HomeಮುಖಪುಟUP: ಸಾಕು ಬಾಯಿ ಮುಚ್ಚು- ಮಗು ಕಳೆದುಕೊಂಡು ದುಃಖಿಸುತ್ತಿದ್ದ ತಾಯಿಯ ಮುಂದೆ ಅಧಿಕಾರಿಯ ದರ್ಪ

UP: ಸಾಕು ಬಾಯಿ ಮುಚ್ಚು- ಮಗು ಕಳೆದುಕೊಂಡು ದುಃಖಿಸುತ್ತಿದ್ದ ತಾಯಿಯ ಮುಂದೆ ಅಧಿಕಾರಿಯ ದರ್ಪ

- Advertisement -
- Advertisement -

ಶಾಲಾ ಬಸ್ಸಿನಲ್ಲಿ ಸಂಭವಿಸಿದ ಅಪಘಾತದಲ್ಲಿ ತನ್ನ 10 ವರ್ಷದ ಮಗುವನ್ನು ಕಳೆದುಕೊಂಡ ತಾಯಿಯೊಬ್ಬರು ರೋದಿಸುತ್ತಿದ್ದಾಗ, ಬಾಯಿ ಮುಚ್ಚುವಂತೆ ಮಹಿಳಾ ಅಧಿಕಾರಿಯೊಬ್ಬರು ಗದರಿಸಿದ್ದಾರೆ. “ಬಸ್! ಚುಪ್” (ಸಾಕು! ಮುಚ್ಚು) ಎಂದು ಅಧಿಕಾರಿ ಕಿರುಚಿದ್ದಾರೆ. ಈ ಘಟನೆಯು ಉತ್ತರ ಪ್ರದೇಶದ ಮೋದಿನಗರದಲ್ಲಿ ನಡೆದಿದೆ.

ಸರ್ಕಾರಿ ಅಧಿಕಾರಿ ಅಸೂಕ್ಷ್ಮತೆಯಿಂದ ನಡೆದುಕೊಂಡಿರುವ ವಿಡಿಯೊ, ದೆಹಲಿಯಿಂದ ಸುಮಾರು 40 ಕಿಮೀ ದೂರದಲ್ಲಿರುವ ಮೋದಿನಗರದ ಪೊಲೀಸ್ ಠಾಣೆಯಿಂದ ಹೊರಬಿದ್ದಿದೆ. ಅಪಘಾತದಲ್ಲಿ ಸಾವಿಗೀಡಾದ 4ನೇ ತರಗತಿಯ ವಿದ್ಯಾರ್ಥಿ ಅನುರಾಗ್ ಭಾರದ್ವಾಜ್‌ನ ಪೋಷಕರು ಗುರುವಾರ ಪ್ರತಿಭಟನೆ ಕುಳಿತ್ತಿದ್ದರು. ಮಗುವಿನ ಸಾವಿಗೆ ನಿರ್ಲಕ್ಷ್ಯವೇ ಕಾರಣವಾಗಿದ್ದು, ಶಾಲೆಯ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬುಧವಾರ ಬೆಳಿಗ್ಗೆ ಅನುರಾಗ್ ಬಸ್‌ನಲ್ಲಿ ಶಾಲೆಗೆ ತೆರಳುತ್ತಿದ್ದಾಗ ವಾಕರಿಕೆ ಬಂದಿದೆ. ಕಿಟಕಿಯಿಂದ ಹೊರಗೆ ಒರಗಿದ್ದನು. ಈ ವೇಳೆ ಚಾಲಕ ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿದ್ದು, ಬಾಲಕ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಚಾಲಕ ಮತ್ತು ಮತ್ತೊಬ್ಬ ಬಸ್ ಸಿಬ್ಬಂದಿಯನ್ನು ಬಂಧಿಸಿದ್ದರೂ ಶಾಲೆಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲದಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ಮೋದಿನಗರದ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಶುಭಾಂಗಿ ಶುಕ್ಲಾ ಅವರು, ಅನುರಾಗ್ ಅವರ ತಾಯಿ ನೇಹಾ ಭಾರದ್ವಾಜ್ ಅವರ ಮೇಲೆ ಕಿರುಚಾಡುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ನೇಹಾ ಅವರು ತನ್ನ ಪತಿ, ಮಗಳು ಮತ್ತು ಇತರ ಕೆಲವು ಪೋಷಕರೊಂದಿಗೆ ನೆಲದ ಮೇಲೆ ಕೂತು ಧರಣಿ ನಡೆಸುತ್ತಿದ್ದರು.

