HomeಮುಖಪುಟUP: ಸಾಕು ಬಾಯಿ ಮುಚ್ಚು- ಮಗು ಕಳೆದುಕೊಂಡು ದುಃಖಿಸುತ್ತಿದ್ದ ತಾಯಿಯ ಮುಂದೆ ಅಧಿಕಾರಿಯ ದರ್ಪ

UP: ಸಾಕು ಬಾಯಿ ಮುಚ್ಚು- ಮಗು ಕಳೆದುಕೊಂಡು ದುಃಖಿಸುತ್ತಿದ್ದ ತಾಯಿಯ ಮುಂದೆ ಅಧಿಕಾರಿಯ ದರ್ಪ

- Advertisement -
- Advertisement -

ಶಾಲಾ ಬಸ್ಸಿನಲ್ಲಿ ಸಂಭವಿಸಿದ ಅಪಘಾತದಲ್ಲಿ ತನ್ನ 10 ವರ್ಷದ ಮಗುವನ್ನು ಕಳೆದುಕೊಂಡ ತಾಯಿಯೊಬ್ಬರು ರೋದಿಸುತ್ತಿದ್ದಾಗ, ಬಾಯಿ ಮುಚ್ಚುವಂತೆ ಮಹಿಳಾ ಅಧಿಕಾರಿಯೊಬ್ಬರು ಗದರಿಸಿದ್ದಾರೆ. “ಬಸ್! ಚುಪ್” (ಸಾಕು! ಮುಚ್ಚು) ಎಂದು ಅಧಿಕಾರಿ ಕಿರುಚಿದ್ದಾರೆ. ಈ ಘಟನೆಯು ಉತ್ತರ ಪ್ರದೇಶದ ಮೋದಿನಗರದಲ್ಲಿ ನಡೆದಿದೆ.

ಸರ್ಕಾರಿ ಅಧಿಕಾರಿ ಅಸೂಕ್ಷ್ಮತೆಯಿಂದ ನಡೆದುಕೊಂಡಿರುವ ವಿಡಿಯೊ, ದೆಹಲಿಯಿಂದ ಸುಮಾರು 40 ಕಿಮೀ ದೂರದಲ್ಲಿರುವ ಮೋದಿನಗರದ ಪೊಲೀಸ್ ಠಾಣೆಯಿಂದ ಹೊರಬಿದ್ದಿದೆ. ಅಪಘಾತದಲ್ಲಿ ಸಾವಿಗೀಡಾದ 4ನೇ ತರಗತಿಯ ವಿದ್ಯಾರ್ಥಿ ಅನುರಾಗ್ ಭಾರದ್ವಾಜ್‌ನ ಪೋಷಕರು ಗುರುವಾರ ಪ್ರತಿಭಟನೆ ಕುಳಿತ್ತಿದ್ದರು. ಮಗುವಿನ ಸಾವಿಗೆ ನಿರ್ಲಕ್ಷ್ಯವೇ ಕಾರಣವಾಗಿದ್ದು, ಶಾಲೆಯ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬುಧವಾರ ಬೆಳಿಗ್ಗೆ ಅನುರಾಗ್ ಬಸ್‌ನಲ್ಲಿ ಶಾಲೆಗೆ ತೆರಳುತ್ತಿದ್ದಾಗ ವಾಕರಿಕೆ ಬಂದಿದೆ. ಕಿಟಕಿಯಿಂದ ಹೊರಗೆ ಒರಗಿದ್ದನು. ಈ ವೇಳೆ ಚಾಲಕ ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿದ್ದು, ಬಾಲಕ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಚಾಲಕ ಮತ್ತು ಮತ್ತೊಬ್ಬ ಬಸ್ ಸಿಬ್ಬಂದಿಯನ್ನು ಬಂಧಿಸಿದ್ದರೂ ಶಾಲೆಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲದಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ಮೋದಿನಗರದ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಶುಭಾಂಗಿ ಶುಕ್ಲಾ ಅವರು, ಅನುರಾಗ್ ಅವರ ತಾಯಿ ನೇಹಾ ಭಾರದ್ವಾಜ್ ಅವರ ಮೇಲೆ ಕಿರುಚಾಡುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ನೇಹಾ ಅವರು ತನ್ನ ಪತಿ, ಮಗಳು ಮತ್ತು ಇತರ ಕೆಲವು ಪೋಷಕರೊಂದಿಗೆ ನೆಲದ ಮೇಲೆ ಕೂತು ಧರಣಿ ನಡೆಸುತ್ತಿದ್ದರು.

