್‌ನ ಪೋಷಕರು ಗುರುವಾರ ಪ್ರತಿಭಟನೆ ಕುಳಿತ್ತಿದ್ದರು. ಮಗುವಿನ ಸಾವಿಗೆ ನಿರ್ಲಕ್ಷ್ಯವೇ ಕಾರಣವಾಗಿದ್ದು, ಶಾಲೆಯ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬುಧವಾರ ಬೆಳಿಗ್ಗೆ ಅನುರಾಗ್ ಬಸ್‌ನಲ್ಲಿ ಶಾಲೆಗೆ ತೆರಳುತ್ತಿದ್ದಾಗ ವಾಕರಿಕೆ ಬಂದಿದೆ. ಕಿಟಕಿಯಿಂದ ಹೊರಗೆ ಒರಗಿದ್ದನು. ಈ ವೇಳೆ ಚಾಲಕ ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿದ್ದು, ಬಾಲಕ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಚಾಲಕ ಮತ್ತು ಮತ್ತೊಬ್ಬ ಬಸ್ ಸಿಬ್ಬಂದಿಯನ್ನು ಬಂಧಿಸಿದ್ದರೂ ಶಾಲೆಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲದಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ಮೋದಿನಗರದ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಶುಭಾಂಗಿ ಶುಕ್ಲಾ ಅವರು, ಅನುರಾಗ್ ಅವರ ತಾಯಿ ನೇಹಾ ಭಾರದ್ವಾಜ್ ಅವರ ಮೇಲೆ ಕಿರುಚಾಡುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ನೇಹಾ ಅವರು ತನ್ನ ಪತಿ, ಮಗಳು ಮತ್ತು ಇತರ ಕೆಲವು ಪೋಷಕರೊಂದಿಗೆ ನೆಲದ ಮೇಲೆ ಕೂತು ಧರಣಿ ನಡೆಸುತ್ತಿದ್ದರು.

“ನಿಮಗೇಕೆ ಅರ್ಥವಾಗುತ್ತಿಲ್ಲ? ಸುಮ್ಮನಿರಲು ನಾನು ಹೇಳುತ್ತಿದ್ದೇನೆ” ಎಂದು ಶುಭಾಂಗಿ ಶುಕ್ಲಾ ಅವರು ನೋವುಂಡ ತಾಯಿಯ ಮೇಲೆ ವಾಕ್ ಪ್ರಹಾರ ನಡೆಸುತ್ತಾರೆ.

“ಅದು ನಿನ್ನ ಮಗನೇ?” ಎಂದು ನೇಹಾ ಭಾರದ್ವಾಜ್ ಅಳುತ್ತಾ ಪ್ರತಿಕ್ರಿಯಿಸಿದ್ದಾರೆ.

“ನಾನು ಎಷ್ಟು ಬಾರಿ ಪ್ರಯತ್ನಿಸಬೇಕು. ನಿಮಗೆ ಅರ್ಥ ಮಾಡಿಸಬೇಕು” ಎಂದು ಮತ್ತೆ ಅಧಿಕಾರಿ ಶುಭಾಂಗಿ ಕಿರುಚುತ್ತಾರೆ.

“ನನಗೆ ಸಾಕಷ್ಟು ಅರ್ಥವಾಗಿದೆ. ಅವರು ಈಗ ಮೌನವಾಗಿದ್ದಾರೆ” ಎಂದು ನೇಹಾ ಉತ್ತರಿಸುತ್ತಾರೆ. ಮೃತಪಟ್ಟಿರುವ ತನ್ನ ಮಗುವನ್ನು ಉಲ್ಲೇಖಿಸಿ ಮಾತನಾಡುತ್ತಾರೆ.

ಘಟನೆಯ ಆಘಾತದ ನಡುವೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಧ್ಯ ಪ್ರವೇಶಿಸಿ ವರದಿ ಕೇಳಿದ್ದಾರೆ. ಶಾಲೆ, ಬಸ್‌ ಸಿಬ್ಬಂದಿ ಹಾಗೂ ಸಾರಿಗೆ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳುವುದರ ಜತೆಗೆ ಶಾಲಾ ಬಸ್‌ಗಳ ಫಿಟ್‌ನೆಸ್‌ ತಪಾಸಣೆಗೆ ಆದೇಶಿಸಿದ್ದಾರೆ.

ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಯವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಇದನ್ನೂ ಓದಿರಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

ಬಸ್‌ನಲ್ಲಿ ಗುಣಮಟ್ಟದ ಮುನ್ನೆಚ್ಚರಿಕೆಗಳನ್ನು ಶಾಲಾ ಮಂಡಲಿ ತೆಗೆದುಕೊಂಡಿಲ್ಲ ಎಂದು ಅನುರಾಗ್ ಪೋಷಕರು ಆರೋಪಿಸಿದ್ದಾರೆ. ಯಾರೂ ಮೇಲ್ವಿಚಾರಣೆ ತೆಗೆದುಕೊಂಡಿಲ್ಲ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ಅನುರಾಗ್ ಅವರ ತಾಯಿ ಚಾಲಕನಿಗೆ ದೂರು ನೀಡಿದ್ದರು ಎನ್ನಲಾಗಿದೆ.

ಏಪ್ರಿಲ್ 1 ರಂದು ಶಾಲೆಯ ಪ್ರಾಂಶುಪಾಲರು, ಆಡಳಿತ ಮಂಡಳಿ ಮತ್ತು ಚಾಲಕರೊಂದಿಗೆ ಜಗಳವಾಡಿರುವುದಾಗಿ ಪೋಷಕರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆದರೆ ಅಧಿಕಾರಿ ಶುಕ್ಲಾ ತನ್ನ ವರದಿಯಲ್ಲಿ ಬೇರೆಯದ್ದನ್ನೇ ಹೇಳುತ್ತಿದ್ದಾರೆ. “ಬಸ್‌ನಲ್ಲಿಯೇ ಇದ್ದ ಶಿಕ್ಷಕರಲ್ಲಿ ಈ ಬಾಲಕ ಏನನ್ನು ಹೇಳಿಕೊಳ್ಳಲಿಲ್ಲ. ಬಸ್‌ನಲ್ಲಿದ್ದ ಸೀಟ್‌ಗಳಿಗಿಂತ ಕಡಿಮೆ ವಿದ್ಯಾರ್ಥಿಗಳಿದ್ದರು” ಎಂದಿದ್ದಾರೆ ಶುಕ್ಲಾ. ಆದರೆ, ಬಸ್‌ಗೆ ಫಿಟ್‌ನೆಸ್ ಪ್ರಮಾಣಪತ್ರ ಇರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...