“ನಿಮಗೇಕೆ ಅರ್ಥವಾಗುತ್ತಿಲ್ಲ? ಸುಮ್ಮನಿರಲು ನಾನು ಹೇಳುತ್ತಿದ್ದೇನೆ” ಎಂದು ಶುಭಾಂಗಿ ಶುಕ್ಲಾ ಅವರು ನೋವುಂಡ ತಾಯಿಯ ಮೇಲೆ ವಾಕ್ ಪ್ರಹಾರ ನಡೆಸುತ್ತಾರೆ.

“ಅದು ನಿನ್ನ ಮಗನೇ?” ಎಂದು ನೇಹಾ ಭಾರದ್ವಾಜ್ ಅಳುತ್ತಾ ಪ್ರತಿಕ್ರಿಯಿಸಿದ್ದಾರೆ.

“ನಾನು ಎಷ್ಟು ಬಾರಿ ಪ್ರಯತ್ನಿಸಬೇಕು. ನಿಮಗೆ ಅರ್ಥ ಮಾಡಿಸಬೇಕು” ಎಂದು ಮತ್ತೆ ಅಧಿಕಾರಿ ಶುಭಾಂಗಿ ಕಿರುಚುತ್ತಾರೆ.

“ನನಗೆ ಸಾಕಷ್ಟು ಅರ್ಥವಾಗಿದೆ. ಅವರು ಈಗ ಮೌನವಾಗಿದ್ದಾರೆ” ಎಂದು ನೇಹಾ ಉತ್ತರಿಸುತ್ತಾರೆ. ಮೃತಪಟ್ಟಿರುವ ತನ್ನ ಮಗುವನ್ನು ಉಲ್ಲೇಖಿಸಿ ಮಾತನಾಡುತ್ತಾರೆ.

ಘಟನೆಯ ಆಘಾತದ ನಡುವೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಧ್ಯ ಪ್ರವೇಶಿಸಿ ವರದಿ ಕೇಳಿದ್ದಾರೆ. ಶಾಲೆ, ಬಸ್‌ ಸಿಬ್ಬಂದಿ ಹಾಗೂ ಸಾರಿಗೆ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳುವುದರ ಜತೆಗೆ ಶಾಲಾ ಬಸ್‌ಗಳ ಫಿಟ್‌ನೆಸ್‌ ತಪಾಸಣೆಗೆ ಆದೇಶಿಸಿದ್ದಾರೆ.

ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಯವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಇದನ್ನೂ ಓದಿರಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

ಬಸ್‌ನಲ್ಲಿ ಗುಣಮಟ್ಟದ ಮುನ್ನೆಚ್ಚರಿಕೆಗಳನ್ನು ಶಾಲಾ ಮಂಡಲಿ ತೆಗೆದುಕೊಂಡಿಲ್ಲ ಎಂದು ಅನುರಾಗ್ ಪೋಷಕರು ಆರೋಪಿಸಿದ್ದಾರೆ. ಯಾರೂ ಮೇಲ್ವಿಚಾರಣೆ ತೆಗೆದುಕೊಂಡಿಲ್ಲ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ಅನುರಾಗ್ ಅವರ ತಾಯಿ ಚಾಲಕನಿಗೆ ದೂರು ನೀಡಿದ್ದರು ಎನ್ನಲಾಗಿದೆ.

ಏಪ್ರಿಲ್ 1 ರಂದು ಶಾಲೆಯ ಪ್ರಾಂಶುಪಾಲರು, ಆಡಳಿತ ಮಂಡಳಿ ಮತ್ತು ಚಾಲಕರೊಂದಿಗೆ ಜಗಳವಾಡಿರುವುದಾಗಿ ಪೋಷಕರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆದರೆ ಅಧಿಕಾರಿ ಶುಕ್ಲಾ ತನ್ನ ವರದಿಯಲ್ಲಿ ಬೇರೆಯದ್ದನ್ನೇ ಹೇಳುತ್ತಿದ್ದಾರೆ. “ಬಸ್‌ನಲ್ಲಿಯೇ ಇದ್ದ ಶಿಕ್ಷಕರಲ್ಲಿ ಈ ಬಾಲಕ ಏನನ್ನು ಹೇಳಿಕೊಳ್ಳಲಿಲ್ಲ. ಬಸ್‌ನಲ್ಲಿದ್ದ ಸೀಟ್‌ಗಳಿಗಿಂತ ಕಡಿಮೆ ವಿದ್ಯಾರ್ಥಿಗಳಿದ್ದರು” ಎಂದಿದ್ದಾರೆ ಶುಕ್ಲಾ. ಆದರೆ, ಬಸ್‌ಗೆ ಫಿಟ್‌ನೆಸ್ ಪ್ರಮಾಣಪತ್ರ ಇರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....