“ನಿಮಗೇಕೆ ಅರ್ಥವಾಗುತ್ತಿಲ್ಲ? ಸುಮ್ಮನಿರಲು ನಾನು ಹೇಳುತ್ತಿದ್ದೇನೆ” ಎಂದು ಶುಭಾಂಗಿ ಶುಕ್ಲಾ ಅವರು ನೋವುಂಡ ತಾಯಿಯ ಮೇಲೆ ವಾಕ್ ಪ್ರಹಾರ ನಡೆಸುತ್ತಾರೆ.

“ಅದು ನಿನ್ನ ಮಗನೇ?” ಎಂದು ನೇಹಾ ಭಾರದ್ವಾಜ್ ಅಳುತ್ತಾ ಪ್ರತಿಕ್ರಿಯಿಸಿದ್ದಾರೆ.

“ನಾನು ಎಷ್ಟು ಬಾರಿ ಪ್ರಯತ್ನಿಸಬೇಕು. ನಿಮಗೆ ಅರ್ಥ ಮಾಡಿಸಬೇಕು” ಎಂದು ಮತ್ತೆ ಅಧಿಕಾರಿ ಶುಭಾಂಗಿ ಕಿರುಚುತ್ತಾರೆ.

“ನನಗೆ ಸಾಕಷ್ಟು ಅರ್ಥವಾಗಿದೆ. ಅವರು ಈಗ ಮೌನವಾಗಿದ್ದಾರೆ” ಎಂದು ನೇಹಾ ಉತ್ತರಿಸುತ್ತಾರೆ. ಮೃತಪಟ್ಟಿರುವ ತನ್ನ ಮಗುವನ್ನು ಉಲ್ಲೇಖಿಸಿ ಮಾತನಾಡುತ್ತಾರೆ.

ಘಟನೆಯ ಆಘಾತದ ನಡುವೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಧ್ಯ ಪ್ರವೇಶಿಸಿ ವರದಿ ಕೇಳಿದ್ದಾರೆ. ಶಾಲೆ, ಬಸ್‌ ಸಿಬ್ಬಂದಿ ಹಾಗೂ ಸಾರಿಗೆ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳುವುದರ ಜತೆಗೆ ಶಾಲಾ ಬಸ್‌ಗಳ ಫಿಟ್‌ನೆಸ್‌ ತಪಾಸಣೆಗೆ ಆದೇಶಿಸಿದ್ದಾರೆ.

ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಯವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಇದನ್ನೂ ಓದಿರಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

ಬಸ್‌ನಲ್ಲಿ ಗುಣಮಟ್ಟದ ಮುನ್ನೆಚ್ಚರಿಕೆಗಳನ್ನು ಶಾಲಾ ಮಂಡಲಿ ತೆಗೆದುಕೊಂಡಿಲ್ಲ ಎಂದು ಅನುರಾಗ್ ಪೋಷಕರು ಆರೋಪಿಸಿದ್ದಾರೆ. ಯಾರೂ ಮೇಲ್ವಿಚಾರಣೆ ತೆಗೆದುಕೊಂಡಿಲ್ಲ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ಅನುರಾಗ್ ಅವರ ತಾಯಿ ಚಾಲಕನಿಗೆ ದೂರು ನೀಡಿದ್ದರು ಎನ್ನಲಾಗಿದೆ.

ಏಪ್ರಿಲ್ 1 ರಂದು ಶಾಲೆಯ ಪ್ರಾಂಶುಪಾಲರು, ಆಡಳಿತ ಮಂಡಳಿ ಮತ್ತು ಚಾಲಕರೊಂದಿಗೆ ಜಗಳವಾಡಿರುವುದಾಗಿ ಪೋಷಕರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆದರೆ ಅಧಿಕಾರಿ ಶುಕ್ಲಾ ತನ್ನ ವರದಿಯಲ್ಲಿ ಬೇರೆಯದ್ದನ್ನೇ ಹೇಳುತ್ತಿದ್ದಾರೆ. “ಬಸ್‌ನಲ್ಲಿಯೇ ಇದ್ದ ಶಿಕ್ಷಕರಲ್ಲಿ ಈ ಬಾಲಕ ಏನನ್ನು ಹೇಳಿಕೊಳ್ಳಲಿಲ್ಲ. ಬಸ್‌ನಲ್ಲಿದ್ದ ಸೀಟ್‌ಗಳಿಗಿಂತ ಕಡಿಮೆ ವಿದ್ಯಾರ್ಥಿಗಳಿದ್ದರು” ಎಂದಿದ್ದಾರೆ ಶುಕ್ಲಾ. ಆದರೆ, ಬಸ್‌ಗೆ ಫಿಟ್‌ನೆಸ್ ಪ್ರಮಾಣಪತ್ರ ಇರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...