HomeಮುಖಪುಟUP: ಸಾಕು ಬಾಯಿ ಮುಚ್ಚು- ಮಗು ಕಳೆದುಕೊಂಡು ದುಃಖಿಸುತ್ತಿದ್ದ ತಾಯಿಯ ಮುಂದೆ ಅಧಿಕಾರಿಯ ದರ್ಪ

UP: ಸಾಕು ಬಾಯಿ ಮುಚ್ಚು- ಮಗು ಕಳೆದುಕೊಂಡು ದುಃಖಿಸುತ್ತಿದ್ದ ತಾಯಿಯ ಮುಂದೆ ಅಧಿಕಾರಿಯ ದರ್ಪ

- Advertisement -
- Advertisement -

ಶಾಲಾ ಬಸ್ಸಿನಲ್ಲಿ ಸಂಭವಿಸಿದ ಅಪಘಾತದಲ್ಲಿ ತನ್ನ 10 ವರ್ಷದ ಮಗುವನ್ನು ಕಳೆದುಕೊಂಡ ತಾಯಿಯೊಬ್ಬರು ರೋದಿಸುತ್ತಿದ್ದಾಗ, ಬಾಯಿ ಮುಚ್ಚುವಂತೆ ಮಹಿಳಾ ಅಧಿಕಾರಿಯೊಬ್ಬರು ಗದರಿಸಿದ್ದಾರೆ. “ಬಸ್! ಚುಪ್” (ಸಾಕು! ಮುಚ್ಚು) ಎಂದು ಅಧಿಕಾರಿ ಕಿರುಚಿದ್ದಾರೆ. ಈ ಘಟನೆಯು ಉತ್ತರ ಪ್ರದೇಶದ ಮೋದಿನಗರದಲ್ಲಿ ನಡೆದಿದೆ.

ಸರ್ಕಾರಿ ಅಧಿಕಾರಿ ಅಸೂಕ್ಷ್ಮತೆಯಿಂದ ನಡೆದುಕೊಂಡಿರುವ ವಿಡಿಯೊ, ದೆಹಲಿಯಿಂದ ಸುಮಾರು 40 ಕಿಮೀ ದೂರದಲ್ಲಿರುವ ಮೋದಿನಗರದ ಪೊಲೀಸ್ ಠಾಣೆಯಿಂದ ಹೊರಬಿದ್ದಿದೆ. ಅಪಘಾತದಲ್ಲಿ ಸಾವಿಗೀಡಾದ 4ನೇ ತರಗತಿಯ ವಿದ್ಯಾರ್ಥಿ ಅನುರಾಗ್ ಭಾರದ್ವಾಜ್‌ನ ಪೋಷಕರು ಗುರುವಾರ ಪ್ರತಿಭಟನೆ ಕುಳಿತ್ತಿದ್ದರು. ಮಗುವಿನ ಸಾವಿಗೆ ನಿರ್ಲಕ್ಷ್ಯವೇ ಕಾರಣವಾಗಿದ್ದು, ಶಾಲೆಯ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬುಧವಾರ ಬೆಳಿಗ್ಗೆ ಅನುರಾಗ್ ಬಸ್‌ನಲ್ಲಿ ಶಾಲೆಗೆ ತೆರಳುತ್ತಿದ್ದಾಗ ವಾಕರಿಕೆ ಬಂದಿದೆ. ಕಿಟಕಿಯಿಂದ ಹೊರಗೆ ಒರಗಿದ್ದನು. ಈ ವೇಳೆ ಚಾಲಕ ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿದ್ದು, ಬಾಲಕ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಚಾಲಕ ಮತ್ತು ಮತ್ತೊಬ್ಬ ಬಸ್ ಸಿಬ್ಬಂದಿಯನ್ನು ಬಂಧಿಸಿದ್ದರೂ ಶಾಲೆಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲದಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ಮೋದಿನಗರದ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಶುಭಾಂಗಿ ಶುಕ್ಲಾ ಅವರು, ಅನುರಾಗ್ ಅವರ ತಾಯಿ ನೇಹಾ ಭಾರದ್ವಾಜ್ ಅವರ ಮೇಲೆ ಕಿರುಚಾಡುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ನೇಹಾ ಅವರು ತನ್ನ ಪತಿ, ಮಗಳು ಮತ್ತು ಇತರ ಕೆಲವು ಪೋಷಕರೊಂದಿಗೆ ನೆಲದ ಮೇಲೆ ಕೂತು ಧರಣಿ ನಡೆಸುತ್ತಿದ್ದರು.

“ನಿಮಗೇಕೆ ಅರ್ಥವಾಗುತ್ತಿಲ್ಲ? ಸುಮ್ಮನಿರಲು ನಾನು ಹೇಳುತ್ತಿದ್ದೇನೆ” ಎಂದು ಶುಭಾಂಗಿ ಶುಕ್ಲಾ ಅವರು ನೋವುಂಡ ತಾಯಿಯ ಮೇಲೆ ವಾಕ್ ಪ್ರಹಾರ ನಡೆಸುತ್ತಾರೆ.

“ಅದು ನಿನ್ನ ಮಗನೇ?” ಎಂದು ನೇಹಾ ಭಾರದ್ವಾಜ್ ಅಳುತ್ತಾ ಪ್ರತಿಕ್ರಿಯಿಸಿದ್ದಾರೆ.

“ನಾನು ಎಷ್ಟು ಬಾರಿ ಪ್ರಯತ್ನಿಸಬೇಕು. ನಿಮಗೆ ಅರ್ಥ ಮಾಡಿಸಬೇಕು” ಎಂದು ಮತ್ತೆ ಅಧಿಕಾರಿ ಶುಭಾಂಗಿ ಕಿರುಚುತ್ತಾರೆ.

“ನನಗೆ ಸಾಕಷ್ಟು ಅರ್ಥವಾಗಿದೆ. ಅವರು ಈಗ ಮೌನವಾಗಿದ್ದಾರೆ” ಎಂದು ನೇಹಾ ಉತ್ತರಿಸುತ್ತಾರೆ. ಮೃತಪಟ್ಟಿರುವ ತನ್ನ ಮಗುವನ್ನು ಉಲ್ಲೇಖಿಸಿ ಮಾತನಾಡುತ್ತಾರೆ.

ಘಟನೆಯ ಆಘಾತದ ನಡುವೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಧ್ಯ ಪ್ರವೇಶಿಸಿ ವರದಿ ಕೇಳಿದ್ದಾರೆ. ಶಾಲೆ, ಬಸ್‌ ಸಿಬ್ಬಂದಿ ಹಾಗೂ ಸಾರಿಗೆ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳುವುದರ ಜತೆಗೆ ಶಾಲಾ ಬಸ್‌ಗಳ ಫಿಟ್‌ನೆಸ್‌ ತಪಾಸಣೆಗೆ ಆದೇಶಿಸಿದ್ದಾರೆ.

ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಯವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಇದನ್ನೂ ಓದಿರಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

ಬಸ್‌ನಲ್ಲಿ ಗುಣಮಟ್ಟದ ಮುನ್ನೆಚ್ಚರಿಕೆಗಳನ್ನು ಶಾಲಾ ಮಂಡಲಿ ತೆಗೆದುಕೊಂಡಿಲ್ಲ ಎಂದು ಅನುರಾಗ್ ಪೋಷಕರು ಆರೋಪಿಸಿದ್ದಾರೆ. ಯಾರೂ ಮೇಲ್ವಿಚಾರಣೆ ತೆಗೆದುಕೊಂಡಿಲ್ಲ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ಅನುರಾಗ್ ಅವರ ತಾಯಿ ಚಾಲಕನಿಗೆ ದೂರು ನೀಡಿದ್ದರು ಎನ್ನಲಾಗಿದೆ.

ಏಪ್ರಿಲ್ 1 ರಂದು ಶಾಲೆಯ ಪ್ರಾಂಶುಪಾಲರು, ಆಡಳಿತ ಮಂಡಳಿ ಮತ್ತು ಚಾಲಕರೊಂದಿಗೆ ಜಗಳವಾಡಿರುವುದಾಗಿ ಪೋಷಕರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆದರೆ ಅಧಿಕಾರಿ ಶುಕ್ಲಾ ತನ್ನ ವರದಿಯಲ್ಲಿ ಬೇರೆಯದ್ದನ್ನೇ ಹೇಳುತ್ತಿದ್ದಾರೆ. “ಬಸ್‌ನಲ್ಲಿಯೇ ಇದ್ದ ಶಿಕ್ಷಕರಲ್ಲಿ ಈ ಬಾಲಕ ಏನನ್ನು ಹೇಳಿಕೊಳ್ಳಲಿಲ್ಲ. ಬಸ್‌ನಲ್ಲಿದ್ದ ಸೀಟ್‌ಗಳಿಗಿಂತ ಕಡಿಮೆ ವಿದ್ಯಾರ್ಥಿಗಳಿದ್ದರು” ಎಂದಿದ್ದಾರೆ ಶುಕ್ಲಾ. ಆದರೆ, ಬಸ್‌ಗೆ ಫಿಟ್‌ನೆಸ್ ಪ್ರಮಾಣಪತ್ರ ಇರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....